Homeಮುಖಪುಟಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

- Advertisement -
- Advertisement -

ಮಧ್ಯ ಕರ್ನಾಟಕದ ಬೃಹತ್ ಜನಪದ ಮಹಾಕಾವ್ಯ ಜುಂಜಪ್ಪ ಕಾವ್ಯದಲ್ಲಿ ಒಂದು ಘಟನೆ ಬರುತ್ತದೆ. ಇಡೀ ನಾಡಿನ ತುಂಬೆಲ್ಲಾ ವಿಪರೀತ ಕ್ಷಾಮ, ನೀರು-ನಿಡಿಗೂ ತಾತ್ಸಾರ ಎದ್ದು ದನಗಳಿಗೆ ತಿನ್ನಲು ಮೇವು, ಕುಡಿಯಲು ನೀರಿಲ್ಲದ ಪರಿಸ್ಥಿತಿ ಬಂದೊದಗುತ್ತದೆ. ತನ್ನ ಪಶು ಸಂಪತ್ತು ಉಳಿಸಿಕೊಳ್ಳಲು ಮೇವು-ನೀರು ಹುಡುಕಿ ಹೊರಟ ಜುಂಜಪ್ಪನಿಗೆ ಒಂದು ದೊಡ್ಡ ಗೋಮಾಳ ಎದುರಾಗುತ್ತದೆ. ಆಳೆತ್ತರದ ಹುಲ್ಲು, ಕೆರೆ ತುಂಬಾ ನೀರು ನೋಡಿ ಸಂತಸಗೊಂಡ ಜುಂಜಪ್ಪ ತನ್ನ ದನಗಳನ್ನ ಅಲ್ಲಿಗೆ ಅಟ್ಟುತ್ತಾನೆ. ಆದರೆ ಆ ಪ್ರದೇಶದ ಸೆಟ್ಟಿ ನೂರಾರು ಜನ ಕಾವಲುಗಾರರು, ಭದ್ರವಾದ ಬೇಲಿ ಹಾಕಿ ನೊಣವೂ ಒಳ ಹೋಗದಂತೆ ಮಾಡಿರುತ್ತಾನೆ. ಆಗ ಜುಂಜಪ್ಪ ಹೇಳುವ ಮಾತಿದೆಯಲ್ಲ ಎಲ್ಲ ಕಾಲಕ್ಕೂ ಸಲ್ಲುವ ಮಾತು “ಯಪ್ಪಾ ದನಗೋಳ ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎಂದು ಸೆಟ್ಟಿಯನ್ನು ಸದೆಬಡಿದು ತನ್ನ ಪಶು ಸಂಪತ್ತು ಉಳಿಸಿಕೊಳ್ಳುತ್ತಾನೆ.

ಜುಂಜಪ್ಪನ “ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎನ್ನುವ ಕ್ರಾಂತಿಕಾರಿ ಮಾತಿನ ಅರ್ಥ ಎಲ್ಲವೂ ಎಲ್ಲರಿಗೆ ಸೇರಿದ್ದು, ಆಹಾರ, ನೀರು ಭೂಮಿಯ ಹಕ್ಕಿನ ಬಗ್ಗೆ ಮಾತನಾಡುತ್ತಾ ಹೋಗುತ್ತದೆ. ಈ ನಿದರ್ಶನ ಏಕೆ ಇಲ್ಲಿ ಬಂತು ಎಂದರೆ ಇಂದು ಕೇಂದ್ರ ಬಿಜೆಪಿ ಸರ್ಕಾರ ಈ ಎಲ್ಲಾ ಮೂರು ಮೂಲಭೂತ ಸಂಗತಿಗಳನ್ನು ಮುಕ್ಕರಿಸಿಕೊಂಡು ತಿನ್ನುತ್ತಿದೆ.

