Homeಮುಖಪುಟಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ (ಎನ್‌ಸಿಪಿ) ಪಕ್ಷದ ಖಜಾಂಚಿ ರಾಮವತಾರ್ ಜಗ್ಗಿ ಅವರನ್ನು ಕೊಲ್ಲಲು ಸಂಚು ರೂಪಿಸಿದ ಪ್ರಕರಣದಲ್ಲಿ ಅಮಿತ್ ಜೋಗಿ ಅವರನ್ನು ದೋಷಿ ಎಂದು ಗುರುವಾರ (ಏ.2) ನ್ಯಾಯಾಲಯ ಘೋಷಿಸಿತ್ತು. ಅಜಿತ್ ಜೋಗಿ ಮುಖ್ಯಮಂತ್ರಿಯಾಗಿದ್ದಾಗ ಜೂನ್ 4, 2003ರಂದು ರಾಯ್‌ಪುರದಲ್ಲಿ ಎನ್‌ಸಿಪಿ ನಾಯಕನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಸವಾಲೊಡ್ಡುತ್ತಿದ್ದ ಎನ್‌ಸಿಪಿ ಬೃಹತ್ ರ‍್ಯಾಲಿಗೆ ಮುನ್ನ ಜಗ್ಗಿ ಅವರನ್ನು ಹತ್ಯೆ ಮಾಡಲಾಗಿತ್ತು. ಗುರುವಾರ, ಹೈಕೋರ್ಟ್ ಅಮಿತ್ ಜೋಗಿ ಅವರಿಗೆ ಮೂರು ವಾರಗಳಲ್ಲಿ ಶರಣಾಗುವಂತೆ ಸೂಚಿಸಿತ್ತು.

ಸೋಮವಾರ ಅವರು ತಮ್ಮ ಶಿಕ್ಷೆಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 20ರಂದು ವಿಚಾರಣೆಗೆ ಪಟ್ಟಿ ಮಾಡಿದೆ.

ಮೇ 31, 2007ರಂದು, ವಿಚಾರಣಾ ನ್ಯಾಯಾಲಯವು ಕೊಲೆಗೆ ಸಂಬಂಧಿಸಿದಂತೆ 28 ಜನರನ್ನು ದೋಷಿಗಳು ಎಂದು ಘೋಷಿಸಿತ್ತು. ಅಮಿತ್ ಜೋಗಿ ಅವರನ್ನು ಖುಲಾಸೆಗೊಳಿಸಿತ್ತು.

ಕೇಂದ್ರ ತನಿಖಾ ದಳವು (ಸಿಬಿಐ) 2011ರಲ್ಲಿ ಖುಲಾಸೆಯನ್ನು ಪ್ರಶ್ನಿಸಿತ್ತು. ಆದಾಗ್ಯೂ, ವಿಳಂಬದ ಆಧಾರದ ಮೇಲೆ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಛತ್ತೀಸ್‌ಗಢ ಸರ್ಕಾರ ಮತ್ತು ರಾಮಾವತಾರ್ ಜಗ್ಗಿ ಅವರ ಮಗ ಸತೀಶ್ ಜಗ್ಗಿ ಅವರ ಮೇಲ್ಮನವಿಗಳನ್ನೂ ಕೂಡ ಹೈಕೋರ್ಟ್ ತಿರಸ್ಕರಿಸಿತ್ತು.

ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 2025ರ ನವೆಂಬರ್‌ನಲ್ಲಿ, ಸುಪ್ರೀಂ ಕೋರ್ಟ್ ಪ್ರಕರಣವನ್ನು ಮತ್ತೆ ಹೈಕೋರ್ಟ್‌ಗೆ ವರ್ಗಾಯಿಸಿ, ಸಿಬಿಐ ಅರ್ಜಿಯನ್ನು ಹೊಸದಾಗಿ ಪರಿಗಣಿಸುವಂತೆ ನಿರ್ದೇಶಿಸಿತ್ತು. ಸಿಬಿಐ ಗಣನೀಯ ವಿಳಂಬದ ನಂತರ ಅರ್ಜಿಯನ್ನು ಸಲ್ಲಿಸಿದ್ದರೂ, ಅಮಿತ್ ಜೋಗಿ ವಿರುದ್ಧದ ಆರೋಪಗಳು ತುಂಬಾ ಗಂಭೀರವಾದವು, ಇದು ಪ್ರತಿಸ್ಪರ್ಧಿ ರಾಜಕೀಯ ಪಕ್ಷದ ಸದಸ್ಯರನ್ನು ಕೊಲ್ಲಲು ಸಂಚು ರೂಪಿಸಿರುವುದನ್ನು ಒಳಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು.

ಗುರುವಾರದ ತೀರ್ಪಿನಲ್ಲಿ, ಹೈಕೋರ್ಟ್, ಅಮಿತ್ ಜೋಗಿ ಅವರನ್ನು ಖುಲಾಸೆಗೊಳಿಸಿರುವ ವಿಚಾರಣಾ ನ್ಯಾಯಾಲಯದ ತೀರ್ಪನ್ನು “ಸ್ಪಷ್ಟವಾಗಿ ಕಾನೂನುಬಾಹಿರ, ತಪ್ಪು, ದಾಖಲೆಯಲ್ಲಿ ಲಭ್ಯವಿರುವ ಪುರಾವೆಗಳಿಗೆ ವಿರುದ್ಧವಾಗಿದೆ ಮತ್ತು ಯಾವುದೇ ನಿರ್ದಿಷ್ಟ ಆಧಾರವಿಲ್ಲ” ಎಂದು ಬಣ್ಣಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಅನಗತ್ಯವಾಗಿ ಆರೋಪಿ ಅಮಿತ್ ಜೋಗಿಯ ಪಾತ್ರವನ್ನು ಇತರ ಸಹ-ಆರೋಪಿಗಳು/ಶಿಕ್ಷಿತರ ಪಾತ್ರದಿಂದ ಪ್ರತ್ಯೇಕಿಸಲು ಪ್ರಯತ್ನಿಸಿದ್ದಾರೆ ಎಂದು ಹೈಕೋರ್ಟ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಹ ಆರೋಪಿಯು ಅಮಿತ್ ಜೋಗಿ ಅವರನ್ನು ಮೆಚ್ಚಿಸಲು ಅವರಿಗೆ ಅರಿವಿಲ್ಲದಂತೆ ಮತ್ತು ಅವರು ಯೋಚಿಸದ ರೀತಿಯಲ್ಲಿ ಸ್ವತಂತ್ರವಾಗಿ ವರ್ತಿಸಿದ್ದಾರೆ ಎಂಬ ತೀರ್ಮಾನವು ಸಮರ್ಥನೀಯವಲ್ಲ ಹೈಕೋರ್ಟ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....