Homeಸಿನಿಮಾಕ್ರೀಡೆಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

ಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

- Advertisement -
- Advertisement -

| ಸರೋವರ್ ಬೆಂಕೀಕೆರೆ |

ಜೂನ್ 30 ರಂದು ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ತಂಡದ ನಡುವಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಕೇಸರಿ ಬಣ್ಣದ ಹೊಸ ಉಡುಪನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (BCCI) ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದೀಗ ಸಮವಸ್ತ್ರ ಬದಲಾಗಿದ್ದು ಯಾಕೆ ಮತ್ತು ಕೇಸರಿ ಬಣ್ಣವೇ ಏಕೆ ಎಂದು ದೇಶದಾದ್ಯಂತ ಚರ್ಚೆ ಆಗುತ್ತಿದೆ‌. ಅಲ್ಲದೆ ಇದು Indian oil ಪೆಟ್ರೋಲ್ ಬಂಕ್ ನ ಸಮವಸ್ತ್ರದಂತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರಾಲ್ ಕೂಡ ಆಗುತ್ತಿದೆ.

ಒಂದೇ ಬಣ್ಣದ ಜರ್ಸಿ ಅನ್ನು ಹೊಂದಿರುವ ತಂಡಗಳು ಪಂದ್ಯವನ್ನು ಆಡುವಾಗ ಬಣ್ಣದ ಮಧ್ಯೆ ಗೊಂದಲಗಳು ಉಂಟಾದರೆ ಆ ನಿರ್ಧಿಷ್ಟ ಪಂದ್ಯಕ್ಕೆ ಒಂದು ತಂಡ ತನ್ನ ಜರ್ಸಿಯ ಬಣ್ಣವನ್ನು ಬದಲಾಯಿಸಬಹುದು ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತಿಳಿಸಿದೆ‌. ಈ ಟೂರ್ನಿಯಲ್ಲಿ ಸಧ್ಯ ಭಾರತ, ಶ್ರೀಲಂಕ, ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನೀಲಿ ಬಣ್ಣದ ಜರ್ಸಿಯನ್ನು ಹೊಂದಿದೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ಹಸಿರು ಬಣ್ಣದ ಜರ್ಸಿಯನ್ನು ಹೊಂದಿದೆ. ಈ ತಂಡಗಳ ಮಧ್ಯೆ ಪಂದ್ಯಗಳು ನಡೆದಾಗ ಬೇರೆ ಬಣ್ಣದ ಜರ್ಸಿಯನ್ನು ಬದಲಾಯಿಸಬಹುದಾಗಿದೆ. ICC ಬಣ್ಣದ ಆಯ್ಕೆಯ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ BCCI ಗೆ ನೀಡಿದೆ.

ಕೇಸರಿ ಬಣ್ಣವೇ ಯಾಕೆ?

ICC ನಿಯಾಮವಳಿ ಪ್ರಕಾರ ಒಂದೇ ಬಣ್ಣದ ಸಮವಸ್ತ್ರ ಇರುವ ತಂಡಗಳ ನಡುವೆ ಪಂದ್ಯ ನಡೆದಾಗ ತಂಡದ ಅಭಿಮಾನಿಗಳ ಇಚ್ಛೆಯನ್ನೂ ಗಮನದಲ್ಲಿಟ್ಟುಕೊಂಡು ನಿರ್ದಿಷ್ಟ ಪಂದ್ಯಕ್ಲೆ ಜರ್ಸಿಯ ಬಣ್ಣವನ್ನು ಬದಲಾಯಿಸಿಬಹುದಾಗಿದೆ. ಆದರೆ ಇದೀಗ ಕೇಸರಿ ಬಣ್ಣವೇ ಯಾಕೆ ಎನ್ನುವ ಪ್ರಶ್ನೆ ದೇಶದಾದ್ಯಂತ ಬಿಸಿ ಚರ್ಚೆ ಆಗುತ್ತಿದೆ ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುವ ಆಪಾದನೆಯೂ ಕೇಳಿ ಬರುತ್ತಿದೆ.

