Homeಆರೋಗ್ಯಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಡಿಜಿಟಲ್ ಹೆಲ್ತ್ ಐಡಿಗೆ 60% ಜನ ಬೆಂಬಲ: ವೈಯಕ್ತಿಕ ಡೇಟಾ ಹಂಚಿಕೊಳ್ಳಲು ಹಿಂದೇಟು

ಎನ್‌ಡಿಎಚ್‌ಎಂ ಅಡಿಯಲ್ಲಿ ಜನರಿಂದ ಸಂಗ್ರಹಿಸಲಾದ ಗೌಪ್ಯ ಆರೋಗ್ಯ ದತ್ತಾಂಶವನ್ನು ಕಾಪಾಡಲು, ದತ್ತಾಂಶ ಗೌಪ್ಯತೆ ಸಂರಕ್ಷಣೆಗಾಗಿ ಮಂಡಳಿ ಅನ್ವಯವಾಗುವ ಕಾನೂನು ಮತ್ತು ಕನಿಷ್ಠ ಮಾನದಂಡಗಳನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

- Advertisement -
- Advertisement -

ಕೇಂದ್ರದ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಪಡೆಯಲು ಶೇಕಡಾ 60 ರಷ್ಟು ಜನರು ಒಲವು ತೋರಿದ್ದಾರೆ ಎಂದು ಸರ್ವೆ ತಿಳಿಸಿದೆ. ಆದರೆ ಆರೋಗ್ಯ ಮತ್ತು ವೈದ್ಯಕೀಯ ದಾಖಲೆಗಳನ್ನು ಬಿಟ್ಟು ಸೂಕ್ಷ್ಮವಾದ ವೈಯಕ್ತಿಕ ಡೇಟಾವನ್ನು ಹಂಚಿಕೊಳ್ಳಲು ಬಯಸುವುದಿಲ್ಲ ಎಂದು ಇತ್ತೀಚಿನ ಸಮೀಕ್ಷೆಯೊಂದು ತಿಳಿಸಿದೆ.

ಮಹತ್ವಾಕಾಂಕ್ಷೆಯ ಎನ್‌ಡಿಎಚ್‌ಎಂ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಘೋಷಿಸಿದ್ದರು.

ಸಮುದಾಯ ಸಾಮಾಜಿಕ ಮಾಧ್ಯಮ ವೇದಿಕೆಯಾದ ಲೋಕಲ್ ಸರ್ಕಲ್ಸ್ ಈ ಸಮೀಕ್ಷೆಯನ್ನು ನಡೆಸಿದ್ದು, ಇದರಲ್ಲಿ ಡಿಜಿಟಲ್ ಹೆಲ್ತ್ ಐಡಿ ರಚಿಸಬೇಕೆ ಎಂಬ ಪ್ರಶ್ನೆಗೆ ಸುಮಾರು 9,000 ಜನರು ಪ್ರತಿಕ್ರಿಯಿಸಿದ್ದಾರೆ. ಇದರ ಪ್ರಕಾರ ಶೇಕಡಾ 59 ರಷ್ಟು ಜನರು ಡಿಜಿಟಲ್ ಹೆಲ್ತ್ ಮಿಷನ್ ಕಾರ್ಯಕ್ರಮದಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಪಡೆಯಲು ಬಯಸಿದ್ದಾರೆ. ಶೇಕಡಾ 23 ಪ್ರತಿಶತದಷ್ಟು ಜನರು ಆರೋಗ್ಯ ID ಯನ್ನು ರಚಿಸಲು ಬೆಂಬಲಿಸಿದ್ದಾರೆ. ಶೇಕಡಾ 18 ರಷ್ಟು ಜನರು ಇದನ್ನು ರಚಿಸಬಾರದು ಎಂದಿದ್ದಾರೆ.

ಇದನ್ನೂ ಓದಿ: ವಿಎಚ್‌ಪಿ ಸದಸ್ಯನಿಗೆ ಬೆದರಿಕೆ ಕರೆ ಪ್ರಕರಣ: ಯುಪಿ ಪೊಲೀಸರಿಂದ ಮುಸ್ಲಿಂ ವ್ಯಕ್ತಿ ಬಂಧನ

ಎಲ್ಲಾ ಭಾರತೀಯರಿಗಾಗಿ ಡಿಜಿಟಲ್ ಹೆಲ್ತ್ ಐಡಿಗಳನ್ನು ರಚಿಸಲು ಪ್ರಸ್ತಾಪಿಸಿರುವ ರಾಷ್ಟ್ರೀಯ ಆರೋಗ್ಯ ದತ್ತಾಂಶ ನಿರ್ವಹಣಾ ನೀತಿಗೆ ಸಂಬಂಧಿಸಿ ಲೋಕಲ್ ಸರ್ಕಲ್ಸ್ ನೀಡಿದ್ದ ನಾಲ್ಕು ಪ್ರಶ್ನೆಗಳಿಗೆ ಸುಮಾರು 34,000 ಪ್ರತಿಕ್ರಿಯೆಗಳನ್ನು ಸ್ವೀಕರಿಸಿದೆ.

