Homeಮುಖಪುಟಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

- Advertisement -
- Advertisement -

ಮಧ್ಯ ಕರ್ನಾಟಕದ ಬೃಹತ್ ಜನಪದ ಮಹಾಕಾವ್ಯ ಜುಂಜಪ್ಪ ಕಾವ್ಯದಲ್ಲಿ ಒಂದು ಘಟನೆ ಬರುತ್ತದೆ. ಇಡೀ ನಾಡಿನ ತುಂಬೆಲ್ಲಾ ವಿಪರೀತ ಕ್ಷಾಮ, ನೀರು-ನಿಡಿಗೂ ತಾತ್ಸಾರ ಎದ್ದು ದನಗಳಿಗೆ ತಿನ್ನಲು ಮೇವು, ಕುಡಿಯಲು ನೀರಿಲ್ಲದ ಪರಿಸ್ಥಿತಿ ಬಂದೊದಗುತ್ತದೆ. ತನ್ನ ಪಶು ಸಂಪತ್ತು ಉಳಿಸಿಕೊಳ್ಳಲು ಮೇವು-ನೀರು ಹುಡುಕಿ ಹೊರಟ ಜುಂಜಪ್ಪನಿಗೆ ಒಂದು ದೊಡ್ಡ ಗೋಮಾಳ ಎದುರಾಗುತ್ತದೆ. ಆಳೆತ್ತರದ ಹುಲ್ಲು, ಕೆರೆ ತುಂಬಾ ನೀರು ನೋಡಿ ಸಂತಸಗೊಂಡ ಜುಂಜಪ್ಪ ತನ್ನ ದನಗಳನ್ನ ಅಲ್ಲಿಗೆ ಅಟ್ಟುತ್ತಾನೆ. ಆದರೆ ಆ ಪ್ರದೇಶದ ಸೆಟ್ಟಿ ನೂರಾರು ಜನ ಕಾವಲುಗಾರರು, ಭದ್ರವಾದ ಬೇಲಿ ಹಾಕಿ ನೊಣವೂ ಒಳ ಹೋಗದಂತೆ ಮಾಡಿರುತ್ತಾನೆ. ಆಗ ಜುಂಜಪ್ಪ ಹೇಳುವ ಮಾತಿದೆಯಲ್ಲ ಎಲ್ಲ ಕಾಲಕ್ಕೂ ಸಲ್ಲುವ ಮಾತು “ಯಪ್ಪಾ ದನಗೋಳ ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎಂದು ಸೆಟ್ಟಿಯನ್ನು ಸದೆಬಡಿದು ತನ್ನ ಪಶು ಸಂಪತ್ತು ಉಳಿಸಿಕೊಳ್ಳುತ್ತಾನೆ.

ಜುಂಜಪ್ಪನ “ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎನ್ನುವ ಕ್ರಾಂತಿಕಾರಿ ಮಾತಿನ ಅರ್ಥ ಎಲ್ಲವೂ ಎಲ್ಲರಿಗೆ ಸೇರಿದ್ದು, ಆಹಾರ, ನೀರು ಭೂಮಿಯ ಹಕ್ಕಿನ ಬಗ್ಗೆ ಮಾತನಾಡುತ್ತಾ ಹೋಗುತ್ತದೆ. ಈ ನಿದರ್ಶನ ಏಕೆ ಇಲ್ಲಿ ಬಂತು ಎಂದರೆ ಇಂದು ಕೇಂದ್ರ ಬಿಜೆಪಿ ಸರ್ಕಾರ ಈ ಎಲ್ಲಾ ಮೂರು ಮೂಲಭೂತ ಸಂಗತಿಗಳನ್ನು ಮುಕ್ಕರಿಸಿಕೊಂಡು ತಿನ್ನುತ್ತಿದೆ.

