Homeಮುಖಪುಟಕೇಂದ್ರದಿಂದ ಅನುದಾನ ತಾರತಮ್ಯ ಎಂದ ಜಗನ್‌ಮೋಹನ್‌ ರೆಡ್ಡಿ : ಬಿಜೆಪಿ ಸಖ್ಯ ತೊರೆದ್ರಾ ಆಂಧ್ರ ಸಿಎಂ?

ಕೇಂದ್ರದಿಂದ ಅನುದಾನ ತಾರತಮ್ಯ ಎಂದ ಜಗನ್‌ಮೋಹನ್‌ ರೆಡ್ಡಿ : ಬಿಜೆಪಿ ಸಖ್ಯ ತೊರೆದ್ರಾ ಆಂಧ್ರ ಸಿಎಂ?

- Advertisement -
- Advertisement -

ಬಿಜೆಪಿಯೊಂದಿಗೆ ಬಹಳ ಆತ್ಮೀಯತೆಯಿಂದ ಇದ್ದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಕಳೆದ ಎರಡು ವಾರಗಳಿಂದ ತನ್ನ ವರಸೆ ಬದಲಿಸಿದ್ದಾರೆ. ದಕ್ಷಿಣದ ಇತರ ರಾಜ್ಯಗಳಂತೆ ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡಿದೆ ಎಂದಿದ್ದಾರೆ.

ಜಗನ್‌ಮೋಹನ್‌ ರೆಡ್ಡಿ ಆಂಧ್ರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಆಡಿರುವ ಮಾತುಗಳು ರಾಜಕೀಯ ಚರ್ಚೆಗೆ ಕಾರಣವಾಗಿದೆ.

“ಯಾವುದೇ ಪಕ್ಷವು ಕೇಂದ್ರದಲ್ಲಿ ಸಂಪೂರ್ಣ ಬಹುಮತವನ್ನು ಪಡೆಯಬಾರದು ಎಂದು ನಾನು ಬಯಸುತ್ತೇನೆ. ಯಾಕೆಂದರೆ, ನಮ್ಮ ಬೆಂಬಲವನ್ನು ನೀಡಿದ್ದಕ್ಕೆ ಪ್ರತಿಯಾಗಿ ನಾವು ವಿಶೇಷ ಸ್ಥಾನಮಾನವನ್ನು ಕೇಳಬಹುದು” ಎಂದು ಜಗನ್‌ಮೋಹನ್‌ ರೆಡ್ಡಿ ಹೇಳಿದ್ದಾರೆ.

ಆಂಧ್ರ ಪ್ರದೇಶ ಒಂದೆರಡು ತಿಂಗಳಲ್ಲಿ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಸಾಕ್ಷಿಯಾಗಲಿದೆ. ಇದಕ್ಕೂ ಮುನ್ನ ಫೆಬ್ರವರಿ 5 ರಂದು ಬಜೆಟ್ ಅಧಿವೇಶನ ಆರಂಭಗೊಂಡಿದೆ. ರಾಜ್ಯಪಾಲ ಅಬ್ದುಲ್ ನಝೀರ್ ಅವರು ವೈಎಸ್ ಜಗನ್ ಅವರ ನಾಲ್ಕೂವರೆ ವರ್ಷಗಳ ಆಡಳಿತವನ್ನು ಶ್ಲಾಘಿಸಿ ಅಧಿವೇಶನವನ್ನು ಪ್ರಾರಂಭಿಸಿದ್ದಾರೆ.

ಫೆಬ್ರವರಿ 6 ರಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ 13 ಟಿಡಿಪಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಟಿಡಿಪಿ ಶಾಸಕರು ಹಣದುಬ್ಬರ ಮತ್ತು ವಿದ್ಯುತ್ ದರಗಳ ಹೆಚ್ಚಳದ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರನ್ನು ಒತ್ತಾಯಿಸಿದ್ದರು. ಆದರೆ, ಸ್ಪೀಕರ್‌ ಅವಕಾಶವನ್ನು ನಿರಾಕರಿಸಿದ್ದರು. ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ಈ ನಡುವೆ ಮುಖ್ಯಮಂತ್ರಿ ವೈಎಸ್ ಜಗನ್ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಸಿಎಂ ಜಗನ್ ಅವರು ಪವರ್‌ಪಾಯಿಂಟ್ ಪ್ರಸ್ತುತಿಯ ಮೂಲಕ ರಾಜ್ಯದ ಹಣಕಾಸು ಪರಿಸ್ಥಿತಿಯ ಕುರಿತು ಸದನಕ್ಕೆ ವಿವರಿಸಿದ್ದಾರೆ. ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಕಡಿಮೆ ಪಾಲು ನೀಡಲಾಗಿದೆ. ಅಲ್ಲದೆ ಕೋವಿಡ್ -19 ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ. ಅಧಿಕ ಸಾಲ ಮಾಡಿ ಟಿಡಿಪಿ ರಾಜ್ಯವನ್ನು ನಮಗೆ ಹಸ್ತಾಂತರಿಸಿತ್ತು ಎಂದು ಜಗನ್‌ ಮೋಹನ್‌ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಜಗನ್‌ ಅವರ ಭಾಷಣದ ವೇಳೆ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಂತೆ ಕೇಂದ್ರ ಸರ್ಕಾರ ನಮಗೆ ಅನುದಾನದಲ್ಲಿ ಕಡಿಮೆ ಪಾಲು ಕೊಟ್ಟಿದೆ ಎಂದಿದ್ದಾರೆ. ರಾಜ್ಯದ ವಿತ್ತೀಯ ಸ್ಥಿತಿಗೆ ಕೇಂದ್ರದ ತಾರತಮ್ಯವೇ ಕಾರಣ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರವು ₹38,916 ಕೋಟಿ ಮೊತ್ತದ ತೆರಿಗೆ ಆದಾಯದ ನಷ್ಟವನ್ನು ಕಂಡಿದೆ. ಕೇಂದ್ರ ಸರ್ಕಾರದ ಅನುದಾನ ಹಂಚಿಕೆಯಲ್ಲಿ ಕುಸಿತವಾಗಿದೆ. ಆಂಧ್ರ ಪ್ರದೇಶಕ್ಕೆ ಒಟ್ಟು ₹66,116 ಕೋಟಿ ಬರಬೇಕಿತ್ತು. ಈ ಪೈಕಿ ಕೇವಲ ₹27,200 ಕೋಟಿ ಬಂದಿದೆ. ಕೇಂದ್ರದಿಂದ ಸರಿಯಾದ ರೀತಿಯಲ್ಲಿ ಹಣ ಬರದ ಹಿನ್ನೆಲೆ ಮತ್ತು ವೆಚ್ಚದ ಹೆಚ್ಚಳದಿಂದಾಗಿ ನಾವು ಸಾಲ ಮಾಡಬೇಕಾಯಿತು ಎಂದಿದ್ದಾರೆ.