ಇನ್ನು ಡಿಜಿಟಲ್ ಹೆಲ್ತ್ ಐಡಿ ಡೇಟಾವನ್ನು ಹೇಗೆ ಮತ್ತು ಎಲ್ಲಿ ಸಂಗ್ರಹಿಸಬೇಕು ಎಂಬ ಪ್ರಶ್ನೆಗೆ ಸುಮಾರು 8,600 ಪ್ರತಿಕ್ರಿಯೆಗಳು ಬಂದಿದ್ದು,  ಇದರಲ್ಲಿ ಶೇಕಡಾ 57 ರಷ್ಟು ಜನರು ಡೇಟಾ ಸಂಗ್ರಹಣೆಯನ್ನು ಆರೋಗ್ಯ ಮಾಹಿತಿಗಾಗಿ ಮಾತ್ರ ಮಾಡಬೇಕು ಮತ್ತು ಅದು ಕೇಂದ್ರ ಮಟ್ಟದಲ್ಲಿ ಮಾಡಬೇಕು ಎಂದು ಹೇಳಿದ್ದಾರೆ.

ಸಮೀಕ್ಷೆಯ ಫಲಿತಾಂಶಗಳನ್ನು ಕೇಂದ್ರದ ರಾಷ್ಟ್ರೀಯ ಡಿಜಿಟಲ್ ಹೆಲ್ತ್ ಮಿಷನ್ ಅಡಿಯಲ್ಲಿ ಡಿಜಿಟಲ್ ಹೆಲ್ತ್ ಐಡಿ ಮಾಡುವವರಿಗೆ ಸಲ್ಲಿಸಲಾಗುವುದು. ಇದರಿಂದ ಜನರ ಅಭಿಪ್ರಾಯ ಸರ್ಕಾರಕ್ಕೆ ತಲುಪಲಿದೆ ಎನ್ನುತ್ತಾರೆ ಲೋಕಲ್ ಸರ್ಕಲ್ಸ್‌ನ ಜನರಲ್ ಮ್ಯಾನೇಜರ್ ಅಕ್ಷಯ್ ಗುಪ್ತಾ.

ಇದನ್ನೂ ಓದಿ: ಭೀಮಾ ಕೋರೆಗಾಂವ್ ಪ್ರಕರಣ : ಪ್ರೊ.ಪಾರ್ಥೋಸಾರಥಿ ರಾಯ್ ಗೆ NIA ನೋಟೀಸ್

ವ್ಯಕ್ತಿಯ ವೈಯಕ್ತಿಕ ಡೇಟಾವನ್ನು ಆತನ ಒಪ್ಪಿಗೆಯ ಮೇರೆಗೆ ಮಾತ್ರ ಸಂಗ್ರಹಿಸಬಹುದು. ಎನ್‌ಡಿಎಚ್‌ಎಂ ಅಡಿಯಲ್ಲಿ ಜನರಿಂದ ಸಂಗ್ರಹಿಸಲಾದ ಗೌಪ್ಯ ಆರೋಗ್ಯ ದತ್ತಾಂಶವನ್ನು ಕಾಪಾಡಲು, ದತ್ತಾಂಶ ಗೌಪ್ಯತೆ ಸಂರಕ್ಷಣೆಗಾಗಿ ಮಂಡಳಿ ಅನ್ವಯವಾಗುವ ಕಾನೂನು ಮತ್ತು ಕನಿಷ್ಠ ಮಾನದಂಡಗಳನ್ನು ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್‌ಎಚ್‌ಎ), ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನ ಆರೋಗ್ಯ ಯೋಜನೆ ಅನುಷ್ಠಾನದ ಜವಾಬ್ದಾರಿಯನ್ನು ಹೊಂದಿದೆ. ಜೊತೆಗೆ ದೇಶದಲ್ಲಿ ಎನ್‌ಡಿಎಚ್‌ಎಂ ವಿನ್ಯಾಸಗೊಳಿಸಲು ಅದರ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದೆ.

ಸರ್ಕಾರದ ಪ್ರಸ್ತಾವನೆ ಪ್ರಕಾರ, ಎನ್‌ಡಿಎಚ್‌ಎಂಗಾಗಿ ದಾಖಲಾದ ಪ್ರತಿಯೊಬ್ಬರೂ ಆರೋಗ್ಯ ಐಡಿಯನ್ನು ಉಚಿತವಾಗಿ ಪಡೆಯುತ್ತಾರೆ ಮತ್ತು ತಮ್ಮ ವೈಯಕ್ತಿಕ ಡೇಟಾದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿರುತ್ತಾರೆ ಎಂದು ತಿಳಿಸಲಾಗಿದೆ.

ಸಾರ್ವಜನಿಕರಿಂದ ಪ್ರತಿಕ್ರಿಯೆಗಳು ಮತ್ತು ಪ್ರತಿಕ್ರಿಯೆಗಳನ್ನು ಕೋರಿ ಈ ದಾಖಲೆಯನ್ನು ಎನ್‌ಡಿಎಚ್‌ಎಂನ ಅಧಿಕೃತ ವೆಬ್‌ಸೈಟ್‌ನಲ್ಲಿ ಇರಿಸಲಾಗಿದೆ. ಸಲಹೆ, ಸೂಚನೆಗಳನ್ನು ನೀಡಲು ಸೆಪ್ಟೆಂಬರ್ 21 ರವರೆಗೆ ಸಮಯ ನೀಡಿದೆ.


ಇದನ್ನೂ ಓದಿ: ಇದಕ್ಕೊಂದು ತಲೆಬರಹ ನೀಡುವಿರಾ? -ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...