ವಿಷಯಕ್ಕೆ ಬರುವುದಾದರೆ ಸೋಮವಾರ (ಮಾರ್ಚ್ 22ರಂದು) ಲೋಕಸಭೆಯಲ್ಲಿ ಮಂಡಿಸಿದ ರಾಷ್ಟ್ರ ರಾಜಧಾನಿ ದೆಹಲಿಯ ಭೂಪ್ರದೇಶ (ತಿದ್ದುಪಡಿ) ಕಾಯ್ದೆ (2021) (National Capital Territory of Delhi (Amendment) Bill – GNCTD)ಯ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ರಾಜ್ಯಗಳ ಶಾಸಕಾಂಗಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆಯೇ? ನಾವೇನು ದೂರವಿಲ್ಲ ನಿಮ್ಮ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುನ್ಸೂಚನೆಯೇ?

ಈ ತಿದ್ದುಪಡಿ ಏನು ಹೇಳುತ್ತದೆ?

ದೆಹಲಿ ಚುನಾಯಿತ ಸರ್ಕಾರ, ಸಚಿವ ಸಂಪುಟವು ಯಾವುದೇ ನಿರ್ಧಾರಗಳನ್ನು ಅನುಷ್ಠಾನಕ್ಕೆ ತರುವ ಮೊದಲು ಲೆಫ್ಟಿನೆಂಟ್ ಜನರಲ್ ಅಭಿಪ್ರಾಯ ಪಡೆದುಕೊಳ್ಳಬೇಕು ಎಂದು ಹೇಳುತ್ತದೆ.

ಇದರಿಂದ ಏನಾದರೂ ತೊಂದರೆಯೇ?

ಹೌದು, ಈ ತಿದ್ದುಪಡಿಯಿಂದ “ಸರ್ಕಾರ ಎಂದರೆ ಈಗ ಲೆಫ್ಟಿನೆಂಟ್ ಗವರ್ನರ್” ಎಂದಾಗುತ್ತದೆ.

ಈ ಹೊಸ ತಿದ್ದುಪಡಿಯ ಪ್ರಕಾರ ದೆಹಲಿ ಸರ್ಕಾರ ಸಣ್ಣ ನಿರ್ಧಾರ ತೆಗೆದುಕೊಳ್ಳಬೇಕಾದರೂ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಅಭಿಪ್ರಾಯ ತೆಗೆದುಕೊಳ್ಳಲೇಬೇಕು. ಅವರು ಹೂ ಅಂದರೆ ಹೂ ಇಲ್ಲ ಅಂದರೆ ಇಲ್ಲ. ’ಸರ್ಕಾರ’ ಎಂದರೆ ಲೆಫ್ಟಿನೆಂಟ್ ಗವರ್ನರ್ ಮಾತ್ರ. ಜನರಿಂದ ಆಯ್ಕೆಯಾದವರಿಗೆ ತುಸು ಗೌರವವೂ ಇಲ್ಲವೇ?

ತಿದ್ದುಪಡಿ ತಂದಿರುವ ದೊಡ್ಡ ಸಂಕಷ್ಟ ಏನು?

ಇದಕ್ಕೂ ಮೊದಲು ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂವ್ಯವಹಾರಗಳನ್ನು ಹೊರತುಪಡಿಸಿ ಮಿಕ್ಕ ಎಲ್ಲಾ ರೀತಿಯ ಸಂಗತಿಗಳಲ್ಲಿ ಲೆಫ್ಟಿನೆಂಟ್ ಜನರಲ್ ಅವರ ಒಪ್ಪಿಗೆ ಪಡೆದುಕೊಳ್ಳಬೇಕಾದ ಅಗತ್ಯ ಇರಲಿಲ್ಲ, ಆದರೆ ಈಗ ಪ್ರತಿಯೊಂದಕ್ಕೂ ಎಲ್‌ಜಿ ಅವರ ಮನೆ ಬಾಗಿಲು ತಟ್ಟುವ ಪ್ರಮೇಯವನ್ನು ತಿದ್ದುಪಡಿ ತಂದಿಟ್ಟಿದೆ.

ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಅಧಿಕಾರ ವ್ಯಾಪ್ತಿಯ ಬಗ್ಗೆ 2018ರಲ್ಲಿ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ನೀಡಿತ್ತು. ದೆಹಲಿಯ ಎಲ್‌ಜಿ ಸ್ವತಂತ್ರವಾಗಿ ವರ್ತಿಸುವಂತಿಲ್ಲ, ಸರ್ಕಾರದ ನೀತಿ ನಿರ್ಧಾರಗಳಿಗೆ ಅಡ್ಡಿಪಡಿಸುವಂತಿಲ್ಲ. ಸಂವಿಧಾನವು ಚುನಾಯಿತ ಸರಕಾರಕ್ಕೆ ಮಹತ್ವ ನೀಡಿರುವಾಗ ಅದರ ನಿರ್ಧಾರಗಳಲ್ಲಿ ಎಲ್‌ಜಿ ಕೈಯಾಡಿಸುವಂತಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿತ್ತು.

ಆದರೆ ಈಗ ಬಿಜೆಪಿ ಸರ್ಕಾರದ ಉಪ್ಪು ಕದಿಯುವ ಬುದ್ಧಿಯಿಂದ ದೆಹಲಿ ಸರ್ಕಾರಕ್ಕೆ ನ್ಯಾಯಾಲಯದಿಂದ ಸಿಕ್ಕಿದ್ದ ಈ ಹಕ್ಕು ಏನಾಗಲಿದೆ? ಮಣ್ಣುಪಾಲೇ!

’ಶಾಸಕಾಂಗ ರೂಪಿಸುವ ಯಾವುದೇ ಕಾನೂನಿನ ಪ್ರಕಾರ ಸರ್ಕಾರ ಎಂದರೆ ಅದು ಲೆಫ್ಟಿನೆಂಟ್ ಜನರಲ್’ ಎಂದು ನೇರವಾಗಿ ಪ್ರಜಾಪ್ರಭುತ್ವದ, ಸಂವಿಧಾನದ ಆಶಯಗಳ ಮುಖದ ಮೇಲೆ ಹೊಡೆಯುವಷ್ಟು (ಈಗಾಗಲೇ ಸಾಕಷ್ಟು ಬಾರಿ ಹೊಡೆದಿದೆ) ಬಿಜೆಪಿ ಮುಂದಕ್ಕೆ ಹೋಗಿದೆ.

ಈ ವಿವಾದ ಶುರು ಮಾಡಿದ್ದು ಯಾರು ಕಾಂಗ್ರೆಸ್/ ಬಿಜೆಪಿ?

ಕಾಂಗ್ರೆಸ್ ಸರ್ಕಾರ ಕೇಂದ್ರಾಡಳಿತ ಪ್ರದೇಶವಾಗಿದ್ದ ರಾಷ್ಟ ರಾಜಧಾನಿ ದೆಹಲಿಯಲ್ಲಿ ಸೀಮಿತ ಅಧಿಕಾರ ಹೊಂದಿರುವ ವಿಧಾನಸಭೆಗೆ ಅವಕಾಶ ನೀಡಿ ’ರಾಷ್ಟ್ರ ರಾಜಧಾನಿ ಪ್ರದೇಶ- ದೆಹಲಿ ಸರ್ಕಾರ’ (NCT) ಕಾಯ್ದೆ- 1991 ಅನ್ನು ಜಾರಿಗೊಳಿಸಲಾಯಿತು. 1996ರಿಂದಲೂ ದೆಹಲಿ ಸರ್ಕಾರ, ಕೇಂದ್ರ ಸರ್ಕಾರದ ಜೊತೆಗಿನ ಎಲ್ಲಾ ರೀತಿಯ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳುತ್ತಿದ್ದವು. ಆದರೆ, 2015ರಲ್ಲಿ ದೆಹಲಿಯ ಅಧಿಕಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ಹಾಗಾದರೆ ಇಲ್ಲಿ ಎರಡು ಬಗೆದದ್ದು ಬಿಜೆಪಿಯೇ ಎಂದಾಯಿತು.

