Homeಮುಖಪುಟಎನ್‌ಸಿಪಿ ಬಲಾಬಲ: ಅಜಿತ್ ಪವಾರ್ ಪರ 29, ಶರದ್ ಪವಾರ್ ಪರ 13 ಶಾಸಕರು

ಎನ್‌ಸಿಪಿ ಬಲಾಬಲ: ಅಜಿತ್ ಪವಾರ್ ಪರ 29, ಶರದ್ ಪವಾರ್ ಪರ 13 ಶಾಸಕರು

- Advertisement -
- Advertisement -

ಎನ್‌ಸಿಪಿ ಮುಖ್ಯಸ್ಥ, ಶರದ್ ಪವಾರ್ ವಿರುದ್ಧವೇ ಬಂಡಾಯವೆದ್ದಿರುವ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ತಮ್ಮ ಪರವಾಗಿರುವ ಶಾಸಕರ ಸಂಖ್ಯಾಬಲ ಪ್ರದರ್ಶನ ಮಾಡಿದ್ದಾರೆ.

ಬುಧವಾರ ಮುಂಬೈನಲ್ಲಿ ಕರೆದಿದ್ದ ಪಕ್ಷದ ಸಭೆಯಲ್ಲಿ 53 ಎನ್‌ಸಿಪಿ ಶಾಸಕರ ಪೈಕಿ 29 ಶಾಸಕರು ಹಾಜರಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಅಲ್ಲದೆ ಈ ಸಂಖ್ಯೆ ಇನ್ನೂ ಹೆಚ್ಚಾಗಲಿದೆ ಎಂದು ಅಜಿತ್ ಪವಾರ್ ಅವರು ಹೇಳಿದ್ದಾರೆ. ಉಪನಗರ ಬಾಂದ್ರಾದಲ್ಲಿ ನಡೆಯುತ್ತಿರುವ ಅಜಿತ್ ಪವಾರ್ ಶಕ್ತಿ ಪ್ರದರ್ಶನದ ಸಭೆಯಲ್ಲಿ ಎಂಟು ಎನ್‌ಸಿಪಿ ಎಂಎಲ್‌ಸಿಗಳ ಪೈಕಿ ಐವರು ಭಾಗವಹಿಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಅನಂತ್ ಕಲ್ಸೆ ಪ್ರಕಾರ, ಅಜಿತ್ ಪವಾರ್ ಅವರ ಬಣ ಅನರ್ಹತೆಯಿಂದ ತಪ್ಪಿಸಲು ಕನಿಷ್ಠ 36 ಶಾಸಕರ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ.

ಅಜಿತ್ ಪವಾರ್ ಅವರು ಎನ್‌ಸಿಪಿಯ ಬಹುಪಾಲು ಶಾಸಕರ ಬೆಂಬಲ ತಮಗೆ ಇದೆ ಎಂಬುದನ್ನು ಸಾಬೀತುಪಡಿಸಲು ಮುಂಬೈನ ಬಾಂದ್ರಾದಲ್ಲಿ ಸಭೆ ಕರೆದಿದ್ದರು. ಇದಕ್ಕೆ ಪ್ರತಿಯಾಗಿ ಶರದ್ ಪವಾರ್ ಅವರು ದಕ್ಷಿಣ ಮುಂಬೈನ ಯಶವಂತರಾವ್ ಚವಾಣ್ ಸೆಂಟರ್ ನಲ್ಲಿ ಪಕ್ಷದ ನಾಯಕರ ಸಭೆ ಕರೆದಿದ್ದರು.

ಶರದ್ ಪವಾರ್ ಅವರ ಸಭೆಯಲ್ಲಿ 13 ಶಾಸಕರು ಭಾಗವಹಿಸಿದ್ದಾರೆ ಎನ್ನಲಾಗಿದೆ. ಅನಿಲ್ ದೇಶ್‌ಮುಖ್, ಅಶೋಕ್ ಪವಾರ್, ರೋಹಿತ್ ಪವಾರ್, ಕಿರಣ್ ಲಹ್ಮತೆ ಸೇರಿದಂತೆ ಕೆಲವೇ ಮಂದಿ ಶರದ್ ಪವಾರ್ ಅವರಿಗೆ ಬೆಂಬಲ ತೋರಿಸಿದ್ದಾರೆ. ಈ ಸಭೆಗೆ ಎನ್‌ಸಿಪಿಯ ಎಲ್ಲಾ ಶಾಸಕರೂ ಹಾಜರಾಗಬೇಕು ಎಂದು ಪಕ್ಷದ ಮುಖ್ಯ ವಿಪ್ ಜಿತೇಂದ್ರ ಅವ್ಹಾದ್ ಅವರು ವಿಪ್ ಜಾರಿ ಮಾಡಿದ್ದರು.

ಐದು ಸಂಸದರಾದ ಶ್ರೀನಿವಾಸ್ ಪಾಟೀಲ್(ಲೋಕಸಭೆ), ಸುಪ್ರಿಯಾ ಸುಳೆ(ಲೋಕಸಭೆ), ಅಮೋಲ್ ಕೋಲ್ಹೆ (ಲೋಕಸಭೆ), ಫೌಜಿಯಾ ಖಾನ್ (ರಾಜ್ಯಸಭೆ) ವಂದನಾ ಚವಾಣ್ (ರಾಜ್ಯಸಭೆ) ಮತ್ತು ಮೂವರು ಎಂಎಲ್ಸಿಗಳಾದ ಶಶಿಕಾಂತ್ ಶಿಂಧೆ, ಬಾಬಾಜಾನಿ ದುರಾನಿ, ಏಕನಾಥ್ ಖಡ್ಸೆ ಅವರು ಸಹ ಶರದ್ ಪವಾರ್ ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ಅಜಿತ್ ಪವಾರ್ ಎನ್‌ಸಿಪಿ ಬಣ ಸೇರ್ಪಡೆ: ಶಿಂಧೆ ಶಿವಸೇನೆ ಶಾಸಕರಲ್ಲಿ ಭುಗಿಲೆದ್ದ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...