Homeಮುಖಪುಟದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

- Advertisement -
- Advertisement -

ಎಸ್ಸಿ-ಎಸ್ಟಿ ಸಮುದಾಯದ ಜನರ ಮೇಲೆ ದೇಶದಲ್ಲಿ ದೌರ್ಜನ್ಯಗಳು ಹೆಚ್ಚಳವಾಗುತ್ತಿದೆ. ಬಿಜೆಪಿಯು ಮಾಡೆಲ್‌ ರಾಜ್ಯ ಎಂದು ಕರೆಯುತ್ತಿದ್ದ ಯೋಗಿ ಆದಿತ್ಯನಾಥ್‌ ಆಡಳಿತದ ಉತ್ತರಪ್ರದೇಶವು ಅಗ್ರ ಸ್ಥಾನದಲ್ಲಿದೆ ಎಂದು NCRB ವರದಿಯು ಬಹಿರಂಗಪಡಿಸಿದೆ.

2022ರಲ್ಲಿ ಭಾರತದಲ್ಲಿ ದಲಿತರ ಮೇಲೆ ಜಾತಿ ಆಧಾರಿತ ದೌರ್ಜನ್ಯಗಳು ಹೆಚ್ಚಳವಾಗಿದೆ ಎಂದು NCRB ವರದಿಯು ಬಹಿರಂಗಪಡಿಸಿದೆ. 2022ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (NCRB) ವರದಿಯ ಪ್ರಕಾರ ‘ಕ್ರೈಮ್ ಇನ್ ಇಂಡಿಯಾ’ ವರದಿಯು ಭಾರತದಲ್ಲಿ ದಲಿತರು ಜಾತಿ ಆಧಾರಿತ ದೌರ್ಜನ್ಯಗಳಿಗೆ ಗುರಿಯಾಗುತ್ತಿದ್ದಾರೆ. 2022ರಲ್ಲಿ ಪರಿಶಿಷ್ಟ ಜಾತಿಗಳ (ಎಸ್‌ಸಿ) ವಿರುದ್ಧದ ದೌರ್ಜನ್ಯದ ವಿರುದ್ಧ 57,582 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕಿಂತ 13.1% ಹೆಚ್ಚಳವಾಗಿದೆ. 2021ರಲ್ಲಿ 50,900 ಪ್ರಕರಣಗಳು ದಾಖಲಾಗಿತ್ತು. ಅಪರಾಧದ ಪ್ರಮಾಣವು 2021ರಲ್ಲಿ 25.3ರಿಂದ 2022ರಲ್ಲಿ 28.6ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧ್ಕಕೆ ಸಂಬಂಧಿಸಿ ಒಟ್ಟು 10,064 ಪ್ರಕರಣಗಳು ದಾಖಲಾಗಿವೆ. ಇದು 2021ಕ್ಕಿಂತ 14.3% ಹೆಚ್ಚಳವಾಗಿದೆ. 2021ರಲ್ಲಿ 8,802 ಪ್ರಕರಣಗಳು ದಾಖಲಾಗಿದ್ದವು. ಅಪರಾಧ ಪ್ರಮಾಣವು 2021ರಲ್ಲಿ 8.4ರಿಂದ 2022ರಲ್ಲಿ 9.6ಕ್ಕೆ ಏರಿಕೆಯಾಗಿದೆ. ಇದಲ್ಲದೆ 2022ರಲ್ಲಿ ಬುಡಕಟ್ಟು ಮಹಿಳೆಯರ ಮೇಲೆ 1,347 ಅತ್ಯಾಚಾರ ಪ್ರಕರಣಗಳು ಮತ್ತು 1022 ಹಲ್ಲೆ ಪ್ರಕರಣಗಳು ವರದಿಯಾಗಿವೆ ಎಂದು ವರದಿ ಬಹಿರಂಗಪಡಿಸಿದೆ.

ಎಸ್ಸಿ ಸಮುದಾಯದ ಜನರ ವಿರುದ್ಧದ ದೌರ್ಜನ್ಯ ಪ್ರಕರಣ ಅತಿ ಹೆಚ್ಚು ಉತ್ತರಪ್ರದೇಶದಲ್ಲಿ ದಾಖಲಾಗಿದೆ. ಅಂದರೆ  15,368 ಪ್ರಕರಣಗಳು ದಾಖಲಾಗಿದೆ. ರಾಜಸ್ಥಾನದಲ್ಲಿ 8,752 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 7,733 ಪ್ರಕರಣಗಳು ಮತ್ತು ಬಿಹಾರದಲ್ಲಿ 6,509 ಪ್ರಕರಣಗಳು ದಾಖಲಾಗಿದೆ.

