Homeಸಿನಿಮಾಕ್ರೀಡೆಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

ಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

- Advertisement -
- Advertisement -

| ಸರೋವರ್ ಬೆಂಕೀಕೆರೆ |

ಜೂನ್ 30 ರಂದು ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ತಂಡದ ನಡುವಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಕೇಸರಿ ಬಣ್ಣದ ಹೊಸ ಉಡುಪನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (BCCI) ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದೀಗ ಸಮವಸ್ತ್ರ ಬದಲಾಗಿದ್ದು ಯಾಕೆ ಮತ್ತು ಕೇಸರಿ ಬಣ್ಣವೇ ಏಕೆ ಎಂದು ದೇಶದಾದ್ಯಂತ ಚರ್ಚೆ ಆಗುತ್ತಿದೆ‌. ಅಲ್ಲದೆ ಇದು Indian oil ಪೆಟ್ರೋಲ್ ಬಂಕ್ ನ ಸಮವಸ್ತ್ರದಂತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರಾಲ್ ಕೂಡ ಆಗುತ್ತಿದೆ.

ಒಂದೇ ಬಣ್ಣದ ಜರ್ಸಿ ಅನ್ನು ಹೊಂದಿರುವ ತಂಡಗಳು ಪಂದ್ಯವನ್ನು ಆಡುವಾಗ ಬಣ್ಣದ ಮಧ್ಯೆ ಗೊಂದಲಗಳು ಉಂಟಾದರೆ ಆ ನಿರ್ಧಿಷ್ಟ ಪಂದ್ಯಕ್ಕೆ ಒಂದು ತಂಡ ತನ್ನ ಜರ್ಸಿಯ ಬಣ್ಣವನ್ನು ಬದಲಾಯಿಸಬಹುದು ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತಿಳಿಸಿದೆ‌. ಈ ಟೂರ್ನಿಯಲ್ಲಿ ಸಧ್ಯ ಭಾರತ, ಶ್ರೀಲಂಕ, ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನೀಲಿ ಬಣ್ಣದ ಜರ್ಸಿಯನ್ನು ಹೊಂದಿದೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ಹಸಿರು ಬಣ್ಣದ ಜರ್ಸಿಯನ್ನು ಹೊಂದಿದೆ. ಈ ತಂಡಗಳ ಮಧ್ಯೆ ಪಂದ್ಯಗಳು ನಡೆದಾಗ ಬೇರೆ ಬಣ್ಣದ ಜರ್ಸಿಯನ್ನು ಬದಲಾಯಿಸಬಹುದಾಗಿದೆ. ICC ಬಣ್ಣದ ಆಯ್ಕೆಯ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ BCCI ಗೆ ನೀಡಿದೆ.

ಕೇಸರಿ ಬಣ್ಣವೇ ಯಾಕೆ?

ICC ನಿಯಾಮವಳಿ ಪ್ರಕಾರ ಒಂದೇ ಬಣ್ಣದ ಸಮವಸ್ತ್ರ ಇರುವ ತಂಡಗಳ ನಡುವೆ ಪಂದ್ಯ ನಡೆದಾಗ ತಂಡದ ಅಭಿಮಾನಿಗಳ ಇಚ್ಛೆಯನ್ನೂ ಗಮನದಲ್ಲಿಟ್ಟುಕೊಂಡು ನಿರ್ದಿಷ್ಟ ಪಂದ್ಯಕ್ಲೆ ಜರ್ಸಿಯ ಬಣ್ಣವನ್ನು ಬದಲಾಯಿಸಿಬಹುದಾಗಿದೆ. ಆದರೆ ಇದೀಗ ಕೇಸರಿ ಬಣ್ಣವೇ ಯಾಕೆ ಎನ್ನುವ ಪ್ರಶ್ನೆ ದೇಶದಾದ್ಯಂತ ಬಿಸಿ ಚರ್ಚೆ ಆಗುತ್ತಿದೆ ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುವ ಆಪಾದನೆಯೂ ಕೇಳಿ ಬರುತ್ತಿದೆ.

