Homeಮುಖಪುಟಮಹಾರಾಷ್ಟ್ರ: ಹಿಂಸಾಚಾರಕ್ಕೆ ತಿರುಗಿದ ಮೀಸಲಾತಿ ಪರ ಹೋರಾಟ; ಶಾಸಕರ ನಿವಾಸಕ್ಕೆ ಬೆಂಕಿ

ಮಹಾರಾಷ್ಟ್ರ: ಹಿಂಸಾಚಾರಕ್ಕೆ ತಿರುಗಿದ ಮೀಸಲಾತಿ ಪರ ಹೋರಾಟ; ಶಾಸಕರ ನಿವಾಸಕ್ಕೆ ಬೆಂಕಿ

- Advertisement -
- Advertisement -

ಮರಾಠ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಬೀಡ್ ಜಿಲ್ಲೆಯಲ್ಲಿ ಮಹಾರಾಷ್ಟ್ರ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಗೆ ಬೆಂಕಿ ಹಚ್ಚಿ ಧ್ವಂಸ ಮಾಡಲಾಗಿದೆ.

ಅ.25 ರಿಂದ ಮೀಸಲಾತಿಗೆ ಆಗ್ರಹಿಸಿ ಮನೋಜ್ ಜಾರಂಗೆ ಪಾಟೀಲ್ ಅವರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಸತ್ಯಾಗ್ರಹದ ವಿರುದ್ಧ ಅವಹೇಳನಾಕಾರಿ  ಹೇಳಿಕೆಗಳನ್ನು ನೀಡಿದ್ದರಿಂದ ಶಾಸಕರ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗಿದೆ.

ಶರದ್ ಪವಾರ್ ಅವರ ನೇತೃತ್ವದ ಎನ್‌ಸಿಪಿಯಿಂದ ಬೇರ್ಪಟ್ಟ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಶಾಸಕರಾಗಿರುವ ಸೋಲಂಕೆ ಅವರ ನಿವಾಸಕ್ಕೆ ಬೆಂಕಿ ಹಚ್ಚಲಾಗಿದೆ. ಶಾಸಕರ ಮನೆಯ ಹೊರಗೆ ನಿಲ್ಲಿಸಿದ್ದ ವಾಹನಕ್ಕೆ ಪ್ರತಿಭಟನಾಕಾರರು ಕಲ್ಲು ಎಸೆದು ಹಾನಿ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಸೋಲಂಕೆ, ದಾಳಿಯಾದಾಗ ನಾನು ನನ್ನ ಮನೆಯೊಳಗೆ ಇದ್ದೆ. ಅದೃಷ್ಟವಶಾತ್ ನನ್ನ ಕುಟುಂಬದ ಸದಸ್ಯರಿಗೆ ಅಥವಾ ಸಿಬ್ಬಂದಿಗೆ ಗಾಯವಾಗಿಲ್ಲ. ನಾವು ಸುರಕ್ಷಿತವಾಗಿದ್ದೇವೆ ಆದರೆ ಅಪಾರ ಆಸ್ತಿ ನಷ್ಟವಾಗಿದೆ ಎಂದು ಹೇಳಿದ್ದಾರೆ.

ವೈರಲ್‌ ವಿಡಿಯೋದಲ್ಲಿ ಶಾಸಕರ ಮನೆಗೆ ಸಂಪೂರ್ಣವಾಗಿ ಹೊಗೆ ಆವರಿಸಿರುವುದು ಮತ್ತು ಉರಿಯುತ್ತಿರುವ ಕಟ್ಟಡದಿಂದ ಕಪ್ಪು ಹೊಗೆ ಹೊರ ಬರುತ್ತಿರುವುದು ಕಂಡು ಬಂದಿದೆ.

ವ್ಯಾಪಕವಾಗಿ ಪ್ರಸಾರವಾದ ಆಡಿಯೊದಲ್ಲಿ ಮೀಸಲಾತಿಗಾಗಿ ಬೇಡಿಕೆ ಮತ್ತು ಅದನ್ನು ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ 40-ದಿನಗಳ ಗಡುವು ನೀಡುರುವುದನ್ನು ಮಕ್ಕಳ ಆಟವಾಗಿದೆ ಎಂದು ಸೋಲಂಕೆ ಹೇಳುವುದು ಹಾಗೂ ಗ್ರಾಮ ಪಂಚಾಯತ್ ಚುನಾವಣೆಯಲ್ಲೂ ಸ್ಪರ್ಧಿಸದ ವ್ಯಕ್ತಿ ಇಂದು ಬುದ್ಧಿವಂತ ವ್ಯಕ್ತಿಯಾಗಿದ್ದಾನೆ ಎಂದು ಮೀಸಲಾತಿ ಪರ ನಾಯಕನನ್ನು ಉಲ್ಲೇಖಿಸಿ ಸೋಲಂಕೆ ಹೇಳುವ ಆಡಿಯೋ ವೈರಲ್‌ ಆಗಿತ್ತು.

ಎನ್‌ಸಿಪಿ ಘಟನೆಯನ್ನು ಖಂಡಿಸಿದ್ದು, ಇದನ್ನು ಗೃಹ ಸಚಿವರ ಸಂಪೂರ್ಣ ವೈಫಲ್ಯ ಎಂದು ಕರೆದಿದೆ. ಇದು ಮಹಾರಾಷ್ಟ್ರದ ಟ್ರಿಪಲ್ ಇಂಜಿನ್ ಸರ್ಕಾರದ ವೈಫಲ್ಯ. ಇಂದು ಶಾಸಕರ ಮನೆಗೆ ಬೆಂಕಿ ಹಚ್ಚಲಾಗಿದೆ. ಗೃಹ ಸಚಿವರು ಏನು ಮಾಡುತ್ತಿದ್ದಾರೆ? ಇದು ಅವರ ಜವಾಬ್ದಾರಿ ಎಂದು ಶರದ್ ಪವಾರ್ ಪಕ್ಷದ ಸಂಸದ ಸುಪ್ರಿಯಾ ಸುಳೆ ಹೇಳಿದ್ದಾರೆ.

ಬೆಂಕಿ ಹಚ್ಚಿದ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಈ ಪ್ರತಿಭಟನೆ ಯಾವ ತಿರುವು ಪಡೆದುಕೊಳ್ಳುತ್ತಿದೆ? ಇದು ತಪ್ಪು ದಾರಿಯಲ್ಲಿ ಸಾಗುತ್ತಿದೆ ಎಂಬುದನ್ನು ಮನೋಜ್ ಪಾಟೀಲ್ ಗಮನಿಸಬೇಕು. ಸರ್ಕಾರವು ಈ ಕುರಿತು ಪರಿಶೀಲಿಸಲು ಮಂಡಳಿಯನ್ನು ರಚಿಸಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಶಿವಸೇನೆ, NCP ಶಾಸಕರ ವಿರುದ್ಧದ ಅನರ್ಹತೆ ಅರ್ಜಿ; ಸ್ಪೀಕರ್‌ಗೆ ಗಡುವು ನೀಡಿದ ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...