Homeಮುಖಪುಟಎನ್‌ಡಿಎ ಸರ್ಕಾರ: ಟಿಡಿಪಿ, ಜೆಡಿಯು ಸ್ಪೀಕರ್‌ ಹುದ್ದೆಗೆ ಬೇಡಿಕೆಯಿಟ್ಟಿದ್ದು ಏಕೆ?

ಎನ್‌ಡಿಎ ಸರ್ಕಾರ: ಟಿಡಿಪಿ, ಜೆಡಿಯು ಸ್ಪೀಕರ್‌ ಹುದ್ದೆಗೆ ಬೇಡಿಕೆಯಿಟ್ಟಿದ್ದು ಏಕೆ?

ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಸ್ಪೀಕರ್‌ಗೆ ನೀಡಲಾದ ಸಾಂವಿಧಾನಿಕ ಅಧಿಕಾರ ಸರ್ಕಾರ ರಚಿಸುವ ಮತ್ತು ಬೀಳಿಸುವ ಸಾಮರ್ಥ್ಯ ನೀಡುತ್ತದೆ

- Advertisement -
- Advertisement -

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೂ, ಚರ್ಚೆಗಳು ಮತ್ತು ಪ್ರಶ್ನೆಗಳು ಅವರ ಸುತ್ತ ಕೇಂದ್ರೀಕೃತವಾಗಿರದೆ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಇಬ್ಬರು ಪಾಲುದಾರರ ಸುತ್ತ ಸುತ್ತುತ್ತಿವೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನತಾ ದಳ-ಯುನೈಟೆಡ್ (ಜೆಡಿಯು) ನಾಯಕ ನಿತೀಶ್ ಕುಮಾರ್ ಅವರು ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬಂದಾಗಿನಿಂದ ಭಾರೀ ಸುದ್ದಿಯಲ್ಲಿದ್ದಾರೆ.

ಬಿಜೆಪಿ ಬಹುಮತ ಪಡೆಯದಿದ್ದರೂ, ಆಂಧ್ರ ಪ್ರದೇಶ ಮತ್ತು ಬಿಹಾರದ ಈ ಇಬ್ಬರು ನಾಯಕರ ಬೆಂಬಲದಿಂದ ಮೋದಿ ಮೂರನೇ ಬಾರಿ ಪ್ರಧಾನಿ ಹುದ್ದೆಗೇರಿದ್ದಾರೆ. ಈ ನಡುವೆ ಇಬ್ಬರೂ ಕೂಡ ತಮ್ಮ ಪಕ್ಷಕ್ಕೆ ಸ್ವೀಕರ್ ಹುದ್ದೆ ನೀಡುವಂತೆ ಕೇಳಿದ್ದಾರೆ ಎಂದು ವರದಿಯಾಗಿದೆ.

ಪ್ರಸ್ತುತ ಎನ್‌ಡಿಎ ಸರ್ಕಾರಕ್ಕೆ ಬೆನ್ನೆಲುಬಾಗಿರುವ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಸಚಿವ ಸ್ಥಾನಕ್ಕಿಂತ ಸ್ಪೀಕರ್ ಹುದ್ದೆಗೆ ಏಕೆ ಲಾಬಿ ಮಾಡುತ್ತಿದ್ದಾರೆ? ಎಂದು ನಿಮಗನಿಸಬಹುದು. ಈ ಪ್ರಶ್ನೆಗೆ 1985ರಲ್ಲಿ 52ನೇ ತಿದ್ದುಪಡಿಯ ಮೂಲಕ ಪರಿಚಯಿಸಲಾದ ಸಂವಿಧಾನದ 10ನೇ ಶೆಡ್ಯೂಲ್‌ನಲ್ಲಿ ಸೂಚಿಸಲಾದ ಪಕ್ಷಾಂತರ ವಿರೋಧಿ ಕಾನೂನಿನಲ್ಲಿ ಉತ್ತರವಿದೆ.