ಈ ಹಿಂದೆ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ತನ್ನ ಸಮವಸ್ತ್ರದ ಬಣ್ಣವನ್ನು ಬದಲಾವಣೆ ಮಾಡಿಕೊಂಡಿತ್ತು. ಹಾಗೂ ಬಾಂಗ್ಲಾದೇಶ ಮತ್ತು ಆಫ್ರಿಕಾ ತಂಡದ ನಡುವೆ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಹಸಿರು ಬಣ್ಣದ ಅಂಗಿಯ ಬದಲಾಗಿ ಹಳದಿ ಬಣ್ಣದ ಅಂಗಿ ಧರಿಸಿತ್ತು. ಆಫ್ರಿಕಾ ತಂಡ ನಿತ್ಯ ಬಳಸುತ್ತಿದ್ದ ಅಂಗಿಯಲ್ಲಿ ಹಳದಿಯೂ ಇತ್ತಾದ್ದರಿಂದ ಅದರದ್ದೇ ವಿರುದ್ಧ ಬಣ್ಣದ ಅಂಗಿಯನ್ನು ವಿನ್ಯಾಸ ಮಾಡಿಕೊಂಡಿತ್ತು. ಅಂದರೆ ಹಳದಿ ಬಣ್ಣ ಎದ್ದುಕಾಣುವಂತೆ. ಭಾರತ ತಂಡದ T-20 ವಿಶ್ವಕಪ್ ಪಂದ್ಯಕ್ಕೆ ನೀಲಿ ಬಣ್ಣದ ಅಂಗಿಗೆ ಕೇಸರಿ ಗೆರೆಗಳನ್ನು ಹೊಂದಿರುವ ಜರ್ಸಿಯನ್ನು ವಿನ್ಯಾಸಗೊಳಿಸಲಾಗಿತ್ತು. ಈಗಿನ ಪಂದ್ಯಕ್ಕೆ ಅದೇ ಎಳೆಯನ್ನು ಇಟ್ಟುಕೊಂಡು ಕೇಸರಿ ಎದ್ದು ಕಾಣುವಂತೆ ವಿನ್ಯಾಸ ಮಾಡಿದೆ ಹಾಗೂ ಮೂಲ ಬಣ್ಣವಾದ ನೀಲಿಯನ್ನು ಇಟ್ಟುಕೊಂಡಿದೆ ಹಾಗೂ ಹಿಂದಿನ ಕೇಸರಿ ಪಟ್ಟಿಯ ಅಂಗಿಯನ್ನು T-20 ಪಂದ್ಯಕ್ಕೆ ವಿನ್ಯಾಸ ಮಾಡಿದ್ದು ಅಮೇರಿಕಾದ ವಿನ್ಯಾಸಕಾರರು ಎಂದು ICC ನ ಮೂಲಗಳಯ ತಿಳಿಸಿವೆ‌.

ಒಟ್ಟಾರೆ ಹೊಸ ಉಡುಪಿನ ಬಣ್ಣವನ್ನು ಅಭಿಮಾನಿಗಳು ಅಷ್ಟಾಗಿ ಮೆಚ್ಚಿಕೊಂಡಿಲ್ಲ ಎಂಬುದನ್ನು ಸಮಾಜಿಕ ಜಾಲತಾಣದ ಪ್ರತಿಕ್ರಿಯೆಗಳು ತಿಳಿಸುತ್ತಿವೆ. ಅಲ್ಲದೆ ವಿರಾಟ್ ಕೋಹ್ಲಿ ಸಹ ನೀಲಿ ಜರ್ಸಿಯೇ ಚೆನ್ನಾಗಿ ಕಾಣುತ್ತಿತ್ತು ಎಂದು ಹೇಳಿದ್ದಾರೆ ಎಂದು ಸುದ್ಧಿಯಾಗಿದೆ. ಅಲ್ಲದೆ ಬಣ್ಣದ ಬದಲಾವಣೆಯಿಂದ ಸೋಲು ಗೆಲುವಿನ ಲೆಕ್ಕಾಚಾರವೂ ಶುರುವಾಗಿದೆ. ಏನೇ ಆದರೂ ಪಂದ್ಯದಲ್ಲಿ ಆಟಗಾರರ ಕಾರ್ಯಕ್ಷಮತೆ ಮುಖ್ಯವೇ ಹೊರತು ಬಣ್ಣವಲ್ಲ ಅನ್ನುವುದು ವಾಸ್ತವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...