Homeಮುಖಪುಟಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

- Advertisement -
- Advertisement -

ಮಧ್ಯ ಕರ್ನಾಟಕದ ಬೃಹತ್ ಜನಪದ ಮಹಾಕಾವ್ಯ ಜುಂಜಪ್ಪ ಕಾವ್ಯದಲ್ಲಿ ಒಂದು ಘಟನೆ ಬರುತ್ತದೆ. ಇಡೀ ನಾಡಿನ ತುಂಬೆಲ್ಲಾ ವಿಪರೀತ ಕ್ಷಾಮ, ನೀರು-ನಿಡಿಗೂ ತಾತ್ಸಾರ ಎದ್ದು ದನಗಳಿಗೆ ತಿನ್ನಲು ಮೇವು, ಕುಡಿಯಲು ನೀರಿಲ್ಲದ ಪರಿಸ್ಥಿತಿ ಬಂದೊದಗುತ್ತದೆ. ತನ್ನ ಪಶು ಸಂಪತ್ತು ಉಳಿಸಿಕೊಳ್ಳಲು ಮೇವು-ನೀರು ಹುಡುಕಿ ಹೊರಟ ಜುಂಜಪ್ಪನಿಗೆ ಒಂದು ದೊಡ್ಡ ಗೋಮಾಳ ಎದುರಾಗುತ್ತದೆ. ಆಳೆತ್ತರದ ಹುಲ್ಲು, ಕೆರೆ ತುಂಬಾ ನೀರು ನೋಡಿ ಸಂತಸಗೊಂಡ ಜುಂಜಪ್ಪ ತನ್ನ ದನಗಳನ್ನ ಅಲ್ಲಿಗೆ ಅಟ್ಟುತ್ತಾನೆ. ಆದರೆ ಆ ಪ್ರದೇಶದ ಸೆಟ್ಟಿ ನೂರಾರು ಜನ ಕಾವಲುಗಾರರು, ಭದ್ರವಾದ ಬೇಲಿ ಹಾಕಿ ನೊಣವೂ ಒಳ ಹೋಗದಂತೆ ಮಾಡಿರುತ್ತಾನೆ. ಆಗ ಜುಂಜಪ್ಪ ಹೇಳುವ ಮಾತಿದೆಯಲ್ಲ ಎಲ್ಲ ಕಾಲಕ್ಕೂ ಸಲ್ಲುವ ಮಾತು “ಯಪ್ಪಾ ದನಗೋಳ ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎಂದು ಸೆಟ್ಟಿಯನ್ನು ಸದೆಬಡಿದು ತನ್ನ ಪಶು ಸಂಪತ್ತು ಉಳಿಸಿಕೊಳ್ಳುತ್ತಾನೆ.

ಜುಂಜಪ್ಪನ “ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎನ್ನುವ ಕ್ರಾಂತಿಕಾರಿ ಮಾತಿನ ಅರ್ಥ ಎಲ್ಲವೂ ಎಲ್ಲರಿಗೆ ಸೇರಿದ್ದು, ಆಹಾರ, ನೀರು ಭೂಮಿಯ ಹಕ್ಕಿನ ಬಗ್ಗೆ ಮಾತನಾಡುತ್ತಾ ಹೋಗುತ್ತದೆ. ಈ ನಿದರ್ಶನ ಏಕೆ ಇಲ್ಲಿ ಬಂತು ಎಂದರೆ ಇಂದು ಕೇಂದ್ರ ಬಿಜೆಪಿ ಸರ್ಕಾರ ಈ ಎಲ್ಲಾ ಮೂರು ಮೂಲಭೂತ ಸಂಗತಿಗಳನ್ನು ಮುಕ್ಕರಿಸಿಕೊಂಡು ತಿನ್ನುತ್ತಿದೆ.