ವಿಷಯಕ್ಕೆ ಬರುವುದಾದರೆ ಸೋಮವಾರ (ಮಾರ್ಚ್ 22ರಂದು) ಲೋಕಸಭೆಯಲ್ಲಿ ಮಂಡಿಸಿದ ರಾಷ್ಟ್ರ ರಾಜಧಾನಿ ದೆಹಲಿಯ ಭೂಪ್ರದೇಶ (ತಿದ್ದುಪಡಿ) ಕಾಯ್ದೆ (2021) (National Capital Territory of Delhi (Amendment) Bill – GNCTD)ಯ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ರಾಜ್ಯಗಳ ಶಾಸಕಾಂಗಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆಯೇ? ನಾವೇನು ದೂರವಿಲ್ಲ ನಿಮ್ಮ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುನ್ಸೂಚನೆಯೇ?

ಈ ತಿದ್ದುಪಡಿ ಏನು ಹೇಳುತ್ತದೆ?

ದೆಹಲಿ ಚುನಾಯಿತ ಸರ್ಕಾರ, ಸಚಿವ ಸಂಪುಟವು ಯಾವುದೇ ನಿರ್ಧಾರಗಳನ್ನು ಅನುಷ್ಠಾನಕ್ಕೆ ತರುವ ಮೊದಲು ಲೆಫ್ಟಿನೆಂಟ್ ಜನರಲ್ ಅಭಿಪ್ರಾಯ ಪಡೆದುಕೊಳ್ಳಬೇಕು ಎಂದು ಹೇಳುತ್ತದೆ.

ಇದರಿಂದ ಏನಾದರೂ ತೊಂದರೆಯೇ?

ಹೌದು, ಈ ತಿದ್ದುಪಡಿಯಿಂದ “ಸರ್ಕಾರ ಎಂದರೆ ಈಗ ಲೆಫ್ಟಿನೆಂಟ್ ಗವರ್ನರ್” ಎಂದಾಗುತ್ತದೆ.

ಈ ಹೊಸ ತಿದ್ದುಪಡಿಯ ಪ್ರಕಾರ ದೆಹಲಿ ಸರ್ಕಾರ ಸಣ್ಣ ನಿರ್ಧಾರ ತೆಗೆದುಕೊಳ್ಳಬೇಕಾದರೂ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಅಭಿಪ್ರಾಯ ತೆಗೆದುಕೊಳ್ಳಲೇಬೇಕು. ಅವರು ಹೂ ಅಂದರೆ ಹೂ ಇಲ್ಲ ಅಂದರೆ ಇಲ್ಲ. ’ಸರ್ಕಾರ’ ಎಂದರೆ ಲೆಫ್ಟಿನೆಂಟ್ ಗವರ್ನರ್ ಮಾತ್ರ. ಜನರಿಂದ ಆಯ್ಕೆಯಾದವರಿಗೆ ತುಸು ಗೌರವವೂ ಇಲ್ಲವೇ?

ತಿದ್ದುಪಡಿ ತಂದಿರುವ ದೊಡ್ಡ ಸಂಕಷ್ಟ ಏನು?

ಇದಕ್ಕೂ ಮೊದಲು ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂವ್ಯವಹಾರಗಳನ್ನು ಹೊರತುಪಡಿಸಿ ಮಿಕ್ಕ ಎಲ್ಲಾ ರೀತಿಯ ಸಂಗತಿಗಳಲ್ಲಿ ಲೆಫ್ಟಿನೆಂಟ್ ಜನರಲ್ ಅವರ ಒಪ್ಪಿಗೆ ಪಡೆದುಕೊಳ್ಳಬೇಕಾದ ಅಗತ್ಯ ಇರಲಿಲ್ಲ, ಆದರೆ ಈಗ ಪ್ರತಿಯೊಂದಕ್ಕೂ ಎಲ್‌ಜಿ ಅವರ ಮನೆ ಬಾಗಿಲು ತಟ್ಟುವ ಪ್ರಮೇಯವನ್ನು ತಿದ್ದುಪಡಿ ತಂದಿಟ್ಟಿದೆ.

ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಅಧಿಕಾರ ವ್ಯಾಪ್ತಿಯ ಬಗ್ಗೆ 2018ರಲ್ಲಿ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ನೀಡಿತ್ತು. ದೆಹಲಿಯ ಎಲ್‌ಜಿ ಸ್ವತಂತ್ರವಾಗಿ ವರ್ತಿಸುವಂತಿಲ್ಲ, ಸರ್ಕಾರದ ನೀತಿ ನಿರ್ಧಾರಗಳಿಗೆ ಅಡ್ಡಿಪಡಿಸುವಂತಿಲ್ಲ. ಸಂವಿಧಾನವು ಚುನಾಯಿತ ಸರಕಾರಕ್ಕೆ ಮಹತ್ವ ನೀಡಿರುವಾಗ ಅದರ ನಿರ್ಧಾರಗಳಲ್ಲಿ ಎಲ್‌ಜಿ ಕೈಯಾಡಿಸುವಂತಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿತ್ತು.

ಆದರೆ ಈಗ ಬಿಜೆಪಿ ಸರ್ಕಾರದ ಉಪ್ಪು ಕದಿಯುವ ಬುದ್ಧಿಯಿಂದ ದೆಹಲಿ ಸರ್ಕಾರಕ್ಕೆ ನ್ಯಾಯಾಲಯದಿಂದ ಸಿಕ್ಕಿದ್ದ ಈ ಹಕ್ಕು ಏನಾಗಲಿದೆ? ಮಣ್ಣುಪಾಲೇ!

’ಶಾಸಕಾಂಗ ರೂಪಿಸುವ ಯಾವುದೇ ಕಾನೂನಿನ ಪ್ರಕಾರ ಸರ್ಕಾರ ಎಂದರೆ ಅದು ಲೆಫ್ಟಿನೆಂಟ್ ಜನರಲ್’ ಎಂದು ನೇರವಾಗಿ ಪ್ರಜಾಪ್ರಭುತ್ವದ, ಸಂವಿಧಾನದ ಆಶಯಗಳ ಮುಖದ ಮೇಲೆ ಹೊಡೆಯುವಷ್ಟು (ಈಗಾಗಲೇ ಸಾಕಷ್ಟು ಬಾರಿ ಹೊಡೆದಿದೆ) ಬಿಜೆಪಿ ಮುಂದಕ್ಕೆ ಹೋಗಿದೆ.

ಈ ವಿವಾದ ಶುರು ಮಾಡಿದ್ದು ಯಾರು ಕಾಂಗ್ರೆಸ್/ ಬಿಜೆಪಿ?

ಕಾಂಗ್ರೆಸ್ ಸರ್ಕಾರ ಕೇಂದ್ರಾಡಳಿತ ಪ್ರದೇಶವಾಗಿದ್ದ ರಾಷ್ಟ ರಾಜಧಾನಿ ದೆಹಲಿಯಲ್ಲಿ ಸೀಮಿತ ಅಧಿಕಾರ ಹೊಂದಿರುವ ವಿಧಾನಸಭೆಗೆ ಅವಕಾಶ ನೀಡಿ ’ರಾಷ್ಟ್ರ ರಾಜಧಾನಿ ಪ್ರದೇಶ- ದೆಹಲಿ ಸರ್ಕಾರ’ (NCT) ಕಾಯ್ದೆ- 1991 ಅನ್ನು ಜಾರಿಗೊಳಿಸಲಾಯಿತು. 1996ರಿಂದಲೂ ದೆಹಲಿ ಸರ್ಕಾರ, ಕೇಂದ್ರ ಸರ್ಕಾರದ ಜೊತೆಗಿನ ಎಲ್ಲಾ ರೀತಿಯ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳುತ್ತಿದ್ದವು. ಆದರೆ, 2015ರಲ್ಲಿ ದೆಹಲಿಯ ಅಧಿಕಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ಹಾಗಾದರೆ ಇಲ್ಲಿ ಎರಡು ಬಗೆದದ್ದು ಬಿಜೆಪಿಯೇ ಎಂದಾಯಿತು.

