Homeಮುಖಪುಟಲಕ್ಷದ್ವೀಪಕ್ಕೆ ಮೋದಿ ಭೇಟಿ ಕೊಟ್ಟರೂ NDA ಅಭ್ಯರ್ಥಿ ಗಳಿಸಿದ್ದು ಬರೀ 201 ಮತ!

ಲಕ್ಷದ್ವೀಪಕ್ಕೆ ಮೋದಿ ಭೇಟಿ ಕೊಟ್ಟರೂ NDA ಅಭ್ಯರ್ಥಿ ಗಳಿಸಿದ್ದು ಬರೀ 201 ಮತ!

- Advertisement -
- Advertisement -

ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಹೀನಾಯವಾಗಿ ಸೋಲನ್ನು ಕಂಡಿದ್ದು, ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುವುದು ಕಂಡು ಬರುತ್ತಿದೆ.

ಮುಸ್ಲಿಂ ಮತದಾರರೇ ನಿರ್ಣಾಯಕವಾಗಿರುವ ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಮುಸ್ಲಿಂ ವಿದ್ವಾಂಸರನ್ನು ಕಣಕ್ಕಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮತಬ್ಯಾಂಕ್‌ಗಳನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿದ್ದರು, ಆದರೆ ಎನ್‌ಡಿಎ ಅಭ್ಯರ್ಥಿ ಕೇವಲ 201 ಮತಗಳನ್ನು ಪಡೆಯುವ ಮೂಲಕ ಲಕ್ಷದ್ವೀಪ ದ್ವೀಪಸಮೂಹದಲ್ಲಿ ಎನ್‌ಡಿಎಗೆ ಮುಖಭಂಗವಾಗಿದೆ.

ಲಕ್ಷದ್ವೀಪದಲ್ಲಿ 2019ರಲ್ಲಿ ಬಿಜೆಪಿ ಅಭ್ಯರ್ಥಿ 125 ಮತಗಳಿಸಿದ್ದರು. ಆದರೆ ಈ ಬಾರಿ ಕುದ್ದು ಪ್ರಧಾನಿ ಭೇಟಿ ನೀಡಿದ್ದರಿಂದ ಎನ್‌ಡಿಎ ಅಭ್ಯರ್ಥಿಗೆ ಹೆಚ್ಚಿನ ಮತ ಸಿಗುವ ಭರವಸೆ ಬಿಜೆಪಿ ಪಾಲಯದಲ್ಲಿತ್ತು. ಆದರೆ ಇದು ಸುಳ್ಳಾಗಿದೆ.

ಹಾಲಿ ಸಂಸದ ಎನ್‌ಸಿಪಿ (ಎಸ್‌ಪಿ)ಯ ಮೊಹಮ್ಮದ್ ಫೈಜಲ್ ವಿರುದ್ಧ 2,647 ಮತಗಳ ಮುನ್ನಡೆಯೊಂದಿಗೆ ಕಾಂಗ್ರೆಸ್‌ನ ಮಾಜಿ ಸಂಸದ ಮುಹಮ್ಮದ್ ಹಮ್ದುಲ್ಲಾ ಸಯೀದ್ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಸುಮಾರು 49,000 ಮತದಾರರನ್ನು ಹೊಂದಿರುವ ದ್ವೀಪಸಮೂಹದಲ್ಲಿ ಎನ್‌ಡಿಎ ಅಭ್ಯರ್ಥಿ ಎನ್‌ಸಿಪಿ(ಎಪಿ)ಯ ಯೂಸುಫ್ ಟಿ ಪಿ 201 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

