Homeಮುಖಪುಟರಾಜ್ಯಸಭೆಯಲ್ಲಿ 101ಕ್ಕೆ ಕುಸಿದ ಎನ್‌ಡಿಎ ಸಂಖ್ಯೆ; ಮೇಲ್ಮನೆಯಲ್ಲಿ ಬಹುಮತ ಕಳೆದುಕೊಂಡ ಆಡಳಿತಪಕ್ಷ

ರಾಜ್ಯಸಭೆಯಲ್ಲಿ 101ಕ್ಕೆ ಕುಸಿದ ಎನ್‌ಡಿಎ ಸಂಖ್ಯೆ; ಮೇಲ್ಮನೆಯಲ್ಲಿ ಬಹುಮತ ಕಳೆದುಕೊಂಡ ಆಡಳಿತಪಕ್ಷ

- Advertisement -
- Advertisement -

ನಾಮನಿರ್ದೇಶಿತ ಸದಸ್ಯರಾದ ರಾಕೇಶ್ ಸಿನ್ಹಾ, ರಾಮ್ ಶಕಲ್, ಸೋನಾಲ್ ಮಾನ್ಸಿಂಗ್ ಮತ್ತು ಮಹೇಶ್ ಜೇಠ್ಮಲಾನಿ ತಮ್ಮ ಅವಧಿಯನ್ನು ಪೂರ್ಣಗೊಂಡ ನಂತರ, ರಾಜ್ಯಸಭೆಯಲ್ಲಿ ಬಿಜೆಪಿಯ ಬಲವು ಬಹುಮತಕ್ಕಿಂತ ಕಡಿಮೆಯಾಗಿದೆ.

ನಿವೃತ್ತರಾದ ಎಲ್ಲ ನಾಲ್ವರನ್ನು ಆಡಳಿತ ಪಕ್ಷದ ಸಲಹೆಯ ಮೇರೆಗೆ ಅಧ್ಯಕ್ಷೆ ದ್ರೌಪದಿ ಮುರ್ಮು ಅವರು ಸದಸ್ಯರಾಗಿ ಆಯ್ಕೆ ಮಾಡಿದ್ದರು; ನಂತರ ಔಪಚಾರಿಕವಾಗಿ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದೊಂದಿಗೆ ಅವರು ಮೈತ್ರಿ ಮಾಡಿಕೊಂಡರು.

ಅವರ ನಿವೃತ್ತಿಯು ಬಿಜೆಪಿಯ ಬಲವನ್ನು 86ಕ್ಕೆ ಮತ್ತು ಪಕ್ಷದ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಬಲವನ್ನು 101ಕ್ಕೆ ಇಳಿಸುತ್ತದೆ. ಇದು 245 ಸದಸ್ಯರ ಸದನದಲ್ಲಿ ಪ್ರಸ್ತುತ ಬಹುಮತದ 113 ಕ್ಕಿಂತ ಕಡಿಮೆಯಾಗಿದೆ.

ರಾಜ್ಯಸಭೆಯ ಪ್ರಸ್ತುತ ಸಂಖ್ಯಾಬಲ 225

ಕಾಂಗ್ರೆಸ್ ನೇತೃತ್ವದ ಇಂಡಿಯಾ ಬಣವು 87, ಅದರಲ್ಲಿ ಕಾಂಗ್ರೆಸ್ 26, ಬಂಗಾಳದ ಆಡಳಿತಾರೂಢ ತೃಣಮೂಲ 13, ದೆಹಲಿ ಮತ್ತು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷ ಮತ್ತು ಡಿಎಂಕೆ ತಲಾ 10 ಸದಸ್ಯರನ್ನು ಹೊಂದಿದೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಬಿಆರ್‌ಎಸ್‌ನಂತಹ ಬಿಜೆಪಿ ಅಥವಾ ಕಾಂಗ್ರೆಸ್‌ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದ ಪಕ್ಷಗಳು ನಾಮನಿರ್ದೇಶಿತ ಸಂಸದರು ಮತ್ತು ಸ್ವತಂತ್ರ ಸದಸ್ಯರುದ್ದಾರೆ.

ಸಂಖ್ಯೆ ಕಡಿಮೆಯಿಂದ ಬಿಜೆಪಿ ಮೇಲಿನ ಪರಿಣಾಮವೇನು?

