HomeಮುಖಪುಟNDA, INDIA ಯಾವುದೇ ಒಕ್ಕೂಟಕ್ಕೂ ನಾವು ಸೇರಿಲ್ಲ, ಆ ಇಚ್ಛೆಯೂ ನಮಗಿಲ್ಲ: ಕೆಸಿಆರ್

NDA, INDIA ಯಾವುದೇ ಒಕ್ಕೂಟಕ್ಕೂ ನಾವು ಸೇರಿಲ್ಲ, ಆ ಇಚ್ಛೆಯೂ ನಮಗಿಲ್ಲ: ಕೆಸಿಆರ್

- Advertisement -
- Advertisement -

ಆಡಳಿತರೂಢ ಎನ್‌ಡಿಎ  ಮತ್ತು ವಿರೋಧ ಪಕ್ಷಗಳ INDIA ಒಕ್ಕೂಟ ಈ ಎರಡರಲ್ಲಿಯೂ ನಾವಿಲ್ಲ, ಯಾವುದಕ್ಕೂ ಸೇರುವ ಇಚ್ಛೆಯೂ ನಮಗೆ ಇಲ್ಲ ಎಂದು ಭಾರತೀಯ ರಾಷ್ಟ್ರೀಯ ಪಕ್ಷದ (ಬಿಎ‌ಎಸ್) ವರಿಷ್ಠ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಸ್ಪಷ್ಟಣೆ ನೀಡಿದ್ದಾರೆ.

ಈ ವಿಚಾರವಾಗಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿರುವ ಅವರು, ”ಎನ್‌ಡಿಎ ಮತ್ತು INDIA ಯಾವುದೇ ಒಕ್ಕೂಟಕ್ಕೂ, ನಾವು ಸೇರಿಲ್ಲ ಯಾವುದಕ್ಕೂ ಸೇರುವ ಇಚ್ಛೆಯೂ ನಮಗೆ ಇಲ್ಲ. ಹಾಗಂತ ನಾವು ಏಕಾಂಗಿ ಅಲ್ಲ ನಮಗೂ ಗೆಳೆಯರ ಬಳಗ ಇದೆ. ಇಂಡಿಯಾ ಎಂಬ ಹೊಸ ಒಕ್ಕೂಟದಲ್ಲಿ ಏನಿದೆ ವಿಶೇಷ? 50 ವರ್ಷ ಅಧಿಕಾರದಲ್ಲಿದ್ದ ಅವರು ಯಾವುದೇ ಬದಲಾವಣೆ ತರಲಿಲ್ಲ” ಎಂದು ಹೇಳಿದ್ದಾರೆ.

ಇತ್ತೀಚೆಗೆ, ಬೆಂಗಳೂರಿನಲ್ಲಿ ಸಭೆ ಸೇರಿದ ಪ್ರತಿಪಕ್ಷಗಳ ನಾಯಕರು 2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ಒಗಟ್ಟಿನ ಹೋರಾಟ ಸಂಘಟಿಸಲು INDIA ಎಂಬ ಒಕ್ಕೂಟ ಘೋಷಣೆ ಮಾಡಿದವು. ಈ ಪ್ರತಿಪಕ್ಷ ನಾಯಕರ ಸಭೆಯಿಂದಲೂ ಬಿಆ‌ಎಸ್‌ ಪಕ್ಷ ದೂರ ಉಳಿದಿತ್ತು.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅಣತಿಯಂತೆ ಬಿಆರ್ ಎಸ್‌ ಕೆಲಸ ಮಾಡುತ್ತದೆ ಬಿಆ‌ರ್‌ಎಸ್‌ ಬಿಜೆಪಿಯ ಬಿ ಟೀಮ್ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

ದೆಹಲಿಯಲ್ಲಿ ಇತ್ತೀಚೆಗೆ ಎನ್‌ಡಿಎ ಒಕ್ಕಟದ ಪಕ್ಷಗಳಿಗೆ ಆಹ್ವಾನ ನೀಡಿ ಸಭೆ ಕರೆಯಲಾಗಿತ್ತು. ಆದರೆ ಬಿಆರ್‌ಎಸ್‌ಗೆ ಯಾವುದೇ ಆಹ್ವಾನ ನೀಡಲಾಗಿರಲಿಲ್ಲ ಮತ್ತು ಎನ್‌ಡಿಎ ಸೇರುವ ಬಗ್ಗೆ ಕೆ ಚಂದ್ರಶೇಖರ ರಾವ್ ಒಲವು ತೋರಿರಲಿಲ್ಲ.

ದೆಹಲಿ ಸೇವಾ ಮಸೂದೆ ವಿರುದ್ಧ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಿರುವ ಬಿಆರ್‌ಎಸ್

ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯು ಸೋಮವಾರ ತನ್ನ ಎಲ್ಲಾ ರಾಜ್ಯಸಭಾ ಸಂಸದರಿಗೆ ಸದನದಲ್ಲಿ ಹಾಜರಾಗುವಂತೆ ಮತ್ತು ದೆಹಲಿ ಸೇವೆಗಳ ಸುಗ್ರೀವಾಜ್ಞೆ ಮಸೂದೆಯ ವಿರುದ್ಧ ಮತ ಚಲಾಯಿಸುವಂತೆ ವಿಪ್ ಜಾರಿಗೊಳಿಸಿದೆ.

”ಬಿಆರ್‌ಎಸ್ (ರಾಜ್ಯಸಭೆ)ನ ಎಲ್ಲಾ ಸಂಸದರು ದೆಹಲಿ ಸೇವೆಗಳ ಸುಗ್ರೀವಾಜ್ಞೆ ಮಸೂದೆಯನ್ನು ಸದನದ ಮುಂದೆ ಯಾವುದೇ ಸಮಯದಲ್ಲಿ ತರಬಹುದು ಹಾಗಾಗಿ ಪಕ್ಷದ ಎಲ್ಲ ಸದಸ್ಯರು ಅದರ ವಿರುದ್ಧ ಮತ ಚಲಾಯಿಸಲು ವಿನಂತಿಸಲಾಗಿದೆ” ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಮೇಲ್ಮನೆಯಲ್ಲಿ ಬಿಆರ್‌ಎಸ್ ಏಳು ಸಂಸದರನ್ನು ಹೊಂದಿದೆ. ”ಜುಲೈ 31ರಿಂದ ಆಗಸ್ಟ್ 4ರವರೆಗೆ ಮತ್ತು ಮಸೂದೆಯ ಮೇಲಿನ ಮತದಾನ ಮುಗಿಯುವವರೆಗೆ ಅವರೆಲ್ಲರೂ ಸದನದಲ್ಲಿ ಹಾಜರಿರಬೇಕು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೆಹಲಿಯ NCT ಸರ್ಕಾರ (ತಿದ್ದುಪಡಿ) ಸುಗ್ರೀವಾಜ್ಞೆಯು ದೆಹಲಿ ಸರ್ಕಾರದಿಂದ ಸೇವೆಗಳ ಮೇಲಿನ ನಿಯಂತ್ರಣವನ್ನು ತೆಗೆದುಹಾಕುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: INDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...