Homeಮುಖಪುಟರಾಜ್ಯಸಭೆಯಲ್ಲಿ 101ಕ್ಕೆ ಕುಸಿದ ಎನ್‌ಡಿಎ ಸಂಖ್ಯೆ; ಮೇಲ್ಮನೆಯಲ್ಲಿ ಬಹುಮತ ಕಳೆದುಕೊಂಡ ಆಡಳಿತಪಕ್ಷ

ರಾಜ್ಯಸಭೆಯಲ್ಲಿ 101ಕ್ಕೆ ಕುಸಿದ ಎನ್‌ಡಿಎ ಸಂಖ್ಯೆ; ಮೇಲ್ಮನೆಯಲ್ಲಿ ಬಹುಮತ ಕಳೆದುಕೊಂಡ ಆಡಳಿತಪಕ್ಷ

- Advertisement -
- Advertisement -

ನಾಮನಿರ್ದೇಶಿತ ಸದಸ್ಯರಾದ ರಾಕೇಶ್ ಸಿನ್ಹಾ, ರಾಮ್ ಶಕಲ್, ಸೋನಾಲ್ ಮಾನ್ಸಿಂಗ್ ಮತ್ತು ಮಹೇಶ್ ಜೇಠ್ಮಲಾನಿ ತಮ್ಮ ಅವಧಿಯನ್ನು ಪೂರ್ಣಗೊಂಡ ನಂತರ, ರಾಜ್ಯಸಭೆಯಲ್ಲಿ ಬಿಜೆಪಿಯ ಬಲವು ಬಹುಮತಕ್ಕಿಂತ ಕಡಿಮೆಯಾಗಿದೆ.

ನಿವೃತ್ತರಾದ ಎಲ್ಲ ನಾಲ್ವರನ್ನು ಆಡಳಿತ ಪಕ್ಷದ ಸಲಹೆಯ ಮೇರೆಗೆ ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಸದಸ್ಯರಾಗಿ ಆಯ್ಕೆ ಮಾಡಿದ್ದರು; ನಂತರ ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದೊಂದಿಗೆ ಅವರು ಮೈತ್ರಿ ಮಾಡಿಕೊಂಡರು.

ಅವರ ನಿವೃತ್ತಿಯು ಬಿಜೆಪಿಯ ಬಲವನ್ನು 86ಕ್ಕೆ ಮತ್ತು ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಬಲವನ್ನು 101ಕ್ಕೆ ಇಳಿಸುತ್ತದೆ. ಇದು 245 ಸದಸ್ಯರ ಸದನದಲ್ಲಿ ಪ್ರಸ್ತುತ ಬಹುಮತದ 113 ಕ್ಕಿಂತ ಕಡಿಮೆಯಾಗಿದೆ.

ರಾಜ್ಯಸಭೆಯ ಪ್ರಸ್ತುತ ಸಂಖ್ಯಾಬಲ 225

ಕಾಂಗ್ರೆಸ್ ನೇತೃತ್ವದ ಇಂಡಿಯಾ ಬಣವು 87, ಅದರಲ್ಲಿ ಕಾಂಗ್ರೆಸ್ 26, ಬಂಗಾಳದ ಆಡಳಿತಾರೂಢ ತೃಣಮೂಲ 13, ದೆಹಲಿ ಮತ್ತು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಮತ್ತು ಡಿಎಂಕೆ ತಲಾ 10 ಸದಸ್ಯರನ್ನು ಹೊಂದಿದೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಬಿಆರ್‌ಎಸ್‌ನಂತಹ ಬಿಜೆಪಿ ಅಥವಾ ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದ ಪಕ್ಷಗಳು ನಾಮನಿರ್ದೇಶಿತ ಸಂಸದರು ಮತ್ತು ಸ್ವತಂತ್ರ ಸದಸ್ಯರುದ್ದಾರೆ.

ಸಂಖ್ಯೆ ಕಡಿಮೆಯಿಂದ ಬಿಜೆಪಿ ಮೇಲಿನ ಪರಿಣಾಮವೇನು?