ಈ ಹಿಂದೆ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ತನ್ನ ಸಮವಸ್ತ್ರದ ಬಣ್ಣವನ್ನು ಬದಲಾವಣೆ ಮಾಡಿಕೊಂಡಿತ್ತು. ಹಾಗೂ ಬಾಂಗ್ಲಾದೇಶ ಮತ್ತು ಆಫ್ರಿಕಾ ತಂಡದ ನಡುವೆ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಹಸಿರು ಬಣ್ಣದ ಅಂಗಿಯ ಬದಲಾಗಿ ಹಳದಿ ಬಣ್ಣದ ಅಂಗಿ ಧರಿಸಿತ್ತು. ಆಫ್ರಿಕಾ ತಂಡ ನಿತ್ಯ ಬಳಸುತ್ತಿದ್ದ ಅಂಗಿಯಲ್ಲಿ ಹಳದಿಯೂ ಇತ್ತಾದ್ದರಿಂದ ಅದರದ್ದೇ ವಿರುದ್ಧ ಬಣ್ಣದ ಅಂಗಿಯನ್ನು ವಿನ್ಯಾಸ ಮಾಡಿಕೊಂಡಿತ್ತು. ಅಂದರೆ ಹಳದಿ ಬಣ್ಣ ಎದ್ದುಕಾಣುವಂತೆ. ಭಾರತ ತಂಡದ T-20 ವಿಶ್ವಕಪ್ ಪಂದ್ಯಕ್ಕೆ ನೀಲಿ ಬಣ್ಣದ ಅಂಗಿಗೆ ಕೇಸರಿ ಗೆರೆಗಳನ್ನು ಹೊಂದಿರುವ ಜರ್ಸಿಯನ್ನು ವಿನ್ಯಾಸಗೊಳಿಸಲಾಗಿತ್ತು. ಈಗಿನ ಪಂದ್ಯಕ್ಕೆ ಅದೇ ಎಳೆಯನ್ನು ಇಟ್ಟುಕೊಂಡು ಕೇಸರಿ ಎದ್ದು ಕಾಣುವಂತೆ ವಿನ್ಯಾಸ ಮಾಡಿದೆ ಹಾಗೂ ಮೂಲ ಬಣ್ಣವಾದ ನೀಲಿಯನ್ನು ಇಟ್ಟುಕೊಂಡಿದೆ ಹಾಗೂ ಹಿಂದಿನ ಕೇಸರಿ ಪಟ್ಟಿಯ ಅಂಗಿಯನ್ನು T-20 ಪಂದ್ಯಕ್ಕೆ ವಿನ್ಯಾಸ ಮಾಡಿದ್ದು ಅಮೇರಿಕಾದ ವಿನ್ಯಾಸಕಾರರು ಎಂದು ICC ನ ಮೂಲಗಳಯ ತಿಳಿಸಿವೆ‌.

ಒಟ್ಟಾರೆ ಹೊಸ ಉಡುಪಿನ ಬಣ್ಣವನ್ನು ಅಭಿಮಾನಿಗಳು ಅಷ್ಟಾಗಿ ಮೆಚ್ಚಿಕೊಂಡಿಲ್ಲ ಎಂಬುದನ್ನು ಸಮಾಜಿಕ ಜಾಲತಾಣದ ಪ್ರತಿಕ್ರಿಯೆಗಳು ತಿಳಿಸುತ್ತಿವೆ. ಅಲ್ಲದೆ ವಿರಾಟ್ ಕೋಹ್ಲಿ ಸಹ ನೀಲಿ ಜರ್ಸಿಯೇ ಚೆನ್ನಾಗಿ ಕಾಣುತ್ತಿತ್ತು ಎಂದು ಹೇಳಿದ್ದಾರೆ ಎಂದು ಸುದ್ಧಿಯಾಗಿದೆ. ಅಲ್ಲದೆ ಬಣ್ಣದ ಬದಲಾವಣೆಯಿಂದ ಸೋಲು ಗೆಲುವಿನ ಲೆಕ್ಕಾಚಾರವೂ ಶುರುವಾಗಿದೆ. ಏನೇ ಆದರೂ ಪಂದ್ಯದಲ್ಲಿ ಆಟಗಾರರ ಕಾರ್ಯಕ್ಷಮತೆ ಮುಖ್ಯವೇ ಹೊರತು ಬಣ್ಣವಲ್ಲ ಅನ್ನುವುದು ವಾಸ್ತವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...