Homeಮುಖಪುಟಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

- Advertisement -
- Advertisement -

ಮಧ್ಯ ಕರ್ನಾಟಕದ ಬೃಹತ್ ಜನಪದ ಮಹಾಕಾವ್ಯ ಜುಂಜಪ್ಪ ಕಾವ್ಯದಲ್ಲಿ ಒಂದು ಘಟನೆ ಬರುತ್ತದೆ. ಇಡೀ ನಾಡಿನ ತುಂಬೆಲ್ಲಾ ವಿಪರೀತ ಕ್ಷಾಮ, ನೀರು-ನಿಡಿಗೂ ತಾತ್ಸಾರ ಎದ್ದು ದನಗಳಿಗೆ ತಿನ್ನಲು ಮೇವು, ಕುಡಿಯಲು ನೀರಿಲ್ಲದ ಪರಿಸ್ಥಿತಿ ಬಂದೊದಗುತ್ತದೆ. ತನ್ನ ಪಶು ಸಂಪತ್ತು ಉಳಿಸಿಕೊಳ್ಳಲು ಮೇವು-ನೀರು ಹುಡುಕಿ ಹೊರಟ ಜುಂಜಪ್ಪನಿಗೆ ಒಂದು ದೊಡ್ಡ ಗೋಮಾಳ ಎದುರಾಗುತ್ತದೆ. ಆಳೆತ್ತರದ ಹುಲ್ಲು, ಕೆರೆ ತುಂಬಾ ನೀರು ನೋಡಿ ಸಂತಸಗೊಂಡ ಜುಂಜಪ್ಪ ತನ್ನ ದನಗಳನ್ನ ಅಲ್ಲಿಗೆ ಅಟ್ಟುತ್ತಾನೆ. ಆದರೆ ಆ ಪ್ರದೇಶದ ಸೆಟ್ಟಿ ನೂರಾರು ಜನ ಕಾವಲುಗಾರರು, ಭದ್ರವಾದ ಬೇಲಿ ಹಾಕಿ ನೊಣವೂ ಒಳ ಹೋಗದಂತೆ ಮಾಡಿರುತ್ತಾನೆ. ಆಗ ಜುಂಜಪ್ಪ ಹೇಳುವ ಮಾತಿದೆಯಲ್ಲ ಎಲ್ಲ ಕಾಲಕ್ಕೂ ಸಲ್ಲುವ ಮಾತು “ಯಪ್ಪಾ ದನಗೋಳ ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎಂದು ಸೆಟ್ಟಿಯನ್ನು ಸದೆಬಡಿದು ತನ್ನ ಪಶು ಸಂಪತ್ತು ಉಳಿಸಿಕೊಳ್ಳುತ್ತಾನೆ.

ಜುಂಜಪ್ಪನ “ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎನ್ನುವ ಕ್ರಾಂತಿಕಾರಿ ಮಾತಿನ ಅರ್ಥ ಎಲ್ಲವೂ ಎಲ್ಲರಿಗೆ ಸೇರಿದ್ದು, ಆಹಾರ, ನೀರು ಭೂಮಿಯ ಹಕ್ಕಿನ ಬಗ್ಗೆ ಮಾತನಾಡುತ್ತಾ ಹೋಗುತ್ತದೆ. ಈ ನಿದರ್ಶನ ಏಕೆ ಇಲ್ಲಿ ಬಂತು ಎಂದರೆ ಇಂದು ಕೇಂದ್ರ ಬಿಜೆಪಿ ಸರ್ಕಾರ ಈ ಎಲ್ಲಾ ಮೂರು ಮೂಲಭೂತ ಸಂಗತಿಗಳನ್ನು ಮುಕ್ಕರಿಸಿಕೊಂಡು ತಿನ್ನುತ್ತಿದೆ.

