Homeಮುಖಪುಟದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

- Advertisement -
- Advertisement -

ಎಸ್ಸಿ-ಎಸ್ಟಿ ಸಮುದಾಯದ ಜನರ ಮೇಲೆ ದೇಶದಲ್ಲಿ ದೌರ್ಜನ್ಯಗಳು ಹೆಚ್ಚಳವಾಗುತ್ತಿದೆ. ಬಿಜೆಪಿಯು ಮಾಡೆಲ್‌ ರಾಜ್ಯ ಎಂದು ಕರೆಯುತ್ತಿದ್ದ ಯೋಗಿ ಆದಿತ್ಯನಾಥ್‌ ಆಡಳಿತದ ಉತ್ತರಪ್ರದೇಶವು ಅಗ್ರ ಸ್ಥಾನದಲ್ಲಿದೆ ಎಂದು NCRB ವರದಿಯು ಬಹಿರಂಗಪಡಿಸಿದೆ.

2022ರಲ್ಲಿ ಭಾರತದಲ್ಲಿ ದಲಿತರ ಮೇಲೆ ಜಾತಿ ಆಧಾರಿತ ದೌರ್ಜನ್ಯಗಳು ಹೆಚ್ಚಳವಾಗಿದೆ ಎಂದು NCRB ವರದಿಯು ಬಹಿರಂಗಪಡಿಸಿದೆ. 2022ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (NCRB) ವರದಿಯ ಪ್ರಕಾರ ‘ಕ್ರೈಮ್ ಇನ್ ಇಂಡಿಯಾ’ ವರದಿಯು ಭಾರತದಲ್ಲಿ ದಲಿತರು ಜಾತಿ ಆಧಾರಿತ ದೌರ್ಜನ್ಯಗಳಿಗೆ ಗುರಿಯಾಗುತ್ತಿದ್ದಾರೆ. 2022ರಲ್ಲಿ ಪರಿಶಿಷ್ಟ ಜಾತಿಗಳ (ಎಸ್‌ಸಿ) ವಿರುದ್ಧದ ದೌರ್ಜನ್ಯದ ವಿರುದ್ಧ 57,582 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕಿಂತ 13.1% ಹೆಚ್ಚಳವಾಗಿದೆ. 2021ರಲ್ಲಿ 50,900 ಪ್ರಕರಣಗಳು ದಾಖಲಾಗಿತ್ತು. ಅಪರಾಧದ ಪ್ರಮಾಣವು 2021ರಲ್ಲಿ 25.3ರಿಂದ 2022ರಲ್ಲಿ 28.6ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧ್ಕಕೆ ಸಂಬಂಧಿಸಿ ಒಟ್ಟು 10,064 ಪ್ರಕರಣಗಳು ದಾಖಲಾಗಿವೆ. ಇದು 2021ಕ್ಕಿಂತ 14.3% ಹೆಚ್ಚಳವಾಗಿದೆ. 2021ರಲ್ಲಿ 8,802 ಪ್ರಕರಣಗಳು ದಾಖಲಾಗಿದ್ದವು. ಅಪರಾಧ ಪ್ರಮಾಣವು 2021ರಲ್ಲಿ 8.4ರಿಂದ 2022ರಲ್ಲಿ 9.6ಕ್ಕೆ ಏರಿಕೆಯಾಗಿದೆ. ಇದಲ್ಲದೆ 2022ರಲ್ಲಿ ಬುಡಕಟ್ಟು ಮಹಿಳೆಯರ ಮೇಲೆ 1,347 ಅತ್ಯಾಚಾರ ಪ್ರಕರಣಗಳು ಮತ್ತು 1022 ಹಲ್ಲೆ ಪ್ರಕರಣಗಳು ವರದಿಯಾಗಿವೆ ಎಂದು ವರದಿ ಬಹಿರಂಗಪಡಿಸಿದೆ.

ಎಸ್ಸಿ ಸಮುದಾಯದ ಜನರ ವಿರುದ್ಧದ ದೌರ್ಜನ್ಯ ಪ್ರಕರಣ ಅತಿ ಹೆಚ್ಚು ಉತ್ತರಪ್ರದೇಶದಲ್ಲಿ ದಾಖಲಾಗಿದೆ. ಅಂದರೆ  15,368 ಪ್ರಕರಣಗಳು ದಾಖಲಾಗಿದೆ. ರಾಜಸ್ಥಾನದಲ್ಲಿ 8,752 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 7,733 ಪ್ರಕರಣಗಳು ಮತ್ತು ಬಿಹಾರದಲ್ಲಿ 6,509 ಪ್ರಕರಣಗಳು ದಾಖಲಾಗಿದೆ.

