Homeಆರೋಗ್ಯಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಎನ್‌ಡಿಎಚ್‌ಎಂ ಅಡಿಯಲ್ಲಿ ಜನರಿಂದ ಸಂಗ್ರಹಿಸಲಾದ ಗೌಪ್ಯ ಆರೋಗ್ಯ ದತ್ತಾಂಶವನ್ನು ಕಾಪಾಡಲು, ದತ್ತಾಂಶ ಗೌಪ್ಯತೆ ಸಂರಕ್ಷಣೆಗಾಗಿ ಮಂಡಳಿ ಅನ್ವಯವಾಗುವ ಕಾನೂನು ಮತ್ತು ಕನಿಷ್ಠ ಮಾನದಂಡಗಳನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

- Advertisement -
- Advertisement -

ಕೇಂದ್ರದ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಪಡೆಯಲು ಶೇಕಡಾ 60 ರಷ್ಟು ಜನರು ಒಲವು ತೋರಿದ್ದಾರೆ ಎಂದು ಸರ್ವೆ ತಿಳಿಸಿದೆ. ಆದರೆ ಆರೋಗ್ಯ ಮತ್ತು ವೈದ್ಯಕೀಯ ದಾಖಲೆಗಳನ್ನು ಬಿಟ್ಟು ಸೂಕ್ಷ್ಮವಾದ ವೈಯಕ್ತಿಕ ಡೇಟಾವನ್ನು ಹಂಚಿಕೊಳ್ಳಲು ಬಯಸುವುದಿಲ್ಲ ಎಂದು ಇತ್ತೀಚಿನ ಸಮೀಕ್ಷೆಯೊಂದು ತಿಳಿಸಿದೆ.

ಮಹತ್ವಾಕಾಂಕ್ಷೆಯ ಎನ್‌ಡಿಎಚ್‌ಎಂ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದ್ದರು.

ಸಮುದಾಯ ಸಾಮಾಜಿಕ ಮಾಧ್ಯಮ ವೇದಿಕೆಯಾದ ಲೋಕಲ್ ಸರ್ಕಲ್ಸ್ ಈ ಸಮೀಕ್ಷೆಯನ್ನು ನಡೆಸಿದ್ದು, ಇದರಲ್ಲಿ ಡಿಜಿಟಲ್ ಹೆಲ್ತ್ ಐಡಿ ರಚಿಸಬೇಕೆ ಎಂಬ ಪ್ರಶ್ನೆಗೆ ಸುಮಾರು 9,000 ಜನರು ಪ್ರತಿಕ್ರಿಯಿಸಿದ್ದಾರೆ. ಇದರ ಪ್ರಕಾರ ಶೇಕಡಾ 59 ರಷ್ಟು ಜನರು ಡಿಜಿಟಲ್ ಹೆಲ್ತ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಪಡೆಯಲು ಬಯಸಿದ್ದಾರೆ. ಶೇಕಡಾ 23 ಪ್ರತಿಶತದಷ್ಟು ಜನರು ಆರೋಗ್ಯ ID ಯನ್ನು ರಚಿಸಲು ಬೆಂಬಲಿಸಿದ್ದಾರೆ. ಶೇಕಡಾ 18 ರಷ್ಟು ಜನರು ಇದನ್ನು ರಚಿಸಬಾರದು ಎಂದಿದ್ದಾರೆ.

ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ಎಲ್ಲಾ ಭಾರತೀಯರಿಗಾಗಿ ಡಿಜಿಟಲ್ ಹೆಲ್ತ್ ಐಡಿಗಳನ್ನು ರಚಿಸಲು ಪ್ರಸ್ತಾಪಿಸಿರುವ ರಾಷ್ಟ್ರೀಯ ಆರೋಗ್ಯ ದತ್ತಾಂಶ ನಿರ್ವಹಣಾ ನೀತಿಗೆ ಸಂಬಂಧಿಸಿ ಲೋಕಲ್ ಸರ್ಕಲ್ಸ್ ನೀಡಿದ್ದ ನಾಲ್ಕು ಪ್ರಶ್ನೆಗಳಿಗೆ ಸುಮಾರು 34,000 ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.

