HomeಮುಖಪುಟNDA, INDIA ಯಾವುದೇ ಒಕ್ಕೂಟಕ್ಕೂ ನಾವು ಸೇರಿಲ್ಲ, ಆ ಇಚ್ಛೆಯೂ ನಮಗಿಲ್ಲ: ಕೆಸಿಆರ್

NDA, INDIA ಯಾವುದೇ ಒಕ್ಕೂಟಕ್ಕೂ ನಾವು ಸೇರಿಲ್ಲ, ಆ ಇಚ್ಛೆಯೂ ನಮಗಿಲ್ಲ: ಕೆಸಿಆರ್

- Advertisement -
- Advertisement -

ಆಡಳಿತರೂಢ ಎನ್‌ಡಿಎ  ಮತ್ತು ವಿರೋಧ ಪಕ್ಷಗಳ INDIA ಒಕ್ಕೂಟ ಈ ಎರಡರಲ್ಲಿಯೂ ನಾವಿಲ್ಲ, ಯಾವುದಕ್ಕೂ ಸೇರುವ ಇಚ್ಛೆಯೂ ನಮಗೆ ಇಲ್ಲ ಎಂದು ಭಾರತೀಯ ರಾಷ್ಟ್ರೀಯ ಪಕ್ಷದ (ಬಿಎ‌ಎಸ್) ವರಿಷ್ಠ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಸ್ಪಷ್ಟಣೆ ನೀಡಿದ್ದಾರೆ.

ಈ ವಿಚಾರವಾಗಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸಿರುವ ಅವರು, ”ಎನ್‌ಡಿಎ ಮತ್ತು INDIA ಯಾವುದೇ ಒಕ್ಕೂಟಕ್ಕೂ, ನಾವು ಸೇರಿಲ್ಲ ಯಾವುದಕ್ಕೂ ಸೇರುವ ಇಚ್ಛೆಯೂ ನಮಗೆ ಇಲ್ಲ. ಹಾಗಂತ ನಾವು ಏಕಾಂಗಿ ಅಲ್ಲ ನಮಗೂ ಗೆಳೆಯರ ಬಳಗ ಇದೆ. ಇಂಡಿಯಾ ಎಂಬ ಹೊಸ ಒಕ್ಕೂಟದಲ್ಲಿ ಏನಿದೆ ವಿಶೇಷ? 50 ವರ್ಷ ಅಧಿಕಾರದಲ್ಲಿದ್ದ ಅವರು ಯಾವುದೇ ಬದಲಾವಣೆ ತರಲಿಲ್ಲ” ಎಂದು ಹೇಳಿದ್ದಾರೆ.

ಇತ್ತೀಚೆಗೆ, ಬೆಂಗಳೂರಿನಲ್ಲಿ ಸಭೆ ಸೇರಿದ ಪ್ರತಿಪಕ್ಷಗಳ ನಾಯಕರು 2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ಒಗಟ್ಟಿನ ಹೋರಾಟ ಸಂಘಟಿಸಲು INDIA ಎಂಬ ಒಕ್ಕೂಟ ಘೋಷಣೆ ಮಾಡಿದವು. ಈ ಪ್ರತಿಪಕ್ಷ ನಾಯಕರ ಸಭೆಯಿಂದಲೂ ಬಿಆ‌ಎಸ್‌ ಪಕ್ಷ ದೂರ ಉಳಿದಿತ್ತು.

ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅಣತಿಯಂತೆ ಬಿಆರ್ ಎಸ್‌ ಕೆಲಸ ಮಾಡುತ್ತದೆ ಬಿಆ‌ರ್‌ಎಸ್‌ ಬಿಜೆಪಿಯ ಬಿ ಟೀಮ್ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದರು.

ದೆಹಲಿಯಲ್ಲಿ ಇತ್ತೀಚೆಗೆ ಎನ್‌ಡಿಎ ಒಕ್ಕಟದ ಪಕ್ಷಗಳಿಗೆ ಆಹ್ವಾನ ನೀಡಿ ಸಭೆ ಕರೆಯಲಾಗಿತ್ತು. ಆದರೆ ಬಿಆರ್‌ಎಸ್‌ಗೆ ಯಾವುದೇ ಆಹ್ವಾನ ನೀಡಲಾಗಿರಲಿಲ್ಲ ಮತ್ತು ಎನ್‌ಡಿಎ ಸೇರುವ ಬಗ್ಗೆ ಕೆ ಚಂದ್ರಶೇಖರ ರಾವ್ ಒಲವು ತೋರಿರಲಿಲ್ಲ.

ದೆಹಲಿ ಸೇವಾ ಮಸೂದೆ ವಿರುದ್ಧ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಿರುವ ಬಿಆರ್‌ಎಸ್

ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯು ಸೋಮವಾರ ತನ್ನ ಎಲ್ಲಾ ರಾಜ್ಯಸಭಾ ಸಂಸದರಿಗೆ ಸದನದಲ್ಲಿ ಹಾಜರಾಗುವಂತೆ ಮತ್ತು ದೆಹಲಿ ಸೇವೆಗಳ ಸುಗ್ರೀವಾಜ್ಞೆ ಮಸೂದೆಯ ವಿರುದ್ಧ ಮತ ಚಲಾಯಿಸುವಂತೆ ವಿಪ್ ಜಾರಿಗೊಳಿಸಿದೆ.

”ಬಿಆರ್‌ಎಸ್ (ರಾಜ್ಯಸಭೆ)ನ ಎಲ್ಲಾ ಸಂಸದರು ದೆಹಲಿ ಸೇವೆಗಳ ಸುಗ್ರೀವಾಜ್ಞೆ ಮಸೂದೆಯನ್ನು ಸದನದ ಮುಂದೆ ಯಾವುದೇ ಸಮಯದಲ್ಲಿ ತರಬಹುದು ಹಾಗಾಗಿ ಪಕ್ಷದ ಎಲ್ಲ ಸದಸ್ಯರು ಅದರ ವಿರುದ್ಧ ಮತ ಚಲಾಯಿಸಲು ವಿನಂತಿಸಲಾಗಿದೆ” ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.

ಮೇಲ್ಮನೆಯಲ್ಲಿ ಬಿಆರ್‌ಎಸ್ ಏಳು ಸಂಸದರನ್ನು ಹೊಂದಿದೆ. ”ಜುಲೈ 31ರಿಂದ ಆಗಸ್ಟ್ 4ರವರೆಗೆ ಮತ್ತು ಮಸೂದೆಯ ಮೇಲಿನ ಮತದಾನ ಮುಗಿಯುವವರೆಗೆ ಅವರೆಲ್ಲರೂ ಸದನದಲ್ಲಿ ಹಾಜರಿರಬೇಕು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ದೆಹಲಿಯ NCT ಸರ್ಕಾರ (ತಿದ್ದುಪಡಿ) ಸುಗ್ರೀವಾಜ್ಞೆಯು ದೆಹಲಿ ಸರ್ಕಾರದಿಂದ ಸೇವೆಗಳ ಮೇಲಿನ ನಿಯಂತ್ರಣವನ್ನು ತೆಗೆದುಹಾಕುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ: INDIAದ ನಿಯೋಗವು ಮಣಿಪುರ ಜನರ ಕಣ್ಣೀರು ಒರೆಸಿ ಬಂದಿದೆ: ರಾಘವ್ ಚಡ್ಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...