Homeಮುಖಪುಟಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

- Advertisement -
- Advertisement -

ಮಧ್ಯ ಕರ್ನಾಟಕದ ಬೃಹತ್ ಜನಪದ ಮಹಾಕಾವ್ಯ ಜುಂಜಪ್ಪ ಕಾವ್ಯದಲ್ಲಿ ಒಂದು ಘಟನೆ ಬರುತ್ತದೆ. ಇಡೀ ನಾಡಿನ ತುಂಬೆಲ್ಲಾ ವಿಪರೀತ ಕ್ಷಾಮ, ನೀರು-ನಿಡಿಗೂ ತಾತ್ಸಾರ ಎದ್ದು ದನಗಳಿಗೆ ತಿನ್ನಲು ಮೇವು, ಕುಡಿಯಲು ನೀರಿಲ್ಲದ ಪರಿಸ್ಥಿತಿ ಬಂದೊದಗುತ್ತದೆ. ತನ್ನ ಪಶು ಸಂಪತ್ತು ಉಳಿಸಿಕೊಳ್ಳಲು ಮೇವು-ನೀರು ಹುಡುಕಿ ಹೊರಟ ಜುಂಜಪ್ಪನಿಗೆ ಒಂದು ದೊಡ್ಡ ಗೋಮಾಳ ಎದುರಾಗುತ್ತದೆ. ಆಳೆತ್ತರದ ಹುಲ್ಲು, ಕೆರೆ ತುಂಬಾ ನೀರು ನೋಡಿ ಸಂತಸಗೊಂಡ ಜುಂಜಪ್ಪ ತನ್ನ ದನಗಳನ್ನ ಅಲ್ಲಿಗೆ ಅಟ್ಟುತ್ತಾನೆ. ಆದರೆ ಆ ಪ್ರದೇಶದ ಸೆಟ್ಟಿ ನೂರಾರು ಜನ ಕಾವಲುಗಾರರು, ಭದ್ರವಾದ ಬೇಲಿ ಹಾಕಿ ನೊಣವೂ ಒಳ ಹೋಗದಂತೆ ಮಾಡಿರುತ್ತಾನೆ. ಆಗ ಜುಂಜಪ್ಪ ಹೇಳುವ ಮಾತಿದೆಯಲ್ಲ ಎಲ್ಲ ಕಾಲಕ್ಕೂ ಸಲ್ಲುವ ಮಾತು “ಯಪ್ಪಾ ದನಗೋಳ ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎಂದು ಸೆಟ್ಟಿಯನ್ನು ಸದೆಬಡಿದು ತನ್ನ ಪಶು ಸಂಪತ್ತು ಉಳಿಸಿಕೊಳ್ಳುತ್ತಾನೆ.

ಜುಂಜಪ್ಪನ “ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎನ್ನುವ ಕ್ರಾಂತಿಕಾರಿ ಮಾತಿನ ಅರ್ಥ ಎಲ್ಲವೂ ಎಲ್ಲರಿಗೆ ಸೇರಿದ್ದು, ಆಹಾರ, ನೀರು ಭೂಮಿಯ ಹಕ್ಕಿನ ಬಗ್ಗೆ ಮಾತನಾಡುತ್ತಾ ಹೋಗುತ್ತದೆ. ಈ ನಿದರ್ಶನ ಏಕೆ ಇಲ್ಲಿ ಬಂತು ಎಂದರೆ ಇಂದು ಕೇಂದ್ರ ಬಿಜೆಪಿ ಸರ್ಕಾರ ಈ ಎಲ್ಲಾ ಮೂರು ಮೂಲಭೂತ ಸಂಗತಿಗಳನ್ನು ಮುಕ್ಕರಿಸಿಕೊಂಡು ತಿನ್ನುತ್ತಿದೆ.