’ಲೋಕಸಭೆಯಲ್ಲಿ ಅನುಮೋದನೆ ಪಡೆದ ಮಸೂದೆಯ ಸಾಲುಗಳು ದೆಹಲಿ ನಾಗರಿಕರಿಗೆ ಅವಮಾನ ಮೂಡುವಂತಿವೆ. ದೆಹಲಿಯ ಜನರು ಮತ ಚಲಾಯಿಸಿ ಆಯ್ಕೆ ಮಾಡಿದವರಿಂದ ಅಧಿಕಾರವನ್ನು ಕಿತ್ತುಕೊಂಡು, ಸೋತವರಿಗೆ ಅಧಿಕಾರ ನೀಡಿರುವ ಬಿಜೆಪಿಯು ದೆಹಲಿ ಜನರಿಗೆ ಮೋಸ ಮಾಡಿದೆ’ ಎಂದು ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

’ಇತ್ತೀಚೆಗೆ ಗುಜರಾತ್ ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅದರಲ್ಲೂ ಸೂರತ್‌ನಲ್ಲಿ ಎಎಪಿ 22 ಸೀಟುಗಳನ್ನು ಗೆದ್ದು ಪಾದಾರ್ಪಣೆ ಮಾಡಿದ್ದು ಅಮಿತ್ ಷಾ, ನರೇಂದ್ರ ಮೋದಿ ಅವರ ಗರ್ವಕ್ಕೆ ಪೆಟ್ಟುಕೊಟ್ಟಿದೆ. ಅಲ್ಲದೇ ಇಡೀ ರಾಷ್ಟ್ರದಲ್ಲಿ ಅದರಲ್ಲೂ ಪ್ರಮುಖವಾಗಿ ಉತ್ತರ ಭಾರತ ಭಾಗದಲ್ಲಿ ಬಿಜೆಪಿಗೆ ಆತಂಕ ಮೂಡಿಸುತ್ತಿರುವ ಏಕೈಕೆ ಪಕ್ಷವೆಂದರೆ ಆಮ್ ಆದ್ಮಿ ಪಕ್ಷವೊಂದೆ. ಆದ ಕಾರಣ ನಮ್ಮ ಪಕ್ಷವನ್ನು ಮುಗಿಸುವ ಹುನ್ನಾರವೇ ಕಾಯ್ದೆಯ ತಿದ್ದುಪಡಿ’ ಎಂಬುದು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ಮಾತು.

’ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಅವರು ಮಸೂದೆ ಮಂಡನೆಯ ವೇಳೆ ಸರ್ಕಾರದ ದಕ್ಷತೆ ಹೆಚ್ಚಾಗಲಿದೆ ಅಲ್ಲದೇ, ದೆಹಲಿ ಸರ್ಕಾರದ ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಅಸ್ಪಷ್ಟತೆ ಸೃಷ್ಟಿಯಾಗಿತ್ತು. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಿಂದ ಮಸೂದೆ ಮಂಡಿಸಲಾಗಿದೆ. ದೆಹಲಿಗೆ ಎಲ್‌ಜಿ ಅವರೇ ಆಡಳಿತಗಾರರಾಗಿದ್ದಾರೆ. ಅಲ್ಲದೆ ಸರ್ಕಾರದ ದೈನಂದಿನ ವ್ಯವಹಾರಗಳನ್ನು ತಿಳಿದುಕೊಳ್ಳುವ ಅಧಿಕಾರ ಅವರಿಗೆ ಇದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಆಡಳಿತಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದೆ ಎನ್ನುವ ತಿಪ್ಪೆ ಸಾರಿಸುವ ಮಾತುಗಳನ್ನು ಆಡುತ್ತಲೇ ನಮ್ಮ ಸರ್ಕಾರದ ಧಮನಕ್ಕೆ ಬಿಜೆಪಿ ನಿಂತಿದೆ’ ಎಂಬುದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಅಭಿಪ್ರಾಯ.