ಲಕ್ಷದ್ವೀಪದಲ್ಲಿ ಲೆಪ್ಟಿನೆಂಟ್‌ ಗವರ್ನರ್‌ ಪ್ರಫುಲ್ ಖೋಡಾ ಪಟೇಲ್ ತಂದಿದ್ದ ಆಡಳಿತದ ಸುಧಾರಣೆಗಳ ವಿರುದ್ಧ ಪ್ರತಿಭಟನೆ ನಡೆದಿತ್ತು. 2021ರಲ್ಲಿ ‘ಲಕ್ಷದ್ವೀಪ ಉಳಿಸಿ’ ಅಭಿಯಾನವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ನೂತನ ಸುಧಾರಣೆಗಳು ಜನರ ಜೀವನೋಪಾಯದ ಮೇಲೆ ಪರಿಣಾಮ ಬೀರಬಹುದು ಎಂದು ಜನರು ಭಯಪಟ್ಟಿದ್ದರು ಮತ್ತು ದ್ವೀಪಸಮೂಹವನ್ನು ಕೇಸರಿಮಯಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ಜನವರಿಯಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿ  ಜನರೊಂದಿಗೆ ಸಂವಹನ ನಡೆಸಿದ್ದರು. ಲಕ್ಷದ್ವೀಪದ ಮುಸ್ಲಿಂ ಮಹಿಳೆಯರೊಂದಿಗೆ ಮೋದಿ ಸಂವಾದ ನಡೆಸಿದ ವಿಡಿಯೋ ತುಣುಕನ್ನು ಬಿಜೆಪಿ ಪಾಳಯಗಳು ವ್ಯಾಪಕವಾಗಿ ವೈರಲ್‌ ಮಾಡಿದ್ದವು.

ಎನ್‌ಸಿಪಿಯ ವಿಭಜನೆ ಮತ್ತು ಎನ್‌ಸಿಪಿ(ಎಪಿ) ಬಣ ಎನ್‌ಡಿಎಗೆ ಸೇರ್ಪಡೆಗೊಂಡ ನಂತರ, ಲಕ್ಷದ್ವೀಪ ಸ್ಥಾನವನ್ನು ಎನ್‌ಸಿಪಿ (ಎಪಿ) ಬಣಕ್ಕೆ ನೀಡಲಾಯಿತು. ಪಕ್ಷವು ಮುಸ್ಲಿಂ ವಿದ್ವಾಂಸ ಯೂಸುಫ್ ಟಿ ಪಿ ಅವರನ್ನು ಅಭ್ಯರ್ಥಿಯನ್ನಾಗಿ ನಿಲ್ಲಿಸಿತ್ತು. ಆದರೆ ಈ ಪ್ರಯತ್ನಗಳು ಮುಸ್ಲಿಂ ಮತದಾರರನ್ನು ಎನ್‌ಡಿಎಗೆ ಸೆಳೆಯಲು ಸಹಾಯ ಮಾಡಲಿಲ್ಲ.

ಲಕ್ಷದ್ವೀಪವು ಎನ್‌ಸಿಪಿ-ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯುತ್ತದೆ. ಈ ಬಾರಿ ಗೆದ್ದಿರುವ ಮುಹಮ್ಮದ್ ಹಮ್ದುಲ್ಲಾ ಸಯೀದ್ ಅವರು ಲಕ್ಷದ್ವೀಪದಲ್ಲಿ ಸುದೀರ್ಘ ಅವಧಿಯ ಸಂಸದರಾಗಿರುವ ಕಾಂಗ್ರೆಸ್ ನಾಯಕ ಪಿ ಎಂ ಸಯೀದ್ ಅವರ ಪುತ್ರರಾಗಿದ್ದಾರೆ. ಪಿ ಎಂ ಸಯೀದ್ 2004ರ ಚುನಾವಣೆಯಲ್ಲಿ ಸೋತಿದ್ದರು ಮತ್ತು 2005ರಲ್ಲಿ ನಿಧನರಾಗಿದ್ದಾರೆ. 2009ರ ಚುನಾವಣೆಯಲ್ಲಿ ಅವರ ಮಗ ಸ್ಥಾನವನ್ನು ಗೆದ್ದರು. ಆದರೆ 2014 ಮತ್ತು 2019ರ ಚುನಾವಣೆಯಲ್ಲಿ ಎನ್‌ಸಿಪಿಯ ಮೊಹಮ್ಮದ್ ಫೈಜಲ್ ಈ ಸ್ಥಾನವನ್ನು ಗೆದ್ದುಕೊಂಡಿದ್ದರು. ಕಳೆದ ವರ್ಷ ಕೊಲೆ ಯತ್ನ ಪ್ರಕರಣದಲ್ಲಿ ಫೈಝಲ್ ಅವರನ್ನು ಅನರ್ಹಗೊಳಿಸಿದ್ದರಿಂದ ಸುದ್ದಿಯಾಗಿದ್ದರು. ಆದರೆ ಸುಪ್ರೀಂ ಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿದ ನಂತರ ಅವರ ಅಮಾನತು ರದ್ದುಗೊಳಿಸಲಾಗಿತ್ತು.

ಇದನ್ನು ಓದಿ: ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...