ಯುಪಿಯಲ್ಲಿ ಎಸ್‌ಸಿಗಳ ವಿರುದ್ಧದ ಅಪರಾಧಗಳ ಪ್ರಕರಣಗಳ ಸಂಖ್ಯೆ 2021ರಲ್ಲಿ 13,146ರಿಂದ 2022ರಲ್ಲಿ 15,368ಕ್ಕೆ ಏರಿದೆ. ಈ ಅಂಕಿ ಅಂಶಗಳು ಯೋಗಿ ಆಡಳಿತದ ಉತ್ತರಪ್ರದೇಶದಲ್ಲಿ ಎಸ್ಸಿ ಸಮುದಾಯಗಳ ಮೇಲಿನ ದೌರ್ಜನ್ಯ 16% ಹೆಚ್ಚಾಗಿದೆ ಎಂಬುವುದನ್ನು ಸೂಚಿಸಿದೆ.

ದಕ್ಷಿಣ ಭಾರತದ ರಾಜ್ಯಗಳ ಪೈಕಿ ಆಂಧ್ರಪ್ರದೇಶ 2,315 ಪ್ರಕರಣಗಳೊಂದಿಗೆ ಎಸ್‌ಸಿ ಜನರ ವಿರುದ್ಧ ಎಸಗಿದ ಪ್ರಕರಣಗಳಲ್ಲಿ ಅಗ್ರಸ್ಥಾನದಲ್ಲಿದೆ. ತೆಲಂಗಾಣದಲ್ಲಿ ಎಸ್‌ಸಿಗಳ ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿ 1,787 ಅಪರಾಧಗಳು ದಾಖಲಾಗಿದ್ದರೆ, ತಮಿಳುನಾಡಿನಲ್ಲಿ 1,761 ಮತ್ತು ಕರ್ನಾಟಕದಲ್ಲಿ 1,977 ಪ್ರಕರಣಗಳಿವೆ. ಕೇರಳವು ಎಸ್‌ಸಿಗಳ ವಿರುದ್ಧ ಅತಿ ಕಡಿಮೆ ಅಪರಾಧಗಳನ್ನು ಅಂದರೆ 1,050 ಪ್ರಕರಣಗಳು ದಾಖಲು ಮಾಡಿದೆ. ತಮಿಳುನಾಡಿನಲ್ಲಿ 2021ಕ್ಕೆ ಹೋಲಿಕೆ ಮಾಡಿದರೆ 2022ರಲ್ಲಿ ಎಸ್ಸಿ ಸಮುದಾಯದ ಮೇಲಿನ ದೌರ್ಜನ್ಯ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸಮುದಾಯದ ಜನರ ವಿರುದ್ಧದ ಅತಿ ಹೆಚ್ಚು ಅಪರಾಧಗಳು ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದಲ್ಲಿ 545 ಪ್ರಕರಣಗಳು ದಾಖಲಾಗಿದ್ದು ಮತ್ತು ಕಡಿಮೆ ಪ್ರಕರಣ ಅಂದರೆ 67 ಪ್ರಕರಣಗಳು ತಮಿಳುನಾಡಿನಲ್ಲಿ ದಾಖಲಾಗಿದೆ. ಕರ್ನಾಟಕದಲ್ಲಿ ಎಸ್ಟಿಗಳ ವಿರುದ್ಧದ 438  ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದರೆ, ಆಂಧ್ರಪ್ರದೇಶದಲ್ಲಿ ಎಸ್ಟಿಗಳ ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿ 396 ಪ್ರಕರಣಗಳು, ಕೇರಳದಲ್ಲಿ 172 ಪ್ರಕರಣಗಳು ದಾಖಲಾಗಿವೆ. ಎಸ್ಟಿಗಳ ವಿರುದ್ಧದ ದೌರ್ಜನ್ಯಗಳಿಗೆ ಸಂಬಂಧಿಸಿ ಕರ್ನಾಟಕವು 2021ರಲ್ಲಿ 361 ಪ್ರಕರಣಗಳನ್ನು ದಾಖಲಿಸಿದ್ದು, 2022ರಲ್ಲಿ 438 ಪ್ರಕರಣಗಳು ದಾಖಲಾಗಿತ್ತು. ಈ ಅಂಕಿ ಅಂಶಗಳು ಪ್ರಕರಣಗಳಲ್ಲಿ 21.3% ಹೆಚ್ಚಳವನ್ನು ಸೂಚಿಸುತ್ತದೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...