ವಿಷಯಕ್ಕೆ ಬರುವುದಾದರೆ ಸೋಮವಾರ (ಮಾರ್ಚ್ 22ರಂದು) ಲೋಕಸಭೆಯಲ್ಲಿ ಮಂಡಿಸಿದ ರಾಷ್ಟ್ರ ರಾಜಧಾನಿ ದೆಹಲಿಯ ಭೂಪ್ರದೇಶ (ತಿದ್ದುಪಡಿ) ಕಾಯ್ದೆ (2021) (National Capital Territory of Delhi (Amendment) Bill – GNCTD)ಯ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ರಾಜ್ಯಗಳ ಶಾಸಕಾಂಗಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆಯೇ? ನಾವೇನು ದೂರವಿಲ್ಲ ನಿಮ್ಮ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುನ್ಸೂಚನೆಯೇ?

ಈ ತಿದ್ದುಪಡಿ ಏನು ಹೇಳುತ್ತದೆ?

ದೆಹಲಿ ಚುನಾಯಿತ ಸರ್ಕಾರ, ಸಚಿವ ಸಂಪುಟವು ಯಾವುದೇ ನಿರ್ಧಾರಗಳನ್ನು ಅನುಷ್ಠಾನಕ್ಕೆ ತರುವ ಮೊದಲು ಲೆಫ್ಟಿನೆಂಟ್ ಜನರಲ್ ಅಭಿಪ್ರಾಯ ಪಡೆದುಕೊಳ್ಳಬೇಕು ಎಂದು ಹೇಳುತ್ತದೆ.

ಇದರಿಂದ ಏನಾದರೂ ತೊಂದರೆಯೇ?

ಹೌದು, ಈ ತಿದ್ದುಪಡಿಯಿಂದ “ಸರ್ಕಾರ ಎಂದರೆ ಈಗ ಲೆಫ್ಟಿನೆಂಟ್ ಗವರ್ನರ್” ಎಂದಾಗುತ್ತದೆ.

ಈ ಹೊಸ ತಿದ್ದುಪಡಿಯ ಪ್ರಕಾರ ದೆಹಲಿ ಸರ್ಕಾರ ಸಣ್ಣ ನಿರ್ಧಾರ ತೆಗೆದುಕೊಳ್ಳಬೇಕಾದರೂ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಅಭಿಪ್ರಾಯ ತೆಗೆದುಕೊಳ್ಳಲೇಬೇಕು. ಅವರು ಹೂ ಅಂದರೆ ಹೂ ಇಲ್ಲ ಅಂದರೆ ಇಲ್ಲ. ’ಸರ್ಕಾರ’ ಎಂದರೆ ಲೆಫ್ಟಿನೆಂಟ್ ಗವರ್ನರ್ ಮಾತ್ರ. ಜನರಿಂದ ಆಯ್ಕೆಯಾದವರಿಗೆ ತುಸು ಗೌರವವೂ ಇಲ್ಲವೇ?

ತಿದ್ದುಪಡಿ ತಂದಿರುವ ದೊಡ್ಡ ಸಂಕಷ್ಟ ಏನು?

ಇದಕ್ಕೂ ಮೊದಲು ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂವ್ಯವಹಾರಗಳನ್ನು ಹೊರತುಪಡಿಸಿ ಮಿಕ್ಕ ಎಲ್ಲಾ ರೀತಿಯ ಸಂಗತಿಗಳಲ್ಲಿ ಲೆಫ್ಟಿನೆಂಟ್ ಜನರಲ್ ಅವರ ಒಪ್ಪಿಗೆ ಪಡೆದುಕೊಳ್ಳಬೇಕಾದ ಅಗತ್ಯ ಇರಲಿಲ್ಲ, ಆದರೆ ಈಗ ಪ್ರತಿಯೊಂದಕ್ಕೂ ಎಲ್‌ಜಿ ಅವರ ಮನೆ ಬಾಗಿಲು ತಟ್ಟುವ ಪ್ರಮೇಯವನ್ನು ತಿದ್ದುಪಡಿ ತಂದಿಟ್ಟಿದೆ.

ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಅಧಿಕಾರ ವ್ಯಾಪ್ತಿಯ ಬಗ್ಗೆ 2018ರಲ್ಲಿ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ನೀಡಿತ್ತು. ದೆಹಲಿಯ ಎಲ್‌ಜಿ ಸ್ವತಂತ್ರವಾಗಿ ವರ್ತಿಸುವಂತಿಲ್ಲ, ಸರ್ಕಾರದ ನೀತಿ ನಿರ್ಧಾರಗಳಿಗೆ ಅಡ್ಡಿಪಡಿಸುವಂತಿಲ್ಲ. ಸಂವಿಧಾನವು ಚುನಾಯಿತ ಸರಕಾರಕ್ಕೆ ಮಹತ್ವ ನೀಡಿರುವಾಗ ಅದರ ನಿರ್ಧಾರಗಳಲ್ಲಿ ಎಲ್‌ಜಿ ಕೈಯಾಡಿಸುವಂತಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿತ್ತು.

ಆದರೆ ಈಗ ಬಿಜೆಪಿ ಸರ್ಕಾರದ ಉಪ್ಪು ಕದಿಯುವ ಬುದ್ಧಿಯಿಂದ ದೆಹಲಿ ಸರ್ಕಾರಕ್ಕೆ ನ್ಯಾಯಾಲಯದಿಂದ ಸಿಕ್ಕಿದ್ದ ಈ ಹಕ್ಕು ಏನಾಗಲಿದೆ? ಮಣ್ಣುಪಾಲೇ!

’ಶಾಸಕಾಂಗ ರೂಪಿಸುವ ಯಾವುದೇ ಕಾನೂನಿನ ಪ್ರಕಾರ ಸರ್ಕಾರ ಎಂದರೆ ಅದು ಲೆಫ್ಟಿನೆಂಟ್ ಜನರಲ್’ ಎಂದು ನೇರವಾಗಿ ಪ್ರಜಾಪ್ರಭುತ್ವದ, ಸಂವಿಧಾನದ ಆಶಯಗಳ ಮುಖದ ಮೇಲೆ ಹೊಡೆಯುವಷ್ಟು (ಈಗಾಗಲೇ ಸಾಕಷ್ಟು ಬಾರಿ ಹೊಡೆದಿದೆ) ಬಿಜೆಪಿ ಮುಂದಕ್ಕೆ ಹೋಗಿದೆ.

ಈ ವಿವಾದ ಶುರು ಮಾಡಿದ್ದು ಯಾರು ಕಾಂಗ್ರೆಸ್/ ಬಿಜೆಪಿ?

ಕಾಂಗ್ರೆಸ್ ಸರ್ಕಾರ ಕೇಂದ್ರಾಡಳಿತ ಪ್ರದೇಶವಾಗಿದ್ದ ರಾಷ್ಟ ರಾಜಧಾನಿ ದೆಹಲಿಯಲ್ಲಿ ಸೀಮಿತ ಅಧಿಕಾರ ಹೊಂದಿರುವ ವಿಧಾನಸಭೆಗೆ ಅವಕಾಶ ನೀಡಿ ’ರಾಷ್ಟ್ರ ರಾಜಧಾನಿ ಪ್ರದೇಶ- ದೆಹಲಿ ಸರ್ಕಾರ’ (NCT) ಕಾಯ್ದೆ- 1991 ಅನ್ನು ಜಾರಿಗೊಳಿಸಲಾಯಿತು. 1996ರಿಂದಲೂ ದೆಹಲಿ ಸರ್ಕಾರ, ಕೇಂದ್ರ ಸರ್ಕಾರದ ಜೊತೆಗಿನ ಎಲ್ಲಾ ರೀತಿಯ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳುತ್ತಿದ್ದವು. ಆದರೆ, 2015ರಲ್ಲಿ ದೆಹಲಿಯ ಅಧಿಕಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ಹಾಗಾದರೆ ಇಲ್ಲಿ ಎರಡು ಬಗೆದದ್ದು ಬಿಜೆಪಿಯೇ ಎಂದಾಯಿತು.

