Homeಮುಖಪುಟಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

ಎನ್‌ಸಿಟಿ ದೆಹಲಿ ತಿದ್ದುಪಡಿ ಬಿಲ್: ಬೇರೆ ರಾಜ್ಯಗಳ ಬಾಗಿಲಿಗೂ ಕೇಂದ್ರೀಕರಣದ ಭೂತ ವಕ್ಕರಿಸುವ ಮುನ್ಸೂಚನೆಯೇ?

- Advertisement -
- Advertisement -

ಮಧ್ಯ ಕರ್ನಾಟಕದ ಬೃಹತ್ ಜನಪದ ಮಹಾಕಾವ್ಯ ಜುಂಜಪ್ಪ ಕಾವ್ಯದಲ್ಲಿ ಒಂದು ಘಟನೆ ಬರುತ್ತದೆ. ಇಡೀ ನಾಡಿನ ತುಂಬೆಲ್ಲಾ ವಿಪರೀತ ಕ್ಷಾಮ, ನೀರು-ನಿಡಿಗೂ ತಾತ್ಸಾರ ಎದ್ದು ದನಗಳಿಗೆ ತಿನ್ನಲು ಮೇವು, ಕುಡಿಯಲು ನೀರಿಲ್ಲದ ಪರಿಸ್ಥಿತಿ ಬಂದೊದಗುತ್ತದೆ. ತನ್ನ ಪಶು ಸಂಪತ್ತು ಉಳಿಸಿಕೊಳ್ಳಲು ಮೇವು-ನೀರು ಹುಡುಕಿ ಹೊರಟ ಜುಂಜಪ್ಪನಿಗೆ ಒಂದು ದೊಡ್ಡ ಗೋಮಾಳ ಎದುರಾಗುತ್ತದೆ. ಆಳೆತ್ತರದ ಹುಲ್ಲು, ಕೆರೆ ತುಂಬಾ ನೀರು ನೋಡಿ ಸಂತಸಗೊಂಡ ಜುಂಜಪ್ಪ ತನ್ನ ದನಗಳನ್ನ ಅಲ್ಲಿಗೆ ಅಟ್ಟುತ್ತಾನೆ. ಆದರೆ ಆ ಪ್ರದೇಶದ ಸೆಟ್ಟಿ ನೂರಾರು ಜನ ಕಾವಲುಗಾರರು, ಭದ್ರವಾದ ಬೇಲಿ ಹಾಕಿ ನೊಣವೂ ಒಳ ಹೋಗದಂತೆ ಮಾಡಿರುತ್ತಾನೆ. ಆಗ ಜುಂಜಪ್ಪ ಹೇಳುವ ಮಾತಿದೆಯಲ್ಲ ಎಲ್ಲ ಕಾಲಕ್ಕೂ ಸಲ್ಲುವ ಮಾತು “ಯಪ್ಪಾ ದನಗೋಳ ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎಂದು ಸೆಟ್ಟಿಯನ್ನು ಸದೆಬಡಿದು ತನ್ನ ಪಶು ಸಂಪತ್ತು ಉಳಿಸಿಕೊಳ್ಳುತ್ತಾನೆ.

ಜುಂಜಪ್ಪನ “ಹುಲ್ಲಿದ್ದ ಕಡೆ ಮೇಯ್ಕಳಿ, ನೀರಿದ್ದ ಕಡೆ ಕುಡ್ಕಳಿ” ಎನ್ನುವ ಕ್ರಾಂತಿಕಾರಿ ಮಾತಿನ ಅರ್ಥ ಎಲ್ಲವೂ ಎಲ್ಲರಿಗೆ ಸೇರಿದ್ದು, ಆಹಾರ, ನೀರು ಭೂಮಿಯ ಹಕ್ಕಿನ ಬಗ್ಗೆ ಮಾತನಾಡುತ್ತಾ ಹೋಗುತ್ತದೆ. ಈ ನಿದರ್ಶನ ಏಕೆ ಇಲ್ಲಿ ಬಂತು ಎಂದರೆ ಇಂದು ಕೇಂದ್ರ ಬಿಜೆಪಿ ಸರ್ಕಾರ ಈ ಎಲ್ಲಾ ಮೂರು ಮೂಲಭೂತ ಸಂಗತಿಗಳನ್ನು ಮುಕ್ಕರಿಸಿಕೊಂಡು ತಿನ್ನುತ್ತಿದೆ.