ವಿಷಯಕ್ಕೆ ಬರುವುದಾದರೆ ಸೋಮವಾರ (ಮಾರ್ಚ್ 22ರಂದು) ಲೋಕಸಭೆಯಲ್ಲಿ ಮಂಡಿಸಿದ ರಾಷ್ಟ್ರ ರಾಜಧಾನಿ ದೆಹಲಿಯ ಭೂಪ್ರದೇಶ (ತಿದ್ದುಪಡಿ) ಕಾಯ್ದೆ (2021) (National Capital Territory of Delhi (Amendment) Bill – GNCTD)ಯ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ರಾಜ್ಯಗಳ ಶಾಸಕಾಂಗಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆಯೇ? ನಾವೇನು ದೂರವಿಲ್ಲ ನಿಮ್ಮ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುನ್ಸೂಚನೆಯೇ?

ಈ ತಿದ್ದುಪಡಿ ಏನು ಹೇಳುತ್ತದೆ?

ದೆಹಲಿ ಚುನಾಯಿತ ಸರ್ಕಾರ, ಸಚಿವ ಸಂಪುಟವು ಯಾವುದೇ ನಿರ್ಧಾರಗಳನ್ನು ಅನುಷ್ಠಾನಕ್ಕೆ ತರುವ ಮೊದಲು ಲೆಫ್ಟಿನೆಂಟ್ ಜನರಲ್ ಅಭಿಪ್ರಾಯ ಪಡೆದುಕೊಳ್ಳಬೇಕು ಎಂದು ಹೇಳುತ್ತದೆ.

ಇದರಿಂದ ಏನಾದರೂ ತೊಂದರೆಯೇ?

ಹೌದು, ಈ ತಿದ್ದುಪಡಿಯಿಂದ “ಸರ್ಕಾರ ಎಂದರೆ ಈಗ ಲೆಫ್ಟಿನೆಂಟ್ ಗವರ್ನರ್” ಎಂದಾಗುತ್ತದೆ.

ಈ ಹೊಸ ತಿದ್ದುಪಡಿಯ ಪ್ರಕಾರ ದೆಹಲಿ ಸರ್ಕಾರ ಸಣ್ಣ ನಿರ್ಧಾರ ತೆಗೆದುಕೊಳ್ಳಬೇಕಾದರೂ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಅಭಿಪ್ರಾಯ ತೆಗೆದುಕೊಳ್ಳಲೇಬೇಕು. ಅವರು ಹೂ ಅಂದರೆ ಹೂ ಇಲ್ಲ ಅಂದರೆ ಇಲ್ಲ. ’ಸರ್ಕಾರ’ ಎಂದರೆ ಲೆಫ್ಟಿನೆಂಟ್ ಗವರ್ನರ್ ಮಾತ್ರ. ಜನರಿಂದ ಆಯ್ಕೆಯಾದವರಿಗೆ ತುಸು ಗೌರವವೂ ಇಲ್ಲವೇ?

ತಿದ್ದುಪಡಿ ತಂದಿರುವ ದೊಡ್ಡ ಸಂಕಷ್ಟ ಏನು?

ಇದಕ್ಕೂ ಮೊದಲು ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂವ್ಯವಹಾರಗಳನ್ನು ಹೊರತುಪಡಿಸಿ ಮಿಕ್ಕ ಎಲ್ಲಾ ರೀತಿಯ ಸಂಗತಿಗಳಲ್ಲಿ ಲೆಫ್ಟಿನೆಂಟ್ ಜನರಲ್ ಅವರ ಒಪ್ಪಿಗೆ ಪಡೆದುಕೊಳ್ಳಬೇಕಾದ ಅಗತ್ಯ ಇರಲಿಲ್ಲ, ಆದರೆ ಈಗ ಪ್ರತಿಯೊಂದಕ್ಕೂ ಎಲ್‌ಜಿ ಅವರ ಮನೆ ಬಾಗಿಲು ತಟ್ಟುವ ಪ್ರಮೇಯವನ್ನು ತಿದ್ದುಪಡಿ ತಂದಿಟ್ಟಿದೆ.

ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಅಧಿಕಾರ ವ್ಯಾಪ್ತಿಯ ಬಗ್ಗೆ 2018ರಲ್ಲಿ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ನೀಡಿತ್ತು. ದೆಹಲಿಯ ಎಲ್‌ಜಿ ಸ್ವತಂತ್ರವಾಗಿ ವರ್ತಿಸುವಂತಿಲ್ಲ, ಸರ್ಕಾರದ ನೀತಿ ನಿರ್ಧಾರಗಳಿಗೆ ಅಡ್ಡಿಪಡಿಸುವಂತಿಲ್ಲ. ಸಂವಿಧಾನವು ಚುನಾಯಿತ ಸರಕಾರಕ್ಕೆ ಮಹತ್ವ ನೀಡಿರುವಾಗ ಅದರ ನಿರ್ಧಾರಗಳಲ್ಲಿ ಎಲ್‌ಜಿ ಕೈಯಾಡಿಸುವಂತಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿತ್ತು.

ಆದರೆ ಈಗ ಬಿಜೆಪಿ ಸರ್ಕಾರದ ಉಪ್ಪು ಕದಿಯುವ ಬುದ್ಧಿಯಿಂದ ದೆಹಲಿ ಸರ್ಕಾರಕ್ಕೆ ನ್ಯಾಯಾಲಯದಿಂದ ಸಿಕ್ಕಿದ್ದ ಈ ಹಕ್ಕು ಏನಾಗಲಿದೆ? ಮಣ್ಣುಪಾಲೇ!

’ಶಾಸಕಾಂಗ ರೂಪಿಸುವ ಯಾವುದೇ ಕಾನೂನಿನ ಪ್ರಕಾರ ಸರ್ಕಾರ ಎಂದರೆ ಅದು ಲೆಫ್ಟಿನೆಂಟ್ ಜನರಲ್’ ಎಂದು ನೇರವಾಗಿ ಪ್ರಜಾಪ್ರಭುತ್ವದ, ಸಂವಿಧಾನದ ಆಶಯಗಳ ಮುಖದ ಮೇಲೆ ಹೊಡೆಯುವಷ್ಟು (ಈಗಾಗಲೇ ಸಾಕಷ್ಟು ಬಾರಿ ಹೊಡೆದಿದೆ) ಬಿಜೆಪಿ ಮುಂದಕ್ಕೆ ಹೋಗಿದೆ.

ಈ ವಿವಾದ ಶುರು ಮಾಡಿದ್ದು ಯಾರು ಕಾಂಗ್ರೆಸ್/ ಬಿಜೆಪಿ?

ಕಾಂಗ್ರೆಸ್ ಸರ್ಕಾರ ಕೇಂದ್ರಾಡಳಿತ ಪ್ರದೇಶವಾಗಿದ್ದ ರಾಷ್ಟ ರಾಜಧಾನಿ ದೆಹಲಿಯಲ್ಲಿ ಸೀಮಿತ ಅಧಿಕಾರ ಹೊಂದಿರುವ ವಿಧಾನಸಭೆಗೆ ಅವಕಾಶ ನೀಡಿ ’ರಾಷ್ಟ್ರ ರಾಜಧಾನಿ ಪ್ರದೇಶ- ದೆಹಲಿ ಸರ್ಕಾರ’ (NCT) ಕಾಯ್ದೆ- 1991 ಅನ್ನು ಜಾರಿಗೊಳಿಸಲಾಯಿತು. 1996ರಿಂದಲೂ ದೆಹಲಿ ಸರ್ಕಾರ, ಕೇಂದ್ರ ಸರ್ಕಾರದ ಜೊತೆಗಿನ ಎಲ್ಲಾ ರೀತಿಯ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳುತ್ತಿದ್ದವು. ಆದರೆ, 2015ರಲ್ಲಿ ದೆಹಲಿಯ ಅಧಿಕಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ಹಾಗಾದರೆ ಇಲ್ಲಿ ಎರಡು ಬಗೆದದ್ದು ಬಿಜೆಪಿಯೇ ಎಂದಾಯಿತು.

