Homeಮುಖಪುಟಅಜಿತ್‌ಗೆ ಕೈಕೊಟ್ಟ ಎನ್‌ಸಿಪಿ ನಾಯಕರು; ಶರದ್ ಪವಾರ್ ಬಣ ಸೇರುತ್ತಿರುವ ಪ್ರಮುಖರು

ಅಜಿತ್‌ಗೆ ಕೈಕೊಟ್ಟ ಎನ್‌ಸಿಪಿ ನಾಯಕರು; ಶರದ್ ಪವಾರ್ ಬಣ ಸೇರುತ್ತಿರುವ ಪ್ರಮುಖರು

- Advertisement -
- Advertisement -

ತನ್ನ ಚಿಕ್ಕಪ್ಪ ಮತ್ತು ಪಕ್ಷದ ಸಂಸ್ಥಾಪಕ ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಬಣಕ್ಕೆ ಹಲವಾರು ಪ್ರಮುಖ ನಾಯಕರು ಸೇರ್ಪಡೆಯಾದ ನಂತರ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಪುಣೆಯಲ್ಲಿ ಪಕ್ಷದ ಸಹೋದ್ಯೋಗಿಗಳೊಂದಿಗೆ ಅತಿಮುಖ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ.

ಪುಣೆಯ ನಾಲ್ವರು ನಾಯಕರು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣದಲ್ಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿ ನಿನ್ನೆ ಶರದ್ ಪವಾರ್ ಪಾಳಯಕ್ಕೆ ಸೇರಿದರು. ಇವರಲ್ಲಿ ಎನ್‌ಸಿಪಿಯ ಮಾಜಿ ಪಿಂಪ್ರಿ-ಚಿಂಚ್‌ವಾಡ್ ಮುಖ್ಯಸ್ಥ ಅಜಿತ್ ಗವ್ಹಾನೆ ಮತ್ತು ಸ್ಥಳೀಯ ನಾಯಕರಾದ ರಾಹುಲ್ ಭೋಸ್ಲೆ, ಪಂಕಜ್ ಭಲೇಕರ್ ಮತ್ತು ಯಶ್ ಸಾನೆ ಶರದ್ ಬಣ ಸೇರಿದ್ದಾರೆ.

ಪಿಂಪ್ರಿ-ಚಿಂಚ್‌ವಾಡ್‌ನ 20 ಕ್ಕೂ ಹೆಚ್ಚು ಮಾಜಿ ಕಾರ್ಪೊರೇಟರ್‌ಗಳು, ಮೇಯರ್‌ಗಳು ಮತ್ತು ಘಟಕದ ಮುಖ್ಯಸ್ಥರು ನಿನ್ನೆ ಹಿರಿಯ ಪವಾರ್ ಶಿಬಿರಕ್ಕೆ ಸೇರಿದರು.

ಲೋಕಸಭೆ ಚುನಾವಣೆ ಫಲಿತಾಂಶದ ಒಂದು ತಿಂಗಳ ನಂತರ ಈ ಬದಲಾವಣೆ ಕಂಡುಬಂದಿದೆ. ಇದರಲ್ಲಿ ಶರದ್ ಪವಾರ್ ಬಣ ತಾನು ಸ್ಪರ್ಧಿಸಿದ 10 ಸ್ಥಾನಗಳಲ್ಲಿ 8 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಅದ್ಭುತ ಪ್ರದರ್ಶನವನ್ನು ನೀಡಿತು. ಅಜಿತ್ ಪವಾರ್ ಪಾಳಯವು ಕೇವಲ ಒಂದು ಸ್ಥಾನವನ್ನು ಗೆದ್ದು ಮೂರು ಸ್ಥಾನಗಳನ್ನು ಕಳೆದುಕೊಂಡಿದ್ದರಿಂದ ನಿರಾಶೆಗೊಂಡಿತು. ಒಂದು ಹಂತದಲ್ಲಿ ಫಲಿತಾಂಶಗಳು, ಹಿರಿಯ ಪವಾರ್ ಅವರನ್ನು ಎನ್‌ಸಿಪಿ ಬೆಂಬಲಿಗರು ಹಿಮ್ಮೆಟ್ಟಿಸಲು ಉತ್ಸುಕರಾಗಿದ್ದಾರೆಂದು ತೋರಿಸಿದೆ. ಮಹಾರಾಷ್ಟ್ರದಲ್ಲಿ ವಿಧಾಣಸಭೆ ಚುನಾವಣೆಗೆ ತಿಂಗಳುಗಳು ಬಾಕಿ ಇರುವ ಕಾರಣ ಈ ಬದಲಾವಣೆಯು ಹೆಚ್ಚು ಮಹತ್ವದ್ದಾಗಿದೆ.

