Homeಮುಖಪುಟಮಹಾರಾಷ್ಟ್ರ: ಎನ್‌ಡಿಎ ಬಣದಲ್ಲಿ ಬಿರುಕು

ಮಹಾರಾಷ್ಟ್ರ: ಎನ್‌ಡಿಎ ಬಣದಲ್ಲಿ ಬಿರುಕು

- Advertisement -
- Advertisement -

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಮಹಾರಾಷ್ಟ್ರದಲ್ಲಿ ಐದು ಹಂತಗಳಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ-ಶಿವಸೇನಾ(ಶಿಂಧೆ ಬಣ) ಎನ್‌ಸಿಪಿ(ಅಜಿತ್‌ ಪವಾರ್‌ ಬಣ) ಮಹಾ ಮೈತ್ರಿಕೂಟದ ಸೀಟು ಹಂಚಿಕೆ ಪ್ರಕ್ರಿಯೆ ಕಗ್ಗಂಟಾಗಿದೆ. ಮೂಲಗಳ ಪ್ರಕಾರ, ಬಾರಾಮತಿ, ಮಾಧಾ ಮತ್ತು ಸತಾರಾ ಎಂಬ ಮೂರು ಕ್ಷೇತ್ರಗಳಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಮೈತ್ರಿ ಪಕ್ಷಗಳಲ್ಲಿ ಒಮ್ಮತ ಮೂಡಿ ಬಂದಿಲ್ಲ ಎಂದು ಹೇಳಲಾಗಿದ್ದು, ಎನ್‌ಡಿಎ ಮೈತ್ರಿಯಲ್ಲಿ ಬಿರುಕು ಉಂಟಾಗಿದೆ.

ಮಹಾರಾಷ್ಟ್ರದ ಆಡಳಿತಾರೂಢ ಮೈತ್ರಿಕೂಟದಲ್ಲಿ ಬಿಜೆಪಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಇವೆ. ಬಿಜೆಪಿಯ ಮಹಾರಾಷ್ಟ್ರದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಸತಾರಾ ಕ್ಷೇತ್ರದಿಂದ ಬಿಜೆಪಿ ಸಂಸದ ಉದಯರಾಜೇ ಭೋಸಲೆ ಅವರಿಗೆ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದಾರೆ. ಸೀಟು ಹಂಚಿಕೆ ಬಿಕ್ಕಟ್ಟಿನಿಂದಾಗಿ ಮಾಧಾ ಮತ್ತು ಸತಾರಾದಲ್ಲಿ ಬಿಜೆಪಿ ಮುಖಂಡರು ಮತ್ತು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.  ಮಾಧಾದಲ್ಲಿ ಹಿರಿಯ ನಾಯಕರಾದ ಬಿಜೆಪಿಯ ವಿಜಯಸಿಂಹ ಮೋಹಿತೆ ಪಾಟೀಲ್ ಮತ್ತು ಎನ್‌ಸಿಪಿಯ ಅಜಿತ್ ಬಣದ ರಾಮರಾಜೆ ನಿಂಬಾಳ್ಕರ್ ಅವರು ಬಿಜೆಪಿಯ ರಂಜಿತ್‌ಸಿನ್ಹ ನಾಯಕ್ ನಿಂಬಾಳ್ಕರ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದ್ದರಿಂದ ಅಸಮಾಧಾನಗೊಂಡಿದ್ದಾರೆ.

