Homeಮುಖಪುಟಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

ಎನ್‌ಸಿಪಿ V/s ಎನ್‌ಸಿಪಿ: ಫೆ.15ರೊಳಗೆ ಶಾಸಕರ ಅನರ್ಹತೆ ನಿರ್ಧರಿಸಿ; ಮಹಾ ಸ್ಪೀಕರ್‌ಗೆ ಸುಪ್ರೀಂ ಸೂಚನೆ

- Advertisement -
- Advertisement -

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಗುಂಪಿಗೆ ಸೇರಿದ ಎನ್‌ಸಿಪಿ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶರದ್ ಪವಾರ್ ಬಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂ ಕೋರ್ಟ್ ಫೆಬ್ರವರಿ 15ರವರೆಗೆ ಸಮಯ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠದ ಮುಂದೆ, ಸ್ಪೀಕರ್ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಅನರ್ಹತೆ ಅರ್ಜಿಗಳ ಕುರಿತು ಆದೇಶಗಳನ್ನು ಹೊರಡಿಸಲು ಇನ್ನೂ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಮನವಿ ಸಲ್ಲಿಸಿದರು.

ಇದಕ್ಕೂ ಮೊದಲು, ಏಕನಾಥ್ ಶಿಂಧೆ ನೇತೃತ್ವದ ರಾಜ್ಯ ಸರ್ಕಾರದ ಭಾಗವಾಗಿ ಪಕ್ಷ ಬದಲಿಸಿದ ಎನ್‌ಸಿಪಿ ಶಾಸಕರಿಗೆ ಸಂಬಂಧಿಸಿದ ಅನರ್ಹತೆ ಅರ್ಜಿಗಳನ್ನು ನಿರ್ಧರಿಸಲು ಸುಪ್ರೀಂ ಕೋರ್ಟ್ ಸ್ಪೀಕರ್‌ಗೆ ಜನವರಿ 31 ರವರೆಗೆ ಕಾಲಾವಕಾಶ ನೀಡಿತ್ತು.

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಶರದ್ ಪವಾರ್ ಬಣದ ಜಯಂತ್ ಪಾಟೀಲ್ ಅವರು ಅಜಿತ್ ಪವಾರ್ ಮತ್ತು ಅವರಿಗೆ ನಿಷ್ಠರಾಗಿರುವ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ತ್ವರಿತವಾಗಿ ತೀರ್ಮಾನಿಸುವಂತೆ ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಿದ್ದಾರೆ.

‘ಜನವರಿ 30 ರಂದು ಸಾಕ್ಷ್ಯಾಧಾರಗಳ ಕ್ರಾಸ್ ಎಕ್ಸಾಮಿನೇಷನ್ ಮುಗಿಯುತ್ತದೆ ಮತ್ತು ಅಂತಿಮ ವಿಚಾರಣೆಯು ಜನವರಿ 31 ರಂದು ಮುಕ್ತಾಯಗೊಳ್ಳುತ್ತದೆ. ತೀರ್ಪುಗಳನ್ನು ಪ್ರಕಟಿಸಲು ನಾವು ಮೂರು ವಾರಗಳ ಕಾಲ ಕೇಳುತ್ತಿದ್ದೇವೆ. ಇದು ವಾಸ್ತವಿಕ ಸಮಯ ಎಂದು ನಾವು ಕೇಳುತ್ತಿದ್ದೇವೆ’ ಎಂದು ಮೆಹ್ತಾ ಸುಪ್ರೀಂ ಪೀಠದ ಮುಂದೆ ಮನವಿ ಸಲ್ಲಿಸಿದರು.

ಮೂರು ವಾರಗಳ ವಿಸ್ತರಣೆಯನ್ನು ವಿರೋಧಿಸಿದ ಜಯಂತ್ ಪಾಟೀಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ನಾರ್ವೇಕರ್ ತೀರ್ಪು ಬರೆಯಲು ಒಂದು ವಾರ ಹೆಚ್ಚುವರಿ ಸಮಯ ಸಾಕು ಎಂದು ಹೇಳಿದರು.