ಸ್ವಯಂ ಪ್ರೇರಣೆಯಿಂದ ತಮ್ಮ ರಾಜಕೀಯ ಪಕ್ಷದ ಸದಸ್ಯತ್ವವನ್ನು ತೊರೆಯುವ ಅಥವಾ ಪಕ್ಷದ ಸೂಚನೆಗಳಿಗೆ ವಿರುದ್ಧವಾಗಿ ಮತ ಚಲಾಯಿಸುವ ಶಾಸಕರು, ಸಂಸದರು ಅನರ್ಹತೆಗೆ ಅರ್ಹರಾಗುತ್ತಾರೆ. ಆದರೆ, ಪಕ್ಷದ ಮೂರನೇ ಎರಡರಷ್ಟು ಚುನಾಯಿತ ಸಂಸದರು ಅಥವಾ ಶಾಸಕರು ಇನ್ನೊಂದು ಪಕ್ಷಕ್ಕೆ ಹೋದರೆ 10ನೇ ಶೆಡ್ಯೂಲ್ ಅವರನ್ನು ಅನರ್ಹತೆಯಿಂದ ರಕ್ಷಿಸುತ್ತದೆ. ಇಂತಹ ಸನ್ನಿವೇಶದಲ್ಲಿ ಚುನಾಯಿತರನ್ನು ಅನರ್ಹಗೊಳಿಸಬೇಕೇ ಅಥವಾ ಬೇಡವೇ ಎಂಬುವುದನ್ನು ನಿರ್ಧರಿಸುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದಾಗಿದೆ.

ಇದಕ್ಕೆ ಇತ್ತೀಚಿನ ಉದಾಹರಣೆಯೆಂದರೆ, ಮಹಾರಾಷ್ಟ್ರದಲ್ಲಿ ಜನವರಿ 2024ರಲ್ಲಿ ಸ್ಪೀಕರ್ ರಾಹುಲ್ ನಾರ್ವೇಕರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ‘ನೈಜ’ ಶಿವಸೇನೆ ಪಕ್ಷದ ಸ್ಥಾನಮಾನ ನೀಡಿರುವುದು. ಶಿಂಧೆ ನೇತೃತ್ವದ ಶಾಸಕರ ಬಣವು ಜೂನ್ 2022ರಲ್ಲಿ ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ತಿರುಗಿಬಿದ್ದಿತ್ತು. ಈ ವಿಷಯ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಆದರೆ ಫೆಬ್ರವರಿ 2023ರಲ್ಲಿ, ಪಕ್ಷಾಂತರ ವಿರೋಧಿ ಕಾನೂನಿನ ಪ್ರಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ಪಿಆರ್‌ಎಸ್‌ ಲೆಜಿಸ್ಲೇಟಿವ್ ರಿಸರ್ಚ್‌ನ ನಾಗರಿಕ ಮತ್ತು ಶಾಸಕಾಂಗ ಸಂಶೋಧನಾ ತೊಡಗುವಿಕೆಗಳ ಮುಖ್ಯಸ್ಥ ಚಕ್ಷು ರಾಯ್, “ಪ್ರಾಥಮಿಕವಾಗಿ ಭಾರತದಲ್ಲಿ ಸ್ಪೀಕರ್‌ ಸ್ಥಾನ ವಿರೋಧಾಭಾಸವಾಗಿದೆ. ಇದು ನಮ್ಮ ಶಾಸನ ರಚನೆ ಸಂಸ್ಥೆಯಾದ ಲೋಕಸಭೆಯ ಹೃದಯ ಭಾಗದಲ್ಲಿರುವ ಅತ್ಯಂತ ಪ್ರತಿಷ್ಠಿತ ಹುದ್ದೆಗಳಲ್ಲಿ ಒಂದಾಗಿದೆ. ಸ್ಪೀಕರ್‌ಗಳು ಪಕ್ಷೇತರರಾಗಿರಬೇಕು. ಸ್ಪೀಕರ್‌ ಹುದ್ದೆಯಲ್ಲಿರುವಾಗ ಪಕ್ಷದ ಸದಸ್ಯತ್ವ ತೊರೆದು ಸಾಂವಿಧಾನಿಕ ಜವಬ್ದಾರಿ ನಿರ್ವಹಿಸುತ್ತಾರೆ. ಹುದ್ದೆಯಿಂದ ಕೆಳಗಿಳಿದ ಬಳಿಕ ಅವರ ರಾಜಕೀಯ ವೃತ್ತಿ ಜೀವನದ ನಿರಂತರತೆಗಾಗಿ ಮತ್ತೆ ತಮ್ಮ ಪಕ್ಷಕ್ಕೆ ಮರಳುತ್ತಾರೆ. ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಸ್ಪೀಕರ್‌ಗೆ ನೀಡಲಾದ ಸಾಂವಿಧಾನಿಕ ಅಧಿಕಾರ ಸರ್ಕಾರ ರಚಿಸುವ ಮತ್ತು ಬೀಳಿಸುವ ಸಾಮರ್ಥ್ಯ ನೀಡುತ್ತದೆ” ಎಂದು ಹೇಳಿದ್ದಾರೆ.

ಲೋಕಸಭೆಯ ಸ್ಪೀಕರ್‌ ಅವರ ಪಕ್ಷಾತೀತತೆಯ ಕೊರತೆಯು ವಿವಾದದ ವಿಷಯವಾಗಿದೆ. ಜಿಎಂಸಿ ಬಾಲಯೋಗಿ (12ನೇ ಮತ್ತು 13ನೇ ಲೋಕಸಭೆ ಸ್ಪೀಕರ್) ಹಲವಾರು ಸಂಸದೀಯ ಸಮಿತಿಗಳ ಅಧ್ಯಕ್ಷರಾಗಿದ್ದರು ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಸ್ಪೀಕರ್ ಹುದ್ದೆಯ ಪಕ್ಷಾತೀತ ಸ್ವರೂಪದ ಹೊರತಾಗಿಯೂ, ಬಾಲಯೋಗಿ ಅವರು ಟಿಡಿಪಿ ನಾಯಕರಾಗಿದ್ದರು, ತಮ್ಮ ಪಕ್ಷದ ಹಿತಾಸಕ್ತಿಗಳನ್ನು ರಕ್ಷಿಸಲು ಉತ್ಸುಕರಾಗಿದ್ದರು.

ಸುಮಾರು 10 ವರ್ಷಗಳ ಹಿಂದೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು ನಿತೀಶ್ ಅವರ ಜೆಡಿಯು ಜೊತೆಗಿನ ಮಹಾಘಟಬಂಧನ್ (ಮಹಾ ಮೈತ್ರಿ) ಬದ್ಧತೆಯ ಬಗ್ಗೆ ನೀಡಿದ್ದ ಹೇಳಿಕೆ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಈಗ ಸ್ಪೀಕರ್ ಹುದ್ದೆಗೆ ಏಕೆ ಲಾಬಿ ಮಾಡುತ್ತಿರಬಹುದು ಎಂಬುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಸುತ್ತದೆ.

“ನಾವು ನಿಜವಾಗಿಯೂ ಹೆಚ್ಚಿನ ಅಧಿಕಾರಕ್ಕಾಗಿ ಸರ್ಕಾರವನ್ನು ಬೀಳಿಸಲು ಬಯಸಿದ್ದರೆ ಸ್ಪೀಕರ್ ಹುದ್ದೆ ಕೇಳುತ್ತಿದ್ದೆವು” ಎಂದು ಯಾದವ್ ಹೇಳಿದ್ದರು. ಅಂದರೆ, ಇಲ್ಲಿ ಸರ್ಕಾರ ಬೀಳಿಸುವ ಮತ್ತು ರಚಿಸುವ ಅಧಿಕಾರ ಸ್ಪೀಕರ್‌ ಕೈಯ್ಯಲ್ಲಿರುತ್ತದೆ. ಆದ್ದರಿಂದ ಆ ಹುದ್ದೆ ಅಷ್ಟೊಂದು ಮಹತ್ವದ್ದು ಎಂದು ನಮಗೆ ಅರ್ಥವಾಗುತ್ತದೆ.

ಇದನ್ನೂ ಓದಿ : ಮೋದಿ ಸರ್ಕಾರದ 72 ಸಚಿವರಲ್ಲಿ 7 ಮಹಿಳೆಯರಿಗೆ ಅವಕಾಶ; ಇಬ್ಬರಿಗೆ ಮಾತ್ರ ಕ್ಯಾಬಿನೆಟ್ ದರ್ಜೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...