Homeಮುಖಪುಟಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ ನಿರ್ಧಾರವನ್ನು ತಿರಸ್ಕರಿಸಿದ NCPಯ ಸಮಿತಿ

ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ ನಿರ್ಧಾರವನ್ನು ತಿರಸ್ಕರಿಸಿದ NCPಯ ಸಮಿತಿ

- Advertisement -
- Advertisement -

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಹಿರಿಯ ರಾಜಕಾರಣಿ ಶರದ್ ಪವಾರ್ ಅವರ ನಿರ್ಧಾರವನ್ನು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ 18 ಸದಸ್ಯರ ಸಮಿತಿಯು ತಿರಸ್ಕರಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಈ ಸಮಿತಿಯಲ್ಲಿ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ, ಸೋದರಳಿಯ ಅಜಿತ್ ಪವಾರ್ ಮತ್ತು ಹಿರಿಯ ನಾಯಕರಾದ ಪ್ರಫುಲ್ ಪಟೇಲ್, ಛಗನ್ ಭುಜಬಲ್, ದಿಲೀಪ್ ವಾಲ್ಸೆ-ಪಾಟೀಲ್ ಮತ್ತು ಅನಿಲ್ ದೇಶಮುಖ್ ಸೇರಿದಂತೆ ಇತರರನ್ನು ಇದ್ದಾರೆ.

”[ಶರದ್] ಪವಾರ್ ಸಾಹೇಬ್ ನಮಗೆ ತಿಳಿಸದೆ ನಿರ್ಧಾರ ತೆಗೆದುಕೊಂಡರು. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಎಲ್ಲಾ ಬೇಡಿಕೆಗಳನ್ನು ಪರಿಗಣಿಸಿ ನಾವು ಇಂದು ಸಭೆ ನಡೆಸಿದ್ದೇವೆ ಮತ್ತು ಸಮಿತಿಯು ಪವಾರ್ ಅವರ ರಾಜೀನಾಮೆಯನ್ನು ತಿರಸ್ಕರಿಸುವ ಪ್ರಸ್ತಾಪವನ್ನು ಸರ್ವಾನುಮತದಿಂದ ಅಂಗೀಕರಿಸಿದೆ” ಎಂದು ಹಿರಿಯ ನಾಯಕ ಪ್ರಫುಲ್ ಪಟೇಲ್ ಹೇಳಿದರು.

1999ರಲ್ಲಿ ಪಕ್ಷವನ್ನು ರಚಿಸಿದಾಗಿನಿಂದ ಪವಾರ್ ಅವರು ಈ ಹುದ್ದೆಯನ್ನು ಅಲಂಕರಿಸಿದ್ದರು. ಅವರು ಮೇ 2ರಂದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆದರೇ ಇದೀಗ ಸಮಿತಿಯು ಅವರ ರಾಜೀನಾಮೆಯನ್ನು ತಿರಸ್ಕರಿಸಿದೆ.

”ರಾಜ್ಯಸಭೆಯಲ್ಲಿ ನನಗೆ ಮೂರು ವರ್ಷಗಳ ಅಧಿಕಾರವಿದೆ, ಇನ್ನು ಮುಂದೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಈ ಮೂರು ವರ್ಷಗಳಲ್ಲಿ, ನಾನು ರಾಜ್ಯ ಮತ್ತು ದೇಶಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತೇನೆ. ನಾನು ಯಾವುದೇ ಹೆಚ್ಚುವರಿ ಜವಾಬ್ದಾರಿಗಳನ್ನು ತೆಗೆದುಕೊಳ್ಳುವುದಿಲ್ಲ” ಎಂದು ಪವಾರ್ ತಮ್ಮ ಆತ್ಮಚರಿತ್ರೆ ಲೋಕ ಮೇಜ್ ಸಂಗತಿಯ ಎರಡನೇ ಆವೃತ್ತಿಯ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಘೋಷಿಸಿದ್ದರು.

ಪವಾರ್ ಅವರ ನಿರ್ಧಾರದಿಂದ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಮಹಾರಾಷ್ಟ್ರ ಸೇರಿದಂತೆ ದೇಶದ ಅನೇಕ ಭಾಗಗಳಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂಬೈಗೆ ಬಂದಿದ್ದರು. ಮುಂಬೈನ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಪ್ರತಿಭಟನೆಗಳು ನಡೆದವು ಮತ್ತು ಪಕ್ಷದ ಹಲವಾರು ಜಿಲ್ಲಾಧ್ಯಕ್ಷರು ತಮ್ಮ ರಾಜೀನಾಮೆಯನ್ನು ಪ್ರತಿಭಟಿಸಿದರು.

ಇದನ್ನೂ ಓದಿ: NCP ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶರದ್ ಪವಾರ್: ಬೆಂಬಲಿಗರ ಪ್ರತಿಭಟನೆ

ಶುಕ್ರವಾರ, ಪವಾರ್ ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹಲವಾರು ನಾಯಕರು ಮನವಿ ಮಾಡಿದ್ದಾರೆ ಎಂದು ಪಟೇಲ್ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

”ಪಕ್ಷ ಮತ್ತು ದೇಶಕ್ಕೆ ಪವಾರ್ ಅವರಂತಹ ನಾಯಕನ ಅಗತ್ಯವಿದೆ. ಎನ್‌ಸಿಪಿ ನಾಯಕರು ಮಾತ್ರವಲ್ಲದೆ ಪಕ್ಷದ ಇತರ ನಾಯಕರು ಮತ್ತು ಗಣ್ಯ ವ್ಯಕ್ತಿಗಳು ಸಹ ಪಕ್ಷದ ಮುಖ್ಯಸ್ಥರಾಗಿ ಮುಂದುವರಿಯಲು ಅವರನ್ನು ವಿನಂತಿಸಿದ್ದಾರೆ” ಎಂದು ಹೇಳಿದರು.

”ಈಗ ತೆಗೆದುಕೊಂಡ ನಿರ್ಧಾರದಿಂದಾಗಿ ಮಹಾರಾಷ್ಟ್ರದ ಹೊರಗಿನಿಂದ ನಿಮ್ಮ ಅನೇಕ ನಮ್ಮ ಪಕ್ಷದ ನಾಯಕರು ಈ ಸ್ಥಳಕ್ಕೆ ಬಂದಿದ್ದಾರೆ” ಎಂದು ಪವಾರ್ ಹೇಳಿದ್ದಾರೆ.

”ಅವರು ನಾಳೆ ನನ್ನೊಂದಿಗೆ ಮಾತನಾಡಲು ಬಯಸುತ್ತಾರೆ. ನಾವು ನಾಳೆ ಸಂಜೆಯೊಳಗೆ ಭೇಟಿಯಾಗುತ್ತೇವೆ. ಅದಾದ ಬಳಿಕ ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಅಂತಿಮ ನಿರ್ಧಾರವನ್ನು ಪ್ರಕಟಿಸುತ್ತೇವೆ ಎಂದ” ತಿಳಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜ್ಯದ 5,8,9ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಶಿಕ್ಷಣ ಇಲಾಖೆ ಆದೇಶ

0
ರಾಜ್ಯದ ಎಲ್ಲಾ ಶಾಲೆಗಳ 5, 8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳನ್ನು ಮುಂದಿನ ಶೈಕ್ಷಣಿಕ ತರಗತಿಯಲ್ಲಿ ಮುಂದುವರಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತೆ ಬಿ.ಬಿ ಕಾವೇರಿ ಆದೇಶ ಹೊರಡಿಸಿದ್ದು,...