ವಿಷಯಕ್ಕೆ ಬರುವುದಾದರೆ ಸೋಮವಾರ (ಮಾರ್ಚ್ 22ರಂದು) ಲೋಕಸಭೆಯಲ್ಲಿ ಮಂಡಿಸಿದ ರಾಷ್ಟ್ರ ರಾಜಧಾನಿ ದೆಹಲಿಯ ಭೂಪ್ರದೇಶ (ತಿದ್ದುಪಡಿ) ಕಾಯ್ದೆ (2021) (National Capital Territory of Delhi (Amendment) Bill – GNCTD)ಯ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಎಲ್ಲಾ ರಾಜ್ಯಗಳ ಶಾಸಕಾಂಗಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆಯೇ? ನಾವೇನು ದೂರವಿಲ್ಲ ನಿಮ್ಮ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುನ್ಸೂಚನೆಯೇ?

ಈ ತಿದ್ದುಪಡಿ ಏನು ಹೇಳುತ್ತದೆ?

ದೆಹಲಿ ಚುನಾಯಿತ ಸರ್ಕಾರ, ಸಚಿವ ಸಂಪುಟವು ಯಾವುದೇ ನಿರ್ಧಾರಗಳನ್ನು ಅನುಷ್ಠಾನಕ್ಕೆ ತರುವ ಮೊದಲು ಲೆಫ್ಟಿನೆಂಟ್ ಜನರಲ್ ಅಭಿಪ್ರಾಯ ಪಡೆದುಕೊಳ್ಳಬೇಕು ಎಂದು ಹೇಳುತ್ತದೆ.

ಇದರಿಂದ ಏನಾದರೂ ತೊಂದರೆಯೇ?

ಹೌದು, ಈ ತಿದ್ದುಪಡಿಯಿಂದ “ಸರ್ಕಾರ ಎಂದರೆ ಈಗ ಲೆಫ್ಟಿನೆಂಟ್ ಗವರ್ನರ್” ಎಂದಾಗುತ್ತದೆ.

ಈ ಹೊಸ ತಿದ್ದುಪಡಿಯ ಪ್ರಕಾರ ದೆಹಲಿ ಸರ್ಕಾರ ಸಣ್ಣ ನಿರ್ಧಾರ ತೆಗೆದುಕೊಳ್ಳಬೇಕಾದರೂ ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಅಭಿಪ್ರಾಯ ತೆಗೆದುಕೊಳ್ಳಲೇಬೇಕು. ಅವರು ಹೂ ಅಂದರೆ ಹೂ ಇಲ್ಲ ಅಂದರೆ ಇಲ್ಲ. ’ಸರ್ಕಾರ’ ಎಂದರೆ ಲೆಫ್ಟಿನೆಂಟ್ ಗವರ್ನರ್ ಮಾತ್ರ. ಜನರಿಂದ ಆಯ್ಕೆಯಾದವರಿಗೆ ತುಸು ಗೌರವವೂ ಇಲ್ಲವೇ?

ತಿದ್ದುಪಡಿ ತಂದಿರುವ ದೊಡ್ಡ ಸಂಕಷ್ಟ ಏನು?

ಇದಕ್ಕೂ ಮೊದಲು ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ ಮತ್ತು ಭೂವ್ಯವಹಾರಗಳನ್ನು ಹೊರತುಪಡಿಸಿ ಮಿಕ್ಕ ಎಲ್ಲಾ ರೀತಿಯ ಸಂಗತಿಗಳಲ್ಲಿ ಲೆಫ್ಟಿನೆಂಟ್ ಜನರಲ್ ಅವರ ಒಪ್ಪಿಗೆ ಪಡೆದುಕೊಳ್ಳಬೇಕಾದ ಅಗತ್ಯ ಇರಲಿಲ್ಲ, ಆದರೆ ಈಗ ಪ್ರತಿಯೊಂದಕ್ಕೂ ಎಲ್‌ಜಿ ಅವರ ಮನೆ ಬಾಗಿಲು ತಟ್ಟುವ ಪ್ರಮೇಯವನ್ನು ತಿದ್ದುಪಡಿ ತಂದಿಟ್ಟಿದೆ.

