HomeಮುಖಪುಟNDA, INDIA ಯಾವುದೇ ಒಕ್ಕೂಟಕ್ಕೂ ನಾವು ಸೇರಿಲ್ಲ, ಆ ಇಚ್ಛೆಯೂ ನಮಗಿಲ್ಲ: ಕೆಸಿಆರ್

NDA, INDIA ಯಾವುದೇ ಒಕ್ಕೂಟಕ್ಕೂ ನಾವು ಸೇರಿಲ್ಲ, ಆ ಇಚ್ಛೆಯೂ ನಮಗಿಲ್ಲ: ಕೆಸಿಆರ್

- Advertisement -
- Advertisement -

ಆಡಳಿತರೂಢ ಎನ್‌ಡಿಎ  ಮತ್ತು ವಿರೋಧ ಪಕ್ಷಗಳ INDIA ಒಕ್ಕೂಟ ಈ ಎರಡರಲ್ಲಿಯೂ ನಾವಿಲ್ಲ, ಯಾವುದಕ್ಕೂ ಸೇರುವ ಇಚ್ಛೆಯೂ ನಮಗೆ ಇಲ್ಲ ಎಂದು ಭಾರತೀಯ ರಾಷ್ಟ್ರೀಯ ಪಕ್ಷದ (ಬಿಎ‌ಎಸ್) ವರಿಷ್ಠ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಸ್ಪಷ್ಟಣೆ ನೀಡಿದ್ದಾರೆ.

ಈ ವಿಚಾರವಾಗಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿರುವ ಅವರು, ”ಎನ್‌ಡಿಎ ಮತ್ತು INDIA ಯಾವುದೇ ಒಕ್ಕೂಟಕ್ಕೂ, ನಾವು ಸೇರಿಲ್ಲ ಯಾವುದಕ್ಕೂ ಸೇರುವ ಇಚ್ಛೆಯೂ ನಮಗೆ ಇಲ್ಲ. ಹಾಗಂತ ನಾವು ಏಕಾಂಗಿ ಅಲ್ಲ ನಮಗೂ ಗೆಳೆಯರ ಬಳಗ ಇದೆ. ಇಂಡಿಯಾ ಎಂಬ ಹೊಸ ಒಕ್ಕೂಟದಲ್ಲಿ ಏನಿದೆ ವಿಶೇಷ? 50 ವರ್ಷ ಅಧಿಕಾರದಲ್ಲಿದ್ದ ಅವರು ಯಾವುದೇ ಬದಲಾವಣೆ ತರಲಿಲ್ಲ” ಎಂದು ಹೇಳಿದ್ದಾರೆ.

ಇತ್ತೀಚೆಗೆ, ಬೆಂಗಳೂರಿನಲ್ಲಿ ಸಭೆ ಸೇರಿದ ಪ್ರತಿಪಕ್ಷಗಳ ನಾಯಕರು 2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ಒಗಟ್ಟಿನ ಹೋರಾಟ ಸಂಘಟಿಸಲು INDIA ಎಂಬ ಒಕ್ಕೂಟ ಘೋಷಣೆ ಮಾಡಿದವು. ಈ ಪ್ರತಿಪಕ್ಷ ನಾಯಕರ ಸಭೆಯಿಂದಲೂ ಬಿಆ‌ಎಸ್‌ ಪಕ್ಷ ದೂರ ಉಳಿದಿತ್ತು.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅಣತಿಯಂತೆ ಬಿಆರ್ ಎಸ್‌ ಕೆಲಸ ಮಾಡುತ್ತದೆ ಬಿಆ‌ರ್‌ಎಸ್‌ ಬಿಜೆಪಿಯ ಬಿ ಟೀಮ್ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

ದೆಹಲಿಯಲ್ಲಿ ಇತ್ತೀಚೆಗೆ ಎನ್‌ಡಿಎ ಒಕ್ಕಟದ ಪಕ್ಷಗಳಿಗೆ ಆಹ್ವಾನ ನೀಡಿ ಸಭೆ ಕರೆಯಲಾಗಿತ್ತು. ಆದರೆ ಬಿಆರ್‌ಎಸ್‌ಗೆ ಯಾವುದೇ ಆಹ್ವಾನ ನೀಡಲಾಗಿರಲಿಲ್ಲ ಮತ್ತು ಎನ್‌ಡಿಎ ಸೇರುವ ಬಗ್ಗೆ ಕೆ ಚಂದ್ರಶೇಖರ ರಾವ್ ಒಲವು ತೋರಿರಲಿಲ್ಲ.

ದೆಹಲಿ ಸೇವಾ ಮಸೂದೆ ವಿರುದ್ಧ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಿರುವ ಬಿಆರ್‌ಎಸ್

ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯು ಸೋಮವಾರ ತನ್ನ ಎಲ್ಲಾ ರಾಜ್ಯಸಭಾ ಸಂಸದರಿಗೆ ಸದನದಲ್ಲಿ ಹಾಜರಾಗುವಂತೆ ಮತ್ತು ದೆಹಲಿ ಸೇವೆಗಳ ಸುಗ್ರೀವಾಜ್ಞೆ ಮಸೂದೆಯ ವಿರುದ್ಧ ಮತ ಚಲಾಯಿಸುವಂತೆ ವಿಪ್ ಜಾರಿಗೊಳಿಸಿದೆ.

”ಬಿಆರ್‌ಎಸ್ (ರಾಜ್ಯಸಭೆ)ನ ಎಲ್ಲಾ ಸಂಸದರು ದೆಹಲಿ ಸೇವೆಗಳ ಸುಗ್ರೀವಾಜ್ಞೆ ಮಸೂದೆಯನ್ನು ಸದನದ ಮುಂದೆ ಯಾವುದೇ ಸಮಯದಲ್ಲಿ ತರಬಹುದು ಹಾಗಾಗಿ ಪಕ್ಷದ ಎಲ್ಲ ಸದಸ್ಯರು ಅದರ ವಿರುದ್ಧ ಮತ ಚಲಾಯಿಸಲು ವಿನಂತಿಸಲಾಗಿದೆ” ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಮೇಲ್ಮನೆಯಲ್ಲಿ ಬಿಆರ್‌ಎಸ್ ಏಳು ಸಂಸದರನ್ನು ಹೊಂದಿದೆ. ”ಜುಲೈ 31ರಿಂದ ಆಗಸ್ಟ್ 4ರವರೆಗೆ ಮತ್ತು ಮಸೂದೆಯ ಮೇಲಿನ ಮತದಾನ ಮುಗಿಯುವವರೆಗೆ ಅವರೆಲ್ಲರೂ ಸದನದಲ್ಲಿ ಹಾಜರಿರಬೇಕು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೆಹಲಿಯ NCT ಸರ್ಕಾರ (ತಿದ್ದುಪಡಿ) ಸುಗ್ರೀವಾಜ್ಞೆಯು ದೆಹಲಿ ಸರ್ಕಾರದಿಂದ ಸೇವೆಗಳ ಮೇಲಿನ ನಿಯಂತ್ರಣವನ್ನು ತೆಗೆದುಹಾಕುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: INDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...