Homeಸಿನಿಮಾಕ್ರೀಡೆಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

ಭಾರತ ಕ್ರಿಕೆಟ್‌ ತಂಡದ ಜರ್ಸಿ ಕೇಸರಿ ಬಣ್ಣವೇ ಏಕೆ?

- Advertisement -
- Advertisement -

| ಸರೋವರ್ ಬೆಂಕೀಕೆರೆ |

ಜೂನ್ 30 ರಂದು ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ತಂಡದ ನಡುವಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ತಂಡದ ಕೇಸರಿ ಬಣ್ಣದ ಹೊಸ ಉಡುಪನ್ನು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (BCCI) ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದೀಗ ಸಮವಸ್ತ್ರ ಬದಲಾಗಿದ್ದು ಯಾಕೆ ಮತ್ತು ಕೇಸರಿ ಬಣ್ಣವೇ ಏಕೆ ಎಂದು ದೇಶದಾದ್ಯಂತ ಚರ್ಚೆ ಆಗುತ್ತಿದೆ‌. ಅಲ್ಲದೆ ಇದು Indian oil ಪೆಟ್ರೋಲ್ ಬಂಕ್ ನ ಸಮವಸ್ತ್ರದಂತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರಾಲ್ ಕೂಡ ಆಗುತ್ತಿದೆ.

ಒಂದೇ ಬಣ್ಣದ ಜರ್ಸಿ ಅನ್ನು ಹೊಂದಿರುವ ತಂಡಗಳು ಪಂದ್ಯವನ್ನು ಆಡುವಾಗ ಬಣ್ಣದ ಮಧ್ಯೆ ಗೊಂದಲಗಳು ಉಂಟಾದರೆ ಆ ನಿರ್ಧಿಷ್ಟ ಪಂದ್ಯಕ್ಕೆ ಒಂದು ತಂಡ ತನ್ನ ಜರ್ಸಿಯ ಬಣ್ಣವನ್ನು ಬದಲಾಯಿಸಬಹುದು ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ತಿಳಿಸಿದೆ‌. ಈ ಟೂರ್ನಿಯಲ್ಲಿ ಸಧ್ಯ ಭಾರತ, ಶ್ರೀಲಂಕ, ಇಂಗ್ಲೆಂಡ್ ಮತ್ತು ಅಫ್ಘಾನಿಸ್ತಾನ ನೀಲಿ ಬಣ್ಣದ ಜರ್ಸಿಯನ್ನು ಹೊಂದಿದೆ ಮತ್ತು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ಹಸಿರು ಬಣ್ಣದ ಜರ್ಸಿಯನ್ನು ಹೊಂದಿದೆ. ಈ ತಂಡಗಳ ಮಧ್ಯೆ ಪಂದ್ಯಗಳು ನಡೆದಾಗ ಬೇರೆ ಬಣ್ಣದ ಜರ್ಸಿಯನ್ನು ಬದಲಾಯಿಸಬಹುದಾಗಿದೆ. ICC ಬಣ್ಣದ ಆಯ್ಕೆಯ ಸ್ವಾತಂತ್ರ್ಯವನ್ನು ಸಂಪೂರ್ಣವಾಗಿ BCCI ಗೆ ನೀಡಿದೆ.

ಕೇಸರಿ ಬಣ್ಣವೇ ಯಾಕೆ?

ICC ನಿಯಾಮವಳಿ ಪ್ರಕಾರ ಒಂದೇ ಬಣ್ಣದ ಸಮವಸ್ತ್ರ ಇರುವ ತಂಡಗಳ ನಡುವೆ ಪಂದ್ಯ ನಡೆದಾಗ ತಂಡದ ಅಭಿಮಾನಿಗಳ ಇಚ್ಛೆಯನ್ನೂ ಗಮನದಲ್ಲಿಟ್ಟುಕೊಂಡು ನಿರ್ದಿಷ್ಟ ಪಂದ್ಯಕ್ಲೆ ಜರ್ಸಿಯ ಬಣ್ಣವನ್ನು ಬದಲಾಯಿಸಿಬಹುದಾಗಿದೆ. ಆದರೆ ಇದೀಗ ಕೇಸರಿ ಬಣ್ಣವೇ ಯಾಕೆ ಎನ್ನುವ ಪ್ರಶ್ನೆ ದೇಶದಾದ್ಯಂತ ಬಿಸಿ ಚರ್ಚೆ ಆಗುತ್ತಿದೆ ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುವ ಆಪಾದನೆಯೂ ಕೇಳಿ ಬರುತ್ತಿದೆ.

