Homeಮುಖಪುಟಲಕ್ಷದ್ವೀಪಕ್ಕೆ ಮೋದಿ ಭೇಟಿ ಕೊಟ್ಟರೂ NDA ಅಭ್ಯರ್ಥಿ ಗಳಿಸಿದ್ದು ಬರೀ 201 ಮತ!

ಲಕ್ಷದ್ವೀಪಕ್ಕೆ ಮೋದಿ ಭೇಟಿ ಕೊಟ್ಟರೂ NDA ಅಭ್ಯರ್ಥಿ ಗಳಿಸಿದ್ದು ಬರೀ 201 ಮತ!

- Advertisement -
- Advertisement -

ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಹೀನಾಯವಾಗಿ ಸೋಲನ್ನು ಕಂಡಿದ್ದು, ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುವುದು ಕಂಡು ಬರುತ್ತಿದೆ.

ಮುಸ್ಲಿಂ ಮತದಾರರೇ ನಿರ್ಣಾಯಕವಾಗಿರುವ ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಮುಸ್ಲಿಂ ವಿದ್ವಾಂಸರನ್ನು ಕಣಕ್ಕಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮತಬ್ಯಾಂಕ್‌ಗಳನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿದ್ದರು, ಆದರೆ ಎನ್‌ಡಿಎ ಅಭ್ಯರ್ಥಿ ಕೇವಲ 201 ಮತಗಳನ್ನು ಪಡೆಯುವ ಮೂಲಕ ಲಕ್ಷದ್ವೀಪ ದ್ವೀಪಸಮೂಹದಲ್ಲಿ ಎನ್‌ಡಿಎಗೆ ಮುಖಭಂಗವಾಗಿದೆ.

ಲಕ್ಷದ್ವೀಪದಲ್ಲಿ 2019ರಲ್ಲಿ ಬಿಜೆಪಿ ಅಭ್ಯರ್ಥಿ 125 ಮತಗಳಿಸಿದ್ದರು. ಆದರೆ ಈ ಬಾರಿ ಕುದ್ದು ಪ್ರಧಾನಿ ಭೇಟಿ ನೀಡಿದ್ದರಿಂದ ಎನ್‌ಡಿಎ ಅಭ್ಯರ್ಥಿಗೆ ಹೆಚ್ಚಿನ ಮತ ಸಿಗುವ ಭರವಸೆ ಬಿಜೆಪಿ ಪಾಲಯದಲ್ಲಿತ್ತು. ಆದರೆ ಇದು ಸುಳ್ಳಾಗಿದೆ.

ಹಾಲಿ ಸಂಸದ ಎನ್‌ಸಿಪಿ (ಎಸ್‌ಪಿ)ಯ ಮೊಹಮ್ಮದ್ ಫೈಜಲ್ ವಿರುದ್ಧ 2,647 ಮತಗಳ ಮುನ್ನಡೆಯೊಂದಿಗೆ ಕಾಂಗ್ರೆಸ್‌ನ ಮಾಜಿ ಸಂಸದ ಮುಹಮ್ಮದ್ ಹಮ್ದುಲ್ಲಾ ಸಯೀದ್ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಸುಮಾರು 49,000 ಮತದಾರರನ್ನು ಹೊಂದಿರುವ ದ್ವೀಪಸಮೂಹದಲ್ಲಿ ಎನ್‌ಡಿಎ ಅಭ್ಯರ್ಥಿ ಎನ್‌ಸಿಪಿ(ಎಪಿ)ಯ ಯೂಸುಫ್ ಟಿ ಪಿ 201 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

