Homeಮುಖಪುಟಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ - BJP ಗೆ ಆಘಾತ ನೀಡಿದ ತಮಿಳುನಾಡು!

ಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ – BJP ಗೆ ಆಘಾತ ನೀಡಿದ ತಮಿಳುನಾಡು!

- Advertisement -
- Advertisement -

ತಮಿಳುನಾಡಿನಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇಟ್ರ ಕಳಗಂ (ಎಐಎಡಿಎಂಕೆ) ಮತ್ತು ಬಿಜೆಪಿ ಮೈತ್ರಿಯ ನಡುವೆ ಬಿರುಕುಂಟಾಗಿದ್ದು, ಈ ಸೂಚನೆಯನ್ನು ಆಡಳಿತ ಪಕ್ಷ ನೀಡಿದೆ. “ಸರ್ವಾಧಿಕಾರ ಮಾಡಲು ಬಂದರೆ ರಾಷ್ಟ್ರೀಯ ಪಕ್ಷದ ಮೈತ್ರಿಯೇ ಅಗತ್ಯವಿಲ್ಲ” ಎಂದು ಬಿಜೆಪಿಗೆ ಕಠಿಣ ಸಂದೇಶವನ್ನು ನೀಡಲಾಗಿದೆ. ಹಾಗಾಗಿ ಇದು NDA ಮೈತ್ರಿಯ ಒಂದೊಂದೇ ಕೊಂಡಿ ಕಳಚಿಕೊಳ್ಳುತ್ತಿರುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.

ರಾಜ್ಯ ಚುನಾವಣೆಗಳ ಸಹ-ಸಂಯೋಜಕರೂ ಆಗಿರುವ ಎಐಎಡಿಎಂಕೆ ಸಂಸದ ಕೆ.ಪಿ ಮುನುಸಾಮಿ, “ತಮ್ಮ ಪಕ್ಷವೇ ಚುನಾವಣೆಯಲ್ಲಿನ ಮೈತ್ರಿಕೂಟವನ್ನು ಮುನ್ನಡೆಸಲಿದೆ. ರಾ‍ಷ್ಟ್ರೀಯ ಪಕ್ಷವು ಇದನ್ನು ನಿರ್ದೇಶಿಸಲು ಬಯಸಿದರೆ, ಅವರು ಮೈತ್ರಿಯ ಭಾಗವಾಗುವುದು ಬೇಕಿಲ್ಲ” ಎಂದು ಅವರು ಒತ್ತಿಹೇಳಿದ್ದಾರೆ.

ಇದನ್ನೂ ಓದಿ: ಎನ್‌ಡಿಎ ವಿರುದ್ಧ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವತ್ತ ಶಿರೋಮಣಿ ಅಕಾಲಿದಳ!

ಈ ಹಿಂದೆ, ತಮಿಳುನಾಡು ಮುಖ್ಯಮಂತ್ರಿ ಅಭ್ಯರ್ಥಿ ಪಳನಿಸ್ವಾಮಿಯವರೇ ಆಗಲಿದ್ದಾರೆಯೇ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಾಡೇಕರ್ ಅವರನ್ನು ಕೇಳಿದಾಗ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ಹೇಳಿಕೆ ಕುತೂಹಲ ಮೂಡಿಸಿದೆ. 2021 ರ ಏಪ್ರಿಲ್-ಮೇ ತಿಂಗಳಲ್ಲಿ ತಮಿಳುನಾಡು ಚುನಾವಣೆ ನಡೆಯಲಿದೆ.

ಬಿಜೆಪಿಗೆ ರಾಜ್ಯದಲ್ಲಿ ಒಬ್ಬರೂ ಶಾಸಕ ಅಥವಾ ಸಂಸದರಿಲ್ಲ. ಒಂಬತ್ತು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎಐಎಡಿಎಂಕೆ ಸರ್ಕಾರವು ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ಜೊತೆಗೆ ಕಳೆದ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ದೊಡ್ಡ ಹಿನ್ನಡೆ ಅನುಭವಿಸಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಇದು ತಲೆನೋವಾಗಿದೆ.

ದೇಶದಲ್ಲಿ ಬಿಜೆಪಿಯೊಟ್ಟಿಗೆ NDA ಅಡಿಯಲ್ಲಿ ಮೈತ್ರಿ ಮಾಡಿಕೊಂಡಿರುವ ಹಲವು ಪಕ್ಷಗಳು ಬಿಜೆಪಿಯ ಸರ್ವಾಧಿಕಾರಿ ಮನಸ್ಥಿಯನ್ನು ಬಹಿರಂಗವಾಗಿ ವಿರೋಧಿಸುತ್ತಿವೆ.

ಇದನ್ನೂ ಓದಿ: ಎನ್‌ಡಿಎ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿರುವ ಲಾಲು ಪ್ರಸಾದ್: ಸುಶೀಲ್ ಮೋದಿ ಆರೋಪ!

ಬಿಹಾರದಲ್ಲಿ ನಿತೀಶ್‌ ಕುಮಾರ್ ಮತ್ತು ಬಿಜೆಪಿಯ ಮೈತ್ರಿಯ ನಡುವೆ ಬಿರುಕುಂಟಾಗಿದೆ. ಅರುಣಾಚಲ ಪ್ರದೇಶದಲ್ಲಿ ಜೆಡಿಯುನ ಆರು ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ತರಲು ಹೊರಟಿರುವ ಮತಾಂತರ ನಿಷೇಧ ಕಾನೂನಿಗೆ ನಿತೀಶ್‌ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗಿನ ಅಸಮಾಧಾನವನ್ನು ವ್ಯಕ್ತಪಡಿಸಲಾಗುತ್ತಿದೆ.

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿ ದಳವು ಸೆಪ್ಟಂಬರ್‌ನಲ್ಲಿ NDA ಮೈತ್ರಿಯನ್ನು ತೊರೆದಿತ್ತು. ಕಳೆದ ವಾರ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷ NDA ಮೈತ್ರಿಯನ್ನು ತೊರೆದಿದೆ. ಶಿವಸೇನೆ ಕಳೆದ ವರ್ಷವೇ ಎನ್‌ಡಿಎ ಮೈತ್ರಿಯಿಂದ ಹೊರಬಂದಿತ್ತು.

ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ, ಬಿಜೆಪಿ ಮುಂದಾಳತ್ವದ NDA ಮೈತ್ರಿಯ ಒಂದೊಂದೇ ಕೊಂಡಿ ಕಳಚಿಕೊಳ್ಳುತ್ತಿದೆ ಎಂಬುದಂತೂ ಸ್ಪಷ್ಟವಾಗಿದೆ.


ಇದನ್ನೂ ಓದಿ: ನಿತೀಶ್ ಎನ್‌ಡಿಎ ಬಿಡಬೇಕು, ತೇಜಸ್ವಿಯನ್ನು ಸಿಎಂ ಮಾಡಬೇಕು- ದಿಗ್ವಿಜಯ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...