ದೆಹಲಿ ಸರ್ಕಾರ ಮತ್ತು ಲೆಫ್ಟಿನೆಂಟ್ ಗವರ್ನರ್ ಅಧಿಕಾರ ವ್ಯಾಪ್ತಿಯ ಬಗ್ಗೆ 2018ರಲ್ಲಿ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ನೀಡಿತ್ತು. ದೆಹಲಿಯ ಎಲ್‌ಜಿ ಸ್ವತಂತ್ರವಾಗಿ ವರ್ತಿಸುವಂತಿಲ್ಲ, ಸರ್ಕಾರದ ನೀತಿ ನಿರ್ಧಾರಗಳಿಗೆ ಅಡ್ಡಿಪಡಿಸುವಂತಿಲ್ಲ. ಸಂವಿಧಾನವು ಚುನಾಯಿತ ಸರಕಾರಕ್ಕೆ ಮಹತ್ವ ನೀಡಿರುವಾಗ ಅದರ ನಿರ್ಧಾರಗಳಲ್ಲಿ ಎಲ್‌ಜಿ ಕೈಯಾಡಿಸುವಂತಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿತ್ತು.

ಆದರೆ ಈಗ ಬಿಜೆಪಿ ಸರ್ಕಾರದ ಉಪ್ಪು ಕದಿಯುವ ಬುದ್ಧಿಯಿಂದ ದೆಹಲಿ ಸರ್ಕಾರಕ್ಕೆ ನ್ಯಾಯಾಲಯದಿಂದ ಸಿಕ್ಕಿದ್ದ ಈ ಹಕ್ಕು ಏನಾಗಲಿದೆ? ಮಣ್ಣುಪಾಲೇ!

’ಶಾಸಕಾಂಗ ರೂಪಿಸುವ ಯಾವುದೇ ಕಾನೂನಿನ ಪ್ರಕಾರ ಸರ್ಕಾರ ಎಂದರೆ ಅದು ಲೆಫ್ಟಿನೆಂಟ್ ಜನರಲ್’ ಎಂದು ನೇರವಾಗಿ ಪ್ರಜಾಪ್ರಭುತ್ವದ, ಸಂವಿಧಾನದ ಆಶಯಗಳ ಮುಖದ ಮೇಲೆ ಹೊಡೆಯುವಷ್ಟು (ಈಗಾಗಲೇ ಸಾಕಷ್ಟು ಬಾರಿ ಹೊಡೆದಿದೆ) ಬಿಜೆಪಿ ಮುಂದಕ್ಕೆ ಹೋಗಿದೆ.

ಈ ವಿವಾದ ಶುರು ಮಾಡಿದ್ದು ಯಾರು ಕಾಂಗ್ರೆಸ್/ ಬಿಜೆಪಿ?

ಕಾಂಗ್ರೆಸ್ ಸರ್ಕಾರ ಕೇಂದ್ರಾಡಳಿತ ಪ್ರದೇಶವಾಗಿದ್ದ ರಾಷ್ಟ ರಾಜಧಾನಿ ದೆಹಲಿಯಲ್ಲಿ ಸೀಮಿತ ಅಧಿಕಾರ ಹೊಂದಿರುವ ವಿಧಾನಸಭೆಗೆ ಅವಕಾಶ ನೀಡಿ ’ರಾಷ್ಟ್ರ ರಾಜಧಾನಿ ಪ್ರದೇಶ- ದೆಹಲಿ ಸರ್ಕಾರ’ (NCT) ಕಾಯ್ದೆ- 1991 ಅನ್ನು ಜಾರಿಗೊಳಿಸಲಾಯಿತು. 1996ರಿಂದಲೂ ದೆಹಲಿ ಸರ್ಕಾರ, ಕೇಂದ್ರ ಸರ್ಕಾರದ ಜೊತೆಗಿನ ಎಲ್ಲಾ ರೀತಿಯ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕವೇ ಬಗೆಹರಿಸಿಕೊಳ್ಳುತ್ತಿದ್ದವು. ಆದರೆ, 2015ರಲ್ಲಿ ದೆಹಲಿಯ ಅಧಿಕಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಯಿತು. ಹಾಗಾದರೆ ಇಲ್ಲಿ ಎರಡು ಬಗೆದದ್ದು ಬಿಜೆಪಿಯೇ ಎಂದಾಯಿತು.

