Homeಮುಖಪುಟಮಹಾರಾಷ್ಟ್ರದಲ್ಲಿ ಮೋದಿ ಪ್ರಚಾರ ನಡೆಸಿದ್ದ 15 ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು

ಮಹಾರಾಷ್ಟ್ರದಲ್ಲಿ ಮೋದಿ ಪ್ರಚಾರ ನಡೆಸಿದ್ದ 15 ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು

- Advertisement -
- Advertisement -

2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಬಹುಮತವನ್ನು ಪಡೆದುಕೊಂಡಿದ್ದರೂ, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಉಂಟಾಗಿರುವ ದೊಡ್ಡ ಹಿನ್ನೆಡೆಯು ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ಪಾಳಯದಲ್ಲಿ ದೊಡ್ಡ  ಆತಂಕವನ್ನುಂಟುಮಾಡಿದೆ.

ಮಹಾರಾಷ್ಟ್ರದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ 23 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ ಕೇವಲ 9 ಸ್ಥಾನಗಳನ್ನು ಮಾತ್ರ ಗಳಿಸಿಕೊಂಡಿದೆ. ಪ್ರಧಾನಿ ಮೋದಿ ಪ್ರಚಾರ ನಡೆಸಿದ ಬಹುತೇಕ ಕ್ಷೇತ್ರಗಳಲ್ಲಿ ಎನ್‌ಡಿಎ ಸೋಲು ಕಂಡಿದೆ. ಪ್ರಧಾನಿ ಮೋದಿ ಮಹಾರಾಷ್ಟ್ರದ 18 ಲೋಕಸಭಾ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋ ನಡೆಸಿದ್ದರು. ಅದರಲ್ಲಿ 15 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಸೋಲನ್ನು ಕಂಡಿದ್ದಾರೆ.

ಮುಂಬೈ ಈಶಾನ್ಯ ಲೋಕಸಭಾ ಕ್ಷೇತ್ರದ ಘಾಟ್‌ಕೋಪರ್ ಪ್ರದೇಶದಲ್ಲಿ ಪ್ರಧಾನಿ ಮೋದಿ ರೋಡ್‌ಶೋ ನಡೆಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಿಹಿರ್ ಕೋಟೆಚಾ ಅವರನ್ನು ಶಿವಸೇನಾ(ಯುಬಿಟಿ) ಅಭ್ಯರ್ಥಿ ಸಂಜಯ್ ದಿನಾ ಪಾಟೀಲ್ 29,861 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಪುಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುರಳೀಧರ್ ಮೊಹೋಲ್‌ ಪರ ಪ್ರಧಾನಿ ಮೋದಿ ಮತ ಯಾಚಿಸಿದ್ದರು. ಈ ಕ್ಷೇತ್ರದಲ್ಲಿ ಮೊಹೋಲ್ ಅವರನನ್ಉ ಕಾಂಗ್ರೆಸ್‌ನ ರವೀಂದ್ರ ಧಂಗೇಕರ್ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದಾರೆ.

ನಾಸಿಕ್‌ನಲ್ಲಿ ಪ್ರಧಾನಿ ಮೋದಿ ಶಿವಸೇನಾ(ಶಿಂಧೆ ಬಣ) ಅಭ್ಯರ್ಥಿ ಹೇಮಂತ್ ಗೋಡ್ಸೆ ಪರ ಪ್ರಚಾರ ನಡೆಸಿದ್ದರು. ಈ ಕ್ಷೇತ್ರದಲ್ಲಿ ಶಿವಸೇನಾ(ಯುಬಿಟಿ) ಅಭ್ಯರ್ಥಿ ರಾಜಾಭಾವು ವಾಜೆ ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೋಡ್ಸೆಯನ್ನು ಸೋಲಿಸಿದ್ದಾರೆ.

ಹಾಲಿ ಸಂಸದ ಮತ್ತು ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೋವಿಂದರಾವ್ ಚಿಖಾಲಿಕರ್ ಪಾಟೀಲ್ ಪರವಾಗಿ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದ್ದರು. ಆದರೆ ಇಲ್ಲಿ ಮೋದಿಯ ಯಾವುದೇ ಮ್ಯಾಜಿಕ್ ನಡೆದಿಲ್ಲಿ, ಕಾಂಗ್ರೆಸ್‌ ಅಭ್ಯರ್ಥಿ ವಸಂತರಾವ್ ಬಲವಂತರಾವ್ ಗೆಲುವನ್ನು ಸಾಧಿಸಿದ್ದಾರೆ.

ಚಂದ್ರಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಸಚಿವ ಸುಧೀರ್ ಮುಂಗಂಟಿವಾರ್ಗಾಗಿ ಪರ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಮತಯಾಚಿಸಿದ್ದರು. ಆದರೆ ಸುಧೀರ್ ಮುಂಗಂಟಿವಾರ್ಗಾಗಿ ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಸೋತಿದ್ದಾರೆ. ಇಲ್ಲಿಂದ ಕಾಂಗ್ರೆಸ್‌ನ ಪ್ರತಿಭಾ ಧನೋರ್ಕರ್ ಆಯ್ಕೆಯಾಗಿದ್ದಾರೆ.

