Homeಮುಖಪುಟಶರದ್ ಪವಾರ್ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ: ಎನ್‌ಸಿಪಿ ಸ್ಪಷ್ಟನೆ

ಶರದ್ ಪವಾರ್ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ: ಎನ್‌ಸಿಪಿ ಸ್ಪಷ್ಟನೆ

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಮುಖ್ಯಸ್ಥ ಶರದ್ ಪವಾರ್ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳನ್ನು ಗುರುವಾರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ತಳ್ಳಿಹಾಕಿದ್ದು, ಶರದ್ ಪವಾರ್ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದೆ.,

ಬುಧವಾರ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಗಂಟೆಗಟ್ಟಲೆ ಚರ್ಚೆ ನಡೆಸಿದ ಬಳಿಕ ಈ ವದಂತಿ ಹರಡಿತ್ತು.

ಪ್ರಶಾಂತ್ ಕಿಶೋರ್, ಈ ಮೂವರೊಂದಿಗೆ ಸಭೆ ನಡೆಸಿದ ಬಳಿಕ ಹರಡಿದ ವದಂತಿಗಳಲ್ಲಿ ಹಿರಿಯ ರಾಜಕೀಯ ನಾಯಕ ಶರದ್ ಪವಾರ್ ಮುಂದಿನ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿ ಎಂಬುದು ಕೂಡಾ ಒಂದಾಗಿತ್ತು. ಆದರೆ, ಈ ವದಂತಿಯನ್ನು ಸ್ವತಃ ಶರದ್‌ ಪವಾರ್‌ ತಳ್ಳಿಹಾಕಿದ್ದಾರೆ.

ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿಯನ್ನು ಭೇಟಿಯಾಗುವುದಕ್ಕೂ ಮೊದಲು ಪ್ರಶಾಂತ್‌ ಕಿಶೋರ್‌ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶರದ್ ಪವಾರ್‌ ಅವರನ್ನು ಎರಡು ಭಾರಿ ಭೇಟಿಯಾಗಿದ್ದರು. ಈ ಬೆನ್ನಲ್ಲೇ ರಾಷ್ಟ್ರಪತಿ ಅಭ್ಯರ್ಥಿ ಶರದ್‌ ಎಂಬ ವದಂತಿಗಳು ಹರಿದಾಡಿದ್ದವು.

ಇದನ್ನೂ ಓದಿ: ನರೇಂದ್ರ ಮೋದಿ ವರ್ಸಸ್ ಪ್ರಶಾಂತ್ ಕಿಶೋರ್; ಶರದ್ ಪವಾರ್ ಸಭೆಯೊಂದು ಆರಂಭಬಿಂದು ಮಾತ್ರವೇ?

“ಒಂದು ಪಕ್ಷವು (ಬಿಜೆಪಿ) 300 ಕ್ಕೂ ಹೆಚ್ಚು ಸಂಸದರನ್ನು ಹೊಂದಿದ್ದರೆ, ಅದರ ಫಲಿತಾಂಶ ಏನೆಂದು ನನಗೆ ತಿಳಿದಿದೆ. ನಾನು ಅಧ್ಯಕ್ಷೀಯ ಚುನಾವಣೆಗೆ ಅಭ್ಯರ್ಥಿಯಾಗುವುದಿಲ್ಲ” ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಚಿವ ಪವಾರ್ ಹೇಳಿದ್ದಾರೆ.

“ನಾನು ಕಿಶೋರ್ ಎರಡು ಬಾರಿ ಭೇಟಿಯಾಗಿದ್ದೇವೆ. ಆದರೆ, 2024 ರ ಲೋಕಸಭಾ ಚುನಾವಣೆ ಅಥವಾ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧೆ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ನಾವು ಅವರ ಕಂಪನಿಯ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಅವರು ಚುನಾವಣಾ ತಂತ್ರಗಳನ್ನು ರೂಪಿಸುವ ಕೆಲಸವನ್ನು ತೊರೆದಿದ್ದೇನೆ ಎಂದು ನನಗೆ ಹೇಳಿದ್ದಾರೆ” ಎಂದು ಪವಾರ್ ಹೇಳಿದರು.

“2024 ರ ಸಾರ್ವತ್ರಿಕ ಚುನಾವಣೆಗಳಾಗಲಿ ಅಥವಾ ರಾಜ್ಯ ಚುನಾವಣೆಗಳ ಬಗ್ಗೆ ಇದುವರೆಗೆ ಯಾವುದನ್ನೂ ನಿರ್ಧರಿಸಲಾಗಿಲ್ಲ, ಚುನಾವಣೆ ಇನ್ನು ದೂರದಲ್ಲಿದೆ, ರಾಜಕೀಯ ಪರಿಸ್ಥಿತಿ ಬದಲಾಗುತ್ತಲೇ ಇರುತ್ತದೆ. 2024 ರ ಚುನಾವಣೆಯಲ್ಲಿ ನಾನು ಯಾವುದೇ ನಾಯಕತ್ವವನ್ನು ವಹಿಸಿಕೊಳ್ಳುವುದಿಲ್ಲ” ಎಂದು ಸ್ಪಷ್ಟನೆ ಪವಾರ್ ನೀಡಿದ್ದಾರೆ.

ಪ್ರಶಾಂತ್ ಕಿಶೋರ್‌ ಮಂಗಳವಾರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ದೆಹಲಿಯ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿದ ಪ್ರಶಾಂತ್‌ ಕಿಶೋರ್‌ ಗಂಟೆಗಳ ಕಾಲ ಕಾಂಗ್ರೆಸ್‌ ನಾಯಕರ ಜೊತೆ ಚರ್ಚೆ ನಡೆಸಿದ್ದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಹಾಜರಿದ್ದರು. ಬುಧವಾರ ಮತ್ತೆ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಗಂಟೆಗಟ್ಟಲೆ ಚರ್ಚೆ ನಡೆಸಿದ್ದಾರೆ.


ಇದನ್ನೂ ಓದಿ: ಪ್ರಶಾಂತ್‌ ಕಿಶೋರ್‌, ರಾಹುಲ್ ಗಾಂಧಿ ಭೇಟಿ-ರಾಷ್ಟ್ರ ರಾಜಕಾರಣದಲ್ಲಿ ಹೊಸ ಸಂಚಲನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....