ಇನ್ನು ಡಿಜಿಟಲ್ ಹೆಲ್ತ್ ಐಡಿ ಡೇಟಾವನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಬೇಕು ಎಂಬ ಪ್ರಶ್ನೆಗೆ ಸುಮಾರು 8,600 ಪ್ರತಿಕ್ರಿಯೆಗಳು ಬಂದಿದ್ದು,  ಇದರಲ್ಲಿ ಶೇಕಡಾ 57 ರಷ್ಟು ಜನರು ಡೇಟಾ ಸಂಗ್ರಹಣೆಯನ್ನು ಆರೋಗ್ಯ ಮಾಹಿತಿಗಾಗಿ ಮಾತ್ರ ಮಾಡಬೇಕು ಮತ್ತು ಅದು ಕೇಂದ್ರ ಮಟ್ಟದಲ್ಲಿ ಮಾಡಬೇಕು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳನ್ನು ಕೇಂದ್ರದ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಮಾಡುವವರಿಗೆ ಸಲ್ಲಿಸಲಾಗುವುದು. ಇದರಿಂದ ಜನರ ಅಭಿಪ್ರಾಯ ಸರ್ಕಾರಕ್ಕೆ ತಲುಪಲಿದೆ ಎನ್ನುತ್ತಾರೆ ಲೋಕಲ್ ಸರ್ಕಲ್ಸ್‌ನ ಜನರಲ್ ಮ್ಯಾನೇಜರ್ ಅಕ್ಷಯ್ ಗುಪ್ತಾ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ : ಪ್ರೊ.ಪಾರ್ಥೋಸಾರಥಿ ರಾಯ್ ಗೆ NIA ನೋಟೀಸ್

ವ್ಯಕ್ತಿಯ ವೈಯಕ್ತಿಕ ಡೇಟಾವನ್ನು ಆತನ ಒಪ್ಪಿಗೆಯ ಮೇರೆಗೆ ಮಾತ್ರ ಸಂಗ್ರಹಿಸಬಹುದು. ಎನ್‌ಡಿಎಚ್‌ಎಂ ಅಡಿಯಲ್ಲಿ ಜನರಿಂದ ಸಂಗ್ರಹಿಸಲಾದ ಗೌಪ್ಯ ಆರೋಗ್ಯ ದತ್ತಾಂಶವನ್ನು ಕಾಪಾಡಲು, ದತ್ತಾಂಶ ಗೌಪ್ಯತೆ ಸಂರಕ್ಷಣೆಗಾಗಿ ಮಂಡಳಿ ಅನ್ವಯವಾಗುವ ಕಾನೂನು ಮತ್ತು ಕನಿಷ್ಠ ಮಾನದಂಡಗಳನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ), ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ ಅನುಷ್ಠಾನದ ಜವಾಬ್ದಾರಿಯನ್ನು ಹೊಂದಿದೆ. ಜೊತೆಗೆ ದೇಶದಲ್ಲಿ ಎನ್‌ಡಿಎಚ್‌ಎಂ ವಿನ್ಯಾಸಗೊಳಿಸಲು ಅದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದೆ.

ಸರ್ಕಾರದ ಪ್ರಸ್ತಾವನೆ ಪ್ರಕಾರ, ಎನ್‌ಡಿಎಚ್‌ಎಂಗಾಗಿ ದಾಖಲಾದ ಪ್ರತಿಯೊಬ್ಬರೂ ಆರೋಗ್ಯ ಐಡಿಯನ್ನು ಉಚಿತವಾಗಿ ಪಡೆಯುತ್ತಾರೆ ಮತ್ತು ತಮ್ಮ ವೈಯಕ್ತಿಕ ಡೇಟಾದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿರುತ್ತಾರೆ ಎಂದು ತಿಳಿಸಲಾಗಿದೆ.

ಸಾರ್ವಜನಿಕರಿಂದ ಪ್ರತಿಕ್ರಿಯೆಗಳು ಮತ್ತು ಪ್ರತಿಕ್ರಿಯೆಗಳನ್ನು ಕೋರಿ ಈ ದಾಖಲೆಯನ್ನು ಎನ್‌ಡಿಎಚ್‌ಎಂನ ಅಧಿಕೃತ ವೆಬ್‌ಸೈಟ್‌ನಲ್ಲಿ ಇರಿಸಲಾಗಿದೆ. ಸಲಹೆ, ಸೂಚನೆಗಳನ್ನು ನೀಡಲು ಸೆಪ್ಟೆಂಬರ್ 21 ರವರೆಗೆ ಸಮಯ ನೀಡಿದೆ.


ಇದನ್ನೂ ಓದಿ: ಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...