Homeಸಿನಿಮಾಕ್ರೀಡೆಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

ಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

- Advertisement -
- Advertisement -

| ಸರೋವರ್ ಬೆಂಕೀಕೆರೆ |

ಜೂನ್ 30 ರಂದು ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ತಂಡದ ನಡುವಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಕೇಸರಿ ಬಣ್ಣದ ಹೊಸ ಉಡುಪನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (BCCI) ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದೀಗ ಸಮವಸ್ತ್ರ ಬದಲಾಗಿದ್ದು ಯಾಕೆ ಮತ್ತು ಕೇಸರಿ ಬಣ್ಣವೇ ಏಕೆ ಎಂದು ದೇಶದಾದ್ಯಂತ ಚರ್ಚೆ ಆಗುತ್ತಿದೆ‌. ಅಲ್ಲದೆ ಇದು Indian oil ಪೆಟ್ರೋಲ್ ಬಂಕ್ ನ ಸಮವಸ್ತ್ರದಂತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರಾಲ್ ಕೂಡ ಆಗುತ್ತಿದೆ.

ಒಂದೇ ಬಣ್ಣದ ಜರ್ಸಿ ಅನ್ನು ಹೊಂದಿರುವ ತಂಡಗಳು ಪಂದ್ಯವನ್ನು ಆಡುವಾಗ ಬಣ್ಣದ ಮಧ್ಯೆ ಗೊಂದಲಗಳು ಉಂಟಾದರೆ ಆ ನಿರ್ಧಿಷ್ಟ ಪಂದ್ಯಕ್ಕೆ ಒಂದು ತಂಡ ತನ್ನ ಜರ್ಸಿಯ ಬಣ್ಣವನ್ನು ಬದಲಾಯಿಸಬಹುದು ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತಿಳಿಸಿದೆ‌. ಈ ಟೂರ್ನಿಯಲ್ಲಿ ಸಧ್ಯ ಭಾರತ, ಶ್ರೀಲಂಕ, ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನೀಲಿ ಬಣ್ಣದ ಜರ್ಸಿಯನ್ನು ಹೊಂದಿದೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ಹಸಿರು ಬಣ್ಣದ ಜರ್ಸಿಯನ್ನು ಹೊಂದಿದೆ. ಈ ತಂಡಗಳ ಮಧ್ಯೆ ಪಂದ್ಯಗಳು ನಡೆದಾಗ ಬೇರೆ ಬಣ್ಣದ ಜರ್ಸಿಯನ್ನು ಬದಲಾಯಿಸಬಹುದಾಗಿದೆ. ICC ಬಣ್ಣದ ಆಯ್ಕೆಯ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ BCCI ಗೆ ನೀಡಿದೆ.

ಕೇಸರಿ ಬಣ್ಣವೇ ಯಾಕೆ?

ICC ನಿಯಾಮವಳಿ ಪ್ರಕಾರ ಒಂದೇ ಬಣ್ಣದ ಸಮವಸ್ತ್ರ ಇರುವ ತಂಡಗಳ ನಡುವೆ ಪಂದ್ಯ ನಡೆದಾಗ ತಂಡದ ಅಭಿಮಾನಿಗಳ ಇಚ್ಛೆಯನ್ನೂ ಗಮನದಲ್ಲಿಟ್ಟುಕೊಂಡು ನಿರ್ದಿಷ್ಟ ಪಂದ್ಯಕ್ಲೆ ಜರ್ಸಿಯ ಬಣ್ಣವನ್ನು ಬದಲಾಯಿಸಿಬಹುದಾಗಿದೆ. ಆದರೆ ಇದೀಗ ಕೇಸರಿ ಬಣ್ಣವೇ ಯಾಕೆ ಎನ್ನುವ ಪ್ರಶ್ನೆ ದೇಶದಾದ್ಯಂತ ಬಿಸಿ ಚರ್ಚೆ ಆಗುತ್ತಿದೆ ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುವ ಆಪಾದನೆಯೂ ಕೇಳಿ ಬರುತ್ತಿದೆ.

ಈ ಹಿಂದೆ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ತನ್ನ ಸಮವಸ್ತ್ರದ ಬಣ್ಣವನ್ನು ಬದಲಾವಣೆ ಮಾಡಿಕೊಂಡಿತ್ತು. ಹಾಗೂ ಬಾಂಗ್ಲಾದೇಶ ಮತ್ತು ಆಫ್ರಿಕಾ ತಂಡದ ನಡುವೆ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಹಸಿರು ಬಣ್ಣದ ಅಂಗಿಯ ಬದಲಾಗಿ ಹಳದಿ ಬಣ್ಣದ ಅಂಗಿ ಧರಿಸಿತ್ತು. ಆಫ್ರಿಕಾ ತಂಡ ನಿತ್ಯ ಬಳಸುತ್ತಿದ್ದ ಅಂಗಿಯಲ್ಲಿ ಹಳದಿಯೂ ಇತ್ತಾದ್ದರಿಂದ ಅದರದ್ದೇ ವಿರುದ್ಧ ಬಣ್ಣದ ಅಂಗಿಯನ್ನು ವಿನ್ಯಾಸ ಮಾಡಿಕೊಂಡಿತ್ತು. ಅಂದರೆ ಹಳದಿ ಬಣ್ಣ ಎದ್ದುಕಾಣುವಂತೆ. ಭಾರತ ತಂಡದ T-20 ವಿಶ್ವಕಪ್ ಪಂದ್ಯಕ್ಕೆ ನೀಲಿ ಬಣ್ಣದ ಅಂಗಿಗೆ ಕೇಸರಿ ಗೆರೆಗಳನ್ನು ಹೊಂದಿರುವ ಜರ್ಸಿಯನ್ನು ವಿನ್ಯಾಸಗೊಳಿಸಲಾಗಿತ್ತು. ಈಗಿನ ಪಂದ್ಯಕ್ಕೆ ಅದೇ ಎಳೆಯನ್ನು ಇಟ್ಟುಕೊಂಡು ಕೇಸರಿ ಎದ್ದು ಕಾಣುವಂತೆ ವಿನ್ಯಾಸ ಮಾಡಿದೆ ಹಾಗೂ ಮೂಲ ಬಣ್ಣವಾದ ನೀಲಿಯನ್ನು ಇಟ್ಟುಕೊಂಡಿದೆ ಹಾಗೂ ಹಿಂದಿನ ಕೇಸರಿ ಪಟ್ಟಿಯ ಅಂಗಿಯನ್ನು T-20 ಪಂದ್ಯಕ್ಕೆ ವಿನ್ಯಾಸ ಮಾಡಿದ್ದು ಅಮೇರಿಕಾದ ವಿನ್ಯಾಸಕಾರರು ಎಂದು ICC ನ ಮೂಲಗಳಯ ತಿಳಿಸಿವೆ‌.

ಒಟ್ಟಾರೆ ಹೊಸ ಉಡುಪಿನ ಬಣ್ಣವನ್ನು ಅಭಿಮಾನಿಗಳು ಅಷ್ಟಾಗಿ ಮೆಚ್ಚಿಕೊಂಡಿಲ್ಲ ಎಂಬುದನ್ನು ಸಮಾಜಿಕ ಜಾಲತಾಣದ ಪ್ರತಿಕ್ರಿಯೆಗಳು ತಿಳಿಸುತ್ತಿವೆ. ಅಲ್ಲದೆ ವಿರಾಟ್ ಕೋಹ್ಲಿ ಸಹ ನೀಲಿ ಜರ್ಸಿಯೇ ಚೆನ್ನಾಗಿ ಕಾಣುತ್ತಿತ್ತು ಎಂದು ಹೇಳಿದ್ದಾರೆ ಎಂದು ಸುದ್ಧಿಯಾಗಿದೆ. ಅಲ್ಲದೆ ಬಣ್ಣದ ಬದಲಾವಣೆಯಿಂದ ಸೋಲು ಗೆಲುವಿನ ಲೆಕ್ಕಾಚಾರವೂ ಶುರುವಾಗಿದೆ. ಏನೇ ಆದರೂ ಪಂದ್ಯದಲ್ಲಿ ಆಟಗಾರರ ಕಾರ್ಯಕ್ಷಮತೆ ಮುಖ್ಯವೇ ಹೊರತು ಬಣ್ಣವಲ್ಲ ಅನ್ನುವುದು ವಾಸ್ತವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...