1999 ರಲ್ಲಿ ಎನ್‌ಸಿಪಿ ಸ್ಥಾಪಿಸಿದ ಶರದ್ ಪವಾರ್, ಕಳೆದ ವರ್ಷ ಅವರ ಸಹೋದರ ಸಂಬಂಧಿ ಅಜಿತ್ ಪವಾರ್ ಬಂಡಾಯವನ್ನು ಮುನ್ನಡೆಸಿ, ಶಿವಸೇನೆ-ಬಿಜೆಪಿ ಸರ್ಕಾರಕ್ಕೆ ಸೇರುವ ಮೂಲಕ ಉಪಮುಖ್ಯಮಂತ್ರಿಯಾದರು. ಇದರಿಂದ ಹಿನ್ನಡೆ ಅನಿಭವಿಸಿದ ಹಿರಿಯ ರಾಜಕಾರಣಿ ಶರದ್ ಪವಾರ್, ತಮ್ಮ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಕಳೆದುಕೊಂಡರು. ಅನಿವಾರ್ಯವಾಗಿ ಅವರು ಎನ್‌ಸಿಪಿ (ಶರದ್ಚಂದ್ರ ಪವಾರ್) ಹೆಸರಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕಾಯಿತು.

ಎನ್‌ಸಿಪಿ ನಾಯಕರು ಅಜಿತ್ ಬಣ ತೊರೆದಿದ್ದೇಕೆ?

ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆಗೆ ತಿಂಗಳುಗಳು ಬಾಕಿಯಿದ್ದು, ಪ್ರತಿಯೊಬ್ಬ ನಾಯಕನೂ ಟಿಕೆಟ್ ಪಡೆಯಲು ಹಲವು ಮಾರ್ಗಗಳನ್ನು ಅನ್ವೇಷಿಸುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಶರದ್ ಪವಾರ್ ನೇತೃತ್ವದ ಬಣ ದೊಡ್ಡ ಸಾಧನೆ ಮಾಡುವುದರೊಂದಿಗೆ, ವಿಧಾನಸಭೆ ಚುನಾವಣೆಯಲ್ಲಿ ಅವರು ಅದನ್ನು ಪುನರಾವರ್ತಿಸುತ್ತಾರೆ ಮತ್ತು ಗೆಲ್ಲುವ ಕಡೆ ಇರಬೇಕೆಂದು ಅನೇಕ ನಾಯಕರು ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಹಲವಾರು ನಾಯಕರು ತಮ್ಮ ಬದಲಾವಣೆಯ ಹಿಂದೆ ಸ್ಥಳೀಯ ಅಂಶಗಳನ್ನು ಉಲ್ಲೇಖಿಸಿದ್ದಾರೆ. “ನೀವು ಪಿಂಪ್ರಿ-ಚಿಂಚ್‌ವಾಡ್ ಅನ್ನು ನೋಡಿದರೆ, ಅಜಿತ್ ದಾದಾ ಮತ್ತು ಪವಾರ್ ಸಾಹಬ್ ಇಬ್ಬರೂ ಅದರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ. ಆದರೆ, 2017 ರಿಂದ ಬಿಜೆಪಿ ನಗರ ಪಾಲಿಕೆಯನ್ನು ಆಳುತ್ತಿದೆ. ಇಲ್ಲಿ ಅಭಿವೃದ್ಧಿ ಕೆಲಸಗಳು ತಪ್ಪಾದ ರೀತಿಯಲ್ಲಿ ನಡೆದಿವೆ. ಇಲ್ಲಿ ವ್ಯಾಪಕ ಭ್ರಷ್ಟಾಚಾರವಿದೆ” ಎಂದು ಗವ್ಹಾನೆ ತಿಳಿಸಿದ್ದಾರೆ.