ಮಾಧಾ ಮತ್ತು ಸತಾರಾ ಕ್ಷೇತ್ರಗಳಲ್ಲಿ ಭಾನುವಾರ ಬಂಡಾಯವೆದ್ದ ನಾಯಕರು ಮತ್ತು ಪಕ್ಷದ ಕಾರ್ಯಕರ್ತರನ್ನು ಸಮಾಧಾನಪಡಿಸಲು ಬಿಜೆಪಿ ಹೈಕಮಾಂಡ್‌ ಸಚಿವ ಗಿರೀಶ್ ಮಹಾಜನ್ ಅವರನ್ನು ಕಳುಹಿಸಿದೆ, ಸಚಿವರ ಬೆಂಗಾವಲು ಪಡೆ ವಾಹನವನ್ನು ತಡೆದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸತಾರಾದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ಅಲ್ಲಿನ ಪರಿಸ್ಥಿತಿಯನ್ನು ಅವರು ಅವಲೋಕಿಸಿದ್ದಾರೆ. ಮಹಾಮೈತ್ರಿ ಮಿತ್ರಪಕ್ಷಗಳಾದ ಶಿವಸೇನೆ ಮತ್ತು ಎನ್‌ಸಿಪಿ ನಡುವೆ ಕೆಲವು ಭಿನ್ನಾಭಿಪ್ರಾಯಗಳಿವೆ ಎಂದು ಮಹಾಜನ್ ಸ್ಪಷ್ಟಪಡಿಸಿದ್ದಾರೆ. ಪ್ರತಿಯೊಬ್ಬರೂ ತಮ್ಮ ಕ್ಷೇತ್ರದಿಂದ ತಮ್ಮ ನಾಯಕನನ್ನು ಕಣಕ್ಕಿಳಿಸಬೇಕು ಎಂದು ಬಯಸುತ್ತಾರೆ. ಆದ್ದರಿಂದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಯಕರೊಂದಿಗೆ ಚರ್ಚಿಸಲು ಮತ್ತು ಅವರ ಸಮಸ್ಯೆಗಳನ್ನು ಪರಿಹರಿಸಲು ನನ್ನನ್ನು ಕಳುಹಿಸಿದ್ದಾರೆ ಎಂದು ಮಹಾಜನ್ ಹೇಳಿದ್ದಾರೆ.

ಬಾರಾಮತಿಯು ಶಿವಸೇನೆ ಮತ್ತು ಎನ್‌ಸಿಪಿ ನಡುವೆ ಸೀಟು ಹಂಚಿಕೆ ಬಿಕ್ಕಟ್ಟಿಗೆ ಕಾರಣವಾದ ಮತ್ತೊಂದು ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್‌ಗೆ ಟಿಕೆಟ್‌ ಘೋಷಣೆ ಸಾಧ್ಯತೆ ಇದ್ದು, ಮಾಜಿ ಸಚಿವ ಮತ್ತು ಶಿಂಧೆ ಸೇನೆಯ ನಾಯಕ ವಿಜಯ್ ಶಿವತಾರೆ ಕ್ಷೇತ್ರದಲ್ಲಿ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸೋಮವಾರ ಶಿವತಾರೆ ಅವರನ್ನು ಭಿನ್ನಾಭಿಪ್ರಾಯ ಶಮನಕ್ಕೆ ಕರೆದಿದ್ದಾರೆ. ಶಿಂಧೆ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ನನ್ನ ಅಂತಿಮ ನಿರ್ಧಾರವನ್ನು ಕೈಗೊಳ್ಳುವುದಾಗಿ ಶಿವತಾರೆ ಹೇಳಿದ್ದಾರೆ.

ಈ ಮಧ್ಯೆ ಮಹಾರಾಷ್ಟ್ರದ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಅವರು ಆಡಳಿತಾರೂಢ ಮೈತ್ರಿಕೂಟವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಿತ್ರಪಕ್ಷಗಳೊಂದಿಗೆ ಒಮ್ಮತವನ್ನು ಸಾಧಿಸುವುದು ಎಷ್ಟು ಕಷ್ಟ ಎಂದು ಅವರು ಅರ್ಥಮಾಡಿಕೊಳ್ಳುತ್ತಾರೆ ಎಂದು ಪಟೋಲೆ ಪ್ರಶ್ನಿಸಿದ್ದಾರೆ.

ಏಕನಾಥ್ ಶಿಂಧೆ ಆಡಳಿತಾರೂಢ ಮೈತ್ರಿಕೂಟದಲ್ಲಿ ಬಿರುಕನ್ನು ತಳ್ಳಿ ಹಾಕಿದ್ದಾರೆ. ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳಿಗಾಗಿ ಜನರು ಸರ್ಕಾರಕ್ಕೆ ಮತ ಹಾಕುತ್ತಾರೆ ಮತ್ತು ಮಹಾರಾಷ್ಟ್ರದಲ್ಲಿ 45ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...