ವಾದ ಆಲಿಸಿದ ನಂತರ, ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಶರದ್ ಪವಾರ್ ಪಾಳಯವು 40 ಶಾಸಕರು ಮತ್ತು 5 ಎಂಎಲ್‌ಸಿಗಳ ವಿರುದ್ಧ ಸಲ್ಲಿಸಿರುವ ಅನರ್ಹತೆ ಅರ್ಜಿಗಳ ತೀರ್ಪು ನೀಡಲು ಫೆಬ್ರವರಿ 15 ರವರೆಗೆ ಸ್ಪೀಕರ್‌ಗೆ ಸಮಯ ನೀಡುವುದಾಗಿ ಪೀಠ ಹೇಳಿದೆ.

ಶರದ್ ಪವಾರ್ ಸಹೋದರ ಸಂಬಂಧಿಯಾಗಿರುವ ಅಜಿತ್ ಪವಾರ್ ಪಕ್ಷವನ್ನು ವಿಭಜಿಸಿದ ನಂತರ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಉಪಮುಖ್ಯಮಂತ್ರಿಯಾಗಿ ಸೇರ್ಪಡೆಯಾದರು. ಮೇ 2022 ರಲ್ಲಿ ಶಿವಸೇನೆಯಲ್ಲಿನ ವಿಭಜನೆಯ ನಂತರ ಆಗಿನ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿದ ನಂತರ ಮತ್ತು ಏಕನಾಥ್ ಶಿಂಧೆ ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.

ಅಜಿತ್ ಬೆಂಬಲಿಗ ಶಾಸಕರ ವಿರುದ್ಧ ಪಾಟೀಲ್ ಅವರು ಸೆಪ್ಟೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಕಳೆದ ಮೂರು ತಿಂಗಳಿನಿಂದ ನಾರ್ವೇಕರ್ ಅನರ್ಹತೆ ಅರ್ಜಿಗಳ ಮೇಲೆ ಕುಳಿತಿದ್ದಾರೆ ಎಂದು ವಿಷಾದಿಸಿದರು. ಬಂಡಾಯ ಶಾಸಕರ ಅನರ್ಹತೆಗೆ ಶರದ್ ಪವಾರ್ ಪಾಳಯ ಮೂರು ಅರ್ಜಿಗಳನ್ನು ಸಲ್ಲಿಸಿದೆ.

ಮೊದಲ ಅರ್ಜಿಯನ್ನು ಅಜಿತ್ ಪವಾರ್ ಸೇರಿದಂತೆ ಒಂಬತ್ತು ಶಾಸಕರ ವಿರುದ್ಧ ಸಲ್ಲಿಸಲಾಯಿತು; ಎರಡನೇ ಅರ್ಜಿ 20 ಶಾಸಕರ ವಿರುದ್ಧ; ಮತ್ತು 11 ಶಾಸಕರ ವಿರುದ್ಧ ಮೂರನೇ ಅರ್ಜಿ ಸಲ್ಲಿಸಲಾಗಿದೆ.

ಅಜಿತ್ ಪವಾರ್ ಬಣವು ಹತ್ತು ಎನ್‌ಸಿಪಿ ಶಾಸಕರು ಮತ್ತು ಮೂವರು ಎಂಎಲ್‌ಸಿಗಳ ವಿರುದ್ಧ ಅನರ್ಹತೆ ಅರ್ಜಿಯನ್ನು ಸಲ್ಲಿಸಿದೆ. ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಬಳಸಲು ಅನುಮತಿ ಕೋರಿ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಅರ್ಜಿ ಸಲ್ಲಿಸಿದೆ. ಸದ್ಯದಲ್ಲೇ ಪ್ರಕರಣದ ತೀರ್ಪು ಬರುವ ನಿರೀಕ್ಷೆ ಇದೆ.

ಇದನ್ನೂ ಓದಿ; ‘ಕಾಂತರಾಜು ಆಯೋಗದ ವರದಿ ಸ್ವೀಕರಿಸುತ್ತೇನೆ…’; ಶೋಷಿತರ ಜಾಗೃತಿ ಸಮಾವೇಶದಲ್ಲಿ ಸಿಎಂ ಭರವಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...