’ಲೋಕಸಭೆಯಲ್ಲಿ ಅನುಮೋದನೆ ಪಡೆದ ಮಸೂದೆಯ ಸಾಲುಗಳು ದೆಹಲಿ ನಾಗರಿಕರಿಗೆ ಅವಮಾನ ಮೂಡುವಂತಿವೆ. ದೆಹಲಿಯ ಜನರು ಮತ ಚಲಾಯಿಸಿ ಆಯ್ಕೆ ಮಾಡಿದವರಿಂದ ಅಧಿಕಾರವನ್ನು ಕಿತ್ತುಕೊಂಡು, ಸೋತವರಿಗೆ ಅಧಿಕಾರ ನೀಡಿರುವ ಬಿಜೆಪಿಯು ದೆಹಲಿ ಜನರಿಗೆ ಮೋಸ ಮಾಡಿದೆ’ ಎಂದು ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

’ಇತ್ತೀಚೆಗೆ ಗುಜರಾತ್ ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅದರಲ್ಲೂ ಸೂರತ್‌ನಲ್ಲಿ ಎಎಪಿ 22 ಸೀಟುಗಳನ್ನು ಗೆದ್ದು ಪಾದಾರ್ಪಣೆ ಮಾಡಿದ್ದು ಅಮಿತ್ ಷಾ, ನರೇಂದ್ರ ಮೋದಿ ಅವರ ಗರ್ವಕ್ಕೆ ಪೆಟ್ಟುಕೊಟ್ಟಿದೆ. ಅಲ್ಲದೇ ಇಡೀ ರಾಷ್ಟ್ರದಲ್ಲಿ ಅದರಲ್ಲೂ ಪ್ರಮುಖವಾಗಿ ಉತ್ತರ ಭಾರತ ಭಾಗದಲ್ಲಿ ಬಿಜೆಪಿಗೆ ಆತಂಕ ಮೂಡಿಸುತ್ತಿರುವ ಏಕೈಕೆ ಪಕ್ಷವೆಂದರೆ ಆಮ್ ಆದ್ಮಿ ಪಕ್ಷವೊಂದೆ. ಆದ ಕಾರಣ ನಮ್ಮ ಪಕ್ಷವನ್ನು ಮುಗಿಸುವ ಹುನ್ನಾರವೇ ಕಾಯ್ದೆಯ ತಿದ್ದುಪಡಿ’ ಎಂಬುದು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ಮಾತು.

’ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಅವರು ಮಸೂದೆ ಮಂಡನೆಯ ವೇಳೆ ಸರ್ಕಾರದ ದಕ್ಷತೆ ಹೆಚ್ಚಾಗಲಿದೆ ಅಲ್ಲದೇ, ದೆಹಲಿ ಸರ್ಕಾರದ ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಅಸ್ಪಷ್ಟತೆ ಸೃಷ್ಟಿಯಾಗಿತ್ತು. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಿಂದ ಮಸೂದೆ ಮಂಡಿಸಲಾಗಿದೆ. ದೆಹಲಿಗೆ ಎಲ್‌ಜಿ ಅವರೇ ಆಡಳಿತಗಾರರಾಗಿದ್ದಾರೆ. ಅಲ್ಲದೆ ಸರ್ಕಾರದ ದೈನಂದಿನ ವ್ಯವಹಾರಗಳನ್ನು ತಿಳಿದುಕೊಳ್ಳುವ ಅಧಿಕಾರ ಅವರಿಗೆ ಇದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಆಡಳಿತಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದೆ ಎನ್ನುವ ತಿಪ್ಪೆ ಸಾರಿಸುವ ಮಾತುಗಳನ್ನು ಆಡುತ್ತಲೇ ನಮ್ಮ ಸರ್ಕಾರದ ಧಮನಕ್ಕೆ ಬಿಜೆಪಿ ನಿಂತಿದೆ’ ಎಂಬುದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಅಭಿಪ್ರಾಯ.