ದೆಹಲಿಯ ಚುನಾಯಿತ ಸರ್ಕಾರ ಮತ್ತು ಲೆಫ್ಟಿನೆಂಟ್ ಜನರಲ್ ಅಧಿಕಾರದ ಜಟಾಪಟಿ ಹೊಸತೇನೂ ಅಲ್ಲ. ಕೇಂದ್ರ ಸರ್ಕಾರವು 2015ರಲ್ಲಿ ಲೆಫ್ಟಿನೆಂಟ್ ಜನರಲ್ ನಜೀಬ್ ಜಂಗ್ ಸಹ ಇದೇ ಮಾತು ಹೇಳಿದ್ದರು. ’ಸರ್ಕಾರ ಎಂದರೆ ರಾಷ್ಟ್ರಪತಿಯ ಮೂಲಕ ಸಂವಿಧಾನದ 239ನೇ ಪರಿಚ್ಛೇದದ ಅನ್ವಯ ನೇಮಕಗೊಂಡ ಲೆಫ್ಟಿನೆಂಟ್ ಜನರಲ್’ ಎಂದಿದ್ದರು.

ಒಟ್ಟಿನಲ್ಲಿ ಬಿಜೆಪಿ ಎಷ್ಟು ಮೊಂಡುತನ ಬೆಳೆಸಿಕೊಂಡಿದೆ ಎಂದರೆ ನಾಳೆ ಬಾ ಎಂದು ಬಾಗಿಲ ಮೇಲೆ ಬರೆದರೂ ಇಂದೇ ಬರುವೆ ಎನ್ನುವ ಭೂತದಂತಾಗಿದೆ. ಈ ಭೂತ ಇಂದು ದೆಹಲಿಯ ಬಾಗಿಲು ಮಾತ್ರ ಬಡಿದಿಲ್ಲ, ಎಲ್ಲರ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುಸ್ಸೂಚನೆಯೇ ಇದು?

ಗುಜರಾತ್ ಮಾಡೆಲ್‌ಅನ್ನು ಇಡೀ ದೇಶವೇ ಮರೆಯುವಂತೆ ಮಾಡಿ, ಬಿಜೆಪಿಗೆ ಮಗ್ಗುಲು ಮುಳ್ಳಾಗಿ ಬೆಳೆಯುತ್ತಿದ್ದ ಅರವಿಂದ ಕೇಜ್ರಿವಾಲ್ ಅವರ ದೆಹಲಿ ಮಾಡೆಲ್ ಎನ್ನುವ ಬೆಣ್ಣೆ ಜಾರಿ ಬಿಜೆಪಿಯ ರೊಟ್ಟಿಗೆ ಬಿದ್ದಿದೆ. ಇನ್ನು ನಿಮ್ಮ, ನಿಮ್ಮ ಮಾದರಿಗಳನ್ನು ನೀವಿಟ್ಟುಕೊಳ್ಳಿ ನಾವು ಹೇಳುವ ಮಾದರಿಯೇ ಅಂತಿಮ ಮರಣ ಶಾಸನ ಇದಾಗಲಿದೆಯೇ? ಎಲ್ಲವೂ ಆಗುತ್ತಿರುವ ಈ ಹೊತ್ತಿನಲ್ಲಿ ಇದೂ ಆಗಲಿದೆ ಎನ್ನುವುದೇ ದುರಂತ.

ಸೋಮಶೇಖರ್ ಶಿರಾ
ಪತ್ರಕರ್ತರು. ಸದ್ಯ ಎಎಪಿ ಕರ್ನಾಟಕದ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...