Homeಮುಖಪುಟಕೇಂದ್ರದಿಂದ ಅನುದಾನ ತಾರತಮ್ಯ ಎಂದ ಜಗನ್‌ಮೋಹನ್‌ ರೆಡ್ಡಿ : ಬಿಜೆಪಿ ಸಖ್ಯ ತೊರೆದ್ರಾ ಆಂಧ್ರ ಸಿಎಂ?

ಕೇಂದ್ರದಿಂದ ಅನುದಾನ ತಾರತಮ್ಯ ಎಂದ ಜಗನ್‌ಮೋಹನ್‌ ರೆಡ್ಡಿ : ಬಿಜೆಪಿ ಸಖ್ಯ ತೊರೆದ್ರಾ ಆಂಧ್ರ ಸಿಎಂ?

- Advertisement -
- Advertisement -

ಬಿಜೆಪಿಯೊಂದಿಗೆ ಬಹಳ ಆತ್ಮೀಯತೆಯಿಂದ ಇದ್ದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಕಳೆದ ಎರಡು ವಾರಗಳಿಂದ ತನ್ನ ವರಸೆ ಬದಲಿಸಿದ್ದಾರೆ. ದಕ್ಷಿಣದ ಇತರ ರಾಜ್ಯಗಳಂತೆ ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡಿದೆ ಎಂದಿದ್ದಾರೆ.

ಜಗನ್‌ಮೋಹನ್‌ ರೆಡ್ಡಿ ಆಂಧ್ರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಆಡಿರುವ ಮಾತುಗಳು ರಾಜಕೀಯ ಚರ್ಚೆಗೆ ಕಾರಣವಾಗಿದೆ.

“ಯಾವುದೇ ಪಕ್ಷವು ಕೇಂದ್ರದಲ್ಲಿ ಸಂಪೂರ್ಣ ಬಹುಮತವನ್ನು ಪಡೆಯಬಾರದು ಎಂದು ನಾನು ಬಯಸುತ್ತೇನೆ. ಯಾಕೆಂದರೆ, ನಮ್ಮ ಬೆಂಬಲವನ್ನು ನೀಡಿದ್ದಕ್ಕೆ ಪ್ರತಿಯಾಗಿ ನಾವು ವಿಶೇಷ ಸ್ಥಾನಮಾನವನ್ನು ಕೇಳಬಹುದು” ಎಂದು ಜಗನ್‌ಮೋಹನ್‌ ರೆಡ್ಡಿ ಹೇಳಿದ್ದಾರೆ.

ಆಂಧ್ರ ಪ್ರದೇಶ ಒಂದೆರಡು ತಿಂಗಳಲ್ಲಿ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಸಾಕ್ಷಿಯಾಗಲಿದೆ. ಇದಕ್ಕೂ ಮುನ್ನ ಫೆಬ್ರವರಿ 5 ರಂದು ಬಜೆಟ್ ಅಧಿವೇಶನ ಆರಂಭಗೊಂಡಿದೆ. ರಾಜ್ಯಪಾಲ ಅಬ್ದುಲ್ ನಝೀರ್ ಅವರು ವೈಎಸ್ ಜಗನ್ ಅವರ ನಾಲ್ಕೂವರೆ ವರ್ಷಗಳ ಆಡಳಿತವನ್ನು ಶ್ಲಾಘಿಸಿ ಅಧಿವೇಶನವನ್ನು ಪ್ರಾರಂಭಿಸಿದ್ದಾರೆ.

ಫೆಬ್ರವರಿ 6 ರಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ 13 ಟಿಡಿಪಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಟಿಡಿಪಿ ಶಾಸಕರು ಹಣದುಬ್ಬರ ಮತ್ತು ವಿದ್ಯುತ್ ದರಗಳ ಹೆಚ್ಚಳದ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರನ್ನು ಒತ್ತಾಯಿಸಿದ್ದರು. ಆದರೆ, ಸ್ಪೀಕರ್‌ ಅವಕಾಶವನ್ನು ನಿರಾಕರಿಸಿದ್ದರು. ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ಈ ನಡುವೆ ಮುಖ್ಯಮಂತ್ರಿ ವೈಎಸ್ ಜಗನ್ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಸಿಎಂ ಜಗನ್ ಅವರು ಪವರ್‌ಪಾಯಿಂಟ್ ಪ್ರಸ್ತುತಿಯ ಮೂಲಕ ರಾಜ್ಯದ ಹಣಕಾಸು ಪರಿಸ್ಥಿತಿಯ ಕುರಿತು ಸದನಕ್ಕೆ ವಿವರಿಸಿದ್ದಾರೆ. ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಕಡಿಮೆ ಪಾಲು ನೀಡಲಾಗಿದೆ. ಅಲ್ಲದೆ ಕೋವಿಡ್ -19 ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ. ಅಧಿಕ ಸಾಲ ಮಾಡಿ ಟಿಡಿಪಿ ರಾಜ್ಯವನ್ನು ನಮಗೆ ಹಸ್ತಾಂತರಿಸಿತ್ತು ಎಂದು ಜಗನ್‌ ಮೋಹನ್‌ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಜಗನ್‌ ಅವರ ಭಾಷಣದ ವೇಳೆ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಂತೆ ಕೇಂದ್ರ ಸರ್ಕಾರ ನಮಗೆ ಅನುದಾನದಲ್ಲಿ ಕಡಿಮೆ ಪಾಲು ಕೊಟ್ಟಿದೆ ಎಂದಿದ್ದಾರೆ. ರಾಜ್ಯದ ವಿತ್ತೀಯ ಸ್ಥಿತಿಗೆ ಕೇಂದ್ರದ ತಾರತಮ್ಯವೇ ಕಾರಣ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರವು ₹38,916 ಕೋಟಿ ಮೊತ್ತದ ತೆರಿಗೆ ಆದಾಯದ ನಷ್ಟವನ್ನು ಕಂಡಿದೆ. ಕೇಂದ್ರ ಸರ್ಕಾರದ ಅನುದಾನ ಹಂಚಿಕೆಯಲ್ಲಿ ಕುಸಿತವಾಗಿದೆ. ಆಂಧ್ರ ಪ್ರದೇಶಕ್ಕೆ ಒಟ್ಟು ₹66,116 ಕೋಟಿ ಬರಬೇಕಿತ್ತು. ಈ ಪೈಕಿ ಕೇವಲ ₹27,200 ಕೋಟಿ ಬಂದಿದೆ. ಕೇಂದ್ರದಿಂದ ಸರಿಯಾದ ರೀತಿಯಲ್ಲಿ ಹಣ ಬರದ ಹಿನ್ನೆಲೆ ಮತ್ತು ವೆಚ್ಚದ ಹೆಚ್ಚಳದಿಂದಾಗಿ ನಾವು ಸಾಲ ಮಾಡಬೇಕಾಯಿತು ಎಂದಿದ್ದಾರೆ.