’ಲೋಕಸಭೆಯಲ್ಲಿ ಅನುಮೋದನೆ ಪಡೆದ ಮಸೂದೆಯ ಸಾಲುಗಳು ದೆಹಲಿ ನಾಗರಿಕರಿಗೆ ಅವಮಾನ ಮೂಡುವಂತಿವೆ. ದೆಹಲಿಯ ಜನರು ಮತ ಚಲಾಯಿಸಿ ಆಯ್ಕೆ ಮಾಡಿದವರಿಂದ ಅಧಿಕಾರವನ್ನು ಕಿತ್ತುಕೊಂಡು, ಸೋತವರಿಗೆ ಅಧಿಕಾರ ನೀಡಿರುವ ಬಿಜೆಪಿಯು ದೆಹಲಿ ಜನರಿಗೆ ಮೋಸ ಮಾಡಿದೆ’ ಎಂದು ದೆಹಲಿ ಮುಖ್ಯಮಂತ್ರಿ ಆಮ್ ಆದ್ಮಿ ಪಕ್ಷದ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

’ಇತ್ತೀಚೆಗೆ ಗುಜರಾತ್ ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅದರಲ್ಲೂ ಸೂರತ್‌ನಲ್ಲಿ ಎಎಪಿ 22 ಸೀಟುಗಳನ್ನು ಗೆದ್ದು ಪಾದಾರ್ಪಣೆ ಮಾಡಿದ್ದು ಅಮಿತ್ ಷಾ, ನರೇಂದ್ರ ಮೋದಿ ಅವರ ಗರ್ವಕ್ಕೆ ಪೆಟ್ಟುಕೊಟ್ಟಿದೆ. ಅಲ್ಲದೇ ಇಡೀ ರಾಷ್ಟ್ರದಲ್ಲಿ ಅದರಲ್ಲೂ ಪ್ರಮುಖವಾಗಿ ಉತ್ತರ ಭಾರತ ಭಾಗದಲ್ಲಿ ಬಿಜೆಪಿಗೆ ಆತಂಕ ಮೂಡಿಸುತ್ತಿರುವ ಏಕೈಕೆ ಪಕ್ಷವೆಂದರೆ ಆಮ್ ಆದ್ಮಿ ಪಕ್ಷವೊಂದೆ. ಆದ ಕಾರಣ ನಮ್ಮ ಪಕ್ಷವನ್ನು ಮುಗಿಸುವ ಹುನ್ನಾರವೇ ಕಾಯ್ದೆಯ ತಿದ್ದುಪಡಿ’ ಎಂಬುದು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರ ಮಾತು.

’ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಅವರು ಮಸೂದೆ ಮಂಡನೆಯ ವೇಳೆ ಸರ್ಕಾರದ ದಕ್ಷತೆ ಹೆಚ್ಚಾಗಲಿದೆ ಅಲ್ಲದೇ, ದೆಹಲಿ ಸರ್ಕಾರದ ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಅಸ್ಪಷ್ಟತೆ ಸೃಷ್ಟಿಯಾಗಿತ್ತು. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಿಂದ ಮಸೂದೆ ಮಂಡಿಸಲಾಗಿದೆ. ದೆಹಲಿಗೆ ಎಲ್‌ಜಿ ಅವರೇ ಆಡಳಿತಗಾರರಾಗಿದ್ದಾರೆ. ಅಲ್ಲದೆ ಸರ್ಕಾರದ ದೈನಂದಿನ ವ್ಯವಹಾರಗಳನ್ನು ತಿಳಿದುಕೊಳ್ಳುವ ಅಧಿಕಾರ ಅವರಿಗೆ ಇದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಆಡಳಿತಕ್ಕೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದೆ ಎನ್ನುವ ತಿಪ್ಪೆ ಸಾರಿಸುವ ಮಾತುಗಳನ್ನು ಆಡುತ್ತಲೇ ನಮ್ಮ ಸರ್ಕಾರದ ಧಮನಕ್ಕೆ ಬಿಜೆಪಿ ನಿಂತಿದೆ’ ಎಂಬುದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಅಭಿಪ್ರಾಯ.

