Homeಮುಖಪುಟಎನ್‌ಡಿಎ ಸರ್ಕಾರ: ಟಿಡಿಪಿ, ಜೆಡಿಯು ಸ್ಪೀಕರ್‌ ಹುದ್ದೆಗೆ ಬೇಡಿಕೆಯಿಟ್ಟಿದ್ದು ಏಕೆ?

ಎನ್‌ಡಿಎ ಸರ್ಕಾರ: ಟಿಡಿಪಿ, ಜೆಡಿಯು ಸ್ಪೀಕರ್‌ ಹುದ್ದೆಗೆ ಬೇಡಿಕೆಯಿಟ್ಟಿದ್ದು ಏಕೆ?

ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಸ್ಪೀಕರ್‌ಗೆ ನೀಡಲಾದ ಸಾಂವಿಧಾನಿಕ ಅಧಿಕಾರ ಸರ್ಕಾರ ರಚಿಸುವ ಮತ್ತು ಬೀಳಿಸುವ ಸಾಮರ್ಥ್ಯ ನೀಡುತ್ತದೆ

- Advertisement -
- Advertisement -

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೂ, ಚರ್ಚೆಗಳು ಮತ್ತು ಪ್ರಶ್ನೆಗಳು ಅವರ ಸುತ್ತ ಕೇಂದ್ರೀಕೃತವಾಗಿರದೆ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಇಬ್ಬರು ಪಾಲುದಾರರ ಸುತ್ತ ಸುತ್ತುತ್ತಿವೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನತಾ ದಳ-ಯುನೈಟೆಡ್ (ಜೆಡಿಯು) ನಾಯಕ ನಿತೀಶ್ ಕುಮಾರ್ ಅವರು ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬಂದಾಗಿನಿಂದ ಭಾರೀ ಸುದ್ದಿಯಲ್ಲಿದ್ದಾರೆ.

ಬಿಜೆಪಿ ಬಹುಮತ ಪಡೆಯದಿದ್ದರೂ, ಆಂಧ್ರ ಪ್ರದೇಶ ಮತ್ತು ಬಿಹಾರದ ಈ ಇಬ್ಬರು ನಾಯಕರ ಬೆಂಬಲದಿಂದ ಮೋದಿ ಮೂರನೇ ಬಾರಿ ಪ್ರಧಾನಿ ಹುದ್ದೆಗೇರಿದ್ದಾರೆ. ಈ ನಡುವೆ ಇಬ್ಬರೂ ಕೂಡ ತಮ್ಮ ಪಕ್ಷಕ್ಕೆ ಸ್ವೀಕರ್ ಹುದ್ದೆ ನೀಡುವಂತೆ ಕೇಳಿದ್ದಾರೆ ಎಂದು ವರದಿಯಾಗಿದೆ.

ಪ್ರಸ್ತುತ ಎನ್‌ಡಿಎ ಸರ್ಕಾರಕ್ಕೆ ಬೆನ್ನೆಲುಬಾಗಿರುವ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಸಚಿವ ಸ್ಥಾನಕ್ಕಿಂತ ಸ್ಪೀಕರ್ ಹುದ್ದೆಗೆ ಏಕೆ ಲಾಬಿ ಮಾಡುತ್ತಿದ್ದಾರೆ? ಎಂದು ನಿಮಗನಿಸಬಹುದು. ಈ ಪ್ರಶ್ನೆಗೆ 1985ರಲ್ಲಿ 52ನೇ ತಿದ್ದುಪಡಿಯ ಮೂಲಕ ಪರಿಚಯಿಸಲಾದ ಸಂವಿಧಾನದ 10ನೇ ಶೆಡ್ಯೂಲ್‌ನಲ್ಲಿ ಸೂಚಿಸಲಾದ ಪಕ್ಷಾಂತರ ವಿರೋಧಿ ಕಾನೂನಿನಲ್ಲಿ ಉತ್ತರವಿದೆ.

