Homeಮುಖಪುಟಮಹಾರಾಷ್ಟ್ರದಲ್ಲಿ ಮೋದಿ ಪ್ರಚಾರ ನಡೆಸಿದ್ದ 15 ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು

ಮಹಾರಾಷ್ಟ್ರದಲ್ಲಿ ಮೋದಿ ಪ್ರಚಾರ ನಡೆಸಿದ್ದ 15 ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು

- Advertisement -
- Advertisement -

2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಬಹುಮತವನ್ನು ಪಡೆದುಕೊಂಡಿದ್ದರೂ, ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಉಂಟಾಗಿರುವ ದೊಡ್ಡ ಹಿನ್ನೆಡೆಯು ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ಪಾಳಯದಲ್ಲಿ ದೊಡ್ಡ  ಆತಂಕವನ್ನುಂಟುಮಾಡಿದೆ.

ಮಹಾರಾಷ್ಟ್ರದಲ್ಲಿ 2019ರ ಲೋಕಸಭೆ ಚುನಾವಣೆಯಲ್ಲಿ 23 ಸ್ಥಾನಗಳನ್ನು ಪಡೆದಿದ್ದ ಬಿಜೆಪಿ ಈ ಬಾರಿ ಕೇವಲ 9 ಸ್ಥಾನಗಳನ್ನು ಮಾತ್ರ ಗಳಿಸಿಕೊಂಡಿದೆ. ಪ್ರಧಾನಿ ಮೋದಿ ಪ್ರಚಾರ ನಡೆಸಿದ ಬಹುತೇಕ ಕ್ಷೇತ್ರಗಳಲ್ಲಿ ಎನ್‌ಡಿಎ ಸೋಲು ಕಂಡಿದೆ. ಪ್ರಧಾನಿ ಮೋದಿ ಮಹಾರಾಷ್ಟ್ರದ 18 ಲೋಕಸಭಾ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋ ನಡೆಸಿದ್ದರು. ಅದರಲ್ಲಿ 15 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಸೋಲನ್ನು ಕಂಡಿದ್ದಾರೆ.

ಮುಂಬೈ ಈಶಾನ್ಯ ಲೋಕಸಭಾ ಕ್ಷೇತ್ರದ ಘಾಟ್‌ಕೋಪರ್ ಪ್ರದೇಶದಲ್ಲಿ ಪ್ರಧಾನಿ ಮೋದಿ ರೋಡ್‌ಶೋ ನಡೆಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಿಹಿರ್ ಕೋಟೆಚಾ ಅವರನ್ನು ಶಿವಸೇನಾ(ಯುಬಿಟಿ) ಅಭ್ಯರ್ಥಿ ಸಂಜಯ್ ದಿನಾ ಪಾಟೀಲ್ 29,861 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಪುಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುರಳೀಧರ್ ಮೊಹೋಲ್‌ ಪರ ಪ್ರಧಾನಿ ಮೋದಿ ಮತ ಯಾಚಿಸಿದ್ದರು. ಈ ಕ್ಷೇತ್ರದಲ್ಲಿ ಮೊಹೋಲ್ ಅವರನನ್ಉ ಕಾಂಗ್ರೆಸ್‌ನ ರವೀಂದ್ರ ಧಂಗೇಕರ್ ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದಾರೆ.

ನಾಸಿಕ್‌ನಲ್ಲಿ ಪ್ರಧಾನಿ ಮೋದಿ ಶಿವಸೇನಾ(ಶಿಂಧೆ ಬಣ) ಅಭ್ಯರ್ಥಿ ಹೇಮಂತ್ ಗೋಡ್ಸೆ ಪರ ಪ್ರಚಾರ ನಡೆಸಿದ್ದರು. ಈ ಕ್ಷೇತ್ರದಲ್ಲಿ ಶಿವಸೇನಾ(ಯುಬಿಟಿ) ಅಭ್ಯರ್ಥಿ ರಾಜಾಭಾವು ವಾಜೆ ಒಂದು ಲಕ್ಷಕ್ಕೂ ಹೆಚ್ಚು ಮತಗಳಿಂದ ಗೋಡ್ಸೆಯನ್ನು ಸೋಲಿಸಿದ್ದಾರೆ.