ದೆಹಲಿಯ ಚುನಾಯಿತ ಸರ್ಕಾರ ಮತ್ತು ಲೆಫ್ಟಿನೆಂಟ್ ಜನರಲ್ ಅಧಿಕಾರದ ಜಟಾಪಟಿ ಹೊಸತೇನೂ ಅಲ್ಲ. ಕೇಂದ್ರ ಸರ್ಕಾರವು 2015ರಲ್ಲಿ ಲೆಫ್ಟಿನೆಂಟ್ ಜನರಲ್ ನಜೀಬ್ ಜಂಗ್ ಸಹ ಇದೇ ಮಾತು ಹೇಳಿದ್ದರು. ’ಸರ್ಕಾರ ಎಂದರೆ ರಾಷ್ಟ್ರಪತಿಯ ಮೂಲಕ ಸಂವಿಧಾನದ 239ನೇ ಪರಿಚ್ಛೇದದ ಅನ್ವಯ ನೇಮಕಗೊಂಡ ಲೆಫ್ಟಿನೆಂಟ್ ಜನರಲ್’ ಎಂದಿದ್ದರು.

ಒಟ್ಟಿನಲ್ಲಿ ಬಿಜೆಪಿ ಎಷ್ಟು ಮೊಂಡುತನ ಬೆಳೆಸಿಕೊಂಡಿದೆ ಎಂದರೆ ನಾಳೆ ಬಾ ಎಂದು ಬಾಗಿಲ ಮೇಲೆ ಬರೆದರೂ ಇಂದೇ ಬರುವೆ ಎನ್ನುವ ಭೂತದಂತಾಗಿದೆ. ಈ ಭೂತ ಇಂದು ದೆಹಲಿಯ ಬಾಗಿಲು ಮಾತ್ರ ಬಡಿದಿಲ್ಲ, ಎಲ್ಲರ ಮನೆ ಬಾಗಿಲಿಗೂ ಬರುತ್ತೇವೆ ಎನ್ನುವ ಮುಸ್ಸೂಚನೆಯೇ ಇದು?

ಗುಜರಾತ್ ಮಾಡೆಲ್‌ಅನ್ನು ಇಡೀ ದೇಶವೇ ಮರೆಯುವಂತೆ ಮಾಡಿ, ಬಿಜೆಪಿಗೆ ಮಗ್ಗುಲು ಮುಳ್ಳಾಗಿ ಬೆಳೆಯುತ್ತಿದ್ದ ಅರವಿಂದ ಕೇಜ್ರಿವಾಲ್ ಅವರ ದೆಹಲಿ ಮಾಡೆಲ್ ಎನ್ನುವ ಬೆಣ್ಣೆ ಜಾರಿ ಬಿಜೆಪಿಯ ರೊಟ್ಟಿಗೆ ಬಿದ್ದಿದೆ. ಇನ್ನು ನಿಮ್ಮ, ನಿಮ್ಮ ಮಾದರಿಗಳನ್ನು ನೀವಿಟ್ಟುಕೊಳ್ಳಿ ನಾವು ಹೇಳುವ ಮಾದರಿಯೇ ಅಂತಿಮ ಮರಣ ಶಾಸನ ಇದಾಗಲಿದೆಯೇ? ಎಲ್ಲವೂ ಆಗುತ್ತಿರುವ ಈ ಹೊತ್ತಿನಲ್ಲಿ ಇದೂ ಆಗಲಿದೆ ಎನ್ನುವುದೇ ದುರಂತ.

ಸೋಮಶೇಖರ್ ಶಿರಾ
ಪತ್ರಕರ್ತರು. ಸದ್ಯ ಎಎಪಿ ಕರ್ನಾಟಕದ ಸಾಮಾಜಿಕ ಮಾಧ್ಯಮ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.


ಇದನ್ನೂ ಓದಿ: ಗದ್ದಲ, ವಿರೋಧಗಳ ನಡುವೆ ರಾಜ್ಯಸಭೆಯಲ್ಲೂ ದೆಹಲಿ ಮಸೂದೆ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...