Homeಮುಖಪುಟದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

- Advertisement -
- Advertisement -

ಎಸ್ಸಿ-ಎಸ್ಟಿ ಸಮುದಾಯದ ಜನರ ಮೇಲೆ ದೇಶದಲ್ಲಿ ದೌರ್ಜನ್ಯಗಳು ಹೆಚ್ಚಳವಾಗುತ್ತಿದೆ. ಬಿಜೆಪಿಯು ಮಾಡೆಲ್‌ ರಾಜ್ಯ ಎಂದು ಕರೆಯುತ್ತಿದ್ದ ಯೋಗಿ ಆದಿತ್ಯನಾಥ್‌ ಆಡಳಿತದ ಉತ್ತರಪ್ರದೇಶವು ಅಗ್ರ ಸ್ಥಾನದಲ್ಲಿದೆ ಎಂದು NCRB ವರದಿಯು ಬಹಿರಂಗಪಡಿಸಿದೆ.

2022ರಲ್ಲಿ ಭಾರತದಲ್ಲಿ ದಲಿತರ ಮೇಲೆ ಜಾತಿ ಆಧಾರಿತ ದೌರ್ಜನ್ಯಗಳು ಹೆಚ್ಚಳವಾಗಿದೆ ಎಂದು NCRB ವರದಿಯು ಬಹಿರಂಗಪಡಿಸಿದೆ. 2022ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (NCRB) ವರದಿಯ ಪ್ರಕಾರ ‘ಕ್ರೈಮ್ ಇನ್ ಇಂಡಿಯಾ’ ವರದಿಯು ಭಾರತದಲ್ಲಿ ದಲಿತರು ಜಾತಿ ಆಧಾರಿತ ದೌರ್ಜನ್ಯಗಳಿಗೆ ಗುರಿಯಾಗುತ್ತಿದ್ದಾರೆ. 2022ರಲ್ಲಿ ಪರಿಶಿಷ್ಟ ಜಾತಿಗಳ (ಎಸ್‌ಸಿ) ವಿರುದ್ಧದ ದೌರ್ಜನ್ಯದ ವಿರುದ್ಧ 57,582 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕಿಂತ 13.1% ಹೆಚ್ಚಳವಾಗಿದೆ. 2021ರಲ್ಲಿ 50,900 ಪ್ರಕರಣಗಳು ದಾಖಲಾಗಿತ್ತು. ಅಪರಾಧದ ಪ್ರಮಾಣವು 2021ರಲ್ಲಿ 25.3ರಿಂದ 2022ರಲ್ಲಿ 28.6ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧ್ಕಕೆ ಸಂಬಂಧಿಸಿ ಒಟ್ಟು 10,064 ಪ್ರಕರಣಗಳು ದಾಖಲಾಗಿವೆ. ಇದು 2021ಕ್ಕಿಂತ 14.3% ಹೆಚ್ಚಳವಾಗಿದೆ. 2021ರಲ್ಲಿ 8,802 ಪ್ರಕರಣಗಳು ದಾಖಲಾಗಿದ್ದವು. ಅಪರಾಧ ಪ್ರಮಾಣವು 2021ರಲ್ಲಿ 8.4ರಿಂದ 2022ರಲ್ಲಿ 9.6ಕ್ಕೆ ಏರಿಕೆಯಾಗಿದೆ. ಇದಲ್ಲದೆ 2022ರಲ್ಲಿ ಬುಡಕಟ್ಟು ಮಹಿಳೆಯರ ಮೇಲೆ 1,347 ಅತ್ಯಾಚಾರ ಪ್ರಕರಣಗಳು ಮತ್ತು 1022 ಹಲ್ಲೆ ಪ್ರಕರಣಗಳು ವರದಿಯಾಗಿವೆ ಎಂದು ವರದಿ ಬಹಿರಂಗಪಡಿಸಿದೆ.

ಎಸ್ಸಿ ಸಮುದಾಯದ ಜನರ ವಿರುದ್ಧದ ದೌರ್ಜನ್ಯ ಪ್ರಕರಣ ಅತಿ ಹೆಚ್ಚು ಉತ್ತರಪ್ರದೇಶದಲ್ಲಿ ದಾಖಲಾಗಿದೆ. ಅಂದರೆ  15,368 ಪ್ರಕರಣಗಳು ದಾಖಲಾಗಿದೆ. ರಾಜಸ್ಥಾನದಲ್ಲಿ 8,752 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 7,733 ಪ್ರಕರಣಗಳು ಮತ್ತು ಬಿಹಾರದಲ್ಲಿ 6,509 ಪ್ರಕರಣಗಳು ದಾಖಲಾಗಿದೆ.

