Homeಮುಖಪುಟಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ (ಎನ್‌ಸಿಪಿ) ಪಕ್ಷದ ಖಜಾಂಚಿ ರಾಮವತಾರ್ ಜಗ್ಗಿ ಅವರನ್ನು ಕೊಲ್ಲಲು ಸಂಚು ರೂಪಿಸಿದ ಪ್ರಕರಣದಲ್ಲಿ ಅಮಿತ್ ಜೋಗಿ ಅವರನ್ನು ದೋಷಿ ಎಂದು ಗುರುವಾರ (ಏ.2) ನ್ಯಾಯಾಲಯ ಘೋಷಿಸಿತ್ತು. ಅಜಿತ್ ಜೋಗಿ ಮುಖ್ಯಮಂತ್ರಿಯಾಗಿದ್ದಾಗ ಜೂನ್ 4, 2003ರಂದು ರಾಯ್‌ಪುರದಲ್ಲಿ ಎನ್‌ಸಿಪಿ ನಾಯಕನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಸವಾಲೊಡ್ಡುತ್ತಿದ್ದ ಎನ್‌ಸಿಪಿ ಬೃಹತ್ ರ‍್ಯಾಲಿಗೆ ಮುನ್ನ ಜಗ್ಗಿ ಅವರನ್ನು ಹತ್ಯೆ ಮಾಡಲಾಗಿತ್ತು. ಗುರುವಾರ, ಹೈಕೋರ್ಟ್ ಅಮಿತ್ ಜೋಗಿ ಅವರಿಗೆ ಮೂರು ವಾರಗಳಲ್ಲಿ ಶರಣಾಗುವಂತೆ ಸೂಚಿಸಿತ್ತು.

ಸೋಮವಾರ ಅವರು ತಮ್ಮ ಶಿಕ್ಷೆಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 20ರಂದು ವಿಚಾರಣೆಗೆ ಪಟ್ಟಿ ಮಾಡಿದೆ.

ಮೇ 31, 2007ರಂದು, ವಿಚಾರಣಾ ನ್ಯಾಯಾಲಯವು ಕೊಲೆಗೆ ಸಂಬಂಧಿಸಿದಂತೆ 28 ಜನರನ್ನು ದೋಷಿಗಳು ಎಂದು ಘೋಷಿಸಿತ್ತು. ಅಮಿತ್ ಜೋಗಿ ಅವರನ್ನು ಖುಲಾಸೆಗೊಳಿಸಿತ್ತು.

ಕೇಂದ್ರ ತನಿಖಾ ದಳವು (ಸಿಬಿಐ) 2011ರಲ್ಲಿ ಖುಲಾಸೆಯನ್ನು ಪ್ರಶ್ನಿಸಿತ್ತು. ಆದಾಗ್ಯೂ, ವಿಳಂಬದ ಆಧಾರದ ಮೇಲೆ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಛತ್ತೀಸ್‌ಗಢ ಸರ್ಕಾರ ಮತ್ತು ರಾಮಾವತಾರ್ ಜಗ್ಗಿ ಅವರ ಮಗ ಸತೀಶ್ ಜಗ್ಗಿ ಅವರ ಮೇಲ್ಮನವಿಗಳನ್ನೂ ಕೂಡ ಹೈಕೋರ್ಟ್ ತಿರಸ್ಕರಿಸಿತ್ತು.

ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 2025ರ ನವೆಂಬರ್‌ನಲ್ಲಿ, ಸುಪ್ರೀಂ ಕೋರ್ಟ್ ಪ್ರಕರಣವನ್ನು ಮತ್ತೆ ಹೈಕೋರ್ಟ್‌ಗೆ ವರ್ಗಾಯಿಸಿ, ಸಿಬಿಐ ಅರ್ಜಿಯನ್ನು ಹೊಸದಾಗಿ ಪರಿಗಣಿಸುವಂತೆ ನಿರ್ದೇಶಿಸಿತ್ತು. ಸಿಬಿಐ ಗಣನೀಯ ವಿಳಂಬದ ನಂತರ ಅರ್ಜಿಯನ್ನು ಸಲ್ಲಿಸಿದ್ದರೂ, ಅಮಿತ್ ಜೋಗಿ ವಿರುದ್ಧದ ಆರೋಪಗಳು ತುಂಬಾ ಗಂಭೀರವಾದವು, ಇದು ಪ್ರತಿಸ್ಪರ್ಧಿ ರಾಜಕೀಯ ಪಕ್ಷದ ಸದಸ್ಯರನ್ನು ಕೊಲ್ಲಲು ಸಂಚು ರೂಪಿಸಿರುವುದನ್ನು ಒಳಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು.

ಗುರುವಾರದ ತೀರ್ಪಿನಲ್ಲಿ, ಹೈಕೋರ್ಟ್, ಅಮಿತ್ ಜೋಗಿ ಅವರನ್ನು ಖುಲಾಸೆಗೊಳಿಸಿರುವ ವಿಚಾರಣಾ ನ್ಯಾಯಾಲಯದ ತೀರ್ಪನ್ನು “ಸ್ಪಷ್ಟವಾಗಿ ಕಾನೂನುಬಾಹಿರ, ತಪ್ಪು, ದಾಖಲೆಯಲ್ಲಿ ಲಭ್ಯವಿರುವ ಪುರಾವೆಗಳಿಗೆ ವಿರುದ್ಧವಾಗಿದೆ ಮತ್ತು ಯಾವುದೇ ನಿರ್ದಿಷ್ಟ ಆಧಾರವಿಲ್ಲ” ಎಂದು ಬಣ್ಣಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಅನಗತ್ಯವಾಗಿ ಆರೋಪಿ ಅಮಿತ್ ಜೋಗಿಯ ಪಾತ್ರವನ್ನು ಇತರ ಸಹ-ಆರೋಪಿಗಳು/ಶಿಕ್ಷಿತರ ಪಾತ್ರದಿಂದ ಪ್ರತ್ಯೇಕಿಸಲು ಪ್ರಯತ್ನಿಸಿದ್ದಾರೆ ಎಂದು ಹೈಕೋರ್ಟ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಹ ಆರೋಪಿಯು ಅಮಿತ್ ಜೋಗಿ ಅವರನ್ನು ಮೆಚ್ಚಿಸಲು ಅವರಿಗೆ ಅರಿವಿಲ್ಲದಂತೆ ಮತ್ತು ಅವರು ಯೋಚಿಸದ ರೀತಿಯಲ್ಲಿ ಸ್ವತಂತ್ರವಾಗಿ ವರ್ತಿಸಿದ್ದಾರೆ ಎಂಬ ತೀರ್ಮಾನವು ಸಮರ್ಥನೀಯವಲ್ಲ ಹೈಕೋರ್ಟ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...