ಇದರರ್ಥ ಸರ್ಕಾರವು ಈಗ ಎನ್‌ಡಿಎಯೇತರ ಪಕ್ಷಗಳ ಮೇಲೆ ಅವಲಂಬಿತವಾಗಿದೆ; ಮೇಲ್ಮನೆಯಲ್ಲಿ ಮಸೂದೆಗಳನ್ನು ಅಂಗೀಕರಿಸಲು ತಮಿಳುನಾಡಿನ ಮಾಜಿ ಮಿತ್ರಪಕ್ಷ ಎಐಎಡಿಎಂಕೆ ಮತ್ತು ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್‌ಆರ್ ಕಾಂಗ್ರೆಸ್ ಪಕ್ಷಗಳ ಮೇಲೆ ಅವಲಂಬಿತವಾಗಬೇಕಿದೆ. ಸದ್ಯಕ್ಕೆ, ಎನ್‌ಡಿಎ ಪಕ್ಷಗಳ ಸಂಸದರ 15 ಮತಗಳನ್ನು ಬಿಜೆಪಿ ಪಡೆದುಕೊಳ್ಳಬಹುದು ಎಂದು ಭಾವಿಸಿದರೆ, ಮಸೂದೆಗಳನ್ನು ಜಾರಿಗೆ ತರಲು ಅದರ ಪರವಾಗಿ ಕನಿಷ್ಠ 13 ಹೆಚ್ಚುವರಿ ಮತಗಳು ಬೇಕಾಗುತ್ತವೆ.

ವೈಎಸ್‌ಆರ್‌ಸಿಪಿ (11) ಮತ್ತು ಎಐಎಡಿಎಂಕೆ (4) ಬಿಜೆಪಿಯ ಎರಡು ಸ್ಪಷ್ಟವಾದ ‘ಮಿತ್ರಪಕ್ಷಗಳು’, ಚುನಾವಣೆಗೆ ತಿಂಗಳುಗಳ ಮೊದಲು ಕಳೆದ ವರ್ಷ ಡಿಸೆಂಬರ್‌ನಲ್ಲಿ ವಿಭಜನೆಯಾದಾಗಿನಿಂದ ಅದರ ಸಂಬಂಧವು ಹದಗೆಟ್ಟಿದೆ.

ಜಗನ್ ಮೋಹನ್ ರೆಡ್ಡಿಯವರ ವೈಎಸ್‌ಆರ್‌ಸಿಪಿಯು ಈ ಹಿಂದೆ ಬಿಜೆಪಿಗೆ ವಿಷಯಾಧಾರಿತ ಬೆಂಬಲವನ್ನು ನೀಡಿದೆ. ಆದ್ದರಿಂದ, ಮೋದಿಯವರ ಪಕ್ಷಕ್ಕೆ ಕನಿಷ್ಠ 11 ಮತಗಳು ಖಚಿತವೆಂದು ತೋರುತ್ತದೆ. ಒಡಿಶಾದ ಮಾಜಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಬಿಜೆಡಿ ಕೂಡ ಇದೇ ರೀತಿಯ ಬೆಂಬಲವನ್ನು ನೀಡಿತ್ತು. ಆದರೆ, ಮೇ-ಜೂನ್ ರಾಜ್ಯ ಚುನಾವಣೆಯಲ್ಲಿ ಬಿಜೆಪಿಯಿಂದ ಸೋಲಿಸಲ್ಪಟ್ಟಿದ್ದರಿಂದ ಬಿಜೆಪಿಯಿಂದ ದೂರ ಸರಿದಿದೆ.

ಎಐಎಡಿಎಂಕೆ ಬೆಂಬಲ ನೀಡಲು ಇಷ್ಟವಿಲ್ಲದಿದ್ದರೆ ಮತ್ತು ನವೀನ್ ಪಟ್ನಾಯಕ್ ಅವರ ಬಿಜೆಡಿ ತಿರುಗಿ ಬಿದ್ದರೆ, ಬಿಜೆಪಿ ನಾಮನಿರ್ದೇಶಿತ ಸದಸ್ಯರ ಮತಗಳತ್ತ ತಿರುಗುತ್ತದೆ. ರಾಜ್ಯಸಭೆಯಲ್ಲಿ ಒಟ್ಟು 12 ನಾಮನಿರ್ದೇಶಿತ ಸದಸ್ಯರಿದ್ದಾರೆ. ಅವರು ಪಕ್ಷೇತರರಾದರೂಸರ್ಕಾರದಿಂದ ಆಯ್ಕೆಯಾಗಿರುವುದರಿಂದ, ಪ್ರಾಯೋಗಿಕವಾಗಿ ಅವರು ಆಡಳಿತ ಪಕ್ಷವನ್ನು ಬೆಂಬಲಿಸುತ್ತಾರೆ.

