Homeಮುಖಪುಟಕೇಂದ್ರದಿಂದ ಅನುದಾನ ತಾರತಮ್ಯ ಎಂದ ಜಗನ್‌ಮೋಹನ್‌ ರೆಡ್ಡಿ : ಬಿಜೆಪಿ ಸಖ್ಯ ತೊರೆದ್ರಾ ಆಂಧ್ರ ಸಿಎಂ?

ಕೇಂದ್ರದಿಂದ ಅನುದಾನ ತಾರತಮ್ಯ ಎಂದ ಜಗನ್‌ಮೋಹನ್‌ ರೆಡ್ಡಿ : ಬಿಜೆಪಿ ಸಖ್ಯ ತೊರೆದ್ರಾ ಆಂಧ್ರ ಸಿಎಂ?

- Advertisement -
- Advertisement -

ಬಿಜೆಪಿಯೊಂದಿಗೆ ಬಹಳ ಆತ್ಮೀಯತೆಯಿಂದ ಇದ್ದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಕಳೆದ ಎರಡು ವಾರಗಳಿಂದ ತನ್ನ ವರಸೆ ಬದಲಿಸಿದ್ದಾರೆ. ದಕ್ಷಿಣದ ಇತರ ರಾಜ್ಯಗಳಂತೆ ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡಿದೆ ಎಂದಿದ್ದಾರೆ.

ಜಗನ್‌ಮೋಹನ್‌ ರೆಡ್ಡಿ ಆಂಧ್ರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಆಡಿರುವ ಮಾತುಗಳು ರಾಜಕೀಯ ಚರ್ಚೆಗೆ ಕಾರಣವಾಗಿದೆ.

“ಯಾವುದೇ ಪಕ್ಷವು ಕೇಂದ್ರದಲ್ಲಿ ಸಂಪೂರ್ಣ ಬಹುಮತವನ್ನು ಪಡೆಯಬಾರದು ಎಂದು ನಾನು ಬಯಸುತ್ತೇನೆ. ಯಾಕೆಂದರೆ, ನಮ್ಮ ಬೆಂಬಲವನ್ನು ನೀಡಿದ್ದಕ್ಕೆ ಪ್ರತಿಯಾಗಿ ನಾವು ವಿಶೇಷ ಸ್ಥಾನಮಾನವನ್ನು ಕೇಳಬಹುದು” ಎಂದು ಜಗನ್‌ಮೋಹನ್‌ ರೆಡ್ಡಿ ಹೇಳಿದ್ದಾರೆ.

ಆಂಧ್ರ ಪ್ರದೇಶ ಒಂದೆರಡು ತಿಂಗಳಲ್ಲಿ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಸಾಕ್ಷಿಯಾಗಲಿದೆ. ಇದಕ್ಕೂ ಮುನ್ನ ಫೆಬ್ರವರಿ 5 ರಂದು ಬಜೆಟ್ ಅಧಿವೇಶನ ಆರಂಭಗೊಂಡಿದೆ. ರಾಜ್ಯಪಾಲ ಅಬ್ದುಲ್ ನಝೀರ್ ಅವರು ವೈಎಸ್ ಜಗನ್ ಅವರ ನಾಲ್ಕೂವರೆ ವರ್ಷಗಳ ಆಡಳಿತವನ್ನು ಶ್ಲಾಘಿಸಿ ಅಧಿವೇಶನವನ್ನು ಪ್ರಾರಂಭಿಸಿದ್ದಾರೆ.

ಫೆಬ್ರವರಿ 6 ರಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ 13 ಟಿಡಿಪಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಟಿಡಿಪಿ ಶಾಸಕರು ಹಣದುಬ್ಬರ ಮತ್ತು ವಿದ್ಯುತ್ ದರಗಳ ಹೆಚ್ಚಳದ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರನ್ನು ಒತ್ತಾಯಿಸಿದ್ದರು. ಆದರೆ, ಸ್ಪೀಕರ್‌ ಅವಕಾಶವನ್ನು ನಿರಾಕರಿಸಿದ್ದರು. ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ಈ ನಡುವೆ ಮುಖ್ಯಮಂತ್ರಿ ವೈಎಸ್ ಜಗನ್ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಸಿಎಂ ಜಗನ್ ಅವರು ಪವರ್‌ಪಾಯಿಂಟ್ ಪ್ರಸ್ತುತಿಯ ಮೂಲಕ ರಾಜ್ಯದ ಹಣಕಾಸು ಪರಿಸ್ಥಿತಿಯ ಕುರಿತು ಸದನಕ್ಕೆ ವಿವರಿಸಿದ್ದಾರೆ. ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಕಡಿಮೆ ಪಾಲು ನೀಡಲಾಗಿದೆ. ಅಲ್ಲದೆ ಕೋವಿಡ್ -19 ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ. ಅಧಿಕ ಸಾಲ ಮಾಡಿ ಟಿಡಿಪಿ ರಾಜ್ಯವನ್ನು ನಮಗೆ ಹಸ್ತಾಂತರಿಸಿತ್ತು ಎಂದು ಜಗನ್‌ ಮೋಹನ್‌ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಜಗನ್‌ ಅವರ ಭಾಷಣದ ವೇಳೆ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಂತೆ ಕೇಂದ್ರ ಸರ್ಕಾರ ನಮಗೆ ಅನುದಾನದಲ್ಲಿ ಕಡಿಮೆ ಪಾಲು ಕೊಟ್ಟಿದೆ ಎಂದಿದ್ದಾರೆ. ರಾಜ್ಯದ ವಿತ್ತೀಯ ಸ್ಥಿತಿಗೆ ಕೇಂದ್ರದ ತಾರತಮ್ಯವೇ ಕಾರಣ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರವು ₹38,916 ಕೋಟಿ ಮೊತ್ತದ ತೆರಿಗೆ ಆದಾಯದ ನಷ್ಟವನ್ನು ಕಂಡಿದೆ. ಕೇಂದ್ರ ಸರ್ಕಾರದ ಅನುದಾನ ಹಂಚಿಕೆಯಲ್ಲಿ ಕುಸಿತವಾಗಿದೆ. ಆಂಧ್ರ ಪ್ರದೇಶಕ್ಕೆ ಒಟ್ಟು ₹66,116 ಕೋಟಿ ಬರಬೇಕಿತ್ತು. ಈ ಪೈಕಿ ಕೇವಲ ₹27,200 ಕೋಟಿ ಬಂದಿದೆ. ಕೇಂದ್ರದಿಂದ ಸರಿಯಾದ ರೀತಿಯಲ್ಲಿ ಹಣ ಬರದ ಹಿನ್ನೆಲೆ ಮತ್ತು ವೆಚ್ಚದ ಹೆಚ್ಚಳದಿಂದಾಗಿ ನಾವು ಸಾಲ ಮಾಡಬೇಕಾಯಿತು ಎಂದಿದ್ದಾರೆ.