’ಲೋಕಸಭೆಯಲ್ಲಿ ಅನುಮೋದನೆ ಪಡೆದ ಮಸೂದೆಯ ಸಾಲುಗಳು ದೆಹಲಿ ನಾಗರಿಕರಿಗೆ ಅವಮಾನ ಮೂಡುವಂತಿವೆ. ದೆಹಲಿಯ ಜನರು ಮತ ಚಲಾಯಿಸಿ ಆಯ್ಕೆ ಮಾಡಿದವರಿಂದ ಅಧಿಕಾರವನ್ನು ಕಿತ್ತುಕೊಂಡು, ಸೋತವರಿಗೆ ಅಧಿಕಾರ ನೀಡಿರುವ ಬಿಜೆಪಿಯು ದೆಹಲಿ ಜನರಿಗೆ ಮೋಸ ಮಾಡಿದೆ’ ಎಂದು ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

’ಇತ್ತೀಚೆಗೆ ಗುಜರಾತ್ ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅದರಲ್ಲೂ ಸೂರತ್‌ನಲ್ಲಿ ಎಎಪಿ 22 ಸೀಟುಗಳನ್ನು ಗೆದ್ದು ಪಾದಾರ್ಪಣೆ ಮಾಡಿದ್ದು ಅಮಿತ್ ಷಾ, ನರೇಂದ್ರ ಮೋದಿ ಅವರ ಗರ್ವಕ್ಕೆ ಪೆಟ್ಟುಕೊಟ್ಟಿದೆ. ಅಲ್ಲದೇ ಇಡೀ ರಾಷ್ಟ್ರದಲ್ಲಿ ಅದರಲ್ಲೂ ಪ್ರಮುಖವಾಗಿ ಉತ್ತರ ಭಾರತ ಭಾಗದಲ್ಲಿ ಬಿಜೆಪಿಗೆ ಆತಂಕ ಮೂಡಿಸುತ್ತಿರುವ ಏಕೈಕೆ ಪಕ್ಷವೆಂದರೆ ಆಮ್ ಆದ್ಮಿ ಪಕ್ಷವೊಂದೆ. ಆದ ಕಾರಣ ನಮ್ಮ ಪಕ್ಷವನ್ನು ಮುಗಿಸುವ ಹುನ್ನಾರವೇ ಕಾಯ್ದೆಯ ತಿದ್ದುಪಡಿ’ ಎಂಬುದು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ಮಾತು.

’ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಅವರು ಮಸೂದೆ ಮಂಡನೆಯ ವೇಳೆ ಸರ್ಕಾರದ ದಕ್ಷತೆ ಹೆಚ್ಚಾಗಲಿದೆ ಅಲ್ಲದೇ, ದೆಹಲಿ ಸರ್ಕಾರದ ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಅಸ್ಪಷ್ಟತೆ ಸೃಷ್ಟಿಯಾಗಿತ್ತು. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಿಂದ ಮಸೂದೆ ಮಂಡಿಸಲಾಗಿದೆ. ದೆಹಲಿಗೆ ಎಲ್‌ಜಿ ಅವರೇ ಆಡಳಿತಗಾರರಾಗಿದ್ದಾರೆ. ಅಲ್ಲದೆ ಸರ್ಕಾರದ ದೈನಂದಿನ ವ್ಯವಹಾರಗಳನ್ನು ತಿಳಿದುಕೊಳ್ಳುವ ಅಧಿಕಾರ ಅವರಿಗೆ ಇದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಆಡಳಿತಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದೆ ಎನ್ನುವ ತಿಪ್ಪೆ ಸಾರಿಸುವ ಮಾತುಗಳನ್ನು ಆಡುತ್ತಲೇ ನಮ್ಮ ಸರ್ಕಾರದ ಧಮನಕ್ಕೆ ಬಿಜೆಪಿ ನಿಂತಿದೆ’ ಎಂಬುದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಅಭಿಪ್ರಾಯ.

