Homeಮುಖಪುಟಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

- Advertisement -
- Advertisement -

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ.

ರಾಷ್ಟ್ರೀಯವಾದಿ ಕಾಂಗ್ರೆಸ್ (ಎನ್‌ಸಿಪಿ) ಪಕ್ಷದ ಖಜಾಂಚಿ ರಾಮವತಾರ್ ಜಗ್ಗಿ ಅವರನ್ನು ಕೊಲ್ಲಲು ಸಂಚು ರೂಪಿಸಿದ ಪ್ರಕರಣದಲ್ಲಿ ಅಮಿತ್ ಜೋಗಿ ಅವರನ್ನು ದೋಷಿ ಎಂದು ಗುರುವಾರ (ಏ.2) ನ್ಯಾಯಾಲಯ ಘೋಷಿಸಿತ್ತು. ಅಜಿತ್ ಜೋಗಿ ಮುಖ್ಯಮಂತ್ರಿಯಾಗಿದ್ದಾಗ ಜೂನ್ 4, 2003ರಂದು ರಾಯ್‌ಪುರದಲ್ಲಿ ಎನ್‌ಸಿಪಿ ನಾಯಕನನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಸವಾಲೊಡ್ಡುತ್ತಿದ್ದ ಎನ್‌ಸಿಪಿ ಬೃಹತ್ ರ‍್ಯಾಲಿಗೆ ಮುನ್ನ ಜಗ್ಗಿ ಅವರನ್ನು ಹತ್ಯೆ ಮಾಡಲಾಗಿತ್ತು. ಗುರುವಾರ, ಹೈಕೋರ್ಟ್ ಅಮಿತ್ ಜೋಗಿ ಅವರಿಗೆ ಮೂರು ವಾರಗಳಲ್ಲಿ ಶರಣಾಗುವಂತೆ ಸೂಚಿಸಿತ್ತು.

ಸೋಮವಾರ ಅವರು ತಮ್ಮ ಶಿಕ್ಷೆಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ಏಪ್ರಿಲ್ 20ರಂದು ವಿಚಾರಣೆಗೆ ಪಟ್ಟಿ ಮಾಡಿದೆ.

ಮೇ 31, 2007ರಂದು, ವಿಚಾರಣಾ ನ್ಯಾಯಾಲಯವು ಕೊಲೆಗೆ ಸಂಬಂಧಿಸಿದಂತೆ 28 ಜನರನ್ನು ದೋಷಿಗಳು ಎಂದು ಘೋಷಿಸಿತ್ತು. ಅಮಿತ್ ಜೋಗಿ ಅವರನ್ನು ಖುಲಾಸೆಗೊಳಿಸಿತ್ತು.

ಕೇಂದ್ರ ತನಿಖಾ ದಳವು (ಸಿಬಿಐ) 2011ರಲ್ಲಿ ಖುಲಾಸೆಯನ್ನು ಪ್ರಶ್ನಿಸಿತ್ತು. ಆದಾಗ್ಯೂ, ವಿಳಂಬದ ಆಧಾರದ ಮೇಲೆ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿತ್ತು. ಛತ್ತೀಸ್‌ಗಢ ಸರ್ಕಾರ ಮತ್ತು ರಾಮಾವತಾರ್ ಜಗ್ಗಿ ಅವರ ಮಗ ಸತೀಶ್ ಜಗ್ಗಿ ಅವರ ಮೇಲ್ಮನವಿಗಳನ್ನೂ ಕೂಡ ಹೈಕೋರ್ಟ್ ತಿರಸ್ಕರಿಸಿತ್ತು.

ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. 2025ರ ನವೆಂಬರ್‌ನಲ್ಲಿ, ಸುಪ್ರೀಂ ಕೋರ್ಟ್ ಪ್ರಕರಣವನ್ನು ಮತ್ತೆ ಹೈಕೋರ್ಟ್‌ಗೆ ವರ್ಗಾಯಿಸಿ, ಸಿಬಿಐ ಅರ್ಜಿಯನ್ನು ಹೊಸದಾಗಿ ಪರಿಗಣಿಸುವಂತೆ ನಿರ್ದೇಶಿಸಿತ್ತು. ಸಿಬಿಐ ಗಣನೀಯ ವಿಳಂಬದ ನಂತರ ಅರ್ಜಿಯನ್ನು ಸಲ್ಲಿಸಿದ್ದರೂ, ಅಮಿತ್ ಜೋಗಿ ವಿರುದ್ಧದ ಆರೋಪಗಳು ತುಂಬಾ ಗಂಭೀರವಾದವು, ಇದು ಪ್ರತಿಸ್ಪರ್ಧಿ ರಾಜಕೀಯ ಪಕ್ಷದ ಸದಸ್ಯರನ್ನು ಕೊಲ್ಲಲು ಸಂಚು ರೂಪಿಸಿರುವುದನ್ನು ಒಳಗೊಂಡಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು.

ಗುರುವಾರದ ತೀರ್ಪಿನಲ್ಲಿ, ಹೈಕೋರ್ಟ್, ಅಮಿತ್ ಜೋಗಿ ಅವರನ್ನು ಖುಲಾಸೆಗೊಳಿಸಿರುವ ವಿಚಾರಣಾ ನ್ಯಾಯಾಲಯದ ತೀರ್ಪನ್ನು “ಸ್ಪಷ್ಟವಾಗಿ ಕಾನೂನುಬಾಹಿರ, ತಪ್ಪು, ದಾಖಲೆಯಲ್ಲಿ ಲಭ್ಯವಿರುವ ಪುರಾವೆಗಳಿಗೆ ವಿರುದ್ಧವಾಗಿದೆ ಮತ್ತು ಯಾವುದೇ ನಿರ್ದಿಷ್ಟ ಆಧಾರವಿಲ್ಲ” ಎಂದು ಬಣ್ಣಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಅನಗತ್ಯವಾಗಿ ಆರೋಪಿ ಅಮಿತ್ ಜೋಗಿಯ ಪಾತ್ರವನ್ನು ಇತರ ಸಹ-ಆರೋಪಿಗಳು/ಶಿಕ್ಷಿತರ ಪಾತ್ರದಿಂದ ಪ್ರತ್ಯೇಕಿಸಲು ಪ್ರಯತ್ನಿಸಿದ್ದಾರೆ ಎಂದು ಹೈಕೋರ್ಟ್ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಸಹ ಆರೋಪಿಯು ಅಮಿತ್ ಜೋಗಿ ಅವರನ್ನು ಮೆಚ್ಚಿಸಲು ಅವರಿಗೆ ಅರಿವಿಲ್ಲದಂತೆ ಮತ್ತು ಅವರು ಯೋಚಿಸದ ರೀತಿಯಲ್ಲಿ ಸ್ವತಂತ್ರವಾಗಿ ವರ್ತಿಸಿದ್ದಾರೆ ಎಂಬ ತೀರ್ಮಾನವು ಸಮರ್ಥನೀಯವಲ್ಲ ಹೈಕೋರ್ಟ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...