Homeಮುಖಪುಟಎನ್‌ಡಿಎ ಸರ್ಕಾರ: ಟಿಡಿಪಿ, ಜೆಡಿಯು ಸ್ಪೀಕರ್‌ ಹುದ್ದೆಗೆ ಬೇಡಿಕೆಯಿಟ್ಟಿದ್ದು ಏಕೆ?

ಎನ್‌ಡಿಎ ಸರ್ಕಾರ: ಟಿಡಿಪಿ, ಜೆಡಿಯು ಸ್ಪೀಕರ್‌ ಹುದ್ದೆಗೆ ಬೇಡಿಕೆಯಿಟ್ಟಿದ್ದು ಏಕೆ?

ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಸ್ಪೀಕರ್‌ಗೆ ನೀಡಲಾದ ಸಾಂವಿಧಾನಿಕ ಅಧಿಕಾರ ಸರ್ಕಾರ ರಚಿಸುವ ಮತ್ತು ಬೀಳಿಸುವ ಸಾಮರ್ಥ್ಯ ನೀಡುತ್ತದೆ

- Advertisement -
- Advertisement -

ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೂ, ಚರ್ಚೆಗಳು ಮತ್ತು ಪ್ರಶ್ನೆಗಳು ಅವರ ಸುತ್ತ ಕೇಂದ್ರೀಕೃತವಾಗಿರದೆ, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಇಬ್ಬರು ಪಾಲುದಾರರ ಸುತ್ತ ಸುತ್ತುತ್ತಿವೆ.

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನತಾ ದಳ-ಯುನೈಟೆಡ್ (ಜೆಡಿಯು) ನಾಯಕ ನಿತೀಶ್ ಕುಮಾರ್ ಅವರು ಜೂನ್ 4 ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಹೊರ ಬಂದಾಗಿನಿಂದ ಭಾರೀ ಸುದ್ದಿಯಲ್ಲಿದ್ದಾರೆ.

ಬಿಜೆಪಿ ಬಹುಮತ ಪಡೆಯದಿದ್ದರೂ, ಆಂಧ್ರ ಪ್ರದೇಶ ಮತ್ತು ಬಿಹಾರದ ಈ ಇಬ್ಬರು ನಾಯಕರ ಬೆಂಬಲದಿಂದ ಮೋದಿ ಮೂರನೇ ಬಾರಿ ಪ್ರಧಾನಿ ಹುದ್ದೆಗೇರಿದ್ದಾರೆ. ಈ ನಡುವೆ ಇಬ್ಬರೂ ಕೂಡ ತಮ್ಮ ಪಕ್ಷಕ್ಕೆ ಸ್ವೀಕರ್ ಹುದ್ದೆ ನೀಡುವಂತೆ ಕೇಳಿದ್ದಾರೆ ಎಂದು ವರದಿಯಾಗಿದೆ.

ಪ್ರಸ್ತುತ ಎನ್‌ಡಿಎ ಸರ್ಕಾರಕ್ಕೆ ಬೆನ್ನೆಲುಬಾಗಿರುವ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಸಚಿವ ಸ್ಥಾನಕ್ಕಿಂತ ಸ್ಪೀಕರ್ ಹುದ್ದೆಗೆ ಏಕೆ ಲಾಬಿ ಮಾಡುತ್ತಿದ್ದಾರೆ? ಎಂದು ನಿಮಗನಿಸಬಹುದು. ಈ ಪ್ರಶ್ನೆಗೆ 1985ರಲ್ಲಿ 52ನೇ ತಿದ್ದುಪಡಿಯ ಮೂಲಕ ಪರಿಚಯಿಸಲಾದ ಸಂವಿಧಾನದ 10ನೇ ಶೆಡ್ಯೂಲ್‌ನಲ್ಲಿ ಸೂಚಿಸಲಾದ ಪಕ್ಷಾಂತರ ವಿರೋಧಿ ಕಾನೂನಿನಲ್ಲಿ ಉತ್ತರವಿದೆ.