ದೆಹಲಿಯ ಚುನಾಯಿತ ಸರ್ಕಾರ ಮತ್ತು ಲೆಫ್ಟಿನೆಂಟ್ ಜನರಲ್ ಅಧಿಕಾರದ ಜಟಾಪಟಿ ಹೊಸತೇನೂ ಅಲ್ಲ. ಕೇಂದ್ರ ಸರ್ಕಾರವು 2015ರಲ್ಲಿ ಲೆಫ್ಟಿನೆಂಟ್ ಜನರಲ್ ನಜೀಬ್ ಜಂಗ್ ಸಹ ಇದೇ ಮಾತು ಹೇಳಿದ್ದರು. ’ಸರ್ಕಾರ ಎಂದರೆ ರಾಷ್ಟ್ರಪತಿಯ ಮೂಲಕ ಸಂವಿಧಾನದ 239ನೇ ಪರಿಚ್ಛೇದದ ಅನ್ವಯ ನೇಮಕಗೊಂಡ ಲೆಫ್ಟಿನೆಂಟ್ ಜನರಲ್’ ಎಂದಿದ್ದರು.

ಒಟ್ಟಿನಲ್ಲಿ ಬಿಜೆಪಿ ಎಷ್ಟು ಮೊಂಡುತನ ಬೆಳೆಸಿಕೊಂಡಿದೆ ಎಂದರೆ ನಾಳೆ ಬಾ ಎಂದು ಬಾಗಿಲ ಮೇಲೆ ಬರೆದರೂ ಇಂದೇ ಬರುವೆ ಎನ್ನುವ ಭೂತದಂತಾಗಿದೆ. ಈ ಭೂತ ಇಂದು ದೆಹಲಿಯ ಬಾಗಿಲು ಮಾತ್ರ ಬಡಿದಿಲ್ಲ, ಎಲ್ಲರ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುಸ್ಸೂಚನೆಯೇ ಇದು?

ಗುಜರಾತ್ ಮಾಡೆಲ್‌ಅನ್ನು ಇಡೀ ದೇಶವೇ ಮರೆಯುವಂತೆ ಮಾಡಿ, ಬಿಜೆಪಿಗೆ ಮಗ್ಗುಲು ಮುಳ್ಳಾಗಿ ಬೆಳೆಯುತ್ತಿದ್ದ ಅರವಿಂದ ಕೇಜ್ರಿವಾಲ್ ಅವರ ದೆಹಲಿ ಮಾಡೆಲ್ ಎನ್ನುವ ಬೆಣ್ಣೆ ಜಾರಿ ಬಿಜೆಪಿಯ ರೊಟ್ಟಿಗೆ ಬಿದ್ದಿದೆ. ಇನ್ನು ನಿಮ್ಮ, ನಿಮ್ಮ ಮಾದರಿಗಳನ್ನು ನೀವಿಟ್ಟುಕೊಳ್ಳಿ ನಾವು ಹೇಳುವ ಮಾದರಿಯೇ ಅಂತಿಮ ಮರಣ ಶಾಸನ ಇದಾಗಲಿದೆಯೇ? ಎಲ್ಲವೂ ಆಗುತ್ತಿರುವ ಈ ಹೊತ್ತಿನಲ್ಲಿ ಇದೂ ಆಗಲಿದೆ ಎನ್ನುವುದೇ ದುರಂತ.

ಸೋಮಶೇಖರ್ ಶಿರಾ
ಪತ್ರಕರ್ತರು. ಸದ್ಯ ಎಎಪಿ ಕರ್ನಾಟಕದ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...