15ನೇ ಹಣಕಾಸು ಆಯೋಗವು ಕೇಂದ್ರ ತೆರಿಗೆಗಳಲ್ಲಿ (ಸೆಸ್ ಮತ್ತು ಸರ್‌ಚಾರ್ಜ್‌ಗಳನ್ನು ಹೊರತುಪಡಿಸಿ) 41 ಪ್ರತಿಶತದಷ್ಟು ಪಾಲನ್ನು ಸೂಚಿಸಿದ್ದರೂ, ರಾಜ್ಯವು ಕೇಂದ್ರ ಸರ್ಕಾರದಿಂದ ಕಡಿಮೆ ಅನುದಾನ ಪಡೆದಿದೆ. 2010-2015ರ 13ನೇ ಹಣಕಾಸು ಆಯೋಗದ ಶಿಫಾರಸುಗಳಲ್ಲಿ ಶೇ. 32ರಷ್ಟು ಪಾಲು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿತ್ತು. ಆದರೆ, ಕೇವಲ 28 ಶೇ. ಬಂದಿದೆ. 14ನೇ ಹಣಕಾಸು ಆಯೋಗವು (2015-20) ಅವಧಿಯಲ್ಲಿ ರಾಜ್ಯಕ್ಕೆ ಕೇಂದ್ರ ತೆರಿಗೆಯ ಶೇ. 42 ಪಾಲನ್ನು ಶಿಫಾರಸು ಮಾಡಿತ್ತು. ಆದರೆ, ರಾಜ್ಯಕ್ಕೆ ಕೇವಲ 35 ಶೇ. ದೊರೆತಿದೆ. 15ನೇ ಹಣಕಾಸು ಆಯೋಗದಲ್ಲಿ ಇದು ಇನ್ನೂ ಕೆಟ್ಟದಾಗಿದೆ. ಏಕೆಂದರೆ, ಅದು ಮುಂದಿನ ಐದು ವರ್ಷಗಳವರೆಗೆ ಶೇ. 41ರಷ್ಟು ಅನುದಾನ ಶಿಫಾರಸು ಮಾಡಿದೆ. ಆದರೆ, ರಾಜ್ಯಗಳು ಪ್ರಸ್ತುತ ಸರಾಸರಿ 31.5 ಶೇ. ಮಾತ್ರ ಪಡೆಯುತ್ತಿವೆ ಎಂದು ಜಗನ್ ಮೋಹನ್ ರೆಡ್ಡಿ ವಿವರಿಸಿದ್ದಾರೆ.

ಅನುದಾನ ತಾರತಮ್ಯದ ವಿರುದ್ದ ಕರ್ನಾಟಕ ಇಂದು (ಫೆ.7) ದೆಹಲಿಯ ಜಂತರ್‌ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ನಾಳೆ (ಫೆ.8) ಕೇರಳ ಸರ್ಕಾರ ಅದೇ ಜಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ತಮಿಳುನಾಡು ಕೇರಳಕ್ಕೆ ಸಾಥ್ ನೀಡಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಕರ್ನಾಟಕದ ನಿಲುವನ್ನೇ ಹೊಂದಿದೆ. ಇದೀಗ ದಕ್ಷಿಣದ ಮತ್ತೊಂದು ರಾಜ್ಯ ಆಂಧ್ರ ಪ್ರದೇಶ ಕೂಡ ಕೇಂದ್ರದ ವಿರುದ್ದ ಸಮರ ಸಾರುವ ಲಕ್ಷಣ ಕಾಣುತ್ತಿದೆ. ಆದರೆ, ಎನ್‌ಡಿಎ ಬಣದ ಜೊತೆ ಗುರುತಿಸಿಕೊಂಡಿರುವ ಜಗನ್‌ ಮೋಹನ್‌ ರೆಡ್ಡಿ ಕೇಂದ್ರದ ತಾರತಮ್ಯದ ವಿರುದ್ದ ಧ್ವನಿಯೆತ್ತಿರುವುದು ವಿಶೇಷವೆನಿಸಿದೆ.

ಇದನ್ನೂ ಓದಿ : ಕೇಂದ್ರದ ವಿರುದ್ಧ ಕೇರಳ ಸರ್ಕಾರದಿಂದ ನಾಳೆ ದೆಹಲಿಯಲ್ಲಿ ಪ್ರತಿಭಟನೆ: ತಮಿಳುನಾಡಿನಿಂದ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...