’ಲೋಕಸಭೆಯಲ್ಲಿ ಅನುಮೋದನೆ ಪಡೆದ ಮಸೂದೆಯ ಸಾಲುಗಳು ದೆಹಲಿ ನಾಗರಿಕರಿಗೆ ಅವಮಾನ ಮೂಡುವಂತಿವೆ. ದೆಹಲಿಯ ಜನರು ಮತ ಚಲಾಯಿಸಿ ಆಯ್ಕೆ ಮಾಡಿದವರಿಂದ ಅಧಿಕಾರವನ್ನು ಕಿತ್ತುಕೊಂಡು, ಸೋತವರಿಗೆ ಅಧಿಕಾರ ನೀಡಿರುವ ಬಿಜೆಪಿಯು ದೆಹಲಿ ಜನರಿಗೆ ಮೋಸ ಮಾಡಿದೆ’ ಎಂದು ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

’ಇತ್ತೀಚೆಗೆ ಗುಜರಾತ್ ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅದರಲ್ಲೂ ಸೂರತ್‌ನಲ್ಲಿ ಎಎಪಿ 22 ಸೀಟುಗಳನ್ನು ಗೆದ್ದು ಪಾದಾರ್ಪಣೆ ಮಾಡಿದ್ದು ಅಮಿತ್ ಷಾ, ನರೇಂದ್ರ ಮೋದಿ ಅವರ ಗರ್ವಕ್ಕೆ ಪೆಟ್ಟುಕೊಟ್ಟಿದೆ. ಅಲ್ಲದೇ ಇಡೀ ರಾಷ್ಟ್ರದಲ್ಲಿ ಅದರಲ್ಲೂ ಪ್ರಮುಖವಾಗಿ ಉತ್ತರ ಭಾರತ ಭಾಗದಲ್ಲಿ ಬಿಜೆಪಿಗೆ ಆತಂಕ ಮೂಡಿಸುತ್ತಿರುವ ಏಕೈಕೆ ಪಕ್ಷವೆಂದರೆ ಆಮ್ ಆದ್ಮಿ ಪಕ್ಷವೊಂದೆ. ಆದ ಕಾರಣ ನಮ್ಮ ಪಕ್ಷವನ್ನು ಮುಗಿಸುವ ಹುನ್ನಾರವೇ ಕಾಯ್ದೆಯ ತಿದ್ದುಪಡಿ’ ಎಂಬುದು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ಮಾತು.

’ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಅವರು ಮಸೂದೆ ಮಂಡನೆಯ ವೇಳೆ ಸರ್ಕಾರದ ದಕ್ಷತೆ ಹೆಚ್ಚಾಗಲಿದೆ ಅಲ್ಲದೇ, ದೆಹಲಿ ಸರ್ಕಾರದ ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಅಸ್ಪಷ್ಟತೆ ಸೃಷ್ಟಿಯಾಗಿತ್ತು. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಿಂದ ಮಸೂದೆ ಮಂಡಿಸಲಾಗಿದೆ. ದೆಹಲಿಗೆ ಎಲ್‌ಜಿ ಅವರೇ ಆಡಳಿತಗಾರರಾಗಿದ್ದಾರೆ. ಅಲ್ಲದೆ ಸರ್ಕಾರದ ದೈನಂದಿನ ವ್ಯವಹಾರಗಳನ್ನು ತಿಳಿದುಕೊಳ್ಳುವ ಅಧಿಕಾರ ಅವರಿಗೆ ಇದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಆಡಳಿತಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದೆ ಎನ್ನುವ ತಿಪ್ಪೆ ಸಾರಿಸುವ ಮಾತುಗಳನ್ನು ಆಡುತ್ತಲೇ ನಮ್ಮ ಸರ್ಕಾರದ ಧಮನಕ್ಕೆ ಬಿಜೆಪಿ ನಿಂತಿದೆ’ ಎಂಬುದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಅಭಿಪ್ರಾಯ.

