Homeಮುಖಪುಟಕೇಂದ್ರದಿಂದ ಅನುದಾನ ತಾರತಮ್ಯ ಎಂದ ಜಗನ್‌ಮೋಹನ್‌ ರೆಡ್ಡಿ : ಬಿಜೆಪಿ ಸಖ್ಯ ತೊರೆದ್ರಾ ಆಂಧ್ರ ಸಿಎಂ?

ಕೇಂದ್ರದಿಂದ ಅನುದಾನ ತಾರತಮ್ಯ ಎಂದ ಜಗನ್‌ಮೋಹನ್‌ ರೆಡ್ಡಿ : ಬಿಜೆಪಿ ಸಖ್ಯ ತೊರೆದ್ರಾ ಆಂಧ್ರ ಸಿಎಂ?

- Advertisement -
- Advertisement -

ಬಿಜೆಪಿಯೊಂದಿಗೆ ಬಹಳ ಆತ್ಮೀಯತೆಯಿಂದ ಇದ್ದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಕಳೆದ ಎರಡು ವಾರಗಳಿಂದ ತನ್ನ ವರಸೆ ಬದಲಿಸಿದ್ದಾರೆ. ದಕ್ಷಿಣದ ಇತರ ರಾಜ್ಯಗಳಂತೆ ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡಿದೆ ಎಂದಿದ್ದಾರೆ.

ಜಗನ್‌ಮೋಹನ್‌ ರೆಡ್ಡಿ ಆಂಧ್ರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಆಡಿರುವ ಮಾತುಗಳು ರಾಜಕೀಯ ಚರ್ಚೆಗೆ ಕಾರಣವಾಗಿದೆ.

“ಯಾವುದೇ ಪಕ್ಷವು ಕೇಂದ್ರದಲ್ಲಿ ಸಂಪೂರ್ಣ ಬಹುಮತವನ್ನು ಪಡೆಯಬಾರದು ಎಂದು ನಾನು ಬಯಸುತ್ತೇನೆ. ಯಾಕೆಂದರೆ, ನಮ್ಮ ಬೆಂಬಲವನ್ನು ನೀಡಿದ್ದಕ್ಕೆ ಪ್ರತಿಯಾಗಿ ನಾವು ವಿಶೇಷ ಸ್ಥಾನಮಾನವನ್ನು ಕೇಳಬಹುದು” ಎಂದು ಜಗನ್‌ಮೋಹನ್‌ ರೆಡ್ಡಿ ಹೇಳಿದ್ದಾರೆ.

ಆಂಧ್ರ ಪ್ರದೇಶ ಒಂದೆರಡು ತಿಂಗಳಲ್ಲಿ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಸಾಕ್ಷಿಯಾಗಲಿದೆ. ಇದಕ್ಕೂ ಮುನ್ನ ಫೆಬ್ರವರಿ 5 ರಂದು ಬಜೆಟ್ ಅಧಿವೇಶನ ಆರಂಭಗೊಂಡಿದೆ. ರಾಜ್ಯಪಾಲ ಅಬ್ದುಲ್ ನಝೀರ್ ಅವರು ವೈಎಸ್ ಜಗನ್ ಅವರ ನಾಲ್ಕೂವರೆ ವರ್ಷಗಳ ಆಡಳಿತವನ್ನು ಶ್ಲಾಘಿಸಿ ಅಧಿವೇಶನವನ್ನು ಪ್ರಾರಂಭಿಸಿದ್ದಾರೆ.

ಫೆಬ್ರವರಿ 6 ರಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ 13 ಟಿಡಿಪಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಟಿಡಿಪಿ ಶಾಸಕರು ಹಣದುಬ್ಬರ ಮತ್ತು ವಿದ್ಯುತ್ ದರಗಳ ಹೆಚ್ಚಳದ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರನ್ನು ಒತ್ತಾಯಿಸಿದ್ದರು. ಆದರೆ, ಸ್ಪೀಕರ್‌ ಅವಕಾಶವನ್ನು ನಿರಾಕರಿಸಿದ್ದರು. ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ಈ ನಡುವೆ ಮುಖ್ಯಮಂತ್ರಿ ವೈಎಸ್ ಜಗನ್ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಸಿಎಂ ಜಗನ್ ಅವರು ಪವರ್‌ಪಾಯಿಂಟ್ ಪ್ರಸ್ತುತಿಯ ಮೂಲಕ ರಾಜ್ಯದ ಹಣಕಾಸು ಪರಿಸ್ಥಿತಿಯ ಕುರಿತು ಸದನಕ್ಕೆ ವಿವರಿಸಿದ್ದಾರೆ. ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಕಡಿಮೆ ಪಾಲು ನೀಡಲಾಗಿದೆ. ಅಲ್ಲದೆ ಕೋವಿಡ್ -19 ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ. ಅಧಿಕ ಸಾಲ ಮಾಡಿ ಟಿಡಿಪಿ ರಾಜ್ಯವನ್ನು ನಮಗೆ ಹಸ್ತಾಂತರಿಸಿತ್ತು ಎಂದು ಜಗನ್‌ ಮೋಹನ್‌ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಜಗನ್‌ ಅವರ ಭಾಷಣದ ವೇಳೆ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಂತೆ ಕೇಂದ್ರ ಸರ್ಕಾರ ನಮಗೆ ಅನುದಾನದಲ್ಲಿ ಕಡಿಮೆ ಪಾಲು ಕೊಟ್ಟಿದೆ ಎಂದಿದ್ದಾರೆ. ರಾಜ್ಯದ ವಿತ್ತೀಯ ಸ್ಥಿತಿಗೆ ಕೇಂದ್ರದ ತಾರತಮ್ಯವೇ ಕಾರಣ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರವು ₹38,916 ಕೋಟಿ ಮೊತ್ತದ ತೆರಿಗೆ ಆದಾಯದ ನಷ್ಟವನ್ನು ಕಂಡಿದೆ. ಕೇಂದ್ರ ಸರ್ಕಾರದ ಅನುದಾನ ಹಂಚಿಕೆಯಲ್ಲಿ ಕುಸಿತವಾಗಿದೆ. ಆಂಧ್ರ ಪ್ರದೇಶಕ್ಕೆ ಒಟ್ಟು ₹66,116 ಕೋಟಿ ಬರಬೇಕಿತ್ತು. ಈ ಪೈಕಿ ಕೇವಲ ₹27,200 ಕೋಟಿ ಬಂದಿದೆ. ಕೇಂದ್ರದಿಂದ ಸರಿಯಾದ ರೀತಿಯಲ್ಲಿ ಹಣ ಬರದ ಹಿನ್ನೆಲೆ ಮತ್ತು ವೆಚ್ಚದ ಹೆಚ್ಚಳದಿಂದಾಗಿ ನಾವು ಸಾಲ ಮಾಡಬೇಕಾಯಿತು ಎಂದಿದ್ದಾರೆ.