ಲಕ್ಷದ್ವೀಪದಲ್ಲಿ ಲೆಪ್ಟಿನೆಂಟ್‌ ಗವರ್ನರ್‌ ಪ್ರಫುಲ್ ಖೋಡಾ ಪಟೇಲ್ ತಂದಿದ್ದ ಆಡಳಿತದ ಸುಧಾರಣೆಗಳ ವಿರುದ್ಧ ಪ್ರತಿಭಟನೆ ನಡೆದಿತ್ತು. 2021ರಲ್ಲಿ ‘ಲಕ್ಷದ್ವೀಪ ಉಳಿಸಿ’ ಅಭಿಯಾನವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ನೂತನ ಸುಧಾರಣೆಗಳು ಜನರ ಜೀವನೋಪಾಯದ ಮೇಲೆ ಪರಿಣಾಮ ಬೀರಬಹುದು ಎಂದು ಜನರು ಭಯಪಟ್ಟಿದ್ದರು ಮತ್ತು ದ್ವೀಪಸಮೂಹವನ್ನು ಕೇಸರಿಮಯಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ಜನವರಿಯಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿ  ಜನರೊಂದಿಗೆ ಸಂವಹನ ನಡೆಸಿದ್ದರು. ಲಕ್ಷದ್ವೀಪದ ಮುಸ್ಲಿಂ ಮಹಿಳೆಯರೊಂದಿಗೆ ಮೋದಿ ಸಂವಾದ ನಡೆಸಿದ ವಿಡಿಯೋ ತುಣುಕನ್ನು ಬಿಜೆಪಿ ಪಾಳಯಗಳು ವ್ಯಾಪಕವಾಗಿ ವೈರಲ್‌ ಮಾಡಿದ್ದವು.

ಎನ್‌ಸಿಪಿಯ ವಿಭಜನೆ ಮತ್ತು ಎನ್‌ಸಿಪಿ(ಎಪಿ) ಬಣ ಎನ್‌ಡಿಎಗೆ ಸೇರ್ಪಡೆಗೊಂಡ ನಂತರ, ಲಕ್ಷದ್ವೀಪ ಸ್ಥಾನವನ್ನು ಎನ್‌ಸಿಪಿ (ಎಪಿ) ಬಣಕ್ಕೆ ನೀಡಲಾಯಿತು. ಪಕ್ಷವು ಮುಸ್ಲಿಂ ವಿದ್ವಾಂಸ ಯೂಸುಫ್ ಟಿ ಪಿ ಅವರನ್ನು ಅಭ್ಯರ್ಥಿಯನ್ನಾಗಿ ನಿಲ್ಲಿಸಿತ್ತು. ಆದರೆ ಈ ಪ್ರಯತ್ನಗಳು ಮುಸ್ಲಿಂ ಮತದಾರರನ್ನು ಎನ್‌ಡಿಎಗೆ ಸೆಳೆಯಲು ಸಹಾಯ ಮಾಡಲಿಲ್ಲ.

ಲಕ್ಷದ್ವೀಪವು ಎನ್‌ಸಿಪಿ-ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯುತ್ತದೆ. ಈ ಬಾರಿ ಗೆದ್ದಿರುವ ಮುಹಮ್ಮದ್ ಹಮ್ದುಲ್ಲಾ ಸಯೀದ್ ಅವರು ಲಕ್ಷದ್ವೀಪದಲ್ಲಿ ಸುದೀರ್ಘ ಅವಧಿಯ ಸಂಸದರಾಗಿರುವ ಕಾಂಗ್ರೆಸ್ ನಾಯಕ ಪಿ ಎಂ ಸಯೀದ್ ಅವರ ಪುತ್ರರಾಗಿದ್ದಾರೆ. ಪಿ ಎಂ ಸಯೀದ್ 2004ರ ಚುನಾವಣೆಯಲ್ಲಿ ಸೋತಿದ್ದರು ಮತ್ತು 2005ರಲ್ಲಿ ನಿಧನರಾಗಿದ್ದಾರೆ. 2009ರ ಚುನಾವಣೆಯಲ್ಲಿ ಅವರ ಮಗ ಸ್ಥಾನವನ್ನು ಗೆದ್ದರು. ಆದರೆ 2014 ಮತ್ತು 2019ರ ಚುನಾವಣೆಯಲ್ಲಿ ಎನ್‌ಸಿಪಿಯ ಮೊಹಮ್ಮದ್ ಫೈಜಲ್ ಈ ಸ್ಥಾನವನ್ನು ಗೆದ್ದುಕೊಂಡಿದ್ದರು. ಕಳೆದ ವರ್ಷ ಕೊಲೆ ಯತ್ನ ಪ್ರಕರಣದಲ್ಲಿ ಫೈಝಲ್ ಅವರನ್ನು ಅನರ್ಹಗೊಳಿಸಿದ್ದರಿಂದ ಸುದ್ದಿಯಾಗಿದ್ದರು. ಆದರೆ ಸುಪ್ರೀಂ ಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿದ ನಂತರ ಅವರ ಅಮಾನತು ರದ್ದುಗೊಳಿಸಲಾಗಿತ್ತು.

ಇದನ್ನು ಓದಿ: ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...