ದೆಹಲಿಯ ಚುನಾಯಿತ ಸರ್ಕಾರ ಮತ್ತು ಲೆಫ್ಟಿನೆಂಟ್ ಜನರಲ್ ಅಧಿಕಾರದ ಜಟಾಪಟಿ ಹೊಸತೇನೂ ಅಲ್ಲ. ಕೇಂದ್ರ ಸರ್ಕಾರವು 2015ರಲ್ಲಿ ಲೆಫ್ಟಿನೆಂಟ್ ಜನರಲ್ ನಜೀಬ್ ಜಂಗ್ ಸಹ ಇದೇ ಮಾತು ಹೇಳಿದ್ದರು. ’ಸರ್ಕಾರ ಎಂದರೆ ರಾಷ್ಟ್ರಪತಿಯ ಮೂಲಕ ಸಂವಿಧಾನದ 239ನೇ ಪರಿಚ್ಛೇದದ ಅನ್ವಯ ನೇಮಕಗೊಂಡ ಲೆಫ್ಟಿನೆಂಟ್ ಜನರಲ್’ ಎಂದಿದ್ದರು.

ಒಟ್ಟಿನಲ್ಲಿ ಬಿಜೆಪಿ ಎಷ್ಟು ಮೊಂಡುತನ ಬೆಳೆಸಿಕೊಂಡಿದೆ ಎಂದರೆ ನಾಳೆ ಬಾ ಎಂದು ಬಾಗಿಲ ಮೇಲೆ ಬರೆದರೂ ಇಂದೇ ಬರುವೆ ಎನ್ನುವ ಭೂತದಂತಾಗಿದೆ. ಈ ಭೂತ ಇಂದು ದೆಹಲಿಯ ಬಾಗಿಲು ಮಾತ್ರ ಬಡಿದಿಲ್ಲ, ಎಲ್ಲರ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುಸ್ಸೂಚನೆಯೇ ಇದು?

ಗುಜರಾತ್ ಮಾಡೆಲ್‌ಅನ್ನು ಇಡೀ ದೇಶವೇ ಮರೆಯುವಂತೆ ಮಾಡಿ, ಬಿಜೆಪಿಗೆ ಮಗ್ಗುಲು ಮುಳ್ಳಾಗಿ ಬೆಳೆಯುತ್ತಿದ್ದ ಅರವಿಂದ ಕೇಜ್ರಿವಾಲ್ ಅವರ ದೆಹಲಿ ಮಾಡೆಲ್ ಎನ್ನುವ ಬೆಣ್ಣೆ ಜಾರಿ ಬಿಜೆಪಿಯ ರೊಟ್ಟಿಗೆ ಬಿದ್ದಿದೆ. ಇನ್ನು ನಿಮ್ಮ, ನಿಮ್ಮ ಮಾದರಿಗಳನ್ನು ನೀವಿಟ್ಟುಕೊಳ್ಳಿ ನಾವು ಹೇಳುವ ಮಾದರಿಯೇ ಅಂತಿಮ ಮರಣ ಶಾಸನ ಇದಾಗಲಿದೆಯೇ? ಎಲ್ಲವೂ ಆಗುತ್ತಿರುವ ಈ ಹೊತ್ತಿನಲ್ಲಿ ಇದೂ ಆಗಲಿದೆ ಎನ್ನುವುದೇ ದುರಂತ.

ಸೋಮಶೇಖರ್ ಶಿರಾ
ಪತ್ರಕರ್ತರು. ಸದ್ಯ ಎಎಪಿ ಕರ್ನಾಟಕದ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...