ವಿಷಯಕ್ಕೆ ಬರುವುದಾದರೆ ಸೋಮವಾರ (ಮಾರ್ಚ್ 22ರಂದು) ಲೋಕಸಭೆಯಲ್ಲಿ ಮಂಡಿಸಿದ ರಾಷ್ಟ್ರ ರಾಜಧಾನಿ ದೆಹಲಿಯ ಭೂಪ್ರದೇಶ (ತಿದ್ದುಪಡಿ) ಕಾಯ್ದೆ (2021) (National Capital Territory of Delhi (Amendment) Bill – GNCTD)ಯ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ರಾಜ್ಯಗಳ ಶಾಸಕಾಂಗಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆಯೇ? ನಾವೇನು ದೂರವಿಲ್ಲ ನಿಮ್ಮ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುನ್ಸೂಚನೆಯೇ?

ಈ ತಿದ್ದುಪಡಿ ಏನು ಹೇಳುತ್ತದೆ?

ದೆಹಲಿ ಚುನಾಯಿತ ಸರ್ಕಾರ, ಸಚಿವ ಸಂಪುಟವು ಯಾವುದೇ ನಿರ್ಧಾರಗಳನ್ನು ಅನುಷ್ಠಾನಕ್ಕೆ ತರುವ ಮೊದಲು ಲೆಫ್ಟಿನೆಂಟ್ ಜನರಲ್ ಅಭಿಪ್ರಾಯ ಪಡೆದುಕೊಳ್ಳಬೇಕು ಎಂದು ಹೇಳುತ್ತದೆ.

ಇದರಿಂದ ಏನಾದರೂ ತೊಂದರೆಯೇ?

ಹೌದು, ಈ ತಿದ್ದುಪಡಿಯಿಂದ “ಸರ್ಕಾರ ಎಂದರೆ ಈಗ ಲೆಫ್ಟಿನೆಂಟ್ ಗವರ್ನರ್” ಎಂದಾಗುತ್ತದೆ.

ಈ ಹೊಸ ತಿದ್ದುಪಡಿಯ ಪ್ರಕಾರ ದೆಹಲಿ ಸರ್ಕಾರ ಸಣ್ಣ ನಿರ್ಧಾರ ತೆಗೆದುಕೊಳ್ಳಬೇಕಾದರೂ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಅಭಿಪ್ರಾಯ ತೆಗೆದುಕೊಳ್ಳಲೇಬೇಕು. ಅವರು ಹೂ ಅಂದರೆ ಹೂ ಇಲ್ಲ ಅಂದರೆ ಇಲ್ಲ. ’ಸರ್ಕಾರ’ ಎಂದರೆ ಲೆಫ್ಟಿನೆಂಟ್ ಗವರ್ನರ್ ಮಾತ್ರ. ಜನರಿಂದ ಆಯ್ಕೆಯಾದವರಿಗೆ ತುಸು ಗೌರವವೂ ಇಲ್ಲವೇ?

ತಿದ್ದುಪಡಿ ತಂದಿರುವ ದೊಡ್ಡ ಸಂಕಷ್ಟ ಏನು?

ಇದಕ್ಕೂ ಮೊದಲು ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂವ್ಯವಹಾರಗಳನ್ನು ಹೊರತುಪಡಿಸಿ ಮಿಕ್ಕ ಎಲ್ಲಾ ರೀತಿಯ ಸಂಗತಿಗಳಲ್ಲಿ ಲೆಫ್ಟಿನೆಂಟ್ ಜನರಲ್ ಅವರ ಒಪ್ಪಿಗೆ ಪಡೆದುಕೊಳ್ಳಬೇಕಾದ ಅಗತ್ಯ ಇರಲಿಲ್ಲ, ಆದರೆ ಈಗ ಪ್ರತಿಯೊಂದಕ್ಕೂ ಎಲ್‌ಜಿ ಅವರ ಮನೆ ಬಾಗಿಲು ತಟ್ಟುವ ಪ್ರಮೇಯವನ್ನು ತಿದ್ದುಪಡಿ ತಂದಿಟ್ಟಿದೆ.

ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಅಧಿಕಾರ ವ್ಯಾಪ್ತಿಯ ಬಗ್ಗೆ 2018ರಲ್ಲಿ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ನೀಡಿತ್ತು. ದೆಹಲಿಯ ಎಲ್‌ಜಿ ಸ್ವತಂತ್ರವಾಗಿ ವರ್ತಿಸುವಂತಿಲ್ಲ, ಸರ್ಕಾರದ ನೀತಿ ನಿರ್ಧಾರಗಳಿಗೆ ಅಡ್ಡಿಪಡಿಸುವಂತಿಲ್ಲ. ಸಂವಿಧಾನವು ಚುನಾಯಿತ ಸರಕಾರಕ್ಕೆ ಮಹತ್ವ ನೀಡಿರುವಾಗ ಅದರ ನಿರ್ಧಾರಗಳಲ್ಲಿ ಎಲ್‌ಜಿ ಕೈಯಾಡಿಸುವಂತಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿತ್ತು.

ಆದರೆ ಈಗ ಬಿಜೆಪಿ ಸರ್ಕಾರದ ಉಪ್ಪು ಕದಿಯುವ ಬುದ್ಧಿಯಿಂದ ದೆಹಲಿ ಸರ್ಕಾರಕ್ಕೆ ನ್ಯಾಯಾಲಯದಿಂದ ಸಿಕ್ಕಿದ್ದ ಈ ಹಕ್ಕು ಏನಾಗಲಿದೆ? ಮಣ್ಣುಪಾಲೇ!

’ಶಾಸಕಾಂಗ ರೂಪಿಸುವ ಯಾವುದೇ ಕಾನೂನಿನ ಪ್ರಕಾರ ಸರ್ಕಾರ ಎಂದರೆ ಅದು ಲೆಫ್ಟಿನೆಂಟ್ ಜನರಲ್’ ಎಂದು ನೇರವಾಗಿ ಪ್ರಜಾಪ್ರಭುತ್ವದ, ಸಂವಿಧಾನದ ಆಶಯಗಳ ಮುಖದ ಮೇಲೆ ಹೊಡೆಯುವಷ್ಟು (ಈಗಾಗಲೇ ಸಾಕಷ್ಟು ಬಾರಿ ಹೊಡೆದಿದೆ) ಬಿಜೆಪಿ ಮುಂದಕ್ಕೆ ಹೋಗಿದೆ.

ಈ ವಿವಾದ ಶುರು ಮಾಡಿದ್ದು ಯಾರು ಕಾಂಗ್ರೆಸ್/ ಬಿಜೆಪಿ?

ಕಾಂಗ್ರೆಸ್ ಸರ್ಕಾರ ಕೇಂದ್ರಾಡಳಿತ ಪ್ರದೇಶವಾಗಿದ್ದ ರಾಷ್ಟ ರಾಜಧಾನಿ ದೆಹಲಿಯಲ್ಲಿ ಸೀಮಿತ ಅಧಿಕಾರ ಹೊಂದಿರುವ ವಿಧಾನಸಭೆಗೆ ಅವಕಾಶ ನೀಡಿ ’ರಾಷ್ಟ್ರ ರಾಜಧಾನಿ ಪ್ರದೇಶ- ದೆಹಲಿ ಸರ್ಕಾರ’ (NCT) ಕಾಯ್ದೆ- 1991 ಅನ್ನು ಜಾರಿಗೊಳಿಸಲಾಯಿತು. 1996ರಿಂದಲೂ ದೆಹಲಿ ಸರ್ಕಾರ, ಕೇಂದ್ರ ಸರ್ಕಾರದ ಜೊತೆಗಿನ ಎಲ್ಲಾ ರೀತಿಯ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳುತ್ತಿದ್ದವು. ಆದರೆ, 2015ರಲ್ಲಿ ದೆಹಲಿಯ ಅಧಿಕಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ಹಾಗಾದರೆ ಇಲ್ಲಿ ಎರಡು ಬಗೆದದ್ದು ಬಿಜೆಪಿಯೇ ಎಂದಾಯಿತು.