ಇದರರ್ಥ ಸರ್ಕಾರವು ಈಗ ಎನ್‌ಡಿಎಯೇತರ ಪಕ್ಷಗಳ ಮೇಲೆ ಅವಲಂಬಿತವಾಗಿದೆ; ಮೇಲ್ಮನೆಯಲ್ಲಿ ಮಸೂದೆಗಳನ್ನು ಅಂಗೀಕರಿಸಲು ತಮಿಳುನಾಡಿನ ಮಾಜಿ ಮಿತ್ರಪಕ್ಷ ಎಐಎಡಿಎಂಕೆ ಮತ್ತು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಪಕ್ಷಗಳ ಮೇಲೆ ಅವಲಂಬಿತವಾಗಬೇಕಿದೆ. ಸದ್ಯಕ್ಕೆ, ಎನ್‌ಡಿಎ ಪಕ್ಷಗಳ ಸಂಸದರ 15 ಮತಗಳನ್ನು ಬಿಜೆಪಿ ಪಡೆದುಕೊಳ್ಳಬಹುದು ಎಂದು ಭಾವಿಸಿದರೆ, ಮಸೂದೆಗಳನ್ನು ಜಾರಿಗೆ ತರಲು ಅದರ ಪರವಾಗಿ ಕನಿಷ್ಠ 13 ಹೆಚ್ಚುವರಿ ಮತಗಳು ಬೇಕಾಗುತ್ತವೆ.

ವೈಎಸ್‌ಆರ್‌ಸಿಪಿ (11) ಮತ್ತು ಎಐಎಡಿಎಂಕೆ (4) ಬಿಜೆಪಿಯ ಎರಡು ಸ್ಪಷ್ಟವಾದ ‘ಮಿತ್ರಪಕ್ಷಗಳು’, ಚುನಾವಣೆಗೆ ತಿಂಗಳುಗಳ ಮೊದಲು ಕಳೆದ ವರ್ಷ ಡಿಸೆಂಬರ್‌ನಲ್ಲಿ ವಿಭಜನೆಯಾದಾಗಿನಿಂದ ಅದರ ಸಂಬಂಧವು ಹದಗೆಟ್ಟಿದೆ.

ಜಗನ್ ಮೋಹನ್ ರೆಡ್ಡಿಯವರ ವೈಎಸ್‌ಆರ್‌ಸಿಪಿಯು ಈ ಹಿಂದೆ ಬಿಜೆಪಿಗೆ ವಿಷಯಾಧಾರಿತ ಬೆಂಬಲವನ್ನು ನೀಡಿದೆ. ಆದ್ದರಿಂದ, ಮೋದಿಯವರ ಪಕ್ಷಕ್ಕೆ ಕನಿಷ್ಠ 11 ಮತಗಳು ಖಚಿತವೆಂದು ತೋರುತ್ತದೆ. ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿ ಕೂಡ ಇದೇ ರೀತಿಯ ಬೆಂಬಲವನ್ನು ನೀಡಿತ್ತು. ಆದರೆ, ಮೇ-ಜೂನ್ ರಾಜ್ಯ ಚುನಾವಣೆಯಲ್ಲಿ ಬಿಜೆಪಿಯಿಂದ ಸೋಲಿಸಲ್ಪಟ್ಟಿದ್ದರಿಂದ ಬಿಜೆಪಿಯಿಂದ ದೂರ ಸರಿದಿದೆ.

ಎಐಎಡಿಎಂಕೆ ಬೆಂಬಲ ನೀಡಲು ಇಷ್ಟವಿಲ್ಲದಿದ್ದರೆ ಮತ್ತು ನವೀನ್ ಪಟ್ನಾಯಕ್ ಅವರ ಬಿಜೆಡಿ ತಿರುಗಿ ಬಿದ್ದರೆ, ಬಿಜೆಪಿ ನಾಮನಿರ್ದೇಶಿತ ಸದಸ್ಯರ ಮತಗಳತ್ತ ತಿರುಗುತ್ತದೆ. ರಾಜ್ಯಸಭೆಯಲ್ಲಿ ಒಟ್ಟು 12 ನಾಮನಿರ್ದೇಶಿತ ಸದಸ್ಯರಿದ್ದಾರೆ. ಅವರು ಪಕ್ಷೇತರರಾದರೂಸರ್ಕಾರದಿಂದ ಆಯ್ಕೆಯಾಗಿರುವುದರಿಂದ, ಪ್ರಾಯೋಗಿಕವಾಗಿ ಅವರು ಆಡಳಿತ ಪಕ್ಷವನ್ನು ಬೆಂಬಲಿಸುತ್ತಾರೆ.