15ನೇ ಹಣಕಾಸು ಆಯೋಗವು ಕೇಂದ್ರ ತೆರಿಗೆಗಳಲ್ಲಿ (ಸೆಸ್ ಮತ್ತು ಸರ್‌ಚಾರ್ಜ್‌ಗಳನ್ನು ಹೊರತುಪಡಿಸಿ) 41 ಪ್ರತಿಶತದಷ್ಟು ಪಾಲನ್ನು ಸೂಚಿಸಿದ್ದರೂ, ರಾಜ್ಯವು ಕೇಂದ್ರ ಸರ್ಕಾರದಿಂದ ಕಡಿಮೆ ಅನುದಾನ ಪಡೆದಿದೆ. 2010-2015ರ 13ನೇ ಹಣಕಾಸು ಆಯೋಗದ ಶಿಫಾರಸುಗಳಲ್ಲಿ ಶೇ. 32ರಷ್ಟು ಪಾಲು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿತ್ತು. ಆದರೆ, ಕೇವಲ 28 ಶೇ. ಬಂದಿದೆ. 14ನೇ ಹಣಕಾಸು ಆಯೋಗವು (2015-20) ಅವಧಿಯಲ್ಲಿ ರಾಜ್ಯಕ್ಕೆ ಕೇಂದ್ರ ತೆರಿಗೆಯ ಶೇ. 42 ಪಾಲನ್ನು ಶಿಫಾರಸು ಮಾಡಿತ್ತು. ಆದರೆ, ರಾಜ್ಯಕ್ಕೆ ಕೇವಲ 35 ಶೇ. ದೊರೆತಿದೆ. 15ನೇ ಹಣಕಾಸು ಆಯೋಗದಲ್ಲಿ ಇದು ಇನ್ನೂ ಕೆಟ್ಟದಾಗಿದೆ. ಏಕೆಂದರೆ, ಅದು ಮುಂದಿನ ಐದು ವರ್ಷಗಳವರೆಗೆ ಶೇ. 41ರಷ್ಟು ಅನುದಾನ ಶಿಫಾರಸು ಮಾಡಿದೆ. ಆದರೆ, ರಾಜ್ಯಗಳು ಪ್ರಸ್ತುತ ಸರಾಸರಿ 31.5 ಶೇ. ಮಾತ್ರ ಪಡೆಯುತ್ತಿವೆ ಎಂದು ಜಗನ್ ಮೋಹನ್ ರೆಡ್ಡಿ ವಿವರಿಸಿದ್ದಾರೆ.

ಅನುದಾನ ತಾರತಮ್ಯದ ವಿರುದ್ದ ಕರ್ನಾಟಕ ಇಂದು (ಫೆ.7) ದೆಹಲಿಯ ಜಂತರ್‌ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ನಾಳೆ (ಫೆ.8) ಕೇರಳ ಸರ್ಕಾರ ಅದೇ ಜಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ತಮಿಳುನಾಡು ಕೇರಳಕ್ಕೆ ಸಾಥ್ ನೀಡಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಕರ್ನಾಟಕದ ನಿಲುವನ್ನೇ ಹೊಂದಿದೆ. ಇದೀಗ ದಕ್ಷಿಣದ ಮತ್ತೊಂದು ರಾಜ್ಯ ಆಂಧ್ರ ಪ್ರದೇಶ ಕೂಡ ಕೇಂದ್ರದ ವಿರುದ್ದ ಸಮರ ಸಾರುವ ಲಕ್ಷಣ ಕಾಣುತ್ತಿದೆ. ಆದರೆ, ಎನ್‌ಡಿಎ ಬಣದ ಜೊತೆ ಗುರುತಿಸಿಕೊಂಡಿರುವ ಜಗನ್‌ ಮೋಹನ್‌ ರೆಡ್ಡಿ ಕೇಂದ್ರದ ತಾರತಮ್ಯದ ವಿರುದ್ದ ಧ್ವನಿಯೆತ್ತಿರುವುದು ವಿಶೇಷವೆನಿಸಿದೆ.

ಇದನ್ನೂ ಓದಿ : ಕೇಂದ್ರದ ವಿರುದ್ಧ ಕೇರಳ ಸರ್ಕಾರದಿಂದ ನಾಳೆ ದೆಹಲಿಯಲ್ಲಿ ಪ್ರತಿಭಟನೆ: ತಮಿಳುನಾಡಿನಿಂದ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...