ಶರದ್ ಪವಾರ್ ಅವರ ಪುತ್ರಿ, ನಾಲ್ಕು ಬಾರಿ ಲೋಕಸಭೆ ಸಂಸದರಾದರಾಗಿರುವ ಸುಪ್ರಿಯಾ ಸುಳೆ, “ಶರದ್ ಪವಾರ್ ಕಳೆದ 60 ವರ್ಷಗಳಿಂದ ಮಹಾರಾಷ್ಟ್ರ ಮತ್ತು ಕೇಂದ್ರದಲ್ಲಿ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ” ಎಂದು ಹೇಳಿದರು. “ನಮಗೆ ಪವಾರ್ ಸಾಹಬ್ ಅವರ ಸಿದ್ಧಾಂತದಲ್ಲಿ ನಂಬಿಕೆ ಇದೆ ಮತ್ತು ವಿರೋಧ ಪಕ್ಷದಲ್ಲಿರುವ ಅನೇಕ ಜನರು ಸಹ ಅವರ ಕಡೆಗೆ ಹೆಚ್ಚಿನ ಭರವಸೆಯಿಂದ ನೋಡುತ್ತಾರೆ. ಅದಕ್ಕಾಗಿಯೇ ಜನರು ಹಲವರು ಅವರ ಬಣ ಸೇರುತ್ತಿದ್ದಾರೆ” ಎಂದು ಹೇಳಿದರು.

ಅಜಿತ್ ತನ್ನ ಬಣ ಬದಲಾಯಿಸಬಹುದೇ?

ತನ್ನ ಬಣದ ನಾಯಕರು ಶರದ್ ಪವಾರ್ ಅವರ ಪಾಳೆಯಕ್ಕೆ ಬದಲಾಗುತ್ತಿದ್ದಂತೆ, ಅಜಿತ್ ಪವಾರ್ ಕೂಡ ಅಂತಿಮವಾಗಿ ಹಿಂತಿರುಗಲು ಪ್ರಯತ್ನಿಸಬಹುದು ಎಂಬ ಊಹಾಪೋಹವಿದೆ. ಶರದ್ ಪವಾರ್ ಅವರು ಹಿಂತಿರುಗಲು ಬಯಸಿದರೆ ಪಕ್ಷದಲ್ಲಿ ಸ್ಥಾನ ಸಿಗುತ್ತದೆಯೇ ಎಂದು ಇತ್ತೀಚೆಗೆ ಕೇಳಲಾಯಿತು. “ಇಂತಹ ನಿರ್ಧಾರಗಳನ್ನು ವೈಯಕ್ತಿಕ ಮಟ್ಟದಲ್ಲಿ ತೆಗೆದುಕೊಳ್ಳಲಾಗುವುದಿಲ್ಲ, ಬಿಕ್ಕಟ್ಟಿನ ಸಂದರ್ಭದಲ್ಲಿ ನನ್ನೊಂದಿಗೆ ನಿಂತ ನನ್ನ ಸಹೋದ್ಯೋಗಿಗಳನ್ನು ಮೊದಲು ಕೇಳಲಾಗುತ್ತದೆ” ಎಂದು ಶರದ್ ಪವಾರ್ ಹೇಳಿದ್ದರು.

ಚುನಾವಣಾ ಹಿನ್ನಡೆಯಿಂದಾಗಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಅಜಿತ್ ಪವಾರ್ ಅವರ ಸ್ಥಾನಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಅವರು ಈಗ ಉಪಮುಖ್ಯಮಂತ್ರಿಯಾಗಿದ್ದಾರೆ, ಅವರ ಪಕ್ಷವು ಲೋಕಸಭೆ ಸ್ಪರ್ಧೆಯಲ್ಲಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆದ್ದಿದ್ದು, ಈ ಹಿನ್ನೆಲೆಯಲ್ಲಿ ಮುಂಬರುವ ರಾಜ್ಯ ಚುನಾವಣೆಯು 64 ವರ್ಷದ ನಾಯಕನಿಗೆ ದೊಡ್ಡ ಸವಾಲಾಗಿದೆ.

ಇದನ್ನೂ ಓದಿ; ನೀಟ್ ವಿವಾದ: ‘ದೊಡ್ಡ ಪ್ರಮಾಣದಲ್ಲಿ ಪರೀಕ್ಷಾ ಪವಿತ್ರ್ಯತೆ ಕಳೆದುಕೊಂಡರೆ ಮಾತ್ರ ಮರು ಪರೀಕ್ಷೆ” ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...