ನಾಲ್ವರು ಸಂಸದರನ್ನು ಹೊಂದಿರುವ ಬಿಆರ್‌ಎಸ್‌ನಂತಹ ಅಲಿಪ್ತ ಪಕ್ಷಗಳು ಮತ್ತು ಸ್ವತಂತ್ರರು ಸಹ ಬಿಜೆಪಿ ಜತೆಗೆ ಕೈಜೋಡಿಸಬಹುದು.

ರಾಜ್ಯಸಭೆಯ ಖಾಲಿ ಸ್ಥಾನಗಳೆಷ್ಟು?

ಪ್ರಸ್ತುತ ಒಟ್ಟು 20 ಸ್ಥಾನಗಳು ಖಾಲಿ ಇವೆ, ಇದರಲ್ಲಿ ಚುನಾಯಿತ ಸದಸ್ಯರು ಹೊಂದಿರುವ 11 ಸ್ಥಾನಗಳಿಗೆ ಈ ವರ್ಷ ಚುನಾವಣೆ ನಿರೀಕ್ಷಿಸಲಾಗಿದೆ. ಇವುಗಳಲ್ಲಿ ಮಹಾರಾಷ್ಟ್ರ, ಅಸ್ಸಾಂ ಮತ್ತು ಬಿಹಾರದಲ್ಲಿ ತಲಾ ಎರಡು ಮತ್ತು ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಮತ್ತು ತ್ರಿಪುರದಲ್ಲಿ ತಲಾ ಒಂದು ಸ್ಥಾನಗಳಿಗೆ ಚುನಾವಣೆ ನಡೆಯಬೇಕಾಗಿದೆ.

ಬಿಜೆಪಿ ನೇತೃತ್ವದ ಮೈತ್ರಿಕೂಟವು ಅಸ್ಸಾಂ, ಬಿಹಾರ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತ್ರಿಪುರಾದಿಂದ ಏಳು ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಅದು ಮಹಾರಾಷ್ಟ್ರದಲ್ಲಿ ತನ್ನ ಮತಗಳನ್ನುಕ್ರೋಢೀಕರಿಸಲು ಸಾಧ್ಯವಾದರೆ, ಅದು ಅಲ್ಲಿಂದ ಇನ್ನೆರಡು ಸ್ಥಾನಗಳನ್ನು ಗೆಲ್ಲುತ್ತದೆ.

ಇದು ಬಿಜೆಪಿಗೆ ಒಂಬತ್ತು ಹೆಚ್ಚುವರಿ ಸ್ಥಾನಗಳನ್ನು ನೀಡಬಹುದು. ಅದು ಗೆದ್ದರೆ, ನಾಮನಿರ್ದೇಶಿತ ಸದಸ್ಯರ ಮತಗಳು ಮತ್ತು ವೈಎಸ್‌ಆರ್‌ಸಿಪಿಯ ಮತಗಳೊಂದಿಗೆ, ಅದು ಬಹುಮತದ ಅಂಕಿಯನ್ನು ದಾಟಲು ಸಾಧ್ಯವಾಗುತ್ತದೆ.

ಜಮ್ಮು ಮತ್ತು ಕಾಶ್ಮೀರದಿಂದ ನಾಲ್ಕು ಸ್ಥಾನಗಳು ಖಾಲಿಯಿದ್ದು, ಸುಪ್ರೀಂ ಕೋರ್ಟ್ ಆದೇಶಕ್ಕೆ ಅನುಗುಣವಾಗಿ ಸೆಪ್ಟೆಂಬರ್ 30 ರೊಳಗೆ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಕಳೆದ ವರ್ಷ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ತೆಲಂಗಾಣ ಕ್ಷೇತ್ರವನ್ನು ಗೆಲ್ಲುವ ಸಾಧ್ಯತೆಯಿದೆ.

ಈ ಚುನಾವಣೆಯು ನಿರ್ಣಾಯಕವಾಗಿದೆ. ಏಕೆಂದರೆ, ಇದು ಪಕ್ಷಕ್ಕೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಪಡೆಯಲು ಸಾಕಷ್ಟು ಮತಗಳನ್ನು ನೀಡುತ್ತದೆ. ನಂತರ ಉಭಯ ಸದನಗಳಲ್ಲಿ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನವನ್ನು ಹಿಡಿಯಲಿದೆ.

ಇದನ್ನೂ ಓದಿ; ‘ರಾಜಕೀಯ ಎಂದಿಗೂ ಅಕ್ಷರಶಃ ಯುದ್ಧಭೂಮಿಯಾಗಬಾರದು..’; ಟ್ರಂಪ್ ಹತ್ಯೆ ಪ್ರಯತ್ನದ ಕುರಿತು ಬಿಡೆನ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...