ನಾಲ್ವರು ಸಂಸದರನ್ನು ಹೊಂದಿರುವ ಬಿಆರ್‌ಎಸ್‌ನಂತಹ ಅಲಿಪ್ತ ಪಕ್ಷಗಳು ಮತ್ತು ಸ್ವತಂತ್ರರು ಸಹ ಬಿಜೆಪಿ ಜತೆಗೆ ಕೈಜೋಡಿಸಬಹುದು.

ರಾಜ್ಯಸಭೆಯ ಖಾಲಿ ಸ್ಥಾನಗಳೆಷ್ಟು?

ಪ್ರಸ್ತುತ ಒಟ್ಟು 20 ಸ್ಥಾನಗಳು ಖಾಲಿ ಇವೆ, ಇದರಲ್ಲಿ ಚುನಾಯಿತ ಸದಸ್ಯರು ಹೊಂದಿರುವ 11 ಸ್ಥಾನಗಳಿಗೆ ಈ ವರ್ಷ ಚುನಾವಣೆ ನಿರೀಕ್ಷಿಸಲಾಗಿದೆ. ಇವುಗಳಲ್ಲಿ ಮಹಾರಾಷ್ಟ್ರ, ಅಸ್ಸಾಂ ಮತ್ತು ಬಿಹಾರದಲ್ಲಿ ತಲಾ ಎರಡು ಮತ್ತು ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ತ್ರಿಪುರದಲ್ಲಿ ತಲಾ ಒಂದು ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ.

ಬಿಜೆಪಿ ನೇತೃತ್ವದ ಮೈತ್ರಿಕೂಟವು ಅಸ್ಸಾಂ, ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತ್ರಿಪುರಾದಿಂದ ಏಳು ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಅದು ಮಹಾರಾಷ್ಟ್ರದಲ್ಲಿ ತನ್ನ ಮತಗಳನ್ನುಕ್ರೋಢೀಕರಿಸಲು ಸಾಧ್ಯವಾದರೆ, ಅದು ಅಲ್ಲಿಂದ ಇನ್ನೆರಡು ಸ್ಥಾನಗಳನ್ನು ಗೆಲ್ಲುತ್ತದೆ.

ಇದು ಬಿಜೆಪಿಗೆ ಒಂಬತ್ತು ಹೆಚ್ಚುವರಿ ಸ್ಥಾನಗಳನ್ನು ನೀಡಬಹುದು. ಅದು ಗೆದ್ದರೆ, ನಾಮನಿರ್ದೇಶಿತ ಸದಸ್ಯರ ಮತಗಳು ಮತ್ತು ವೈಎಸ್‌ಆರ್‌ಸಿಪಿಯ ಮತಗಳೊಂದಿಗೆ, ಅದು ಬಹುಮತದ ಅಂಕಿಯನ್ನು ದಾಟಲು ಸಾಧ್ಯವಾಗುತ್ತದೆ.

ಜಮ್ಮು ಮತ್ತು ಕಾಶ್ಮೀರದಿಂದ ನಾಲ್ಕು ಸ್ಥಾನಗಳು ಖಾಲಿಯಿದ್ದು, ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಸೆಪ್ಟೆಂಬರ್ 30 ರೊಳಗೆ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಕಳೆದ ವರ್ಷ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ತೆಲಂಗಾಣ ಕ್ಷೇತ್ರವನ್ನು ಗೆಲ್ಲುವ ಸಾಧ್ಯತೆಯಿದೆ.

ಈ ಚುನಾವಣೆಯು ನಿರ್ಣಾಯಕವಾಗಿದೆ. ಏಕೆಂದರೆ, ಇದು ಪಕ್ಷಕ್ಕೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಸಾಕಷ್ಟು ಮತಗಳನ್ನು ನೀಡುತ್ತದೆ. ನಂತರ ಉಭಯ ಸದನಗಳಲ್ಲಿ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನವನ್ನು ಹಿಡಿಯಲಿದೆ.

ಇದನ್ನೂ ಓದಿ; ‘ರಾಜಕೀಯ ಎಂದಿಗೂ ಅಕ್ಷರಶಃ ಯುದ್ಧಭೂಮಿಯಾಗಬಾರದು..’; ಟ್ರಂಪ್ ಹತ್ಯೆ ಪ್ರಯತ್ನದ ಕುರಿತು ಬಿಡೆನ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...