ಯುಪಿಯಲ್ಲಿ ಎಸ್‌ಸಿಗಳ ವಿರುದ್ಧದ ಅಪರಾಧಗಳ ಪ್ರಕರಣಗಳ ಸಂಖ್ಯೆ 2021ರಲ್ಲಿ 13,146ರಿಂದ 2022ರಲ್ಲಿ 15,368ಕ್ಕೆ ಏರಿದೆ. ಈ ಅಂಕಿ ಅಂಶಗಳು ಯೋಗಿ ಆಡಳಿತದ ಉತ್ತರಪ್ರದೇಶದಲ್ಲಿ ಎಸ್ಸಿ ಸಮುದಾಯಗಳ ಮೇಲಿನ ದೌರ್ಜನ್ಯ 16% ಹೆಚ್ಚಾಗಿದೆ ಎಂಬುವುದನ್ನು ಸೂಚಿಸಿದೆ.

ದಕ್ಷಿಣ ಭಾರತದ ರಾಜ್ಯಗಳ ಪೈಕಿ ಆಂಧ್ರಪ್ರದೇಶ 2,315 ಪ್ರಕರಣಗಳೊಂದಿಗೆ ಎಸ್‌ಸಿ ಜನರ ವಿರುದ್ಧ ಎಸಗಿದ ಪ್ರಕರಣಗಳಲ್ಲಿ ಅಗ್ರಸ್ಥಾನದಲ್ಲಿದೆ. ತೆಲಂಗಾಣದಲ್ಲಿ ಎಸ್‌ಸಿಗಳ ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿ 1,787 ಅಪರಾಧಗಳು ದಾಖಲಾಗಿದ್ದರೆ, ತಮಿಳುನಾಡಿನಲ್ಲಿ 1,761 ಮತ್ತು ಕರ್ನಾಟಕದಲ್ಲಿ 1,977 ಪ್ರಕರಣಗಳಿವೆ. ಕೇರಳವು ಎಸ್‌ಸಿಗಳ ವಿರುದ್ಧ ಅತಿ ಕಡಿಮೆ ಅಪರಾಧಗಳನ್ನು ಅಂದರೆ 1,050 ಪ್ರಕರಣಗಳು ದಾಖಲು ಮಾಡಿದೆ. ತಮಿಳುನಾಡಿನಲ್ಲಿ 2021ಕ್ಕೆ ಹೋಲಿಕೆ ಮಾಡಿದರೆ 2022ರಲ್ಲಿ ಎಸ್ಸಿ ಸಮುದಾಯದ ಮೇಲಿನ ದೌರ್ಜನ್ಯ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸಮುದಾಯದ ಜನರ ವಿರುದ್ಧದ ಅತಿ ಹೆಚ್ಚು ಅಪರಾಧಗಳು ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದಲ್ಲಿ 545 ಪ್ರಕರಣಗಳು ದಾಖಲಾಗಿದ್ದು ಮತ್ತು ಕಡಿಮೆ ಪ್ರಕರಣ ಅಂದರೆ 67 ಪ್ರಕರಣಗಳು ತಮಿಳುನಾಡಿನಲ್ಲಿ ದಾಖಲಾಗಿದೆ. ಕರ್ನಾಟಕದಲ್ಲಿ ಎಸ್ಟಿಗಳ ವಿರುದ್ಧದ 438  ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದರೆ, ಆಂಧ್ರಪ್ರದೇಶದಲ್ಲಿ ಎಸ್ಟಿಗಳ ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿ 396 ಪ್ರಕರಣಗಳು, ಕೇರಳದಲ್ಲಿ 172 ಪ್ರಕರಣಗಳು ದಾಖಲಾಗಿವೆ. ಎಸ್ಟಿಗಳ ವಿರುದ್ಧದ ದೌರ್ಜನ್ಯಗಳಿಗೆ ಸಂಬಂಧಿಸಿ ಕರ್ನಾಟಕವು 2021ರಲ್ಲಿ 361 ಪ್ರಕರಣಗಳನ್ನು ದಾಖಲಿಸಿದ್ದು, 2022ರಲ್ಲಿ 438 ಪ್ರಕರಣಗಳು ದಾಖಲಾಗಿತ್ತು. ಈ ಅಂಕಿ ಅಂಶಗಳು ಪ್ರಕರಣಗಳಲ್ಲಿ 21.3% ಹೆಚ್ಚಳವನ್ನು ಸೂಚಿಸುತ್ತದೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...