15ನೇ ಹಣಕಾಸು ಆಯೋಗವು ಕೇಂದ್ರ ತೆರಿಗೆಗಳಲ್ಲಿ (ಸೆಸ್ ಮತ್ತು ಸರ್‌ಚಾರ್ಜ್‌ಗಳನ್ನು ಹೊರತುಪಡಿಸಿ) 41 ಪ್ರತಿಶತದಷ್ಟು ಪಾಲನ್ನು ಸೂಚಿಸಿದ್ದರೂ, ರಾಜ್ಯವು ಕೇಂದ್ರ ಸರ್ಕಾರದಿಂದ ಕಡಿಮೆ ಅನುದಾನ ಪಡೆದಿದೆ. 2010-2015ರ 13ನೇ ಹಣಕಾಸು ಆಯೋಗದ ಶಿಫಾರಸುಗಳಲ್ಲಿ ಶೇ. 32ರಷ್ಟು ಪಾಲು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿತ್ತು. ಆದರೆ, ಕೇವಲ 28 ಶೇ. ಬಂದಿದೆ. 14ನೇ ಹಣಕಾಸು ಆಯೋಗವು (2015-20) ಅವಧಿಯಲ್ಲಿ ರಾಜ್ಯಕ್ಕೆ ಕೇಂದ್ರ ತೆರಿಗೆಯ ಶೇ. 42 ಪಾಲನ್ನು ಶಿಫಾರಸು ಮಾಡಿತ್ತು. ಆದರೆ, ರಾಜ್ಯಕ್ಕೆ ಕೇವಲ 35 ಶೇ. ದೊರೆತಿದೆ. 15ನೇ ಹಣಕಾಸು ಆಯೋಗದಲ್ಲಿ ಇದು ಇನ್ನೂ ಕೆಟ್ಟದಾಗಿದೆ. ಏಕೆಂದರೆ, ಅದು ಮುಂದಿನ ಐದು ವರ್ಷಗಳವರೆಗೆ ಶೇ. 41ರಷ್ಟು ಅನುದಾನ ಶಿಫಾರಸು ಮಾಡಿದೆ. ಆದರೆ, ರಾಜ್ಯಗಳು ಪ್ರಸ್ತುತ ಸರಾಸರಿ 31.5 ಶೇ. ಮಾತ್ರ ಪಡೆಯುತ್ತಿವೆ ಎಂದು ಜಗನ್ ಮೋಹನ್ ರೆಡ್ಡಿ ವಿವರಿಸಿದ್ದಾರೆ.

ಅನುದಾನ ತಾರತಮ್ಯದ ವಿರುದ್ದ ಕರ್ನಾಟಕ ಇಂದು (ಫೆ.7) ದೆಹಲಿಯ ಜಂತರ್‌ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ನಾಳೆ (ಫೆ.8) ಕೇರಳ ಸರ್ಕಾರ ಅದೇ ಜಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ತಮಿಳುನಾಡು ಕೇರಳಕ್ಕೆ ಸಾಥ್ ನೀಡಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಕರ್ನಾಟಕದ ನಿಲುವನ್ನೇ ಹೊಂದಿದೆ. ಇದೀಗ ದಕ್ಷಿಣದ ಮತ್ತೊಂದು ರಾಜ್ಯ ಆಂಧ್ರ ಪ್ರದೇಶ ಕೂಡ ಕೇಂದ್ರದ ವಿರುದ್ದ ಸಮರ ಸಾರುವ ಲಕ್ಷಣ ಕಾಣುತ್ತಿದೆ. ಆದರೆ, ಎನ್‌ಡಿಎ ಬಣದ ಜೊತೆ ಗುರುತಿಸಿಕೊಂಡಿರುವ ಜಗನ್‌ ಮೋಹನ್‌ ರೆಡ್ಡಿ ಕೇಂದ್ರದ ತಾರತಮ್ಯದ ವಿರುದ್ದ ಧ್ವನಿಯೆತ್ತಿರುವುದು ವಿಶೇಷವೆನಿಸಿದೆ.

ಇದನ್ನೂ ಓದಿ : ಕೇಂದ್ರದ ವಿರುದ್ಧ ಕೇರಳ ಸರ್ಕಾರದಿಂದ ನಾಳೆ ದೆಹಲಿಯಲ್ಲಿ ಪ್ರತಿಭಟನೆ: ತಮಿಳುನಾಡಿನಿಂದ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...