Homeಮುಖಪುಟಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

ಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗುಂಪಿಗೆ ಸೇರಿದ ಎನ್‌ಸಿಪಿ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶರದ್ ಪವಾರ್ ಬಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಫೆಬ್ರವರಿ 15ರವರೆಗೆ ಸಮಯ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ಮುಂದೆ, ಸ್ಪೀಕರ್ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅನರ್ಹತೆ ಅರ್ಜಿಗಳ ಕುರಿತು ಆದೇಶಗಳನ್ನು ಹೊರಡಿಸಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಮನವಿ ಸಲ್ಲಿಸಿದರು.

ಇದಕ್ಕೂ ಮೊದಲು, ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸರ್ಕಾರದ ಭಾಗವಾಗಿ ಪಕ್ಷ ಬದಲಿಸಿದ ಎನ್‌ಸಿಪಿ ಶಾಸಕರಿಗೆ ಸಂಬಂಧಿಸಿದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಸ್ಪೀಕರ್‌ಗೆ ಜನವರಿ 31 ರವರೆಗೆ ಕಾಲಾವಕಾಶ ನೀಡಿತ್ತು.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಶರದ್ ಪವಾರ್ ಬಣದ ಜಯಂತ್ ಪಾಟೀಲ್ ಅವರು ಅಜಿತ್ ಪವಾರ್ ಮತ್ತು ಅವರಿಗೆ ನಿಷ್ಠರಾಗಿರುವ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ತ್ವರಿತವಾಗಿ ತೀರ್ಮಾನಿಸುವಂತೆ ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ.

‘ಜನವರಿ 30 ರಂದು ಸಾಕ್ಷ್ಯಾಧಾರಗಳ ಕ್ರಾಸ್ ಎಕ್ಸಾಮಿನೇಷನ್ ಮುಗಿಯುತ್ತದೆ ಮತ್ತು ಅಂತಿಮ ವಿಚಾರಣೆಯು ಜನವರಿ 31 ರಂದು ಮುಕ್ತಾಯಗೊಳ್ಳುತ್ತದೆ. ತೀರ್ಪುಗಳನ್ನು ಪ್ರಕಟಿಸಲು ನಾವು ಮೂರು ವಾರಗಳ ಕಾಲ ಕೇಳುತ್ತಿದ್ದೇವೆ. ಇದು ವಾಸ್ತವಿಕ ಸಮಯ ಎಂದು ನಾವು ಕೇಳುತ್ತಿದ್ದೇವೆ’ ಎಂದು ಮೆಹ್ತಾ ಸುಪ್ರೀಂ ಪೀಠದ ಮುಂದೆ ಮನವಿ ಸಲ್ಲಿಸಿದರು.

ಮೂರು ವಾರಗಳ ವಿಸ್ತರಣೆಯನ್ನು ವಿರೋಧಿಸಿದ ಜಯಂತ್ ಪಾಟೀಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ನಾರ್ವೇಕರ್ ತೀರ್ಪು ಬರೆಯಲು ಒಂದು ವಾರ ಹೆಚ್ಚುವರಿ ಸಮಯ ಸಾಕು ಎಂದು ಹೇಳಿದರು.

ವಾದ ಆಲಿಸಿದ ನಂತರ, ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಶರದ್ ಪವಾರ್ ಪಾಳಯವು 40 ಶಾಸಕರು ಮತ್ತು 5 ಎಂಎಲ್‌ಸಿಗಳ ವಿರುದ್ಧ ಸಲ್ಲಿಸಿರುವ ಅನರ್ಹತೆ ಅರ್ಜಿಗಳ ತೀರ್ಪು ನೀಡಲು ಫೆಬ್ರವರಿ 15 ರವರೆಗೆ ಸ್ಪೀಕರ್‌ಗೆ ಸಮಯ ನೀಡುವುದಾಗಿ ಪೀಠ ಹೇಳಿದೆ.

ಶರದ್ ಪವಾರ್ ಸಹೋದರ ಸಂಬಂಧಿಯಾಗಿರುವ ಅಜಿತ್ ಪವಾರ್ ಪಕ್ಷವನ್ನು ವಿಭಜಿಸಿದ ನಂತರ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿಯಾಗಿ ಸೇರ್ಪಡೆಯಾದರು. ಮೇ 2022 ರಲ್ಲಿ ಶಿವಸೇನೆಯಲ್ಲಿನ ವಿಭಜನೆಯ ನಂತರ ಆಗಿನ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿದ ನಂತರ ಮತ್ತು ಏಕನಾಥ್ ಶಿಂಧೆ ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ಅಜಿತ್ ಬೆಂಬಲಿಗ ಶಾಸಕರ ವಿರುದ್ಧ ಪಾಟೀಲ್ ಅವರು ಸೆಪ್ಟೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಕಳೆದ ಮೂರು ತಿಂಗಳಿನಿಂದ ನಾರ್ವೇಕರ್ ಅನರ್ಹತೆ ಅರ್ಜಿಗಳ ಮೇಲೆ ಕುಳಿತಿದ್ದಾರೆ ಎಂದು ವಿಷಾದಿಸಿದರು. ಬಂಡಾಯ ಶಾಸಕರ ಅನರ್ಹತೆಗೆ ಶರದ್ ಪವಾರ್ ಪಾಳಯ ಮೂರು ಅರ್ಜಿಗಳನ್ನು ಸಲ್ಲಿಸಿದೆ.

ಮೊದಲ ಅರ್ಜಿಯನ್ನು ಅಜಿತ್ ಪವಾರ್ ಸೇರಿದಂತೆ ಒಂಬತ್ತು ಶಾಸಕರ ವಿರುದ್ಧ ಸಲ್ಲಿಸಲಾಯಿತು; ಎರಡನೇ ಅರ್ಜಿ 20 ಶಾಸಕರ ವಿರುದ್ಧ; ಮತ್ತು 11 ಶಾಸಕರ ವಿರುದ್ಧ ಮೂರನೇ ಅರ್ಜಿ ಸಲ್ಲಿಸಲಾಗಿದೆ.

ಅಜಿತ್ ಪವಾರ್ ಬಣವು ಹತ್ತು ಎನ್‌ಸಿಪಿ ಶಾಸಕರು ಮತ್ತು ಮೂವರು ಎಂಎಲ್‌ಸಿಗಳ ವಿರುದ್ಧ ಅನರ್ಹತೆ ಅರ್ಜಿಯನ್ನು ಸಲ್ಲಿಸಿದೆ. ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಬಳಸಲು ಅನುಮತಿ ಕೋರಿ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಅರ್ಜಿ ಸಲ್ಲಿಸಿದೆ. ಸದ್ಯದಲ್ಲೇ ಪ್ರಕರಣದ ತೀರ್ಪು ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ; ‘ಕಾಂತರಾಜು ಆಯೋಗದ ವರದಿ ಸ್ವೀಕರಿಸುತ್ತೇನೆ…’; ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...