’ಲೋಕಸಭೆಯಲ್ಲಿ ಅನುಮೋದನೆ ಪಡೆದ ಮಸೂದೆಯ ಸಾಲುಗಳು ದೆಹಲಿ ನಾಗರಿಕರಿಗೆ ಅವಮಾನ ಮೂಡುವಂತಿವೆ. ದೆಹಲಿಯ ಜನರು ಮತ ಚಲಾಯಿಸಿ ಆಯ್ಕೆ ಮಾಡಿದವರಿಂದ ಅಧಿಕಾರವನ್ನು ಕಿತ್ತುಕೊಂಡು, ಸೋತವರಿಗೆ ಅಧಿಕಾರ ನೀಡಿರುವ ಬಿಜೆಪಿಯು ದೆಹಲಿ ಜನರಿಗೆ ಮೋಸ ಮಾಡಿದೆ’ ಎಂದು ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

’ಇತ್ತೀಚೆಗೆ ಗುಜರಾತ್ ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅದರಲ್ಲೂ ಸೂರತ್‌ನಲ್ಲಿ ಎಎಪಿ 22 ಸೀಟುಗಳನ್ನು ಗೆದ್ದು ಪಾದಾರ್ಪಣೆ ಮಾಡಿದ್ದು ಅಮಿತ್ ಷಾ, ನರೇಂದ್ರ ಮೋದಿ ಅವರ ಗರ್ವಕ್ಕೆ ಪೆಟ್ಟುಕೊಟ್ಟಿದೆ. ಅಲ್ಲದೇ ಇಡೀ ರಾಷ್ಟ್ರದಲ್ಲಿ ಅದರಲ್ಲೂ ಪ್ರಮುಖವಾಗಿ ಉತ್ತರ ಭಾರತ ಭಾಗದಲ್ಲಿ ಬಿಜೆಪಿಗೆ ಆತಂಕ ಮೂಡಿಸುತ್ತಿರುವ ಏಕೈಕೆ ಪಕ್ಷವೆಂದರೆ ಆಮ್ ಆದ್ಮಿ ಪಕ್ಷವೊಂದೆ. ಆದ ಕಾರಣ ನಮ್ಮ ಪಕ್ಷವನ್ನು ಮುಗಿಸುವ ಹುನ್ನಾರವೇ ಕಾಯ್ದೆಯ ತಿದ್ದುಪಡಿ’ ಎಂಬುದು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ಮಾತು.

’ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಅವರು ಮಸೂದೆ ಮಂಡನೆಯ ವೇಳೆ ಸರ್ಕಾರದ ದಕ್ಷತೆ ಹೆಚ್ಚಾಗಲಿದೆ ಅಲ್ಲದೇ, ದೆಹಲಿ ಸರ್ಕಾರದ ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಅಸ್ಪಷ್ಟತೆ ಸೃಷ್ಟಿಯಾಗಿತ್ತು. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಿಂದ ಮಸೂದೆ ಮಂಡಿಸಲಾಗಿದೆ. ದೆಹಲಿಗೆ ಎಲ್‌ಜಿ ಅವರೇ ಆಡಳಿತಗಾರರಾಗಿದ್ದಾರೆ. ಅಲ್ಲದೆ ಸರ್ಕಾರದ ದೈನಂದಿನ ವ್ಯವಹಾರಗಳನ್ನು ತಿಳಿದುಕೊಳ್ಳುವ ಅಧಿಕಾರ ಅವರಿಗೆ ಇದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಆಡಳಿತಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದೆ ಎನ್ನುವ ತಿಪ್ಪೆ ಸಾರಿಸುವ ಮಾತುಗಳನ್ನು ಆಡುತ್ತಲೇ ನಮ್ಮ ಸರ್ಕಾರದ ಧಮನಕ್ಕೆ ಬಿಜೆಪಿ ನಿಂತಿದೆ’ ಎಂಬುದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಅಭಿಪ್ರಾಯ.