ಯುಪಿಯಲ್ಲಿ ಎಸ್‌ಸಿಗಳ ವಿರುದ್ಧದ ಅಪರಾಧಗಳ ಪ್ರಕರಣಗಳ ಸಂಖ್ಯೆ 2021ರಲ್ಲಿ 13,146ರಿಂದ 2022ರಲ್ಲಿ 15,368ಕ್ಕೆ ಏರಿದೆ. ಈ ಅಂಕಿ ಅಂಶಗಳು ಯೋಗಿ ಆಡಳಿತದ ಉತ್ತರಪ್ರದೇಶದಲ್ಲಿ ಎಸ್ಸಿ ಸಮುದಾಯಗಳ ಮೇಲಿನ ದೌರ್ಜನ್ಯ 16% ಹೆಚ್ಚಾಗಿದೆ ಎಂಬುವುದನ್ನು ಸೂಚಿಸಿದೆ.

ದಕ್ಷಿಣ ಭಾರತದ ರಾಜ್ಯಗಳ ಪೈಕಿ ಆಂಧ್ರಪ್ರದೇಶ 2,315 ಪ್ರಕರಣಗಳೊಂದಿಗೆ ಎಸ್‌ಸಿ ಜನರ ವಿರುದ್ಧ ಎಸಗಿದ ಪ್ರಕರಣಗಳಲ್ಲಿ ಅಗ್ರಸ್ಥಾನದಲ್ಲಿದೆ. ತೆಲಂಗಾಣದಲ್ಲಿ ಎಸ್‌ಸಿಗಳ ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿ 1,787 ಅಪರಾಧಗಳು ದಾಖಲಾಗಿದ್ದರೆ, ತಮಿಳುನಾಡಿನಲ್ಲಿ 1,761 ಮತ್ತು ಕರ್ನಾಟಕದಲ್ಲಿ 1,977 ಪ್ರಕರಣಗಳಿವೆ. ಕೇರಳವು ಎಸ್‌ಸಿಗಳ ವಿರುದ್ಧ ಅತಿ ಕಡಿಮೆ ಅಪರಾಧಗಳನ್ನು ಅಂದರೆ 1,050 ಪ್ರಕರಣಗಳು ದಾಖಲು ಮಾಡಿದೆ. ತಮಿಳುನಾಡಿನಲ್ಲಿ 2021ಕ್ಕೆ ಹೋಲಿಕೆ ಮಾಡಿದರೆ 2022ರಲ್ಲಿ ಎಸ್ಸಿ ಸಮುದಾಯದ ಮೇಲಿನ ದೌರ್ಜನ್ಯ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸಮುದಾಯದ ಜನರ ವಿರುದ್ಧದ ಅತಿ ಹೆಚ್ಚು ಅಪರಾಧಗಳು ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದಲ್ಲಿ 545 ಪ್ರಕರಣಗಳು ದಾಖಲಾಗಿದ್ದು ಮತ್ತು ಕಡಿಮೆ ಪ್ರಕರಣ ಅಂದರೆ 67 ಪ್ರಕರಣಗಳು ತಮಿಳುನಾಡಿನಲ್ಲಿ ದಾಖಲಾಗಿದೆ. ಕರ್ನಾಟಕದಲ್ಲಿ ಎಸ್ಟಿಗಳ ವಿರುದ್ಧದ 438  ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದರೆ, ಆಂಧ್ರಪ್ರದೇಶದಲ್ಲಿ ಎಸ್ಟಿಗಳ ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿ 396 ಪ್ರಕರಣಗಳು, ಕೇರಳದಲ್ಲಿ 172 ಪ್ರಕರಣಗಳು ದಾಖಲಾಗಿವೆ. ಎಸ್ಟಿಗಳ ವಿರುದ್ಧದ ದೌರ್ಜನ್ಯಗಳಿಗೆ ಸಂಬಂಧಿಸಿ ಕರ್ನಾಟಕವು 2021ರಲ್ಲಿ 361 ಪ್ರಕರಣಗಳನ್ನು ದಾಖಲಿಸಿದ್ದು, 2022ರಲ್ಲಿ 438 ಪ್ರಕರಣಗಳು ದಾಖಲಾಗಿತ್ತು. ಈ ಅಂಕಿ ಅಂಶಗಳು ಪ್ರಕರಣಗಳಲ್ಲಿ 21.3% ಹೆಚ್ಚಳವನ್ನು ಸೂಚಿಸುತ್ತದೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...