15ನೇ ಹಣಕಾಸು ಆಯೋಗವು ಕೇಂದ್ರ ತೆರಿಗೆಗಳಲ್ಲಿ (ಸೆಸ್ ಮತ್ತು ಸರ್‌ಚಾರ್ಜ್‌ಗಳನ್ನು ಹೊರತುಪಡಿಸಿ) 41 ಪ್ರತಿಶತದಷ್ಟು ಪಾಲನ್ನು ಸೂಚಿಸಿದ್ದರೂ, ರಾಜ್ಯವು ಕೇಂದ್ರ ಸರ್ಕಾರದಿಂದ ಕಡಿಮೆ ಅನುದಾನ ಪಡೆದಿದೆ. 2010-2015ರ 13ನೇ ಹಣಕಾಸು ಆಯೋಗದ ಶಿಫಾರಸುಗಳಲ್ಲಿ ಶೇ. 32ರಷ್ಟು ಪಾಲು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿತ್ತು. ಆದರೆ, ಕೇವಲ 28 ಶೇ. ಬಂದಿದೆ. 14ನೇ ಹಣಕಾಸು ಆಯೋಗವು (2015-20) ಅವಧಿಯಲ್ಲಿ ರಾಜ್ಯಕ್ಕೆ ಕೇಂದ್ರ ತೆರಿಗೆಯ ಶೇ. 42 ಪಾಲನ್ನು ಶಿಫಾರಸು ಮಾಡಿತ್ತು. ಆದರೆ, ರಾಜ್ಯಕ್ಕೆ ಕೇವಲ 35 ಶೇ. ದೊರೆತಿದೆ. 15ನೇ ಹಣಕಾಸು ಆಯೋಗದಲ್ಲಿ ಇದು ಇನ್ನೂ ಕೆಟ್ಟದಾಗಿದೆ. ಏಕೆಂದರೆ, ಅದು ಮುಂದಿನ ಐದು ವರ್ಷಗಳವರೆಗೆ ಶೇ. 41ರಷ್ಟು ಅನುದಾನ ಶಿಫಾರಸು ಮಾಡಿದೆ. ಆದರೆ, ರಾಜ್ಯಗಳು ಪ್ರಸ್ತುತ ಸರಾಸರಿ 31.5 ಶೇ. ಮಾತ್ರ ಪಡೆಯುತ್ತಿವೆ ಎಂದು ಜಗನ್ ಮೋಹನ್ ರೆಡ್ಡಿ ವಿವರಿಸಿದ್ದಾರೆ.

ಅನುದಾನ ತಾರತಮ್ಯದ ವಿರುದ್ದ ಕರ್ನಾಟಕ ಇಂದು (ಫೆ.7) ದೆಹಲಿಯ ಜಂತರ್‌ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ನಾಳೆ (ಫೆ.8) ಕೇರಳ ಸರ್ಕಾರ ಅದೇ ಜಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ತಮಿಳುನಾಡು ಕೇರಳಕ್ಕೆ ಸಾಥ್ ನೀಡಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಕರ್ನಾಟಕದ ನಿಲುವನ್ನೇ ಹೊಂದಿದೆ. ಇದೀಗ ದಕ್ಷಿಣದ ಮತ್ತೊಂದು ರಾಜ್ಯ ಆಂಧ್ರ ಪ್ರದೇಶ ಕೂಡ ಕೇಂದ್ರದ ವಿರುದ್ದ ಸಮರ ಸಾರುವ ಲಕ್ಷಣ ಕಾಣುತ್ತಿದೆ. ಆದರೆ, ಎನ್‌ಡಿಎ ಬಣದ ಜೊತೆ ಗುರುತಿಸಿಕೊಂಡಿರುವ ಜಗನ್‌ ಮೋಹನ್‌ ರೆಡ್ಡಿ ಕೇಂದ್ರದ ತಾರತಮ್ಯದ ವಿರುದ್ದ ಧ್ವನಿಯೆತ್ತಿರುವುದು ವಿಶೇಷವೆನಿಸಿದೆ.

ಇದನ್ನೂ ಓದಿ : ಕೇಂದ್ರದ ವಿರುದ್ಧ ಕೇರಳ ಸರ್ಕಾರದಿಂದ ನಾಳೆ ದೆಹಲಿಯಲ್ಲಿ ಪ್ರತಿಭಟನೆ: ತಮಿಳುನಾಡಿನಿಂದ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...