ಈ ಹಿಂದೆ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ತನ್ನ ಸಮವಸ್ತ್ರದ ಬಣ್ಣವನ್ನು ಬದಲಾವಣೆ ಮಾಡಿಕೊಂಡಿತ್ತು. ಹಾಗೂ ಬಾಂಗ್ಲಾದೇಶ ಮತ್ತು ಆಫ್ರಿಕಾ ತಂಡದ ನಡುವೆ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಹಸಿರು ಬಣ್ಣದ ಅಂಗಿಯ ಬದಲಾಗಿ ಹಳದಿ ಬಣ್ಣದ ಅಂಗಿ ಧರಿಸಿತ್ತು. ಆಫ್ರಿಕಾ ತಂಡ ನಿತ್ಯ ಬಳಸುತ್ತಿದ್ದ ಅಂಗಿಯಲ್ಲಿ ಹಳದಿಯೂ ಇತ್ತಾದ್ದರಿಂದ ಅದರದ್ದೇ ವಿರುದ್ಧ ಬಣ್ಣದ ಅಂಗಿಯನ್ನು ವಿನ್ಯಾಸ ಮಾಡಿಕೊಂಡಿತ್ತು. ಅಂದರೆ ಹಳದಿ ಬಣ್ಣ ಎದ್ದುಕಾಣುವಂತೆ. ಭಾರತ ತಂಡದ T-20 ವಿಶ್ವಕಪ್ ಪಂದ್ಯಕ್ಕೆ ನೀಲಿ ಬಣ್ಣದ ಅಂಗಿಗೆ ಕೇಸರಿ ಗೆರೆಗಳನ್ನು ಹೊಂದಿರುವ ಜರ್ಸಿಯನ್ನು ವಿನ್ಯಾಸಗೊಳಿಸಲಾಗಿತ್ತು. ಈಗಿನ ಪಂದ್ಯಕ್ಕೆ ಅದೇ ಎಳೆಯನ್ನು ಇಟ್ಟುಕೊಂಡು ಕೇಸರಿ ಎದ್ದು ಕಾಣುವಂತೆ ವಿನ್ಯಾಸ ಮಾಡಿದೆ ಹಾಗೂ ಮೂಲ ಬಣ್ಣವಾದ ನೀಲಿಯನ್ನು ಇಟ್ಟುಕೊಂಡಿದೆ ಹಾಗೂ ಹಿಂದಿನ ಕೇಸರಿ ಪಟ್ಟಿಯ ಅಂಗಿಯನ್ನು T-20 ಪಂದ್ಯಕ್ಕೆ ವಿನ್ಯಾಸ ಮಾಡಿದ್ದು ಅಮೇರಿಕಾದ ವಿನ್ಯಾಸಕಾರರು ಎಂದು ICC ನ ಮೂಲಗಳಯ ತಿಳಿಸಿವೆ‌.

ಒಟ್ಟಾರೆ ಹೊಸ ಉಡುಪಿನ ಬಣ್ಣವನ್ನು ಅಭಿಮಾನಿಗಳು ಅಷ್ಟಾಗಿ ಮೆಚ್ಚಿಕೊಂಡಿಲ್ಲ ಎಂಬುದನ್ನು ಸಮಾಜಿಕ ಜಾಲತಾಣದ ಪ್ರತಿಕ್ರಿಯೆಗಳು ತಿಳಿಸುತ್ತಿವೆ. ಅಲ್ಲದೆ ವಿರಾಟ್ ಕೋಹ್ಲಿ ಸಹ ನೀಲಿ ಜರ್ಸಿಯೇ ಚೆನ್ನಾಗಿ ಕಾಣುತ್ತಿತ್ತು ಎಂದು ಹೇಳಿದ್ದಾರೆ ಎಂದು ಸುದ್ಧಿಯಾಗಿದೆ. ಅಲ್ಲದೆ ಬಣ್ಣದ ಬದಲಾವಣೆಯಿಂದ ಸೋಲು ಗೆಲುವಿನ ಲೆಕ್ಕಾಚಾರವೂ ಶುರುವಾಗಿದೆ. ಏನೇ ಆದರೂ ಪಂದ್ಯದಲ್ಲಿ ಆಟಗಾರರ ಕಾರ್ಯಕ್ಷಮತೆ ಮುಖ್ಯವೇ ಹೊರತು ಬಣ್ಣವಲ್ಲ ಅನ್ನುವುದು ವಾಸ್ತವ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...