Homeಮುಖಪುಟಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

ಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗುಂಪಿಗೆ ಸೇರಿದ ಎನ್‌ಸಿಪಿ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶರದ್ ಪವಾರ್ ಬಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಫೆಬ್ರವರಿ 15ರವರೆಗೆ ಸಮಯ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ಮುಂದೆ, ಸ್ಪೀಕರ್ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅನರ್ಹತೆ ಅರ್ಜಿಗಳ ಕುರಿತು ಆದೇಶಗಳನ್ನು ಹೊರಡಿಸಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಮನವಿ ಸಲ್ಲಿಸಿದರು.

ಇದಕ್ಕೂ ಮೊದಲು, ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸರ್ಕಾರದ ಭಾಗವಾಗಿ ಪಕ್ಷ ಬದಲಿಸಿದ ಎನ್‌ಸಿಪಿ ಶಾಸಕರಿಗೆ ಸಂಬಂಧಿಸಿದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಸ್ಪೀಕರ್‌ಗೆ ಜನವರಿ 31 ರವರೆಗೆ ಕಾಲಾವಕಾಶ ನೀಡಿತ್ತು.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಶರದ್ ಪವಾರ್ ಬಣದ ಜಯಂತ್ ಪಾಟೀಲ್ ಅವರು ಅಜಿತ್ ಪವಾರ್ ಮತ್ತು ಅವರಿಗೆ ನಿಷ್ಠರಾಗಿರುವ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ತ್ವರಿತವಾಗಿ ತೀರ್ಮಾನಿಸುವಂತೆ ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ.

‘ಜನವರಿ 30 ರಂದು ಸಾಕ್ಷ್ಯಾಧಾರಗಳ ಕ್ರಾಸ್ ಎಕ್ಸಾಮಿನೇಷನ್ ಮುಗಿಯುತ್ತದೆ ಮತ್ತು ಅಂತಿಮ ವಿಚಾರಣೆಯು ಜನವರಿ 31 ರಂದು ಮುಕ್ತಾಯಗೊಳ್ಳುತ್ತದೆ. ತೀರ್ಪುಗಳನ್ನು ಪ್ರಕಟಿಸಲು ನಾವು ಮೂರು ವಾರಗಳ ಕಾಲ ಕೇಳುತ್ತಿದ್ದೇವೆ. ಇದು ವಾಸ್ತವಿಕ ಸಮಯ ಎಂದು ನಾವು ಕೇಳುತ್ತಿದ್ದೇವೆ’ ಎಂದು ಮೆಹ್ತಾ ಸುಪ್ರೀಂ ಪೀಠದ ಮುಂದೆ ಮನವಿ ಸಲ್ಲಿಸಿದರು.

ಮೂರು ವಾರಗಳ ವಿಸ್ತರಣೆಯನ್ನು ವಿರೋಧಿಸಿದ ಜಯಂತ್ ಪಾಟೀಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ನಾರ್ವೇಕರ್ ತೀರ್ಪು ಬರೆಯಲು ಒಂದು ವಾರ ಹೆಚ್ಚುವರಿ ಸಮಯ ಸಾಕು ಎಂದು ಹೇಳಿದರು.

ವಾದ ಆಲಿಸಿದ ನಂತರ, ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಶರದ್ ಪವಾರ್ ಪಾಳಯವು 40 ಶಾಸಕರು ಮತ್ತು 5 ಎಂಎಲ್‌ಸಿಗಳ ವಿರುದ್ಧ ಸಲ್ಲಿಸಿರುವ ಅನರ್ಹತೆ ಅರ್ಜಿಗಳ ತೀರ್ಪು ನೀಡಲು ಫೆಬ್ರವರಿ 15 ರವರೆಗೆ ಸ್ಪೀಕರ್‌ಗೆ ಸಮಯ ನೀಡುವುದಾಗಿ ಪೀಠ ಹೇಳಿದೆ.

ಶರದ್ ಪವಾರ್ ಸಹೋದರ ಸಂಬಂಧಿಯಾಗಿರುವ ಅಜಿತ್ ಪವಾರ್ ಪಕ್ಷವನ್ನು ವಿಭಜಿಸಿದ ನಂತರ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿಯಾಗಿ ಸೇರ್ಪಡೆಯಾದರು. ಮೇ 2022 ರಲ್ಲಿ ಶಿವಸೇನೆಯಲ್ಲಿನ ವಿಭಜನೆಯ ನಂತರ ಆಗಿನ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿದ ನಂತರ ಮತ್ತು ಏಕನಾಥ್ ಶಿಂಧೆ ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ಅಜಿತ್ ಬೆಂಬಲಿಗ ಶಾಸಕರ ವಿರುದ್ಧ ಪಾಟೀಲ್ ಅವರು ಸೆಪ್ಟೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಕಳೆದ ಮೂರು ತಿಂಗಳಿನಿಂದ ನಾರ್ವೇಕರ್ ಅನರ್ಹತೆ ಅರ್ಜಿಗಳ ಮೇಲೆ ಕುಳಿತಿದ್ದಾರೆ ಎಂದು ವಿಷಾದಿಸಿದರು. ಬಂಡಾಯ ಶಾಸಕರ ಅನರ್ಹತೆಗೆ ಶರದ್ ಪವಾರ್ ಪಾಳಯ ಮೂರು ಅರ್ಜಿಗಳನ್ನು ಸಲ್ಲಿಸಿದೆ.

ಮೊದಲ ಅರ್ಜಿಯನ್ನು ಅಜಿತ್ ಪವಾರ್ ಸೇರಿದಂತೆ ಒಂಬತ್ತು ಶಾಸಕರ ವಿರುದ್ಧ ಸಲ್ಲಿಸಲಾಯಿತು; ಎರಡನೇ ಅರ್ಜಿ 20 ಶಾಸಕರ ವಿರುದ್ಧ; ಮತ್ತು 11 ಶಾಸಕರ ವಿರುದ್ಧ ಮೂರನೇ ಅರ್ಜಿ ಸಲ್ಲಿಸಲಾಗಿದೆ.

ಅಜಿತ್ ಪವಾರ್ ಬಣವು ಹತ್ತು ಎನ್‌ಸಿಪಿ ಶಾಸಕರು ಮತ್ತು ಮೂವರು ಎಂಎಲ್‌ಸಿಗಳ ವಿರುದ್ಧ ಅನರ್ಹತೆ ಅರ್ಜಿಯನ್ನು ಸಲ್ಲಿಸಿದೆ. ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಬಳಸಲು ಅನುಮತಿ ಕೋರಿ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಅರ್ಜಿ ಸಲ್ಲಿಸಿದೆ. ಸದ್ಯದಲ್ಲೇ ಪ್ರಕರಣದ ತೀರ್ಪು ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ; ‘ಕಾಂತರಾಜು ಆಯೋಗದ ವರದಿ ಸ್ವೀಕರಿಸುತ್ತೇನೆ…’; ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿಎಂ ಭರವಸೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...