Homeಮುಖಪುಟಯುಪಿಎ ಅಧ್ಯಕ್ಷ ಸ್ಥಾನಕ್ಕೆ ಎನ್‌ಸಿಪಿ ಹಿರಿಯ ಮುಖಂಡ ಶರದ್ ಪವಾರ್?

ಯುಪಿಎ ಅಧ್ಯಕ್ಷ ಸ್ಥಾನಕ್ಕೆ ಎನ್‌ಸಿಪಿ ಹಿರಿಯ ಮುಖಂಡ ಶರದ್ ಪವಾರ್?

ಸೋನಿಯಾ ಗಾಂಧಿ ನಿವೃತ್ತರಾದರೆ ಯುಪಿಎ ಮಿತ್ರ ಪಕ್ಷಗಳಲ್ಲಿ ಶರದ್ ಪವಾರ್ ಹಿರಿಯರಾಗಿರುವುದರಿಂದ, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಮತ್ತು ಮೋದಿ ಆಡಳಿತದ ವಿರುದ್ಧ ಬಲವಾದ ಹೋರಾಟವನ್ನು ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು...

- Advertisement -
- Advertisement -

ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದಿಂದ ಬಳಲುತ್ತಿರುವುದರಿಂದ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಯುಪಿಎ ಮಿತ್ರಪಕ್ಷಗಳಲ್ಲಿರುವವರಲ್ಲಿ ಶರದ್ ಪವಾರ್ ಅತ್ಯಂತ ಹಿರಿಯ ನಾಯಕರಾಗಿದ್ದು, ಅವರು ಎಲ್ಲಾ ರಾಜಕೀಯ ಪಕ್ಷಗಳ ನಾಯಕರೊಂದಿಗೂ ಸೌಹಾರ್ದಯುತ ಸಂಬಂಧವನ್ನು ಹೊಂದಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಶಿರಡಿಗೆ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆ ತೃಪ್ತಿ ದೇಸಾಯಿ ಬಂಧನ

ಕಾಂಗ್ರೆಸ್ ಮೂಲಗಳ ಪ್ರಕಾರ, ತೀವ್ರ ಶ್ವಾಸಕೋಶದ ಸೋಂಕಿನಿಂದಾಗಿ ಬಳಲುತ್ತಿರುವ ಸೋನಿಯಾ ಗಾಂಧಿ ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದಲು ಬಯಸುತ್ತಿದ್ದಾರೆ. ಆದರೆ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಸಾಧನೆ ತೋರಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ನಂತರ ಸೋನಿಯಾ ಗಾಂಧೀ ಹಂಗಾಮಿ ಅಧ್ಯಕ್ಷರಾಗಲು ಒಪ್ಪಿದರು. ಆದರೂ 2019 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಅವರು ಸಕ್ರಿಯವಾಗಿ ಪ್ರಚಾರದಲ್ಲಿ ತೊಡಗಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ದೇಶ ಮುನ್ನಡೆಸುವ ಎಲ್ಲಾ ಅರ್ಹತೆ ಶರದ್ ಪವಾರ್ ಅವರಿಗಿದೆ: ಸಂಜಯ್ ರಾವತ್

“ಯುಪಿಎ ಒಕ್ಕೂಟದಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿದೆ. ಆದ್ದರಿಂದ, ಅಧ್ಯಕ್ಷರು ಕಾಂಗ್ರೆಸ್‌ನವರೇ ಆಗಿರಬೇಕು. ಆದರೆ ಸೋನಿಯಾ ಗಾಂಧಿ ನಿವೃತ್ತರಾದರೆ ಯುಪಿಎ ಮಿತ್ರ ಪಕ್ಷಗಳಲ್ಲಿ ಶರದ್ ಪವಾರ್ ಹಿರಿಯರಾಗಿರುವುದರಿಂದ, ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಮತ್ತು ಮೋದಿ ಆಡಳಿತದ ವಿರುದ್ಧ ಬಲವಾದ ಹೋರಾಟವನ್ನು ನಡೆಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬಹುದು” ಎಂದು ಮೂಲಗಳು ತಿಳಿಸಿವೆ.

ಆದರೆ, ವಿದೇಶಿ ಮೂಲದವರಾಗಿದ್ದ ಸೋನಿಯಾ ಗಾಂಧಿಯವರನ್ನು ಪಕ್ಷಕ್ಕೆ ಕರೆತಂದದ್ದಕ್ಕೆ ಶರದ್ ಪವಾರ್ 1991 ರಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದರು. ಆಗಿನಿಂದಲೂ ಪವಾರ್ ಮತ್ತು ಸೋನಿಯಾ ನಡುವೆ ವಿಶ್ವಾಸಾರ್ಹ ಕೊರತೆ ಮುಂದುವರೆದಿದೆ.

ಇದನ್ನೂ ಓದಿ: ದೆಹಲಿ ಡಿಸಿಎಂ ಸಿಸೋಡಿಯಾ ಮನೆ ಮೇಲೆ ಬಿಜೆಪಿ ಗೂಂಡಾಗಳಿಂದ ಹಲ್ಲೆ: ಆಪ್ ಆರೋಪ

ಆದಾಗ್ಯೂ, ಎನ್‌ಸಿಪಿ ಮತ್ತು ಕಾಂಗ್ರೆಸ್ ಎರಡೂ ಯುಪಿಎನಲ್ಲಿ ಯಾವುದೇ ನಾಯಕತ್ವ ಬದಲಾವಣೆಯ ಕುರಿತ ವಿಷಯವನ್ನು ಅಲ್ಲಗಳೆದಿದ್ದು, “ಅಂತಹ ಪ್ರಸ್ತಾಪಕ್ಕೆ ಸಂಬಂಧಿಸಿದಂತೆ ಯುಪಿಎ ಒಳಗೆ ಯಾವುದೇ ಚರ್ಚೆ ನಡೆದಿಲ್ಲ” ಎಂದು ಎನ್‌ಸಿಪಿ ಮುಖ್ಯ ವಕ್ತಾರ ಮಹೇಶ್ ತಪಾಸೆ ಹೇಳಿದ್ದಾರೆ.

ರೈತರ ಆಂದೋಲನದಿಂದ ಗಮನವನ್ನು ಬೇರೆಡೆ ಸೆಳೆಯಲು ಪಟ್ಟಭದ್ರ ಹಿತಾಸಕ್ತಿಗಳಿಂದ ಈ ಸುದ್ದಿ ಹರಡಿದೆ ಎಂದು ಕಾಂಗ್ರೆಸ್ ಹೇಳಿದೆ.


ಇದನ್ನೂ ಓದಿ: ಭೂಸುಧಾರಣಾ ಮಸೂದೆಗೆ ಸಹಿ ಇಲ್ಲ, ರೈತರೊಡನೆ ಚರ್ಚಿಸಲು ಸರ್ಕಾರಕ್ಕೆ ನಿರ್ದೇಶನ ನೀಡುತ್ತೇನೆ: ರಾಜ್ಯಪಾಲ ವಾಜುಬಾಯಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Vilas Latthe
    modala kelasa party merger.. aste satya>> < YIVARWELLA BITTU HODAVARE ALLAVE?!>.
    · Reply · Share · 2 m
    Vilas Latthe
    we feel party musytnot be devided for the cause of presaidentship… I. nijalinga cong.. II. DEVARASJ CONG. now if time odd!

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...