Homeಮುಖಪುಟಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ - BJP ಗೆ ಆಘಾತ ನೀಡಿದ ತಮಿಳುನಾಡು!

ಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ – BJP ಗೆ ಆಘಾತ ನೀಡಿದ ತಮಿಳುನಾಡು!

- Advertisement -
- Advertisement -

ತಮಿಳುನಾಡಿನಲ್ಲಿ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇಟ್ರ ಕಳಗಂ (ಎಐಎಡಿಎಂಕೆ) ಮತ್ತು ಬಿಜೆಪಿ ಮೈತ್ರಿಯ ನಡುವೆ ಬಿರುಕುಂಟಾಗಿದ್ದು, ಈ ಸೂಚನೆಯನ್ನು ಆಡಳಿತ ಪಕ್ಷ ನೀಡಿದೆ. “ಸರ್ವಾಧಿಕಾರ ಮಾಡಲು ಬಂದರೆ ರಾಷ್ಟ್ರೀಯ ಪಕ್ಷದ ಮೈತ್ರಿಯೇ ಅಗತ್ಯವಿಲ್ಲ” ಎಂದು ಬಿಜೆಪಿಗೆ ಕಠಿಣ ಸಂದೇಶವನ್ನು ನೀಡಲಾಗಿದೆ. ಹಾಗಾಗಿ ಇದು NDA ಮೈತ್ರಿಯ ಒಂದೊಂದೇ ಕೊಂಡಿ ಕಳಚಿಕೊಳ್ಳುತ್ತಿರುವುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.

ರಾಜ್ಯ ಚುನಾವಣೆಗಳ ಸಹ-ಸಂಯೋಜಕರೂ ಆಗಿರುವ ಎಐಎಡಿಎಂಕೆ ಸಂಸದ ಕೆ.ಪಿ ಮುನುಸಾಮಿ, “ತಮ್ಮ ಪಕ್ಷವೇ ಚುನಾವಣೆಯಲ್ಲಿನ ಮೈತ್ರಿಕೂಟವನ್ನು ಮುನ್ನಡೆಸಲಿದೆ. ರಾ‍ಷ್ಟ್ರೀಯ ಪಕ್ಷವು ಇದನ್ನು ನಿರ್ದೇಶಿಸಲು ಬಯಸಿದರೆ, ಅವರು ಮೈತ್ರಿಯ ಭಾಗವಾಗುವುದು ಬೇಕಿಲ್ಲ” ಎಂದು ಅವರು ಒತ್ತಿಹೇಳಿದ್ದಾರೆ.

ಇದನ್ನೂ ಓದಿ: ಎನ್‌ಡಿಎ ವಿರುದ್ಧ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವತ್ತ ಶಿರೋಮಣಿ ಅಕಾಲಿದಳ!

ಈ ಹಿಂದೆ, ತಮಿಳುನಾಡು ಮುಖ್ಯಮಂತ್ರಿ ಅಭ್ಯರ್ಥಿ ಪಳನಿಸ್ವಾಮಿಯವರೇ ಆಗಲಿದ್ದಾರೆಯೇ ಎಂದು ಕೇಂದ್ರ ಸಚಿವ ಪ್ರಕಾಶ್‌ ಜಾವಾಡೇಕರ್ ಅವರನ್ನು ಕೇಳಿದಾಗ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ಹೇಳಿಕೆ ಕುತೂಹಲ ಮೂಡಿಸಿದೆ. 2021 ರ ಏಪ್ರಿಲ್-ಮೇ ತಿಂಗಳಲ್ಲಿ ತಮಿಳುನಾಡು ಚುನಾವಣೆ ನಡೆಯಲಿದೆ.

ಬಿಜೆಪಿಗೆ ರಾಜ್ಯದಲ್ಲಿ ಒಬ್ಬರೂ ಶಾಸಕ ಅಥವಾ ಸಂಸದರಿಲ್ಲ. ಒಂಬತ್ತು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎಐಎಡಿಎಂಕೆ ಸರ್ಕಾರವು ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿದೆ. ಜೊತೆಗೆ ಕಳೆದ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ದೊಡ್ಡ ಹಿನ್ನಡೆ ಅನುಭವಿಸಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿಗೆ ಇದು ತಲೆನೋವಾಗಿದೆ.

ದೇಶದಲ್ಲಿ ಬಿಜೆಪಿಯೊಟ್ಟಿಗೆ NDA ಅಡಿಯಲ್ಲಿ ಮೈತ್ರಿ ಮಾಡಿಕೊಂಡಿರುವ ಹಲವು ಪಕ್ಷಗಳು ಬಿಜೆಪಿಯ ಸರ್ವಾಧಿಕಾರಿ ಮನಸ್ಥಿಯನ್ನು ಬಹಿರಂಗವಾಗಿ ವಿರೋಧಿಸುತ್ತಿವೆ.

ಇದನ್ನೂ ಓದಿ: ಎನ್‌ಡಿಎ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿರುವ ಲಾಲು ಪ್ರಸಾದ್: ಸುಶೀಲ್ ಮೋದಿ ಆರೋಪ!

ಬಿಹಾರದಲ್ಲಿ ನಿತೀಶ್‌ ಕುಮಾರ್ ಮತ್ತು ಬಿಜೆಪಿಯ ಮೈತ್ರಿಯ ನಡುವೆ ಬಿರುಕುಂಟಾಗಿದೆ. ಅರುಣಾಚಲ ಪ್ರದೇಶದಲ್ಲಿ ಜೆಡಿಯುನ ಆರು ಶಾಸಕರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ತರಲು ಹೊರಟಿರುವ ಮತಾಂತರ ನಿಷೇಧ ಕಾನೂನಿಗೆ ನಿತೀಶ್‌ ಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗಿನ ಅಸಮಾಧಾನವನ್ನು ವ್ಯಕ್ತಪಡಿಸಲಾಗುತ್ತಿದೆ.

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿ ದಳವು ಸೆಪ್ಟಂಬರ್‌ನಲ್ಲಿ NDA ಮೈತ್ರಿಯನ್ನು ತೊರೆದಿತ್ತು. ಕಳೆದ ವಾರ ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷ NDA ಮೈತ್ರಿಯನ್ನು ತೊರೆದಿದೆ. ಶಿವಸೇನೆ ಕಳೆದ ವರ್ಷವೇ ಎನ್‌ಡಿಎ ಮೈತ್ರಿಯಿಂದ ಹೊರಬಂದಿತ್ತು.

ಈ ಎಲ್ಲಾ ಬೆಳವಣಿಗೆಗಳನ್ನು ನೋಡಿದರೆ, ಬಿಜೆಪಿ ಮುಂದಾಳತ್ವದ NDA ಮೈತ್ರಿಯ ಒಂದೊಂದೇ ಕೊಂಡಿ ಕಳಚಿಕೊಳ್ಳುತ್ತಿದೆ ಎಂಬುದಂತೂ ಸ್ಪಷ್ಟವಾಗಿದೆ.


ಇದನ್ನೂ ಓದಿ: ನಿತೀಶ್ ಎನ್‌ಡಿಎ ಬಿಡಬೇಕು, ತೇಜಸ್ವಿಯನ್ನು ಸಿಎಂ ಮಾಡಬೇಕು- ದಿಗ್ವಿಜಯ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...