ಸ್ವಯಂ ಪ್ರೇರಣೆಯಿಂದ ತಮ್ಮ ರಾಜಕೀಯ ಪಕ್ಷದ ಸದಸ್ಯತ್ವವನ್ನು ತೊರೆಯುವ ಅಥವಾ ಪಕ್ಷದ ಸೂಚನೆಗಳಿಗೆ ವಿರುದ್ಧವಾಗಿ ಮತ ಚಲಾಯಿಸುವ ಶಾಸಕರು, ಸಂಸದರು ಅನರ್ಹತೆಗೆ ಅರ್ಹರಾಗುತ್ತಾರೆ. ಆದರೆ, ಪಕ್ಷದ ಮೂರನೇ ಎರಡರಷ್ಟು ಚುನಾಯಿತ ಸಂಸದರು ಅಥವಾ ಶಾಸಕರು ಇನ್ನೊಂದು ಪಕ್ಷಕ್ಕೆ ಹೋದರೆ 10ನೇ ಶೆಡ್ಯೂಲ್ ಅವರನ್ನು ಅನರ್ಹತೆಯಿಂದ ರಕ್ಷಿಸುತ್ತದೆ. ಇಂತಹ ಸನ್ನಿವೇಶದಲ್ಲಿ ಚುನಾಯಿತರನ್ನು ಅನರ್ಹಗೊಳಿಸಬೇಕೇ ಅಥವಾ ಬೇಡವೇ ಎಂಬುವುದನ್ನು ನಿರ್ಧರಿಸುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದಾಗಿದೆ.

ಇದಕ್ಕೆ ಇತ್ತೀಚಿನ ಉದಾಹರಣೆಯೆಂದರೆ, ಮಹಾರಾಷ್ಟ್ರದಲ್ಲಿ ಜನವರಿ 2024ರಲ್ಲಿ ಸ್ಪೀಕರ್ ರಾಹುಲ್ ನಾರ್ವೇಕರ್ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣಕ್ಕೆ ‘ನೈಜ’ ಶಿವಸೇನೆ ಪಕ್ಷದ ಸ್ಥಾನಮಾನ ನೀಡಿರುವುದು. ಶಿಂಧೆ ನೇತೃತ್ವದ ಶಾಸಕರ ಬಣವು ಜೂನ್ 2022ರಲ್ಲಿ ಆಗಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ತಿರುಗಿಬಿದ್ದಿತ್ತು. ಈ ವಿಷಯ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಆದರೆ ಫೆಬ್ರವರಿ 2023ರಲ್ಲಿ, ಪಕ್ಷಾಂತರ ವಿರೋಧಿ ಕಾನೂನಿನ ಪ್ರಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳುವುದು ಸ್ಪೀಕರ್ ವಿವೇಚನೆಗೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ದಿ ನ್ಯೂಸ್ ಮಿನಿಟ್ ಜೊತೆ ಮಾತನಾಡಿರುವ ಪಿಆರ್‌ಎಸ್‌ ಲೆಜಿಸ್ಲೇಟಿವ್ ರಿಸರ್ಚ್‌ನ ನಾಗರಿಕ ಮತ್ತು ಶಾಸಕಾಂಗ ಸಂಶೋಧನಾ ತೊಡಗುವಿಕೆಗಳ ಮುಖ್ಯಸ್ಥ ಚಕ್ಷು ರಾಯ್, “ಪ್ರಾಥಮಿಕವಾಗಿ ಭಾರತದಲ್ಲಿ ಸ್ಪೀಕರ್‌ ಸ್ಥಾನ ವಿರೋಧಾಭಾಸವಾಗಿದೆ. ಇದು ನಮ್ಮ ಶಾಸನ ರಚನೆ ಸಂಸ್ಥೆಯಾದ ಲೋಕಸಭೆಯ ಹೃದಯ ಭಾಗದಲ್ಲಿರುವ ಅತ್ಯಂತ ಪ್ರತಿಷ್ಠಿತ ಹುದ್ದೆಗಳಲ್ಲಿ ಒಂದಾಗಿದೆ. ಸ್ಪೀಕರ್‌ಗಳು ಪಕ್ಷೇತರರಾಗಿರಬೇಕು. ಸ್ಪೀಕರ್‌ ಹುದ್ದೆಯಲ್ಲಿರುವಾಗ ಪಕ್ಷದ ಸದಸ್ಯತ್ವ ತೊರೆದು ಸಾಂವಿಧಾನಿಕ ಜವಬ್ದಾರಿ ನಿರ್ವಹಿಸುತ್ತಾರೆ. ಹುದ್ದೆಯಿಂದ ಕೆಳಗಿಳಿದ ಬಳಿಕ ಅವರ ರಾಜಕೀಯ ವೃತ್ತಿ ಜೀವನದ ನಿರಂತರತೆಗಾಗಿ ಮತ್ತೆ ತಮ್ಮ ಪಕ್ಷಕ್ಕೆ ಮರಳುತ್ತಾರೆ. ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಸ್ಪೀಕರ್‌ಗೆ ನೀಡಲಾದ ಸಾಂವಿಧಾನಿಕ ಅಧಿಕಾರ ಸರ್ಕಾರ ರಚಿಸುವ ಮತ್ತು ಬೀಳಿಸುವ ಸಾಮರ್ಥ್ಯ ನೀಡುತ್ತದೆ” ಎಂದು ಹೇಳಿದ್ದಾರೆ.

ಲೋಕಸಭೆಯ ಸ್ಪೀಕರ್‌ ಅವರ ಪಕ್ಷಾತೀತತೆಯ ಕೊರತೆಯು ವಿವಾದದ ವಿಷಯವಾಗಿದೆ. ಜಿಎಂಸಿ ಬಾಲಯೋಗಿ (12ನೇ ಮತ್ತು 13ನೇ ಲೋಕಸಭೆ ಸ್ಪೀಕರ್) ಹಲವಾರು ಸಂಸದೀಯ ಸಮಿತಿಗಳ ಅಧ್ಯಕ್ಷರಾಗಿದ್ದರು ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು. ಸ್ಪೀಕರ್ ಹುದ್ದೆಯ ಪಕ್ಷಾತೀತ ಸ್ವರೂಪದ ಹೊರತಾಗಿಯೂ, ಬಾಲಯೋಗಿ ಅವರು ಟಿಡಿಪಿ ನಾಯಕರಾಗಿದ್ದರು, ತಮ್ಮ ಪಕ್ಷದ ಹಿತಾಸಕ್ತಿಗಳನ್ನು ರಕ್ಷಿಸಲು ಉತ್ಸುಕರಾಗಿದ್ದರು.

ಸುಮಾರು 10 ವರ್ಷಗಳ ಹಿಂದೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರು ನಿತೀಶ್ ಅವರ ಜೆಡಿಯು ಜೊತೆಗಿನ ಮಹಾಘಟಬಂಧನ್ (ಮಹಾ ಮೈತ್ರಿ) ಬದ್ಧತೆಯ ಬಗ್ಗೆ ನೀಡಿದ್ದ ಹೇಳಿಕೆ ನಿತೀಶ್ ಕುಮಾರ್ ಮತ್ತು ಚಂದ್ರಬಾಬು ನಾಯ್ಡು ಈಗ ಸ್ಪೀಕರ್ ಹುದ್ದೆಗೆ ಏಕೆ ಲಾಬಿ ಮಾಡುತ್ತಿರಬಹುದು ಎಂಬುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಸುತ್ತದೆ.

“ನಾವು ನಿಜವಾಗಿಯೂ ಹೆಚ್ಚಿನ ಅಧಿಕಾರಕ್ಕಾಗಿ ಸರ್ಕಾರವನ್ನು ಬೀಳಿಸಲು ಬಯಸಿದ್ದರೆ ಸ್ಪೀಕರ್ ಹುದ್ದೆ ಕೇಳುತ್ತಿದ್ದೆವು” ಎಂದು ಯಾದವ್ ಹೇಳಿದ್ದರು. ಅಂದರೆ, ಇಲ್ಲಿ ಸರ್ಕಾರ ಬೀಳಿಸುವ ಮತ್ತು ರಚಿಸುವ ಅಧಿಕಾರ ಸ್ಪೀಕರ್‌ ಕೈಯ್ಯಲ್ಲಿರುತ್ತದೆ. ಆದ್ದರಿಂದ ಆ ಹುದ್ದೆ ಅಷ್ಟೊಂದು ಮಹತ್ವದ್ದು ಎಂದು ನಮಗೆ ಅರ್ಥವಾಗುತ್ತದೆ.

ಇದನ್ನೂ ಓದಿ : ಮೋದಿ ಸರ್ಕಾರದ 72 ಸಚಿವರಲ್ಲಿ 7 ಮಹಿಳೆಯರಿಗೆ ಅವಕಾಶ; ಇಬ್ಬರಿಗೆ ಮಾತ್ರ ಕ್ಯಾಬಿನೆಟ್ ದರ್ಜೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...