Homeಮುಖಪುಟಲಕ್ಷದ್ವೀಪಕ್ಕೆ ಮೋದಿ ಭೇಟಿ ಕೊಟ್ಟರೂ NDA ಅಭ್ಯರ್ಥಿ ಗಳಿಸಿದ್ದು ಬರೀ 201 ಮತ!

ಲಕ್ಷದ್ವೀಪಕ್ಕೆ ಮೋದಿ ಭೇಟಿ ಕೊಟ್ಟರೂ NDA ಅಭ್ಯರ್ಥಿ ಗಳಿಸಿದ್ದು ಬರೀ 201 ಮತ!

- Advertisement -
- Advertisement -

ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಹೀನಾಯವಾಗಿ ಸೋಲನ್ನು ಕಂಡಿದ್ದು, ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎನ್ನುವುದು ಕಂಡು ಬರುತ್ತಿದೆ.

ಮುಸ್ಲಿಂ ಮತದಾರರೇ ನಿರ್ಣಾಯಕವಾಗಿರುವ ಲಕ್ಷದ್ವೀಪ ಲೋಕಸಭಾ ಕ್ಷೇತ್ರದಲ್ಲಿ ಮುಸ್ಲಿಂ ವಿದ್ವಾಂಸರನ್ನು ಕಣಕ್ಕಿಳಿಸಿದ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಂ ಮತಬ್ಯಾಂಕ್‌ಗಳನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿದ್ದರು, ಆದರೆ ಎನ್‌ಡಿಎ ಅಭ್ಯರ್ಥಿ ಕೇವಲ 201 ಮತಗಳನ್ನು ಪಡೆಯುವ ಮೂಲಕ ಲಕ್ಷದ್ವೀಪ ದ್ವೀಪಸಮೂಹದಲ್ಲಿ ಎನ್‌ಡಿಎಗೆ ಮುಖಭಂಗವಾಗಿದೆ.

ಲಕ್ಷದ್ವೀಪದಲ್ಲಿ 2019ರಲ್ಲಿ ಬಿಜೆಪಿ ಅಭ್ಯರ್ಥಿ 125 ಮತಗಳಿಸಿದ್ದರು. ಆದರೆ ಈ ಬಾರಿ ಕುದ್ದು ಪ್ರಧಾನಿ ಭೇಟಿ ನೀಡಿದ್ದರಿಂದ ಎನ್‌ಡಿಎ ಅಭ್ಯರ್ಥಿಗೆ ಹೆಚ್ಚಿನ ಮತ ಸಿಗುವ ಭರವಸೆ ಬಿಜೆಪಿ ಪಾಲಯದಲ್ಲಿತ್ತು. ಆದರೆ ಇದು ಸುಳ್ಳಾಗಿದೆ.

ಹಾಲಿ ಸಂಸದ ಎನ್‌ಸಿಪಿ (ಎಸ್‌ಪಿ)ಯ ಮೊಹಮ್ಮದ್ ಫೈಜಲ್ ವಿರುದ್ಧ 2,647 ಮತಗಳ ಮುನ್ನಡೆಯೊಂದಿಗೆ ಕಾಂಗ್ರೆಸ್‌ನ ಮಾಜಿ ಸಂಸದ ಮುಹಮ್ಮದ್ ಹಮ್ದುಲ್ಲಾ ಸಯೀದ್ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಸುಮಾರು 49,000 ಮತದಾರರನ್ನು ಹೊಂದಿರುವ ದ್ವೀಪಸಮೂಹದಲ್ಲಿ ಎನ್‌ಡಿಎ ಅಭ್ಯರ್ಥಿ ಎನ್‌ಸಿಪಿ(ಎಪಿ)ಯ ಯೂಸುಫ್ ಟಿ ಪಿ 201 ಮತಗಳೊಂದಿಗೆ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

ಲಕ್ಷದ್ವೀಪದಲ್ಲಿ ಲೆಪ್ಟಿನೆಂಟ್‌ ಗವರ್ನರ್‌ ಪ್ರಫುಲ್ ಖೋಡಾ ಪಟೇಲ್ ತಂದಿದ್ದ ಆಡಳಿತದ ಸುಧಾರಣೆಗಳ ವಿರುದ್ಧ ಪ್ರತಿಭಟನೆ ನಡೆದಿತ್ತು. 2021ರಲ್ಲಿ ‘ಲಕ್ಷದ್ವೀಪ ಉಳಿಸಿ’ ಅಭಿಯಾನವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ನೂತನ ಸುಧಾರಣೆಗಳು ಜನರ ಜೀವನೋಪಾಯದ ಮೇಲೆ ಪರಿಣಾಮ ಬೀರಬಹುದು ಎಂದು ಜನರು ಭಯಪಟ್ಟಿದ್ದರು ಮತ್ತು ದ್ವೀಪಸಮೂಹವನ್ನು ಕೇಸರಿಮಯಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದರು.

ಜನವರಿಯಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಲಕ್ಷದ್ವೀಪಕ್ಕೆ ಭೇಟಿ ನೀಡಿ  ಜನರೊಂದಿಗೆ ಸಂವಹನ ನಡೆಸಿದ್ದರು. ಲಕ್ಷದ್ವೀಪದ ಮುಸ್ಲಿಂ ಮಹಿಳೆಯರೊಂದಿಗೆ ಮೋದಿ ಸಂವಾದ ನಡೆಸಿದ ವಿಡಿಯೋ ತುಣುಕನ್ನು ಬಿಜೆಪಿ ಪಾಳಯಗಳು ವ್ಯಾಪಕವಾಗಿ ವೈರಲ್‌ ಮಾಡಿದ್ದವು.

ಎನ್‌ಸಿಪಿಯ ವಿಭಜನೆ ಮತ್ತು ಎನ್‌ಸಿಪಿ(ಎಪಿ) ಬಣ ಎನ್‌ಡಿಎಗೆ ಸೇರ್ಪಡೆಗೊಂಡ ನಂತರ, ಲಕ್ಷದ್ವೀಪ ಸ್ಥಾನವನ್ನು ಎನ್‌ಸಿಪಿ (ಎಪಿ) ಬಣಕ್ಕೆ ನೀಡಲಾಯಿತು. ಪಕ್ಷವು ಮುಸ್ಲಿಂ ವಿದ್ವಾಂಸ ಯೂಸುಫ್ ಟಿ ಪಿ ಅವರನ್ನು ಅಭ್ಯರ್ಥಿಯನ್ನಾಗಿ ನಿಲ್ಲಿಸಿತ್ತು. ಆದರೆ ಈ ಪ್ರಯತ್ನಗಳು ಮುಸ್ಲಿಂ ಮತದಾರರನ್ನು ಎನ್‌ಡಿಎಗೆ ಸೆಳೆಯಲು ಸಹಾಯ ಮಾಡಲಿಲ್ಲ.

ಲಕ್ಷದ್ವೀಪವು ಎನ್‌ಸಿಪಿ-ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯುತ್ತದೆ. ಈ ಬಾರಿ ಗೆದ್ದಿರುವ ಮುಹಮ್ಮದ್ ಹಮ್ದುಲ್ಲಾ ಸಯೀದ್ ಅವರು ಲಕ್ಷದ್ವೀಪದಲ್ಲಿ ಸುದೀರ್ಘ ಅವಧಿಯ ಸಂಸದರಾಗಿರುವ ಕಾಂಗ್ರೆಸ್ ನಾಯಕ ಪಿ ಎಂ ಸಯೀದ್ ಅವರ ಪುತ್ರರಾಗಿದ್ದಾರೆ. ಪಿ ಎಂ ಸಯೀದ್ 2004ರ ಚುನಾವಣೆಯಲ್ಲಿ ಸೋತಿದ್ದರು ಮತ್ತು 2005ರಲ್ಲಿ ನಿಧನರಾಗಿದ್ದಾರೆ. 2009ರ ಚುನಾವಣೆಯಲ್ಲಿ ಅವರ ಮಗ ಸ್ಥಾನವನ್ನು ಗೆದ್ದರು. ಆದರೆ 2014 ಮತ್ತು 2019ರ ಚುನಾವಣೆಯಲ್ಲಿ ಎನ್‌ಸಿಪಿಯ ಮೊಹಮ್ಮದ್ ಫೈಜಲ್ ಈ ಸ್ಥಾನವನ್ನು ಗೆದ್ದುಕೊಂಡಿದ್ದರು. ಕಳೆದ ವರ್ಷ ಕೊಲೆ ಯತ್ನ ಪ್ರಕರಣದಲ್ಲಿ ಫೈಝಲ್ ಅವರನ್ನು ಅನರ್ಹಗೊಳಿಸಿದ್ದರಿಂದ ಸುದ್ದಿಯಾಗಿದ್ದರು. ಆದರೆ ಸುಪ್ರೀಂ ಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿದ ನಂತರ ಅವರ ಅಮಾನತು ರದ್ದುಗೊಳಿಸಲಾಗಿತ್ತು.

ಇದನ್ನು ಓದಿ: ಲೋಕಸಭೆಯ ತೀರ್ಪನ್ನು ಹೆಚ್ಚಿನ ಮುಸ್ಲಿಮರು ಭರವಸೆಯಿಂದ ಏಕೆ ನೋಡುತ್ತಾರೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...