ದೆಹಲಿಯ ಚುನಾಯಿತ ಸರ್ಕಾರ ಮತ್ತು ಲೆಫ್ಟಿನೆಂಟ್ ಜನರಲ್ ಅಧಿಕಾರದ ಜಟಾಪಟಿ ಹೊಸತೇನೂ ಅಲ್ಲ. ಕೇಂದ್ರ ಸರ್ಕಾರವು 2015ರಲ್ಲಿ ಲೆಫ್ಟಿನೆಂಟ್ ಜನರಲ್ ನಜೀಬ್ ಜಂಗ್ ಸಹ ಇದೇ ಮಾತು ಹೇಳಿದ್ದರು. ’ಸರ್ಕಾರ ಎಂದರೆ ರಾಷ್ಟ್ರಪತಿಯ ಮೂಲಕ ಸಂವಿಧಾನದ 239ನೇ ಪರಿಚ್ಛೇದದ ಅನ್ವಯ ನೇಮಕಗೊಂಡ ಲೆಫ್ಟಿನೆಂಟ್ ಜನರಲ್’ ಎಂದಿದ್ದರು.

ಒಟ್ಟಿನಲ್ಲಿ ಬಿಜೆಪಿ ಎಷ್ಟು ಮೊಂಡುತನ ಬೆಳೆಸಿಕೊಂಡಿದೆ ಎಂದರೆ ನಾಳೆ ಬಾ ಎಂದು ಬಾಗಿಲ ಮೇಲೆ ಬರೆದರೂ ಇಂದೇ ಬರುವೆ ಎನ್ನುವ ಭೂತದಂತಾಗಿದೆ. ಈ ಭೂತ ಇಂದು ದೆಹಲಿಯ ಬಾಗಿಲು ಮಾತ್ರ ಬಡಿದಿಲ್ಲ, ಎಲ್ಲರ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುಸ್ಸೂಚನೆಯೇ ಇದು?

ಗುಜರಾತ್ ಮಾಡೆಲ್‌ಅನ್ನು ಇಡೀ ದೇಶವೇ ಮರೆಯುವಂತೆ ಮಾಡಿ, ಬಿಜೆಪಿಗೆ ಮಗ್ಗುಲು ಮುಳ್ಳಾಗಿ ಬೆಳೆಯುತ್ತಿದ್ದ ಅರವಿಂದ ಕೇಜ್ರಿವಾಲ್ ಅವರ ದೆಹಲಿ ಮಾಡೆಲ್ ಎನ್ನುವ ಬೆಣ್ಣೆ ಜಾರಿ ಬಿಜೆಪಿಯ ರೊಟ್ಟಿಗೆ ಬಿದ್ದಿದೆ. ಇನ್ನು ನಿಮ್ಮ, ನಿಮ್ಮ ಮಾದರಿಗಳನ್ನು ನೀವಿಟ್ಟುಕೊಳ್ಳಿ ನಾವು ಹೇಳುವ ಮಾದರಿಯೇ ಅಂತಿಮ ಮರಣ ಶಾಸನ ಇದಾಗಲಿದೆಯೇ? ಎಲ್ಲವೂ ಆಗುತ್ತಿರುವ ಈ ಹೊತ್ತಿನಲ್ಲಿ ಇದೂ ಆಗಲಿದೆ ಎನ್ನುವುದೇ ದುರಂತ.

ಸೋಮಶೇಖರ್ ಶಿರಾ
ಪತ್ರಕರ್ತರು. ಸದ್ಯ ಎಎಪಿ ಕರ್ನಾಟಕದ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...