ಹಾಲಿ ಸಂಸದ ಮತ್ತು ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೋವಿಂದರಾವ್ ಚಿಖಾಲಿಕರ್ ಪಾಟೀಲ್ ಪರವಾಗಿ ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಿದ್ದರು. ಆದರೆ ಇಲ್ಲಿ ಮೋದಿಯ ಯಾವುದೇ ಮ್ಯಾಜಿಕ್ ನಡೆದಿಲ್ಲಿ, ಕಾಂಗ್ರೆಸ್‌ ಅಭ್ಯರ್ಥಿ ವಸಂತರಾವ್ ಬಲವಂತರಾವ್ ಗೆಲುವನ್ನು ಸಾಧಿಸಿದ್ದಾರೆ.

ಚಂದ್ರಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಮತ್ತು ಸಚಿವ ಸುಧೀರ್ ಮುಂಗಂಟಿವಾರ್ಗಾಗಿ ಪರ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಮತಯಾಚಿಸಿದ್ದರು. ಆದರೆ ಸುಧೀರ್ ಮುಂಗಂಟಿವಾರ್ಗಾಗಿ ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಸೋತಿದ್ದಾರೆ. ಇಲ್ಲಿಂದ ಕಾಂಗ್ರೆಸ್‌ನ ಪ್ರತಿಭಾ ಧನೋರ್ಕರ್ ಆಯ್ಕೆಯಾಗಿದ್ದಾರೆ.

ಪ್ರಧಾನಿ ಮೋದಿ ಶಿವಸೇನೆಯ(ಶಿಂಧೆ ಬಣ) ರಾಜು ದೇವನಾಥ್ ಪರ್ವೆ ಪರವಾಗಿ ರಾಮ್‌ಟೆಕ್‌ನಲ್ಲಿ ಸಾರ್ವಜನಿಕ ಸಭೆಯಲ್ಲಿ ಮತಯಾಚಿಸಿದ್ದರು. ಆದರೆ ಅವರು ಕಾಂಗ್ರೆಸ್‌ನ ಶ್ಯಾಮ್ ಕುಮಾರ್ ಬರ್ವೆ ಅವರ ಎದುರು ಸೋಲನ್ನು ಕಂಡಿದ್ದಾರೆ. ವಾರ್ಧಾದಲ್ಲಿ ಬಿಜೆಪಿ ಅಭ್ಯರ್ಥಿ ರಾಮದಾಸ್ ತಡಸ್ ಪರವಾಗಿ ಪ್ರಧಾನಿ ಮೋದಿ ಮತಾಯಾಚಿಸಿದ್ದರು. ಆದರೆ, ತಡಸ್ ಅವರನ್ನು ಎನ್‌ಸಿಪಿ(ಎಸ್‌ಪಿ) ಅಭ್ಯರ್ಥಿ ಅಮರ್ ಕಾಳೆ ಸೋಲಿಸಿದ್ದಾರೆ.

ಪ್ರಧಾನಿ ಮೋದಿ ಪರ್ಭಾನಿಯಲ್ಲಿ ಎನ್‌ಡಿಎ ಅಭ್ಯರ್ಥಿ ಮಹದೇವ್ ಜಾಂಕರ್ ಪರ ಪ್ರಚಾರ ಮಾಡಿದ್ದರು. ಆದರೆ ಶಿವಸೇನಾ (ಯುಬಿಟಿ) ಅಭ್ಯರ್ಥಿ ಸಂಜಯ್ ಜಾಧವ್ ಭಾರಿ ಮತಗಳ ಅಂತರದಿಂದ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಿದ್ದಾರೆ.

ಕೊಲ್ಲಾಪುರ ಕ್ಷೇತ್ರದಲ್ಲಿ ಹಾಲಿ ಸಂಸದ ಮತ್ತು ಶಿವಸೇನೆ (ಶಿಂಧೆ ಬಣ) ಅಭ್ಯರ್ಥಿ ಸಂಜಯ್ ಮಾಂಡ್ಲಿಕ್‌ ಪರವಾಗಿ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದರು. ಆದರೆ ಅವರು ಕಾಂಗ್ರೆಸ್‌ನ ಶಾಹು ಮಹಾರಾಜ್ ಛತ್ರಪತಿ ಎದುರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲನ್ನು ಕಂಡಿದ್ದಾರೆ. ಸೋಲಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಮ್ ಸತ್ಪುತೆ ಪರ ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದರು. ಆದರೆ ಕಾಂಗ್ರೆಸ್‌ನ ಪ್ರಣಿತಿ ಶಿಂಧೆ  ಎದುರು ರಾಮ್ ಸತ್ಪುತೆ ಸೋಲನುಭವಿಸಿದ್ದಾರೆ.

ಇದನ್ನು ಓದಿ: ಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ? ಡಿಟೇಲ್ಸ್…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...