ಸ್ವಯಂ ಪ್ರೇರಣೆಯಿಂದ ತಮ್ಮ ರಾಜಕೀಯ ಪಕ್ಷದ ಸದಸ್ಯತ್ವವನ್ನು ತೊರೆಯುವ ಅಥವಾ ಪಕ್ಷದ ಸೂಚನೆಗಳಿಗೆ ವಿರುದ್ಧವಾಗಿ ಮತ ಚಲಾಯಿಸುವ ಶಾಸಕರು, ಸಂಸದರು ಅನರ್ಹತೆಗೆ ಅರ್ಹರಾಗುತ್ತಾರೆ. ಆದರೆ, ಪಕ್ಷದ ಮೂರನೇ ಎರಡರಷ್ಟು ಚುನಾಯಿತ ಸಂಸದರು ಅಥವಾ ಶಾಸಕರು ಇನ್ನೊಂದು ಪಕ್ಷಕ್ಕೆ ಹೋದರೆ 10ನೇ ಶೆಡ್ಯೂಲ್ ಅವರನ್ನು ಅನರ್ಹತೆಯಿಂದ ರಕ್ಷಿಸುತ್ತದೆ. ಇಂತಹ ಸನ್ನಿವೇಶದಲ್ಲಿ ಚುನಾಯಿತರನ್ನು ಅನರ್ಹಗೊಳಿಸಬೇಕೇ ಅಥವಾ ಬೇಡವೇ ಎಂಬುವುದನ್ನು ನಿರ್ಧರಿಸುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದಾಗಿದೆ.

ಇದಕ್ಕೆ ಇತ್ತೀಚಿನ ಉದಾಹರಣೆಯೆಂದರೆ, ಮಹಾರಾಷ್ಟ್ರದಲ್ಲಿ ಜನವರಿ 2024ರಲ್ಲಿ ಸ್ಪೀಕರ್ ರಾಹುಲ್ ನಾರ್ವೇಕರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ‘ನೈಜ’ ಶಿವಸೇನೆ ಪಕ್ಷದ ಸ್ಥಾನಮಾನ ನೀಡಿರುವುದು. ಶಿಂಧೆ ನೇತೃತ್ವದ ಶಾಸಕರ ಬಣವು ಜೂನ್ 2022ರಲ್ಲಿ ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ತಿರುಗಿಬಿದ್ದಿತ್ತು. ಈ ವಿಷಯ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಆದರೆ ಫೆಬ್ರವರಿ 2023ರಲ್ಲಿ, ಪಕ್ಷಾಂತರ ವಿರೋಧಿ ಕಾನೂನಿನ ಪ್ರಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ಪಿಆರ್‌ಎಸ್‌ ಲೆಜಿಸ್ಲೇಟಿವ್ ರಿಸರ್ಚ್‌ನ ನಾಗರಿಕ ಮತ್ತು ಶಾಸಕಾಂಗ ಸಂಶೋಧನಾ ತೊಡಗುವಿಕೆಗಳ ಮುಖ್ಯಸ್ಥ ಚಕ್ಷು ರಾಯ್, “ಪ್ರಾಥಮಿಕವಾಗಿ ಭಾರತದಲ್ಲಿ ಸ್ಪೀಕರ್‌ ಸ್ಥಾನ ವಿರೋಧಾಭಾಸವಾಗಿದೆ. ಇದು ನಮ್ಮ ಶಾಸನ ರಚನೆ ಸಂಸ್ಥೆಯಾದ ಲೋಕಸಭೆಯ ಹೃದಯ ಭಾಗದಲ್ಲಿರುವ ಅತ್ಯಂತ ಪ್ರತಿಷ್ಠಿತ ಹುದ್ದೆಗಳಲ್ಲಿ ಒಂದಾಗಿದೆ. ಸ್ಪೀಕರ್‌ಗಳು ಪಕ್ಷೇತರರಾಗಿರಬೇಕು. ಸ್ಪೀಕರ್‌ ಹುದ್ದೆಯಲ್ಲಿರುವಾಗ ಪಕ್ಷದ ಸದಸ್ಯತ್ವ ತೊರೆದು ಸಾಂವಿಧಾನಿಕ ಜವಬ್ದಾರಿ ನಿರ್ವಹಿಸುತ್ತಾರೆ. ಹುದ್ದೆಯಿಂದ ಕೆಳಗಿಳಿದ ಬಳಿಕ ಅವರ ರಾಜಕೀಯ ವೃತ್ತಿ ಜೀವನದ ನಿರಂತರತೆಗಾಗಿ ಮತ್ತೆ ತಮ್ಮ ಪಕ್ಷಕ್ಕೆ ಮರಳುತ್ತಾರೆ. ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಸ್ಪೀಕರ್‌ಗೆ ನೀಡಲಾದ ಸಾಂವಿಧಾನಿಕ ಅಧಿಕಾರ ಸರ್ಕಾರ ರಚಿಸುವ ಮತ್ತು ಬೀಳಿಸುವ ಸಾಮರ್ಥ್ಯ ನೀಡುತ್ತದೆ” ಎಂದು ಹೇಳಿದ್ದಾರೆ.

ಲೋಕಸಭೆಯ ಸ್ಪೀಕರ್‌ ಅವರ ಪಕ್ಷಾತೀತತೆಯ ಕೊರತೆಯು ವಿವಾದದ ವಿಷಯವಾಗಿದೆ. ಜಿಎಂಸಿ ಬಾಲಯೋಗಿ (12ನೇ ಮತ್ತು 13ನೇ ಲೋಕಸಭೆ ಸ್ಪೀಕರ್) ಹಲವಾರು ಸಂಸದೀಯ ಸಮಿತಿಗಳ ಅಧ್ಯಕ್ಷರಾಗಿದ್ದರು ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಸ್ಪೀಕರ್ ಹುದ್ದೆಯ ಪಕ್ಷಾತೀತ ಸ್ವರೂಪದ ಹೊರತಾಗಿಯೂ, ಬಾಲಯೋಗಿ ಅವರು ಟಿಡಿಪಿ ನಾಯಕರಾಗಿದ್ದರು, ತಮ್ಮ ಪಕ್ಷದ ಹಿತಾಸಕ್ತಿಗಳನ್ನು ರಕ್ಷಿಸಲು ಉತ್ಸುಕರಾಗಿದ್ದರು.

ಸುಮಾರು 10 ವರ್ಷಗಳ ಹಿಂದೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು ನಿತೀಶ್ ಅವರ ಜೆಡಿಯು ಜೊತೆಗಿನ ಮಹಾಘಟಬಂಧನ್ (ಮಹಾ ಮೈತ್ರಿ) ಬದ್ಧತೆಯ ಬಗ್ಗೆ ನೀಡಿದ್ದ ಹೇಳಿಕೆ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಈಗ ಸ್ಪೀಕರ್ ಹುದ್ದೆಗೆ ಏಕೆ ಲಾಬಿ ಮಾಡುತ್ತಿರಬಹುದು ಎಂಬುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಸುತ್ತದೆ.

“ನಾವು ನಿಜವಾಗಿಯೂ ಹೆಚ್ಚಿನ ಅಧಿಕಾರಕ್ಕಾಗಿ ಸರ್ಕಾರವನ್ನು ಬೀಳಿಸಲು ಬಯಸಿದ್ದರೆ ಸ್ಪೀಕರ್ ಹುದ್ದೆ ಕೇಳುತ್ತಿದ್ದೆವು” ಎಂದು ಯಾದವ್ ಹೇಳಿದ್ದರು. ಅಂದರೆ, ಇಲ್ಲಿ ಸರ್ಕಾರ ಬೀಳಿಸುವ ಮತ್ತು ರಚಿಸುವ ಅಧಿಕಾರ ಸ್ಪೀಕರ್‌ ಕೈಯ್ಯಲ್ಲಿರುತ್ತದೆ. ಆದ್ದರಿಂದ ಆ ಹುದ್ದೆ ಅಷ್ಟೊಂದು ಮಹತ್ವದ್ದು ಎಂದು ನಮಗೆ ಅರ್ಥವಾಗುತ್ತದೆ.

ಇದನ್ನೂ ಓದಿ : ಮೋದಿ ಸರ್ಕಾರದ 72 ಸಚಿವರಲ್ಲಿ 7 ಮಹಿಳೆಯರಿಗೆ ಅವಕಾಶ; ಇಬ್ಬರಿಗೆ ಮಾತ್ರ ಕ್ಯಾಬಿನೆಟ್ ದರ್ಜೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...