Homeಮುಖಪುಟದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಹೆಚ್ಚಳ: ಅಗ್ರಸ್ಥಾನದಲ್ಲಿರುವ ಯುಪಿ

- Advertisement -
- Advertisement -

ಎಸ್ಸಿ-ಎಸ್ಟಿ ಸಮುದಾಯದ ಜನರ ಮೇಲೆ ದೇಶದಲ್ಲಿ ದೌರ್ಜನ್ಯಗಳು ಹೆಚ್ಚಳವಾಗುತ್ತಿದೆ. ಬಿಜೆಪಿಯು ಮಾಡೆಲ್‌ ರಾಜ್ಯ ಎಂದು ಕರೆಯುತ್ತಿದ್ದ ಯೋಗಿ ಆದಿತ್ಯನಾಥ್‌ ಆಡಳಿತದ ಉತ್ತರಪ್ರದೇಶವು ಅಗ್ರ ಸ್ಥಾನದಲ್ಲಿದೆ ಎಂದು NCRB ವರದಿಯು ಬಹಿರಂಗಪಡಿಸಿದೆ.

2022ರಲ್ಲಿ ಭಾರತದಲ್ಲಿ ದಲಿತರ ಮೇಲೆ ಜಾತಿ ಆಧಾರಿತ ದೌರ್ಜನ್ಯಗಳು ಹೆಚ್ಚಳವಾಗಿದೆ ಎಂದು NCRB ವರದಿಯು ಬಹಿರಂಗಪಡಿಸಿದೆ. 2022ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದ (NCRB) ವರದಿಯ ಪ್ರಕಾರ ‘ಕ್ರೈಮ್ ಇನ್ ಇಂಡಿಯಾ’ ವರದಿಯು ಭಾರತದಲ್ಲಿ ದಲಿತರು ಜಾತಿ ಆಧಾರಿತ ದೌರ್ಜನ್ಯಗಳಿಗೆ ಗುರಿಯಾಗುತ್ತಿದ್ದಾರೆ. 2022ರಲ್ಲಿ ಪರಿಶಿಷ್ಟ ಜಾತಿಗಳ (ಎಸ್‌ಸಿ) ವಿರುದ್ಧದ ದೌರ್ಜನ್ಯದ ವಿರುದ್ಧ 57,582 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದು 2021ಕ್ಕಿಂತ 13.1% ಹೆಚ್ಚಳವಾಗಿದೆ. 2021ರಲ್ಲಿ 50,900 ಪ್ರಕರಣಗಳು ದಾಖಲಾಗಿತ್ತು. ಅಪರಾಧದ ಪ್ರಮಾಣವು 2021ರಲ್ಲಿ 25.3ರಿಂದ 2022ರಲ್ಲಿ 28.6ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.

ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧ್ಕಕೆ ಸಂಬಂಧಿಸಿ ಒಟ್ಟು 10,064 ಪ್ರಕರಣಗಳು ದಾಖಲಾಗಿವೆ. ಇದು 2021ಕ್ಕಿಂತ 14.3% ಹೆಚ್ಚಳವಾಗಿದೆ. 2021ರಲ್ಲಿ 8,802 ಪ್ರಕರಣಗಳು ದಾಖಲಾಗಿದ್ದವು. ಅಪರಾಧ ಪ್ರಮಾಣವು 2021ರಲ್ಲಿ 8.4ರಿಂದ 2022ರಲ್ಲಿ 9.6ಕ್ಕೆ ಏರಿಕೆಯಾಗಿದೆ. ಇದಲ್ಲದೆ 2022ರಲ್ಲಿ ಬುಡಕಟ್ಟು ಮಹಿಳೆಯರ ಮೇಲೆ 1,347 ಅತ್ಯಾಚಾರ ಪ್ರಕರಣಗಳು ಮತ್ತು 1022 ಹಲ್ಲೆ ಪ್ರಕರಣಗಳು ವರದಿಯಾಗಿವೆ ಎಂದು ವರದಿ ಬಹಿರಂಗಪಡಿಸಿದೆ.

ಎಸ್ಸಿ ಸಮುದಾಯದ ಜನರ ವಿರುದ್ಧದ ದೌರ್ಜನ್ಯ ಪ್ರಕರಣ ಅತಿ ಹೆಚ್ಚು ಉತ್ತರಪ್ರದೇಶದಲ್ಲಿ ದಾಖಲಾಗಿದೆ. ಅಂದರೆ  15,368 ಪ್ರಕರಣಗಳು ದಾಖಲಾಗಿದೆ. ರಾಜಸ್ಥಾನದಲ್ಲಿ 8,752 ಪ್ರಕರಣಗಳು, ಮಧ್ಯಪ್ರದೇಶದಲ್ಲಿ 7,733 ಪ್ರಕರಣಗಳು ಮತ್ತು ಬಿಹಾರದಲ್ಲಿ 6,509 ಪ್ರಕರಣಗಳು ದಾಖಲಾಗಿದೆ.

