Homeಕರ್ನಾಟಕರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ: ಬೆಂಗಳೂರಿನ ಎಲ್ಲಾ ಕ್ಷೇತ್ರಗಳು ಬಿಜೆಪಿ ಪಾಲು

ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್‌ಗೆ ಭಾರೀ ಹಿನ್ನಡೆ: ಬೆಂಗಳೂರಿನ ಎಲ್ಲಾ ಕ್ಷೇತ್ರಗಳು ಬಿಜೆಪಿ ಪಾಲು

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಇದು ರಾಜ್ಯದಲ್ಲಿರುವ ಕಾಂಗ್ರೆಸ್‌ಗೆ ದೊಡ್ಡ ಹಿನ್ನೆಡೆಯಾಗಿದ್ದು, ಕಾಂಗ್ರೆಸ್‌ ನೀಡಿದ್ದ ಗ್ಯಾರೆಂಟಿಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎನ್ನುವುದು ಫಲಿತಾಂಶದಿಂದ ಸ್ಪಷ್ಟವಾಗಿ ತಿಳಿದು ಬರುತ್ತದೆ.

ಬೆಂಗಳೂರು ಗ್ರಾಮಾಂತರದಲ್ಲಿ ಡಾ.ಮಂಜುನಾಥ್‌ಗೆ ಗೆಲುವು:

ಬೆಂಗಳೂರು ಗ್ರಾಮಾಂತರದಲ್ಲಿ ಹಾಲಿ ಸಂಸದ, ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ವಿರುದ್ಧ ಎನ್‌ಡಿಎ ಅಭ್ಯರ್ಥಿ ಡಾ.ಮಂಜುನಾಥ್ 2,68.094 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಈ ಕ್ಷೇತ್ರವನ್ನು ಡಿಕೆ ಬ್ರದಸ್‌ ಪ್ರತಿಷ್ಠೆಯ ಕಣವನ್ನಾಗಿ ಸ್ವೀಕರಿಸಿ ಪ್ರಚಾರ ಮಾಡಿದ್ದರು. ಡಿ.ಕೆ ಸುರೇಶ್‌ ಗೆಲುವು ನಿಶ್ಚಿತ ಎಂದು ಹೇಳಲಾಗಿತ್ತು. ಆದರೆ ಫಲಿತಾಂಶ ಇದೀಗ ಕಾಂಗ್ರೆಸ್‌ ಪಾಲಯದಲ್ಲಿ ಅದರಲ್ಲೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರಲ್ಲಿ ನಿರಾಶೆ ಮೂಡಿಸಿದೆ. ಇದಲ್ಲದೆ 10,633 ಮತಗಳು ನೋಟಾಗೆ ಬಿದ್ದಿದ್ದು, ಕ್ಷೇತ್ರದಲ್ಲಿ ಮೂರನೇ ಸ್ಥಾನದಲ್ಲಿ ನೋಟಾ ಇದೆ.

ಬೆಂಗಳೂರು ದಕ್ಷಿಣ:

ಬೆಂಗಳೂರು ದಕ್ಷಿಣದಲ್ಲಿ ಎನ್‌ಡಿಎ ಅಭ್ಯರ್ಥಿ ತೇಜಸ್ವಿ ಸೂರ್ಯ, ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ  2,68,028 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಕ್ಷೇತ್ರದಲ್ಲಿ 7,27,537 ಮತಗಳು ತೇಜಸ್ವಿ ಸೂರ್ಯಗೆ ಬಿದ್ದಿದ್ದು, 4,59,460 ಮತಗಳನ್ನು ಸೌಮ್ಯ ರೆಡ್ಡಿ ಪಡೆದಿದ್ದಾರೆ. 7,617 ಮತಗಳು ನೋಟಾಕ್ಕೆ ಬಿದ್ದಿದೆ. ಹಾಲಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯ ಪರ ಕ್ಷೇತ್ರದಲ್ಲಿ ಒಲವು ಇತ್ತು, ಆದರೆ ಅಂತಿಮವಾಗಿ ತೇಜಸ್ವಿ ಸೂರ್ಯ ಗೆಲುವನ್ನು ಸಾಧಿಸಿದ್ದಾರೆ.

ಬೆಂಗಳೂರು ಉತ್ತರ:

ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಹಾಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್‌ ಅಭ್ಯರ್ಥಿ ಪ್ರೋ.ರಾಜೀವ್‌ ಗೌಡ ಎದುರು 2,62,537 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಶೋಭಾ ಕರಂದ್ಲಾಜೆ ಪರವಾಗಿ 9,74,909 ಮತಗಳು ಚಲಾವಣೆಯಾಗಿದ್ದು, ರಾಜೀವ್‌ ಗೌಡಗೆ 7,12,372 ಮತಗಳು ಸಿಕ್ಕಿದೆ. ಕ್ಷೇತ್ರದಲ್ಲಿ 13,375 ಮತಗಳು ನೋಟಾ ಪರ ಚಲಾವಣೆಯಾಗಿದೆ. ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಈ ಹಿಂದೆ ಪ್ರತಿನಿಧಿಸುತ್ತಿದ್ದ ಶೋಭಾ ಕರಂದ್ಲಾಜೆಗೆ ಕ್ಷೇತ್ರದಲ್ಲಿ ಕಳಪೆ ಪದರ್ಶನ ಹಿನ್ನೆಲೆ ಪಕ್ಷಬಿಟ್ಟು ಬೆಂಗಳೂರು ಕಡೆಗೆ ಮುಖಮಾಡಿದ್ದರು. ಅವರ ಸೋಲು ಪಕ್ಕಾ ಎಂದು ಹೇಳಲಾಗಿತ್ತು. ಆದರೆ ಇದೀಗ ಚುನಾವಣೆ ಫಲಿತಾಂಶ ಶೋಭಾ ಕರಂದ್ಲಾಜೆಗೆ ಭರ್ಜರಿ ಸಿಹಿ ಸುದ್ದಿಯನ್ನು ನೀಡಿದೆ.

ಬೆಂಗಳೂರು ಸೆಂಟ್ರಲ್‌

ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್‌ 27,899 ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ಆರಂಭದಿಂದ ಮುನ್ನಡೆಯನ್ನು ಕಾಯ್ದುಕೊಂಡ ಮನ್ಸೂರ್‌ ಅಲಿ ಖಾನ್‌ ಒಂದು ಹಂತದಲ್ಲಿ ಗೆಲುವನ್ನು ಸಾಧಿಸುತ್ತಾರೆ ಎಂದು ಹೇಳಲಾಗಿತ್ತು. ಆದರೆ ಕೊನೆಯ ವೇಳೆ ಚುನಾವಣೆ ಫಲಿತಾಂಶದ ಚಿತ್ರಣ ಬದಲಾಗಿದ್ದು ಪಿ.ಸಿ ಮೋಹನ್‌ ಗೆಲುವನ್ನು ಸಾಧಿಸಿದ್ದಾರೆ. ಬೆಂಗಳೂರು ಸೆಂಟ್ರಲ್‌ನಲ್ಲೂ ಮೂರನೇ ಸ್ಥಾನದಲ್ಲಿ ನೋಟಾ ಇದ್ದು, ರಾಜ್ಯದಲ್ಲಿ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ನೋಟಾ ಪರ ಮತ ಚಲಾವಣೆಯಾಗಿರುವುದು ಕಂಡು ಬಂದಿದೆ.

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...