Homeಮುಖಪುಟಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

ಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗುಂಪಿಗೆ ಸೇರಿದ ಎನ್‌ಸಿಪಿ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶರದ್ ಪವಾರ್ ಬಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಫೆಬ್ರವರಿ 15ರವರೆಗೆ ಸಮಯ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ಮುಂದೆ, ಸ್ಪೀಕರ್ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅನರ್ಹತೆ ಅರ್ಜಿಗಳ ಕುರಿತು ಆದೇಶಗಳನ್ನು ಹೊರಡಿಸಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಮನವಿ ಸಲ್ಲಿಸಿದರು.

ಇದಕ್ಕೂ ಮೊದಲು, ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸರ್ಕಾರದ ಭಾಗವಾಗಿ ಪಕ್ಷ ಬದಲಿಸಿದ ಎನ್‌ಸಿಪಿ ಶಾಸಕರಿಗೆ ಸಂಬಂಧಿಸಿದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಸ್ಪೀಕರ್‌ಗೆ ಜನವರಿ 31 ರವರೆಗೆ ಕಾಲಾವಕಾಶ ನೀಡಿತ್ತು.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಶರದ್ ಪವಾರ್ ಬಣದ ಜಯಂತ್ ಪಾಟೀಲ್ ಅವರು ಅಜಿತ್ ಪವಾರ್ ಮತ್ತು ಅವರಿಗೆ ನಿಷ್ಠರಾಗಿರುವ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ತ್ವರಿತವಾಗಿ ತೀರ್ಮಾನಿಸುವಂತೆ ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ.

‘ಜನವರಿ 30 ರಂದು ಸಾಕ್ಷ್ಯಾಧಾರಗಳ ಕ್ರಾಸ್ ಎಕ್ಸಾಮಿನೇಷನ್ ಮುಗಿಯುತ್ತದೆ ಮತ್ತು ಅಂತಿಮ ವಿಚಾರಣೆಯು ಜನವರಿ 31 ರಂದು ಮುಕ್ತಾಯಗೊಳ್ಳುತ್ತದೆ. ತೀರ್ಪುಗಳನ್ನು ಪ್ರಕಟಿಸಲು ನಾವು ಮೂರು ವಾರಗಳ ಕಾಲ ಕೇಳುತ್ತಿದ್ದೇವೆ. ಇದು ವಾಸ್ತವಿಕ ಸಮಯ ಎಂದು ನಾವು ಕೇಳುತ್ತಿದ್ದೇವೆ’ ಎಂದು ಮೆಹ್ತಾ ಸುಪ್ರೀಂ ಪೀಠದ ಮುಂದೆ ಮನವಿ ಸಲ್ಲಿಸಿದರು.

ಮೂರು ವಾರಗಳ ವಿಸ್ತರಣೆಯನ್ನು ವಿರೋಧಿಸಿದ ಜಯಂತ್ ಪಾಟೀಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ನಾರ್ವೇಕರ್ ತೀರ್ಪು ಬರೆಯಲು ಒಂದು ವಾರ ಹೆಚ್ಚುವರಿ ಸಮಯ ಸಾಕು ಎಂದು ಹೇಳಿದರು.

ವಾದ ಆಲಿಸಿದ ನಂತರ, ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಶರದ್ ಪವಾರ್ ಪಾಳಯವು 40 ಶಾಸಕರು ಮತ್ತು 5 ಎಂಎಲ್‌ಸಿಗಳ ವಿರುದ್ಧ ಸಲ್ಲಿಸಿರುವ ಅನರ್ಹತೆ ಅರ್ಜಿಗಳ ತೀರ್ಪು ನೀಡಲು ಫೆಬ್ರವರಿ 15 ರವರೆಗೆ ಸ್ಪೀಕರ್‌ಗೆ ಸಮಯ ನೀಡುವುದಾಗಿ ಪೀಠ ಹೇಳಿದೆ.

ಶರದ್ ಪವಾರ್ ಸಹೋದರ ಸಂಬಂಧಿಯಾಗಿರುವ ಅಜಿತ್ ಪವಾರ್ ಪಕ್ಷವನ್ನು ವಿಭಜಿಸಿದ ನಂತರ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿಯಾಗಿ ಸೇರ್ಪಡೆಯಾದರು. ಮೇ 2022 ರಲ್ಲಿ ಶಿವಸೇನೆಯಲ್ಲಿನ ವಿಭಜನೆಯ ನಂತರ ಆಗಿನ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿದ ನಂತರ ಮತ್ತು ಏಕನಾಥ್ ಶಿಂಧೆ ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ಅಜಿತ್ ಬೆಂಬಲಿಗ ಶಾಸಕರ ವಿರುದ್ಧ ಪಾಟೀಲ್ ಅವರು ಸೆಪ್ಟೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಕಳೆದ ಮೂರು ತಿಂಗಳಿನಿಂದ ನಾರ್ವೇಕರ್ ಅನರ್ಹತೆ ಅರ್ಜಿಗಳ ಮೇಲೆ ಕುಳಿತಿದ್ದಾರೆ ಎಂದು ವಿಷಾದಿಸಿದರು. ಬಂಡಾಯ ಶಾಸಕರ ಅನರ್ಹತೆಗೆ ಶರದ್ ಪವಾರ್ ಪಾಳಯ ಮೂರು ಅರ್ಜಿಗಳನ್ನು ಸಲ್ಲಿಸಿದೆ.

ಮೊದಲ ಅರ್ಜಿಯನ್ನು ಅಜಿತ್ ಪವಾರ್ ಸೇರಿದಂತೆ ಒಂಬತ್ತು ಶಾಸಕರ ವಿರುದ್ಧ ಸಲ್ಲಿಸಲಾಯಿತು; ಎರಡನೇ ಅರ್ಜಿ 20 ಶಾಸಕರ ವಿರುದ್ಧ; ಮತ್ತು 11 ಶಾಸಕರ ವಿರುದ್ಧ ಮೂರನೇ ಅರ್ಜಿ ಸಲ್ಲಿಸಲಾಗಿದೆ.

ಅಜಿತ್ ಪವಾರ್ ಬಣವು ಹತ್ತು ಎನ್‌ಸಿಪಿ ಶಾಸಕರು ಮತ್ತು ಮೂವರು ಎಂಎಲ್‌ಸಿಗಳ ವಿರುದ್ಧ ಅನರ್ಹತೆ ಅರ್ಜಿಯನ್ನು ಸಲ್ಲಿಸಿದೆ. ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಬಳಸಲು ಅನುಮತಿ ಕೋರಿ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಅರ್ಜಿ ಸಲ್ಲಿಸಿದೆ. ಸದ್ಯದಲ್ಲೇ ಪ್ರಕರಣದ ತೀರ್ಪು ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ; ‘ಕಾಂತರಾಜು ಆಯೋಗದ ವರದಿ ಸ್ವೀಕರಿಸುತ್ತೇನೆ…’; ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...