ಯುಪಿಯಲ್ಲಿ ಎಸ್‌ಸಿಗಳ ವಿರುದ್ಧದ ಅಪರಾಧಗಳ ಪ್ರಕರಣಗಳ ಸಂಖ್ಯೆ 2021ರಲ್ಲಿ 13,146ರಿಂದ 2022ರಲ್ಲಿ 15,368ಕ್ಕೆ ಏರಿದೆ. ಈ ಅಂಕಿ ಅಂಶಗಳು ಯೋಗಿ ಆಡಳಿತದ ಉತ್ತರಪ್ರದೇಶದಲ್ಲಿ ಎಸ್ಸಿ ಸಮುದಾಯಗಳ ಮೇಲಿನ ದೌರ್ಜನ್ಯ 16% ಹೆಚ್ಚಾಗಿದೆ ಎಂಬುವುದನ್ನು ಸೂಚಿಸಿದೆ.

ದಕ್ಷಿಣ ಭಾರತದ ರಾಜ್ಯಗಳ ಪೈಕಿ ಆಂಧ್ರಪ್ರದೇಶ 2,315 ಪ್ರಕರಣಗಳೊಂದಿಗೆ ಎಸ್‌ಸಿ ಜನರ ವಿರುದ್ಧ ಎಸಗಿದ ಪ್ರಕರಣಗಳಲ್ಲಿ ಅಗ್ರಸ್ಥಾನದಲ್ಲಿದೆ. ತೆಲಂಗಾಣದಲ್ಲಿ ಎಸ್‌ಸಿಗಳ ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿ 1,787 ಅಪರಾಧಗಳು ದಾಖಲಾಗಿದ್ದರೆ, ತಮಿಳುನಾಡಿನಲ್ಲಿ 1,761 ಮತ್ತು ಕರ್ನಾಟಕದಲ್ಲಿ 1,977 ಪ್ರಕರಣಗಳಿವೆ. ಕೇರಳವು ಎಸ್‌ಸಿಗಳ ವಿರುದ್ಧ ಅತಿ ಕಡಿಮೆ ಅಪರಾಧಗಳನ್ನು ಅಂದರೆ 1,050 ಪ್ರಕರಣಗಳು ದಾಖಲು ಮಾಡಿದೆ. ತಮಿಳುನಾಡಿನಲ್ಲಿ 2021ಕ್ಕೆ ಹೋಲಿಕೆ ಮಾಡಿದರೆ 2022ರಲ್ಲಿ ಎಸ್ಸಿ ಸಮುದಾಯದ ಮೇಲಿನ ದೌರ್ಜನ್ಯ ಹೆಚ್ಚಳವಾಗಿದೆ ಎಂದು ವರದಿ ತಿಳಿಸಿದೆ.

ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸಮುದಾಯದ ಜನರ ವಿರುದ್ಧದ ಅತಿ ಹೆಚ್ಚು ಅಪರಾಧಗಳು ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದಲ್ಲಿ 545 ಪ್ರಕರಣಗಳು ದಾಖಲಾಗಿದ್ದು ಮತ್ತು ಕಡಿಮೆ ಪ್ರಕರಣ ಅಂದರೆ 67 ಪ್ರಕರಣಗಳು ತಮಿಳುನಾಡಿನಲ್ಲಿ ದಾಖಲಾಗಿದೆ. ಕರ್ನಾಟಕದಲ್ಲಿ ಎಸ್ಟಿಗಳ ವಿರುದ್ಧದ 438  ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದರೆ, ಆಂಧ್ರಪ್ರದೇಶದಲ್ಲಿ ಎಸ್ಟಿಗಳ ವಿರುದ್ಧದ ದೌರ್ಜನ್ಯಕ್ಕೆ ಸಂಬಂಧಿಸಿ 396 ಪ್ರಕರಣಗಳು, ಕೇರಳದಲ್ಲಿ 172 ಪ್ರಕರಣಗಳು ದಾಖಲಾಗಿವೆ. ಎಸ್ಟಿಗಳ ವಿರುದ್ಧದ ದೌರ್ಜನ್ಯಗಳಿಗೆ ಸಂಬಂಧಿಸಿ ಕರ್ನಾಟಕವು 2021ರಲ್ಲಿ 361 ಪ್ರಕರಣಗಳನ್ನು ದಾಖಲಿಸಿದ್ದು, 2022ರಲ್ಲಿ 438 ಪ್ರಕರಣಗಳು ದಾಖಲಾಗಿತ್ತು. ಈ ಅಂಕಿ ಅಂಶಗಳು ಪ್ರಕರಣಗಳಲ್ಲಿ 21.3% ಹೆಚ್ಚಳವನ್ನು ಸೂಚಿಸುತ್ತದೆ.

ಇದನ್ನು ಓದಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’: ಕೇಂದ್ರದ ಉತ್ತರದಲ್ಲಿ ಸ್ಪಷ್ಟನೆ ಇಲ್ಲ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...