ದೆಹಲಿಯ ಚುನಾಯಿತ ಸರ್ಕಾರ ಮತ್ತು ಲೆಫ್ಟಿನೆಂಟ್ ಜನರಲ್ ಅಧಿಕಾರದ ಜಟಾಪಟಿ ಹೊಸತೇನೂ ಅಲ್ಲ. ಕೇಂದ್ರ ಸರ್ಕಾರವು 2015ರಲ್ಲಿ ಲೆಫ್ಟಿನೆಂಟ್ ಜನರಲ್ ನಜೀಬ್ ಜಂಗ್ ಸಹ ಇದೇ ಮಾತು ಹೇಳಿದ್ದರು. ’ಸರ್ಕಾರ ಎಂದರೆ ರಾಷ್ಟ್ರಪತಿಯ ಮೂಲಕ ಸಂವಿಧಾನದ 239ನೇ ಪರಿಚ್ಛೇದದ ಅನ್ವಯ ನೇಮಕಗೊಂಡ ಲೆಫ್ಟಿನೆಂಟ್ ಜನರಲ್’ ಎಂದಿದ್ದರು.

ಒಟ್ಟಿನಲ್ಲಿ ಬಿಜೆಪಿ ಎಷ್ಟು ಮೊಂಡುತನ ಬೆಳೆಸಿಕೊಂಡಿದೆ ಎಂದರೆ ನಾಳೆ ಬಾ ಎಂದು ಬಾಗಿಲ ಮೇಲೆ ಬರೆದರೂ ಇಂದೇ ಬರುವೆ ಎನ್ನುವ ಭೂತದಂತಾಗಿದೆ. ಈ ಭೂತ ಇಂದು ದೆಹಲಿಯ ಬಾಗಿಲು ಮಾತ್ರ ಬಡಿದಿಲ್ಲ, ಎಲ್ಲರ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುಸ್ಸೂಚನೆಯೇ ಇದು?

ಗುಜರಾತ್ ಮಾಡೆಲ್‌ಅನ್ನು ಇಡೀ ದೇಶವೇ ಮರೆಯುವಂತೆ ಮಾಡಿ, ಬಿಜೆಪಿಗೆ ಮಗ್ಗುಲು ಮುಳ್ಳಾಗಿ ಬೆಳೆಯುತ್ತಿದ್ದ ಅರವಿಂದ ಕೇಜ್ರಿವಾಲ್ ಅವರ ದೆಹಲಿ ಮಾಡೆಲ್ ಎನ್ನುವ ಬೆಣ್ಣೆ ಜಾರಿ ಬಿಜೆಪಿಯ ರೊಟ್ಟಿಗೆ ಬಿದ್ದಿದೆ. ಇನ್ನು ನಿಮ್ಮ, ನಿಮ್ಮ ಮಾದರಿಗಳನ್ನು ನೀವಿಟ್ಟುಕೊಳ್ಳಿ ನಾವು ಹೇಳುವ ಮಾದರಿಯೇ ಅಂತಿಮ ಮರಣ ಶಾಸನ ಇದಾಗಲಿದೆಯೇ? ಎಲ್ಲವೂ ಆಗುತ್ತಿರುವ ಈ ಹೊತ್ತಿನಲ್ಲಿ ಇದೂ ಆಗಲಿದೆ ಎನ್ನುವುದೇ ದುರಂತ.

ಸೋಮಶೇಖರ್ ಶಿರಾ
ಪತ್ರಕರ್ತರು. ಸದ್ಯ ಎಎಪಿ ಕರ್ನಾಟಕದ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...