ಪ್ರಧಾನಿ ಮೋದಿ ಶಿವಸೇನೆಯ(ಶಿಂಧೆ ಬಣ) ರಾಜು ದೇವನಾಥ್ ಪರ್ವೆ ಪರವಾಗಿ ರಾಮ್‌ಟೆಕ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮತಯಾಚಿಸಿದ್ದರು. ಆದರೆ ಅವರು ಕಾಂಗ್ರೆಸ್‌ನ ಶ್ಯಾಮ್ ಕುಮಾರ್ ಬರ್ವೆ ಅವರ ಎದುರು ಸೋಲನ್ನು ಕಂಡಿದ್ದಾರೆ. ವಾರ್ಧಾದಲ್ಲಿ ಬಿಜೆಪಿ ಅಭ್ಯರ್ಥಿ ರಾಮದಾಸ್ ತಡಸ್ ಪರವಾಗಿ ಪ್ರಧಾನಿ ಮೋದಿ ಮತಾಯಾಚಿಸಿದ್ದರು. ಆದರೆ, ತಡಸ್ ಅವರನ್ನು ಎನ್‌ಸಿಪಿ(ಎಸ್‌ಪಿ) ಅಭ್ಯರ್ಥಿ ಅಮರ್ ಕಾಳೆ ಸೋಲಿಸಿದ್ದಾರೆ.

ಪ್ರಧಾನಿ ಮೋದಿ ಪರ್ಭಾನಿಯಲ್ಲಿ ಎನ್‌ಡಿಎ ಅಭ್ಯರ್ಥಿ ಮಹದೇವ್ ಜಾಂಕರ್ ಪರ ಪ್ರಚಾರ ಮಾಡಿದ್ದರು. ಆದರೆ ಶಿವಸೇನಾ (ಯುಬಿಟಿ) ಅಭ್ಯರ್ಥಿ ಸಂಜಯ್ ಜಾಧವ್ ಭಾರಿ ಮತಗಳ ಅಂತರದಿಂದ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಿದ್ದಾರೆ.

ಕೊಲ್ಲಾಪುರ ಕ್ಷೇತ್ರದಲ್ಲಿ ಹಾಲಿ ಸಂಸದ ಮತ್ತು ಶಿವಸೇನೆ (ಶಿಂಧೆ ಬಣ) ಅಭ್ಯರ್ಥಿ ಸಂಜಯ್ ಮಾಂಡ್ಲಿಕ್‌ ಪರವಾಗಿ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದರು. ಆದರೆ ಅವರು ಕಾಂಗ್ರೆಸ್‌ನ ಶಾಹು ಮಹಾರಾಜ್ ಛತ್ರಪತಿ ಎದುರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲನ್ನು ಕಂಡಿದ್ದಾರೆ. ಸೋಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಮ್ ಸತ್ಪುತೆ ಪರ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದರು. ಆದರೆ ಕಾಂಗ್ರೆಸ್‌ನ ಪ್ರಣಿತಿ ಶಿಂಧೆ  ಎದುರು ರಾಮ್ ಸತ್ಪುತೆ ಸೋಲನುಭವಿಸಿದ್ದಾರೆ.

ಇದನ್ನು ಓದಿ: ಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ? ಡಿಟೇಲ್ಸ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...

‘ನಾವು Gen Z’ ಎಂಬುದು ‘ನನ್ನಪ್ಪ ಯಾರು ಗೊತ್ತಾ?’ ಎಂಬಂತಾಗಬಾರದು: ಒಮರ್ ಅಬ್ದುಲ್ಲಾ

ಸಣ್ಣಪುಟ್ಟ ಅಸಮಾಧಾನ ಅಥವಾ ಭಿನ್ನಾಪ್ರಾಯಗಳು ಎದುರಾದಾಗಲೆಲ್ಲ 'ನಾವು Gen Z' (ಜೆನ್ ಝೀ) ಎಂದು ಹೇಳಿಕೊಳ್ಳುವುದು, 'ನನ್ನಪ್ಪ ಯಾರು ಗೊತ್ತಾ?' (ಜಾಂತೇ ನಹೀನ್ ಹೋ, ಮೇರಾ ಬಾಪ್ ಕೌನ್ ಹೈ) ಎಂಬ ಹಳೆಯ...

ಪಶ್ಚಿಮ ಬಂಗಾಳ | ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಗೆಲುವು

ವಿಧಾನಸಭಾ ಚುನಾವಣೆ ನಂತರ ಪಕ್ಷದಲ್ಲಿ ಉಂಟಾದ ಬಂಡಾಯ, ಪಕ್ಷಾಂತರಗಳು, ಕಾನೂನು ಪ್ರಕರಣಗಳು ಮತ್ತು ರಾಜಕೀಯ ಆರೋಪಗಳಿಂದ ಸಾಲು ಸಾಲು ಹಿನ್ನಡೆಗಳನ್ನು ಎದುರಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಕೊನೆಗೂ...